ಬ್ರೇಕಿಂಗ್ ನ್ಯೂಸ್
08-05-25 05:32 pm HK News Desk ಕ್ರೈಂ
ನವದೆಹಲಿ, ಮೇ 8: ಜೈಶ್ ಇ ಮಹಮ್ಮದ್ ಮುಖ್ಯಸ್ಥ ಮೋಸ್ಟ್ ವಾಂಟೆಡ್ ಉಗ್ರ ಮೌಲಾನಾ ಮಸೂದ್ ಅಜರ್ನ ಸೋದರ, ಮುಫ್ತಿ ಅಬ್ದುಲ್ ರೌಫ್ ಅಸ್ಗರ್ 'ಆಪರೇಷನ್ ಸಿಂಧೂರ' ಕಾರ್ಯಾಚರಣೆಯಲ್ಲಿ ಬಲಿಯಾಗಿದ್ದಾನೆ.
1999ರಲ್ಲಿ ಭಾರತದಿಂದ ಕಂದಹಾರ್ ತೆರಳುತ್ತಿದ್ದ IC-814 ಪ್ರಯಾಣಿಕ ವಿಮಾನದ ಹೈಜಾಕ್ ಪ್ರಕರಣದಲ್ಲಿ ಅಬ್ದುಲ್ ರೌಫ್ ಅಸ್ಗರ್ ಮಾಸ್ಟರ್ ಮೈಂಡ್ ಆಗಿದ್ದ. ಮುಜಫರಬಾದ್ ನಲ್ಲಿರುವ ಜೈಶ್ ನೆಲೆಯ ಮೇಲೆ ಬಾಂಬ್ ದಾಳಿ ನಡೆಸಿದಾಗ ಮಸೂದ್ ಅಜರ್ ಪತ್ನಿ, ಸೋದರ ಸೇರಿದಂತೆ ಹತ್ತು ಮಂದಿ ಸಾವಿಗೀಡಾಗಿದ್ದರು.
ತೀವ್ರ ಗಾಯಗೊಂಡಿದ್ದ ಅಸ್ಗರ್ ಈಗ ಪ್ರಾಣ ಬಿಟ್ಟಿದ್ದಾನೆ. ಮುಫ್ತಿ ಅಬ್ದುಲ್ ರೌಫ್ ಅಸ್ಗರ್ನನ್ನು ಅಬ್ದುಲ್ ರೌಫ್ ಅಜರ್ ಅಂತಲೂ ಕರೆಯುತ್ತಿದ್ದರು. ಜೈಷ್-ಇ- ಮೊಹಮ್ಮದ್ ಸಂಘಟನೆಯ ಕಮಾಂಡರ್ ಹಾಗೂ ಭಾರತಕ್ಕೆ ಬೇಕಾಗಿದ್ದ ಮೋಸ್ಟ್ ವಾಂಟೆಂಡ್ ಉಗ್ರನೂ ಆಗಿದ್ದ.
ಭಾರತದ ದಾಳಿ ಬಗ್ಗೆ ಸ್ಥಳೀಯ ಮಾಧ್ಯಮಕ್ಕೆ ಹೇಳಿಕೆ ನೀಡಿದ್ದ ಮಸೂದ್ ಅಜರ್, ನನ್ನ ಕುಟುಂಬದ 10 ಮಂದಿಯ ಜೀವ ಹೋಗಿದೆ ಎಂದು ತಿಳಿಸಿದ್ದ. ಇದೇ ಮೌಲಾನಾ ಮಸೂದ್ ಅಜರ್ನನ್ನು ಐಸಿ-814 ಕಂದಹಾರ್ ವಿಮಾನ ಅಪಹರಣ ಸಂದರ್ಭದಲ್ಲಿ ದೆಹಲಿಯ ತಿಹಾರ್ ಜೈಲಿನಿಂದ ಬಿಡುಗಡೆ ಮಾಡಲಾಗಿತ್ತು. ಬಳಿಕ ಪಾಕ್ಗೆ ಹೋಗಿ ಭಾರತದ ವಿರುದ್ಧ ಜೈಷ್-ಇ-ಮೊಹಮ್ಮದ್ ಸಂಘಟನೆ ಕಟ್ಟಿದ್ದ.
ಇದೇ ಜೈಷ್ ಮೊಹಮ್ಮದ್ ಸಂಘಟನೆಯೇ 2001ರಲ್ಲಿ ಭಾರತದ ಪಾರ್ಲಿಮೆಂಟ್ ಮೇಲೆ ದಾಳಿ ನಡೆಸಿತ್ತು. ಮಸೂದ್ ಅಜರ್ ಅನುಪಸ್ಥಿತಿಯಲ್ಲಿ ಜೈಷ್ ಇ ಮೊಹಮ್ಮದ್ ಸಂಘಟನೆ ಮುನ್ನೆಡೆಸಿದ್ದ ರೌಫ್ ಅಜರ್ ನನ್ನು ಹೊಡೆದುರುಳಿಸುವಲ್ಲಿ ಭಾರತದ ಸೇನೆ ಯಶಸ್ವಿಯಾಗಿದೆ.
Abdul Rauf Azhar, a globally designated terrorist and the mastermind of the IC-814 Air India flight hijacking, was killed in Indian Armed Forces missile strikes on terror launch pads in Pakistan's Punjab and PoK under 'Operation Sindoor' on Wednesday sources said
25-07-26 03:06 pm
HK News Staffer
ಧಾರವಾಡ ; ಮಗ ರೈಲು ಹಳಿಗೆ ಬಿದ್ದು ಆತ್ಮಹತ್ಯೆ, ಸಾವಿ...
23-07-26 08:05 pm
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
26-07-26 01:32 pm
HK News Staffer
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
NEET ಪ್ರತಿಭಟನೆ ಹಿಂಸಾಚಾರ ; 117 ಶಂಕಿತರ ಫೋಟೋ ಬಿಡ...
24-07-26 03:25 pm
ಪ್ರಶ್ನೆಪತ್ರಿಕೆ ಸೋರಿಕೆ ; ಕೇಂದ್ರ ಸರ್ಕಾರದ ಭರವಸೆಗ...
24-07-26 11:18 am
26-07-26 09:57 pm
HK News Desk
ಕದ್ರಿ ಯುದ್ಧ ಸ್ಮಾರಕದ ಬಳಿ ಟಿ-55 ಯುದ್ಧ ಟ್ಯಾಂಕರ್...
26-07-26 09:14 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಹವಾಮಾನ ಇಲಾಖೆಯ ಅವೈಜ್ಞಾನಿಕ ವರದಿ, ತರಾತುರಿಯ ರಜೆ ಘ...
25-07-26 02:42 pm
26-07-26 04:30 pm
HK News Staffer
ಶಾಲಾ ಬಸ್ಸಿಗೆ ಮರ ಬಿದ್ದು ಮಗು ಸಾವು ಪ್ರಕರಣ ; ಬಸ್ಸ...
25-07-26 07:36 pm
Vikky Bappal, Mangalore Crime: ಕುಖ್ಯಾತ ರೌಡಿ ವ...
25-07-26 03:50 pm
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಯುವತಿಯಿಂದ ಬ್ಲ...
24-07-26 08:57 pm
ಪಿಡಿಓ ಹುದ್ದೆ ಕೊಡಿಸುವುದಾಗಿ ಹೇಳಿ 26 ಲಕ್ಷ ಪೀಕಿಸಿ...
24-07-26 08:31 pm