ಬ್ರೇಕಿಂಗ್ ನ್ಯೂಸ್
20-12-20 01:20 pm Mantesh, Hubli Reporter ಕ್ರೈಂ
ಹುಬ್ಬಳ್ಳಿ, ಡಿ.20: ಎಸಿಪಿ ದರ್ಜೆಯ ಅಧಿಕಾರಿಯೊಬ್ಬರು ತಮ್ಮ ಠಾಣೆಯ ಪೊಲೀಸ್ ಪೇದೆಗೆ ಕಪಾಳ ಮೋಕ್ಷ ಮಾಡಿದ ಘಟನೆ ಹುಬ್ಬಳ್ಳಿಯಲ್ಲಿ ನಡೆದಿದೆ.
ಹುಬ್ಬಳ್ಳಿ - ಧಾರವಾಡ ಸಂಚಾರಿ ವಿಭಾಗದ ಎಸಿಪಿ ಹೊಸಮನಿ, ಪೊಲೀಸ್ ಪೇದೆ ಗುರುನಾಥ ಜಗಾಪೂರ ಎಂಬವರಿಗೆ ಕಪಾಳ ಮೋಕ್ಷ ಮಾಡಿದ್ದಾರೆ. ಎರಡು ದಿನಗಳ ಹಿಂದೆ ಘಟನೆ ನಡೆದಿದೆ ಎನ್ನಲಾಗುತ್ತಿದ್ದು ಠಾಣೆಯೊಳಗೆ ನಡೆದಿರುವ ಕೃತ್ಯದ ಸಿಸಿಟಿವಿ ದೃಶ್ಯ ಜಾಲತಾಣದಲ್ಲಿ ವೈರಲ್ ಆಗಿದೆ. ಠಾಣೆಯ ಪೊಲೀಸರೇ ಈ ವಿಡಿಯೋ ತೆಗೆದು ವೈರಲ್ ಮಾಡಿದ್ದಾರೆ ಎನ್ನಲಾಗುತ್ತಿದೆ.
ಅಕ್ರಮ ಮರಳು ವ್ಯವಹಾರದ ವಿಚಾರದಲ್ಲಿ ಅಸಮಾಧಾನಗೊಂಡ ಎಸಿಪಿ ಸಾಹೇಬ್ರು ಪೇದೆ ಮೇಲೆ ಕೈಮಾಡಿದ್ದಾರೆ ಎನ್ನಲಾಗಿದೆ. ಹುಬ್ಬಳ್ಳಿಗೆ ಹೊಸ ಪೊಲೀಸ್ ಆಯುಕ್ತರಾಗಿ ಲಾಬೂರಾಮ್ ಬಂದ ಮೇಲೆ ಬಹುತೇಕ ಅಕ್ರಮ ಚಟುವಟಿಕೆಗಳಿಗೆ ಬ್ರೇಕ್ ಬಿದ್ದಿತ್ತು. ಹೀಗಾಗಿ ಆಯಕಟ್ಟಿನ ಜಾಗಗಳಿಗೆ ಸಂದಾಯ ಆಗುತ್ತಿದ್ದ ಮಾಮೂಲಿಗಳು ಬರುತ್ತಿರಲಿಲ್ಲ ಎನ್ನಲಾಗಿದೆ. ಇದೇ ವಿಚಾರದಲ್ಲಿ ಎಸಿಪಿ ಸಾಹೇಬ್ರು ಪೇದೆಯನ್ನು ಠಾಣೆಗೆ ಕರೆಸಿಕೊಂಡು ಕಪಾಳಕ್ಕೆ ಬಾರಿಸಿದ್ದಾರೆ ಎನ್ನಲಾಗಿದೆ.
