ಬ್ರೇಕಿಂಗ್ ನ್ಯೂಸ್
02-05-25 12:00 pm Mangalore Correspondent ಕ್ರೈಂ
ಉಳ್ಳಾಲ, ಯುವಕನೊಬ್ಬನ ಮೇಲೆ ದುಷ್ಕರ್ಮಿಗಳ ತಂಡವೊಂದು ಮಾರಕಾಯುಧದಿಂದ ದಾಳಿ ನಡೆಸಿ ಗಾಯಗೊಳಿಸಿದ ಘಟನೆ ತೊಕ್ಕೊಟ್ಟು ಮಾಯಾ ಬಾರ್ ಬಳಿ ನಡೆದಿದ್ದು, ಕೃತ್ಯವು ಬಜಪೆಯಲ್ಲಿ ನಡೆದ ಹಿಂದೂ ಕಾರ್ಯಕರ್ತ ಸುಹಾಸ್ ಶೆಟ್ಟಿ ಕೊಲೆಗೆ ಪ್ರತೀಕಾರವೆಂದು ಹೇಳಲಾಗುತ್ತಿದೆ.
ಅಳೇಕಲ ನಿವಾಸಿ ಫೈಝಲ್ ಗಾಯಗೊಂಡಿರುವ ವ್ಯಕ್ತಿ. ಫೈಝಲ್ ಗುರುವಾರ ಮಧ್ಯರಾತ್ರಿ 12.30 ಗಂಟೆಗೆ ಒಂಭತ್ತುಕೆರೆಯ ಪತ್ನಿ ಮನೆಯಿಂದ ಕಲ್ಲಾಪುವಿನ ಗ್ಲೋಬಲ್ ಮಾರುಕಟ್ಟೆಗೆ ತನ್ನ ಸ್ಕೂಟರಿನಲ್ಲಿ ಕೆಲಸಕ್ಕೆ ತೆರಳುತ್ತಿದ್ದ ವೇಳೆ ಬೈಕ್ ಒಂದರಲ್ಲಿ ಹಿಂಬಾಲಿಸಿ ಬಂದ ಇಬ್ಬರು ದುಷ್ಕರ್ಮಿಗಳು ತಲ್ವಾರು ಬೀಸಿದ್ದಾರೆನ್ನಲಾಗಿದೆ. ಮತ್ತೊಂದು ಬೈಕಲ್ಲಿ ಮತ್ತಿಬ್ಬರು ಯುವಕರು ಮಾರಕಾಯುಧಗಳೊಂದಿಗೆ ಬಂದಿದ್ದು ಎರಡು ಬೈಕಿನಲ್ಲಿ ನಾಲ್ವರು ಕಿಡಿಗೇಡಿಗಳೂ ಮಂಗಳೂರಿನ ಕಡೆ ಪಲಾಯನಗೈದಿದ್ದಾರೆಂದು ದೂರು ನೀಡಲಾಗಿದೆ.







ಘಟನೆಯಿಂದ ಫೈಝಲ್ ಬೆನ್ನಿಗೆ ಗಾಯವಾಗಿದ್ದು ಈ ಬಗ್ಗೆ ಅವರು ಉಳ್ಳಾಲ ಠಾಣೆಗೆ ದೂರು ನೀಡಿದ್ದು, ಪ್ರಕರಣ ದಾಖಲಾಗಿದೆ. ಉಳ್ಳಾಲ ಪೊಲೀಸರು ಘಟನೆ ನಡೆದಿದೆ ಎನ್ನಲಾದ ತೊಕ್ಕೊಟ್ಟುವಿನ ಮಾಯಾ ಬಾರ್ ಬಳಿಯ ಸಿಸಿಟಿವಿ ಫೂಟೇಜ್ ಗಳನ್ನ ಪರಿಶೀಲನೆ ನಡೆಸುತ್ತಿದ್ದಾರೆ.
ಉಳ್ಳಾಲ ತಾಲೂಕಿನಲ್ಲಿ ಬಂದ್ ಯಶಸ್ವಿ
ತೊಕ್ಕೊಟ್ಟುವಿನಲ್ಲಿ ಹಿಂದೂ ಕಾರ್ಯಕರ್ತರು ಬೆಳಗ್ಗೆ ಹಿಂದೂಗಳ ಅಂಗಡಿ, ಮಳಿಗೆಗಳನ್ನು ಬಂದ್ ಮಾಡುವಂತೆ ಮಾಲೀಕರಲ್ಲಿ ವಿನಂತಿಸಿದ್ದಾರೆ. ಮಂಗಳೂರಿಗೆ ಬಾಡಿಗೆ ಹೊಡೆಯುತ್ತಿದ್ದ ರಿಕ್ಷಾಗಳನ್ನು ತಡೆದು ಚಾಲಕರಲ್ಲಿ ಬಂದ್ ಗೆ ಬೆಂಬಲ ನೀಡುವಂತೆ ಹೇಳಿದ್ದಾರೆ. ಸಾರಿಗೆ ಬಸ್ಸುಗಳು ಓಡಾಟ ನಡೆಸದೆ ಉಳ್ಳಾಲ, ತೊಕ್ಕೊಟ್ಟು ಪ್ರದೇಶಗಳು ಖಾಲಿಯಾಗಿ ಬಿಕೋ ಎನ್ನುತ್ತಿವೆ.
