ಬ್ರೇಕಿಂಗ್ ನ್ಯೂಸ್
03-05-25 02:16 pm Mangalore Correspondent ಕ್ರೈಂ
ಮಂಗಳೂರು, ಮೇ 3 : ರೌಡಿಶೀಟರ್ ಮತ್ತು ಹಿಂದು ಸಂಘಟನೆ ಕಾರ್ಯಕರ್ತನಾಗಿದ್ದ ಸುಹಾಸ್ ಶೆಟ್ಟಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿ ಮಂಗಳೂರು ಪೊಲೀಸರು ಎಂಟು ಮಂದಿಯನ್ನು ಬಂಧಿಸಿದ್ದಾರೆ. ಅಲ್ಲದೆ, ಎರಡು ವರ್ಷಗಳ ಹಿಂದೆ ಕೊಲೆಯಾದ ಫಾಜಿಲ್ ನ ಸಹೋದರ ಈ ಕೃತ್ಯಕ್ಕೆ ಹಣಕಾಸು ನೆರವು ನೀಡಿರುವುದನ್ನು ಪತ್ತೆ ಮಾಡಿದ್ದಾರೆ.
ಬಜಪೆ ಶಾಂತಿಗುಡ್ಡೆಯ ಅಬ್ದುಲ್ ಸಫ್ವಾನ್ (29), ನಿಯಾಜ್ (25), ಮಹಮ್ಮದ್ ಮುಸಮ್ಮಿರ್ (32), ಸುರತ್ಕಲ್ ಬಾಳ ನಿವಾಸಿಗಳಾದ ಕಲಂದರ್ ಶಾಫಿ ( 29), ಆದಿಲ್ ಮೆಹರೂಫ್ (27), ಕಳಸ ಮಾವಿನಕೆರೆಯ ನಾಗರಾಜ್, ಜೋಕಟ್ಟೆ ನಿವಾಸಿ ಮಹಮ್ಮದ್ ರಿಜ್ವಾನ್ (28), ಕಳಸ ರುದ್ರಪಾದೆ ನಿವಾಸಿ ರಂಜಿತ್ (19) ಬಂಧಿತರು.



ಆರೋಪಿಗಳ ಪೈಕಿ ಅಬ್ದುಲ್ ಸಫ್ವಾನ್ ಮೇಲೆ ಈ ಹಿಂದೆ ಸುಹಾಸ್ ಶೆಟ್ಟಿ ಮತ್ತು ಸಹಚರರು ಒಂದು ವರ್ಷದ ಹಿಂದೆ ಹಲ್ಲೆ ನಡೆಸಿದ್ದರು. ಇದಲ್ಲದೆ, ಸಫ್ವಾನ್ ನ್ನು ಕೊಲೆ ಮಾಡುವುದಾಗಿ ಸುಹಾಸ್ ಆನಂತರವೂ ಬೆದರಿಕೆ ಹಾಕಿದ್ದ. ಇದೇ ವಿಚಾರದಲ್ಲಿ ಸಫ್ವಾನ್ ಗೆ ಸುಹಾಸ್ ಮೇಲೆ ವೈಯಕ್ತಿಕ ದ್ವೇಷ ಇತ್ತು. ಇದೇ ವೇಳೆ, ಫಾಜಿಲ್ ಸೋದರ ಆದಿಲ್ ಮೆಹರೂಫ್ ತಾನು ಸುಹಾಸ್ ಶೆಟ್ಟಿ ಮುಗಿಸಲು ಹಣಕಾಸು ನೆರವು ನೀಡುವುದಾಗಿ ಸಹಕಾರ ನೀಡಿದ್ದ. ಪೊಲೀಸ್ ತನಿಖೆಯಲ್ಲಿ ಆದಿಲ್ ಆರೋಪಿಗಳಿಗೆ ಐದು ಲಕ್ಷ ನೀಡಿದ್ದಾನೆ ಎನ್ನುವುದು ಪತ್ತೆಯಾಗಿದೆ.


ಫಾಜಲ್ ಕೊಲೆಗೆ ಪ್ರತೀಕಾರ ಮತ್ತು ತನ್ನ ವೈಯಕ್ತಿಕ ದ್ವೇಷದಿಂದ ಅಬ್ದುಲ್ ಸಫ್ವಾನ್ ತನ್ನ ಸಂಗಡಿಗರ ಜೊತೆ ಸೇರಿ ಕೃತ್ಯ ಎಸಗಿದ್ದಾನೆ. ಇದಕ್ಕೆ ಚಿಕ್ಕಮಗಳೂರು ಜಿಲ್ಲೆಯ ಕಳಸ ಮೂಲದ ನಾಗರಾಜ್ ಮತ್ತು ರಂಜಿತ್ ಸಹಕಾರ ನೀಡಿದ್ದಾರೆ. ಸದ್ಯಕ್ಕೆ ಕೃತ್ಯ ಎಸಗಿದ ಮತ್ತು ಸುಪಾರಿ ನೀಡಿದ ಒಟ್ಟು ಎಂಟು ಮಂದಿಯನ್ನು ಮಂಗಳೂರು ಸಿಸಿಬಿ ಎಸಿಪಿ ಮತ್ತು ಉತ್ತರ ವಿಭಾಗದ ಎಸಿಪಿ ನೇತೃತ್ವದ ಪೊಲೀಸರು ಬಂಧನ ಮಾಡಿದ್ದಾರೆ. ಗೃಹ ಸಚಿವ ಪರಮೇಶ್ವರ್ ಮತ್ತು ಪೊಲೀಸ್ ಕಮಿಷನರ್ ಅನುಪಮ್ ಅಗರ್ವಾಲ್ ಆರೋಪಿಗಳ ಬಂಧನದ ಬಗ್ಗೆ ಮಾಹಿತಿ ನೀಡಿದ್ದಾರೆ.
