ಬ್ರೇಕಿಂಗ್ ನ್ಯೂಸ್
13-05-25 07:55 pm HK News Desk ಕ್ರೈಂ
ಹುಬ್ಬಳ್ಳಿ , ಮೇ 13 : ಮೂರುಸಾವಿರ ಮಠದ ಬಳಿಯ ಗುರುಸಿದ್ಧೇಶ್ವರ ನಗರದಲ್ಲಿ ಇಬ್ಬರು ಬಾಲಕರ ನಡುವೆ ಜಗಳ ಏರ್ಪಟ್ಟಿದ್ದು, ಕೋಪಗೊಂಡ 15 ವರ್ಷದ ಬಾಲಕ, 14 ವರ್ಷದ ತನ್ನ ಸ್ನೇಹಿತನಿಗೆ ಚಾಕು ಇರಿದು ಕೊಲೆ ಮಾಡಿದ್ದಾನೆ.
ಸೋಮವಾರ ಸಂಜೆ ಘಟನೆ ನಡೆದಿದ್ದು, ಕಮರಿಪೇಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಇಬ್ಬರು ಬಾಲಕರು ಮೂರುಸಾವಿರ ಮಠದ ಬಳಿಯ ಜಿ ಅಡ್ಡಾ ನಿವಾಸಿಗಳು. ಕಾನೂನು ಸಂಘರ್ಷಕ್ಕೆ ಒಳಗಾದ ಬಾಲಕನನ್ನು ವಶಕ್ಕೆ ಪಡೆಯಲಾಗಿದೆ.
ಯಾವ ಕಾರಣಕ್ಕಾಗಿ ಬಾಲಕರ ನಡುವೆ ಜಗಳ ಏರ್ಪಟ್ಟಿದೆ ಎಂದು ತಿಳಿದಿಲ್ಲ. ಇಬ್ಬರ ನಡುವಿನ ಜಗಳ ವಿಕೋಪಕ್ಕೆ ತಿರುಗಿದಾಗ, 15 ವರ್ಷದ ಬಾಲಕ ಮನೆಗೆ ಹೋಗಿ ರೇಡಿಯಂ ಕಟ್ ಮಾಡುವ ಚಾಕು ತಂದು ತನ್ನ ಸ್ನೇಹಿತ ಚೇತನಗೆ ಇರಿದಿದ್ದಾನೆ. ತೀವ್ರ ಗಾಯಗೊಂಡ ಚೇತನನ್ನು ಕೆಎಂಸಿ–ಆರ್ಐ ಆಸ್ಪತ್ರೆಗೆ ಸೇರಿಸುವಷ್ಟರಲ್ಲಿ ಮೃತಪಟ್ಟಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.
ಈ ಕುರಿತು ಮಾಧ್ಯಮಕ್ಕೆ ಪ್ರತಿಕ್ರಿಯಿಸಿದ ಪೊಲೀಸ್ ಕಮಿಷನರ್ ಶಶಿಕುಮಾರ್, ‘ಇಬ್ಬರು ಬಾಲಕರು ಎದುರು–ಬದುರು ಮನೆಯವರಾಗಿದ್ದು, ಜೊತೆಯಲ್ಲಿಯೇ ಆಡುತ್ತಿದ್ದರು. ಇಬ್ಬರ ನಡುವೆ ಏರ್ಪಟ್ಟ ಕ್ಷುಲ್ಲಕ ಜಗಳವು, ಮತ್ತೊಂದು ಬಾಲಕನ ಕೊಲೆಯಲ್ಲಿ ಅಂತ್ಯವಾಗಿದೆ. ಚಾಕು ಇರಿದ ಬಾಲಕನ ತಾಯಿ, ಚಾಕು ಇರಿತಕ್ಕೆ ಒಳಗಾದ ಬಾಲಕನನ್ನು ತಕ್ಷಣ ಆಸ್ಪತ್ರೆಗೆ ದಾಖಲಿಸಿದ್ದಾರೆ. ಯಾವ ಪ್ರಮಾಣದಲ್ಲಿ ಗಾಯಗಳಾಗಿವೆ, ಅವುಗಳ ತೀವ್ರತೆ ಎಷ್ಟಿತ್ತು ಎನ್ನುವುದು ತಿಳಿದು ಬಂದಿಲ್ಲ. ಆದರೆ, ಕೆಎಂಸಿ–ಆರ್ಐ ಆಸ್ಪತ್ರೆಗೆ ತರುವಷ್ಟರಲ್ಲಿ ಬಾಲಕ ಮೃತಪಟ್ಟಿದ್ದ ಎಂದು ವೈದ್ಯರು ತಿಳಿಸಿದ್ದಾರೆ’ ಎಂದು ಹೇಳಿದರು.
