ಬ್ರೇಕಿಂಗ್ ನ್ಯೂಸ್
03-05-25 02:16 pm Mangalore Correspondent ಕ್ರೈಂ
ಮಂಗಳೂರು, ಮೇ 3 : ರೌಡಿಶೀಟರ್ ಮತ್ತು ಹಿಂದು ಸಂಘಟನೆ ಕಾರ್ಯಕರ್ತನಾಗಿದ್ದ ಸುಹಾಸ್ ಶೆಟ್ಟಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿ ಮಂಗಳೂರು ಪೊಲೀಸರು ಎಂಟು ಮಂದಿಯನ್ನು ಬಂಧಿಸಿದ್ದಾರೆ. ಅಲ್ಲದೆ, ಎರಡು ವರ್ಷಗಳ ಹಿಂದೆ ಕೊಲೆಯಾದ ಫಾಜಿಲ್ ನ ಸಹೋದರ ಈ ಕೃತ್ಯಕ್ಕೆ ಹಣಕಾಸು ನೆರವು ನೀಡಿರುವುದನ್ನು ಪತ್ತೆ ಮಾಡಿದ್ದಾರೆ.
ಬಜಪೆ ಶಾಂತಿಗುಡ್ಡೆಯ ಅಬ್ದುಲ್ ಸಫ್ವಾನ್ (29), ನಿಯಾಜ್ (25), ಮಹಮ್ಮದ್ ಮುಸಮ್ಮಿರ್ (32), ಸುರತ್ಕಲ್ ಬಾಳ ನಿವಾಸಿಗಳಾದ ಕಲಂದರ್ ಶಾಫಿ ( 29), ಆದಿಲ್ ಮೆಹರೂಫ್ (27), ಕಳಸ ಮಾವಿನಕೆರೆಯ ನಾಗರಾಜ್, ಜೋಕಟ್ಟೆ ನಿವಾಸಿ ಮಹಮ್ಮದ್ ರಿಜ್ವಾನ್ (28), ಕಳಸ ರುದ್ರಪಾದೆ ನಿವಾಸಿ ರಂಜಿತ್ (19) ಬಂಧಿತರು.



ಆರೋಪಿಗಳ ಪೈಕಿ ಅಬ್ದುಲ್ ಸಫ್ವಾನ್ ಮೇಲೆ ಈ ಹಿಂದೆ ಸುಹಾಸ್ ಶೆಟ್ಟಿ ಮತ್ತು ಸಹಚರರು ಒಂದು ವರ್ಷದ ಹಿಂದೆ ಹಲ್ಲೆ ನಡೆಸಿದ್ದರು. ಇದಲ್ಲದೆ, ಸಫ್ವಾನ್ ನ್ನು ಕೊಲೆ ಮಾಡುವುದಾಗಿ ಸುಹಾಸ್ ಆನಂತರವೂ ಬೆದರಿಕೆ ಹಾಕಿದ್ದ. ಇದೇ ವಿಚಾರದಲ್ಲಿ ಸಫ್ವಾನ್ ಗೆ ಸುಹಾಸ್ ಮೇಲೆ ವೈಯಕ್ತಿಕ ದ್ವೇಷ ಇತ್ತು. ಇದೇ ವೇಳೆ, ಫಾಜಿಲ್ ಸೋದರ ಆದಿಲ್ ಮೆಹರೂಫ್ ತಾನು ಸುಹಾಸ್ ಶೆಟ್ಟಿ ಮುಗಿಸಲು ಹಣಕಾಸು ನೆರವು ನೀಡುವುದಾಗಿ ಸಹಕಾರ ನೀಡಿದ್ದ. ಪೊಲೀಸ್ ತನಿಖೆಯಲ್ಲಿ ಆದಿಲ್ ಆರೋಪಿಗಳಿಗೆ ಐದು ಲಕ್ಷ ನೀಡಿದ್ದಾನೆ ಎನ್ನುವುದು ಪತ್ತೆಯಾಗಿದೆ.


