ಬ್ರೇಕಿಂಗ್ ನ್ಯೂಸ್
03-05-25 02:16 pm Mangalore Correspondent ಕ್ರೈಂ
ಮಂಗಳೂರು, ಮೇ 3 : ರೌಡಿಶೀಟರ್ ಮತ್ತು ಹಿಂದು ಸಂಘಟನೆ ಕಾರ್ಯಕರ್ತನಾಗಿದ್ದ ಸುಹಾಸ್ ಶೆಟ್ಟಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿ ಮಂಗಳೂರು ಪೊಲೀಸರು ಎಂಟು ಮಂದಿಯನ್ನು ಬಂಧಿಸಿದ್ದಾರೆ. ಅಲ್ಲದೆ, ಎರಡು ವರ್ಷಗಳ ಹಿಂದೆ ಕೊಲೆಯಾದ ಫಾಜಿಲ್ ನ ಸಹೋದರ ಈ ಕೃತ್ಯಕ್ಕೆ ಹಣಕಾಸು ನೆರವು ನೀಡಿರುವುದನ್ನು ಪತ್ತೆ ಮಾಡಿದ್ದಾರೆ.
ಬಜಪೆ ಶಾಂತಿಗುಡ್ಡೆಯ ಅಬ್ದುಲ್ ಸಫ್ವಾನ್ (29), ನಿಯಾಜ್ (25), ಮಹಮ್ಮದ್ ಮುಸಮ್ಮಿರ್ (32), ಸುರತ್ಕಲ್ ಬಾಳ ನಿವಾಸಿಗಳಾದ ಕಲಂದರ್ ಶಾಫಿ ( 29), ಆದಿಲ್ ಮೆಹರೂಫ್ (27), ಕಳಸ ಮಾವಿನಕೆರೆಯ ನಾಗರಾಜ್, ಜೋಕಟ್ಟೆ ನಿವಾಸಿ ಮಹಮ್ಮದ್ ರಿಜ್ವಾನ್ (28), ಕಳಸ ರುದ್ರಪಾದೆ ನಿವಾಸಿ ರಂಜಿತ್ (19) ಬಂಧಿತರು.



ಆರೋಪಿಗಳ ಪೈಕಿ ಅಬ್ದುಲ್ ಸಫ್ವಾನ್ ಮೇಲೆ ಈ ಹಿಂದೆ ಸುಹಾಸ್ ಶೆಟ್ಟಿ ಮತ್ತು ಸಹಚರರು ಒಂದು ವರ್ಷದ ಹಿಂದೆ ಹಲ್ಲೆ ನಡೆಸಿದ್ದರು. ಇದಲ್ಲದೆ, ಸಫ್ವಾನ್ ನ್ನು ಕೊಲೆ ಮಾಡುವುದಾಗಿ ಸುಹಾಸ್ ಆನಂತರವೂ ಬೆದರಿಕೆ ಹಾಕಿದ್ದ. ಇದೇ ವಿಚಾರದಲ್ಲಿ ಸಫ್ವಾನ್ ಗೆ ಸುಹಾಸ್ ಮೇಲೆ ವೈಯಕ್ತಿಕ ದ್ವೇಷ ಇತ್ತು. ಇದೇ ವೇಳೆ, ಫಾಜಿಲ್ ಸೋದರ ಆದಿಲ್ ಮೆಹರೂಫ್ ತಾನು ಸುಹಾಸ್ ಶೆಟ್ಟಿ ಮುಗಿಸಲು ಹಣಕಾಸು ನೆರವು ನೀಡುವುದಾಗಿ ಸಹಕಾರ ನೀಡಿದ್ದ. ಪೊಲೀಸ್ ತನಿಖೆಯಲ್ಲಿ ಆದಿಲ್ ಆರೋಪಿಗಳಿಗೆ ಐದು ಲಕ್ಷ ನೀಡಿದ್ದಾನೆ ಎನ್ನುವುದು ಪತ್ತೆಯಾಗಿದೆ.