ಆದರೆ, ಪೊಲೀಸ್ ಅಧಿಕಾರಿ ಯಾವುದೋ ಆಕ್ರೋಶವನ್ನು ಮುಗ್ದ ಪೊಲೀಸ್ ಪೇದೆಯ ಮೇಲೆ ತೀರಿಸಿಕೊಂಡಿದ್ದು ಸಾರ್ವಜನಿಕರ ಆಕ್ರೋಶಕ್ಕೆ ಕಾರಣವಾಗಿದೆ. ಠಾಣೆಯಲ್ಲೇ ಪೇದೆಗೆ ಕಪಾಳ ಮೋಕ್ಷ ಮಾಡಿರುವ ವಿಡಿಯೋ ವೈರಲ್ ಆದ ಹಿನ್ನೆಲೆಯಲ್ಲಿ ಎಸಿಪಿ ಪೊಲೀಸ್ ಇಲಾಖೆಯ ಮಾನ ಹರಾಜು ಹಾಕಿದ್ದಾರೆ ಎಂದು ಜನರು ಟೀಕಿಸುತ್ತಿದ್ದಾರೆ. ಅಲ್ಲದೆ, ಹಿರಿಯಧಿಕಾರಿಗಳು ಈ ಬಗ್ಗೆ ತನಿಖೆ ನಡೆಸಬೇಕು ಎಂದು ಆಗ್ರಹಿಸುತ್ತಿದ್ದಾರೆ.
Live Video:
A video of Hubli Acp Hosmani slapping a police constable in the police station has gone viral on social media revealing the ugly face of the top cop.
21-04-25 07:27 pm
Bangalore Correspondent
ನ್ಯಾ.ಕೃಷ್ಣ ದೀಕ್ಷಿತ್, ನ್ಯಾ.ಹೇಮಂತ್ ಚಂದನಗೌಡರ್ ಸೇ...
21-04-25 07:10 pm
Jayaprakash Hegde; ಹಿಂದೂಗಳಂತೆ ಮುಸ್ಲಿಮರಲ್ಲು 93...
19-04-25 03:04 pm
Janivara, Shivamogga, Suspend: ಜನಿವಾರ ತೆಗೆಸಿದ...
19-04-25 12:24 pm
Bidar Cet Exam, Janivara issue: ಜನಿವಾರ ಹಾಕಿದ್...
18-04-25 05:38 pm
21-04-25 07:46 pm
HK News Desk
Pope Francis Death, Vatican, Catholic: ಕೆಥೋಲಿ...
21-04-25 02:13 pm
No GST on UPI Payments: ಎರಡು ಸಾವಿರಕ್ಕಿಂತ ಮೇಲಿ...
20-04-25 08:42 pm
Jagdeep Dhankhar, Justice Varma case: ರಾಷ್ಟ್ರ...
18-04-25 02:21 pm
ನ್ಯಾಷನಲ್ ಹೆರಾಲ್ಡ್ ಪ್ರಕರಣ ; ಸೋನಿಯಾ, ರಾಹುಲ್ ವಿರ...
16-04-25 03:54 pm
21-04-25 10:32 pm
Mangalore Correspondent
Puttur, Arun Putila: ಬ್ರಾಹ್ಮಣರು ಮತ್ತೆ ಪರಶುರಾಮ...
21-04-25 07:08 pm
Mangalore Chakravarti Sulibele, Ujre; ಸರ್ಕಾರವ...
20-04-25 05:42 pm
DK Shivakumar, Dharmasthala temple, Mangalore...
20-04-25 12:51 pm
Wafq Protest Mangalore, Police FIR; ವಕ್ಫ್ ವಿರ...
19-04-25 06:19 pm
21-04-25 01:03 pm
Bangalore Correspondent
Karnataka DGP Om Prakash Murder, wife: ನಿವೃತ್...
20-04-25 10:52 pm
ರಾಮಕೃಷ್ಣ ಆಶ್ರಮದ ಕಾರ್ಯದರ್ಶಿಗೇ ಟೋಪಿ ; ಇಡಿ ಅಧಿಕಾ...
20-04-25 07:26 pm
Gold smuggling case, Mangalore Court Verdict,...
19-04-25 10:46 pm
Ullal Gang Rape, Crime, Update, Mangalore: ಗ್...
19-04-25 09:22 pm