Mangalore 8 arrested in murder of Hindu activist Suhas Shetty including fazil brother. The arrested have been identified as Abdul Safwan, Niyaz, Mohammed Muzammil, Khalandar Shafi, Adil Mehroof , Nagaraj, Ranjith and Rizwan.
29-05-26 04:30 pm
HK News Staffer
ಸಿದ್ದರಾಮಯ್ಯ ರಾಜೀನಾಮೆಗೆ ರಾಜ್ಯಪಾಲರಿಂದ ಅಧಿಕೃತ ಮು...
29-05-26 10:29 am
ರಾಜ್ಯದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬರಲು ಸಿದ್ದರಾ...
28-05-26 06:18 pm
CM Siddaramaiah, Supporters crying, Kaveri: ಸ...
28-05-26 05:31 pm
ರಾಜ್ಯಸಭೆಗೆ ಹೋಗಲ್ಲ, ರಾಜ್ಯದಲ್ಲೇ ಸಕ್ರಿಯ ರಾಜಕಾರಣದ...
28-05-26 04:34 pm
29-05-26 06:17 pm
HK News Staffer
ಟಿಎಂಸಿಯಲ್ಲಿ ಬಿರುಕು ; 50 ಶಾಸಕರು, ಸಂಸದರು ಬಿಜೆಪಿ...
27-05-26 09:17 pm
ಕೇರಳ ರಾಜಕಾರಣದಲ್ಲಿ ಭಾರೀ ಸಂಚಲನ..! ಮಾಜಿ ಸಿಎಂ ಪಿಣ...
27-05-26 08:36 pm
ಜೂನ್, ಜುಲೈನಲ್ಲಿ 12 ಪರಿಷತ್ ಸ್ಥಾನಗಳಿಗೆ ಚುನಾವಣೆ...
26-05-26 12:54 pm
ಗೃಹಲಕ್ಷ್ಮಿ ಪಡೆಯಲು ಬಯೋಮೆಟ್ರಿಕ್ ಕಡ್ಡಾಯ ; ಕೂಡಲೇ...
26-05-26 12:50 pm
28-05-26 02:45 pm
HK News Staffer
ಡಿಸಿಎಂ ಆಗಬೇಕೆಂಬ ಪೋಸ್ಟ್ ಸಾಮಾಜಿಕ ಜಾಲತಾಣದಲ್ಲಿ ಹಾ...
28-05-26 02:28 pm
ಕುದುರೆಮುಖ ಅದಿರು ಕಂಪನಿ ಕಾರ್ಮಿಕರ ಬೇಡಿಕೆ ಈಡೇರಿಸಿ...
27-05-26 12:29 pm
ಕಟೀಲು ಶಿಬರೂರಿನಲ್ಲಿ ಮರಳು ದರೋಡೆ ರಾಜಾರೋಷ ; ಇಲ್ಲಿ...
26-05-26 09:02 pm
ನೌಕಾಪಡೆ ಸಬ್ ಲೆಫ್ಟಿನೆಂಟ್ ಆಗಿ ನೇಮಕಗೊಂಡ ನಿಶೆಲ್ ಡ...
26-05-26 07:52 pm
29-05-26 03:05 pm
HK News Staffer
ಬಕ್ರೀದ್ ಹಿನ್ನೆಲೆ, ರಾತ್ರೋರಾತ್ರಿ ಮನೆ ಕೊಟ್ಟಿಗೆಯಲ...
28-05-26 09:44 pm
ಕರ್ತವ್ಯದಲ್ಲಿದ್ದ ಟ್ರಾಫಿಕ್ ಪೊಲೀಸರಿಗೆ ಡಿಕ್ಕಿ ಹೊಡ...
28-05-26 10:43 am
ನಿಲ್ಲಿಸಿದ್ದ ಬೈಕ್ ಕದ್ದು ಪರಾರಿಯಾಗಿದ್ದ ಇಬ್ಬರು ನಟ...
27-05-26 08:34 pm
ಉರ್ವ ಪೊಲೀಸ್ ಸಿಬ್ಬಂದಿ ಮೇಲೆ ಹಲ್ಲೆ ಮಾಡಿ ಕೇರಳಕ್ಕೆ...
27-05-26 07:56 pm