ಫಾಜಲ್ ಕೊಲೆಗೆ ಪ್ರತೀಕಾರ ಮತ್ತು ತನ್ನ ವೈಯಕ್ತಿಕ ದ್ವೇಷದಿಂದ ಅಬ್ದುಲ್ ಸಫ್ವಾನ್ ತನ್ನ ಸಂಗಡಿಗರ ಜೊತೆ ಸೇರಿ ಕೃತ್ಯ ಎಸಗಿದ್ದಾನೆ. ಇದಕ್ಕೆ ಚಿಕ್ಕಮಗಳೂರು ಜಿಲ್ಲೆಯ ಕಳಸ ಮೂಲದ ನಾಗರಾಜ್ ಮತ್ತು ರಂಜಿತ್ ಸಹಕಾರ ನೀಡಿದ್ದಾರೆ. ಸದ್ಯಕ್ಕೆ ಕೃತ್ಯ ಎಸಗಿದ ಮತ್ತು ಸುಪಾರಿ ನೀಡಿದ ಒಟ್ಟು ಎಂಟು ಮಂದಿಯನ್ನು ಮಂಗಳೂರು ಸಿಸಿಬಿ ಎಸಿಪಿ ಮತ್ತು ಉತ್ತರ ವಿಭಾಗದ ಎಸಿಪಿ ನೇತೃತ್ವದ ಪೊಲೀಸರು ಬಂಧನ ಮಾಡಿದ್ದಾರೆ. ಗೃಹ ಸಚಿವ ಪರಮೇಶ್ವರ್ ಮತ್ತು ಪೊಲೀಸ್ ಕಮಿಷನರ್ ಅನುಪಮ್ ಅಗರ್ವಾಲ್ ಆರೋಪಿಗಳ ಬಂಧನದ ಬಗ್ಗೆ ಮಾಹಿತಿ ನೀಡಿದ್ದಾರೆ.
Mangalore 8 arrested in murder of Hindu activist Suhas Shetty including fazil brother. The arrested have been identified as Abdul Safwan, Niyaz, Mohammed Muzammil, Khalandar Shafi, Adil Mehroof , Nagaraj, Ranjith and Rizwan.
12-09-26 09:40 pm
HK News Staffer
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
ಬಿಜೆಪಿ ಅಧಿಕಾರಕ್ಕೆ ಬರಲು ನನ್ನ ಸ್ಥಾನ ಬಿಟ್ಟುಕೊಟ್ಟ...
12-09-26 05:56 pm
ಐಎಎಸ್ ತೇರ್ಗಡೆಯಾಗಿದ್ದ ಕೇರಳದ ಮೊದಲ ಬುಡಕಟ್ಟು ಮಹಿಳ...
12-09-26 05:53 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
14-09-26 10:01 pm
HK News Staffer
ಮಂಗಳೂರಿನಲ್ಲಿ ಎರಡು ದಿನ ಸಿಎಂ ಡಿಕೆಶಿ ವಾಸ್ತವ್ಯ ;...
14-09-26 06:02 pm
100 ವರ್ಷಗಳ ಬಳಿಕವೂ ಸ್ವಂತ ಸೂರಿಗಾಗಿ ಕರಾವಳಿಯಲ್ಲಿ...
14-09-26 05:00 pm
Konkan Catholic Credit Society Inaugurated in...
14-09-26 04:18 pm
Konkan Catholic Credit Society Mangalore: ಹಣಕ...
13-09-26 10:11 pm
12-09-26 07:41 pm
HK News Staffer
ಕ್ರಿಪ್ಟೊ ಕರೆನ್ಸಿ ಹೆಸ್ರಲ್ಲಿ ಡಾಕ್ಟರ್ ಗೆ ಮಹಿಳೆಯಿ...
11-09-26 06:38 pm
ಜಾಮೀನು ಪಡೆಯಲು ನಕಲಿ ಆಧಾರ್ ಕಾರ್ಡ್ ಹಾಜರು ; ಉಡು...
11-09-26 01:09 pm
ಬೈಕ್ಗೆ ಡಿಕ್ಕಿ ಹೊಡೆದ ಕಾರು ; ಚಾಮರಾಜನಗರದಲ್ಲಿ ಮೂ...
11-09-26 10:14 am
ಕುಂದಾಪುರದಲ್ಲಿ 8 ಶಾಲಾ ಮಕ್ಕಳ ಬಲಿ ಪಡೆದ ಭೀಕರ ಅಪಘಾ...
10-09-26 08:16 pm