Tensions continue to rise in the wake of Suhas Shetty's murder, as a youth from Thokottu was reportedly targeted in an attempted attack by armed miscreants. According to sources, two individuals on a bike allegedly attempted to attack a youth named Fazil, who was on his way to work.
10-11-25 07:17 pm
Bangalore Correspondent
54 ಹೆಕ್ಟೇರ್ ಅರಣ್ಯ ನಾಶ ಭೀತಿ ; ಶರಾವತಿ ಪಂಪ್ಡ್ ಸ್...
10-11-25 02:58 pm
'ನೋ ಚೇರ್ ಇನ್ ನವೆಂಬರ್' ಎಐ ವಿಡಿಯೋ ಹಂಚಿಕೊಂಡ ಬಿಜೆ...
10-11-25 01:23 pm
ಬೆಂಗಳೂರು ವಿಮಾನ ನಿಲ್ದಾಣದಲ್ಲಿ ನಮಾಜ್ ವಿಡಿಯೋ ವೈರಲ...
10-11-25 12:22 pm
ಮುಸ್ಲಿಂ, ಕ್ರೈಸ್ತರು ಆರೆಸ್ಸೆಸ್ ಶಾಖೆಗೆ ಬರಬಹುದಾ?...
09-11-25 06:53 pm
11-11-25 03:28 pm
HK News Desk
ಐ-20 ಕಾರು ಕೆಂಪುಕೋಟೆ ಸಿಗ್ನಲ್ ನಲ್ಲಿದ್ದಾಗ ಬ್ಲಾಸ್...
10-11-25 11:07 pm
ದೆಹಲಿಯಲ್ಲಿ ಭಾರೀ ಬಾಂಬ್ ಸ್ಫೋಟ ; ಛಿದ್ರಗೊಂಡು ಚದುರ...
10-11-25 09:08 pm
ರಾಜಧಾನಿ ದೆಹಲಿಯಲ್ಲಿ ಪ್ರಬಲ ಬಾಂಬ್ ಸ್ಫೋಟ ; ಒಂಬತ್ತ...
10-11-25 08:23 pm
ಫರಿದಾಬಾದ್ ; ಕಾಶ್ಮೀರಿ ವೈದ್ಯನ ಮಾಹಿತಿಯಂತೆ 300 ಕ...
10-11-25 03:04 pm
08-11-25 08:31 pm
Mangalore Correspondent
ಬೆಂಗಳೂರು- ಮಂಗಳೂರು ಹೈಸ್ಪೀಡ್ ಕಾರಿಡಾರ್ ; ಶಿರಾಡ...
07-11-25 10:58 pm
ಕುದ್ರೋಳಿ ಕ್ಷೇತ್ರ ಸ್ಥಾಪಿಸಿದ ಫೆ.21ರಂದು ನಾರಾಯಣ ಗ...
07-11-25 07:23 pm
ಗೋಡಂಬಿ ಉದ್ಯಮಕ್ಕೆ ನೂರು ವರ್ಷ ; ನ.14-16ರಂದು ದೇಶದ...
07-11-25 05:25 pm
ನೆಲ್ಯಾಡಿಯಲ್ಲಿ ಹೊಟೇಲ್ ಉದ್ಯಮ ನಡೆಸುತ್ತಿದ್ದ ಅಭಿಷೇ...
07-11-25 02:18 pm
11-11-25 06:33 pm
Mangalore Correspondent
Fraud Dream Deal Mangalore, KSRTC: ತಿಂಗಳಿಗೆ ಒ...
09-11-25 10:27 pm
ಬಹುಕೋಟಿ ವಂಚಕ ರೋಷನ್ ಸಲ್ದಾನಗೆ ಸೇರಿದ 2.85 ಕೋಟಿ ಮ...
09-11-25 03:50 pm
ಕೋಮುದ್ವೇಷದ ಕೊಲೆ ; ಪ್ರತೀಕಾರಕ್ಕೆ ಪ್ರಚೋದಿಸಿ ಇನ್...
08-11-25 11:15 pm
Digital Arrest Scam, Mangalore Online Fraud:...
08-11-25 04:08 pm