ಫಾಜಲ್ ಕೊಲೆಗೆ ಪ್ರತೀಕಾರ ಮತ್ತು ತನ್ನ ವೈಯಕ್ತಿಕ ದ್ವೇಷದಿಂದ ಅಬ್ದುಲ್ ಸಫ್ವಾನ್ ತನ್ನ ಸಂಗಡಿಗರ ಜೊತೆ ಸೇರಿ ಕೃತ್ಯ ಎಸಗಿದ್ದಾನೆ. ಇದಕ್ಕೆ ಚಿಕ್ಕಮಗಳೂರು ಜಿಲ್ಲೆಯ ಕಳಸ ಮೂಲದ ನಾಗರಾಜ್ ಮತ್ತು ರಂಜಿತ್ ಸಹಕಾರ ನೀಡಿದ್ದಾರೆ. ಸದ್ಯಕ್ಕೆ ಕೃತ್ಯ ಎಸಗಿದ ಮತ್ತು ಸುಪಾರಿ ನೀಡಿದ ಒಟ್ಟು ಎಂಟು ಮಂದಿಯನ್ನು ಮಂಗಳೂರು ಸಿಸಿಬಿ ಎಸಿಪಿ ಮತ್ತು ಉತ್ತರ ವಿಭಾಗದ ಎಸಿಪಿ ನೇತೃತ್ವದ ಪೊಲೀಸರು ಬಂಧನ ಮಾಡಿದ್ದಾರೆ. ಗೃಹ ಸಚಿವ ಪರಮೇಶ್ವರ್ ಮತ್ತು ಪೊಲೀಸ್ ಕಮಿಷನರ್ ಅನುಪಮ್ ಅಗರ್ವಾಲ್ ಆರೋಪಿಗಳ ಬಂಧನದ ಬಗ್ಗೆ ಮಾಹಿತಿ ನೀಡಿದ್ದಾರೆ.
Mangalore 8 arrested in murder of Hindu activist Suhas Shetty including fazil brother. The arrested have been identified as Abdul Safwan, Niyaz, Mohammed Muzammil, Khalandar Shafi, Adil Mehroof , Nagaraj, Ranjith and Rizwan.
09-11-25 06:53 pm
Bangalore Correspondent
ಇಪಿಎಫ್ ಸೊಸೈಟಿಯಲ್ಲಿ 70 ಕೋಟಿ ದುರ್ಬಳಕೆ ; ಅಕೌಂಟೆಂ...
09-11-25 03:47 pm
ISIS Terrorists, Umesh Reddy, Parappana Agrah...
08-11-25 10:29 pm
High Court Directs Kalaburagi: ಚಿತ್ತಾಪುರ ಆರೆಸ...
08-11-25 12:38 pm
ಯಾವ ಕ್ರಾಂತಿಯೂ ಆಗಲ್ಲ, ವಾಂತಿಯೂ ಆಗಲ್ಲ.. ನನಗೆ ಸಿದ...
07-11-25 09:59 pm
09-11-25 07:49 pm
HK News Desk
ಮುಸ್ಲಿಂ ವ್ಯಕ್ತಿಯ ಎರಡನೇ ಮದುವೆ ನೋಂದಣಿಗೆ ನಿರಾಕರಣ...
07-11-25 05:21 pm
ಮತಗಳವು ಆರೋಪ ; ರಾಹುಲ್ ವಿರುದ್ಧ ತಿರುಗಿಬಿದ್ದ ಮತದಾ...
07-11-25 11:33 am
'ನವೆಂಬರ್ ಕ್ರಾಂತಿ' ವದಂತಿ ತಳ್ಳಿಹಾಕಿದ ಡಿಸಿಎಂ ; ನ...
06-11-25 10:22 pm
ಐಸಿಸಿ ಮಹಿಳಾ ವಿಶ್ವಕಪ್ ಎತ್ತಿಹಿಡಿದ ಭಾರತದ ವನಿತೆಯರ...
03-11-25 01:13 pm
08-11-25 08:31 pm
Mangalore Correspondent
ಬೆಂಗಳೂರು- ಮಂಗಳೂರು ಹೈಸ್ಪೀಡ್ ಕಾರಿಡಾರ್ ; ಶಿರಾಡ...
07-11-25 10:58 pm
ಕುದ್ರೋಳಿ ಕ್ಷೇತ್ರ ಸ್ಥಾಪಿಸಿದ ಫೆ.21ರಂದು ನಾರಾಯಣ ಗ...
07-11-25 07:23 pm
ಗೋಡಂಬಿ ಉದ್ಯಮಕ್ಕೆ ನೂರು ವರ್ಷ ; ನ.14-16ರಂದು ದೇಶದ...
07-11-25 05:25 pm
ನೆಲ್ಯಾಡಿಯಲ್ಲಿ ಹೊಟೇಲ್ ಉದ್ಯಮ ನಡೆಸುತ್ತಿದ್ದ ಅಭಿಷೇ...
07-11-25 02:18 pm
09-11-25 03:50 pm
Mangalore Correspondent
ಕೋಮುದ್ವೇಷದ ಕೊಲೆ ; ಪ್ರತೀಕಾರಕ್ಕೆ ಪ್ರಚೋದಿಸಿ ಇನ್...
08-11-25 11:15 pm
Digital Arrest Scam, Mangalore Online Fraud:...
08-11-25 04:08 pm
ಆರೋಪಿಗೆ ಜಾಮೀನು ನೀಡಲು ಹೋಗಿ ತಾನೇ ತಗ್ಲಾಕ್ಕೊಂಡ !...
07-11-25 11:20 pm
ಹಗಲು ಕುರಾನ್ ಬೋಧಕ, ರಾತ್ರಿ ಮನೆಗಳ್ಳ..! ಬೀಗ ಹಾಕಿದ...
07-11-25 08:05 pm