‘ನನ್ನ ವೃತ್ತಿ ಬದುಕಿನಲ್ಲಿಯೇ ಇಂಥ ಹೃದಯ ವಿದ್ರಾವಕ ಘಟನೆ ನೋಡಿಲ್ಲ. ನಮ್ಮ ಸೊಂಟದ ಎತ್ತರಕ್ಕೂ ಬೆಳೆಯದ ಮಗು, ಚಾಕು ಹಿಡಿದು ಕೊಲೆ ಮಾಡುವಂಥ ಮನಸ್ಥಿತಿಗೆ ಬಂದಿದೆ ಎಂದರೆ, ಪೋಷಕರು ಎಚ್ಚರ ವಹಿಸಬೇಕು. ಕೊಲೆಯಾದ ಬಾಲಕನ ತಂದೆ ರೊಟ್ಟಿ ವ್ಯಾಪಾರ ಮಾಡಿ ಕುಟುಂಬ ನಿರ್ವಹಣೆ ಮಾಡುತ್ತಿದ್ದಾರೆ. ಕೊಲೆ ಮಾಡಿದ ಬಾಲಕನದ್ದು ಸಹ ಬಡ ಕುಟುಂಬವಾಗಿದೆ’ ಎಂದರು.
‘ಮಾರುಕಟ್ಟೆಗೆ ಹೋದಾಗ, ಮಗನನ್ನು ಕೊಲೆ ಮಾಡಲಾಗಿದೆ ಎನ್ನುವ ಸುದ್ದಿ ತಿಳಿಯಿತು. ಇಬ್ಬರು ಒಂದೇ ಓಣಿಯಲ್ಲಿ ಆಡುವ ಮಕ್ಕಳು ಅವರು. ಆಡುವಾಗ ಏನಾಯಿತೋ ಗೊತ್ತಿಲ್ಲ. ಎದುರು ಮನೆಯ ಹುಡುಗನೇ ಚಾಕು ಇರಿದು ಕೊಲೆ ಮಾಡಿದ್ದಾನೆ ಎಂದರು’ ಎಂದು ಮೃತ ಬಾಲಕ ತಂದೆ ಸೋಮಶೇಖರ್ ಕಣ್ಣೀರಾದರು.
ಇನ್ನು ಕೊಲೆ ಮಾಡಿದ ಬಾಲಕ ಮತ್ತು ಕೊಲೆಯಾದ ಬಾಲಕ ಇಬ್ಬರು ಪರಮಾಪ್ತ ಸ್ನೇಹಿತರಂತೆ. ಒಂದೇ ತಟ್ಟೆಯಲ್ಲಿ ಊಟ ಮಾಡುತ್ತಿದ್ದರಂತೆ. ಪ್ರತಿನಿತ್ಯ ಇಬ್ಬರು ಮನೆ ಬಳಿಯೇ ಆಟವಾಡುತ್ತಿದ್ದರು. ಚೇತನ್, ಬಹಳ ಒಳ್ಳೆಯ ಹುಡುಗ ಇದ್ದ ಅಂತ ಸ್ವತ ಕೊಲೆ ಮಾಡಿದ ಬಾಲಕನ ತಾಯಿ ಕೂಡಾ ಕಣ್ಣೀರು ಹಾಕಿ, ಮಗ ಮಾಡಿದ ಕೃತ್ಯಕ್ಕೆ ಕಂಗಾಲಾಗಿದ್ದಾಳೆ. ಇನ್ನು ಹುಬ್ಬಳ್ಳಿಯಲ್ಲಿ ನಡೆದ ಘಟನೆ ಕೇಳಿ ಸ್ವತ ಪೊಲೀಸ್ ಅಧಿಕಾರಿಗಳು ಶಾಕ್ ಆಗಿದ್ದಾರೆ. ಮಾಹಿತಿ ತಿಳಿಯುತ್ತಿದ್ದಂತೆ ಕಿಮ್ಸ್ ಗೆ ಆಗಮಿಸಿದ ನಗರ ಪೊಲೀಸ್ ಆಯುಕ್ತ ಎನ್ ಶಶಿಕುಮಾರ್, ಪರಿಶೀಲನೆ ನಡೆಸಿದ್ದು, ಕೊಲೆಯಾದ ಬಾಲಕನ ಕುಟುಂಬದವರನ್ನು ಸಮಾಧಾನ ಮಾಡಿದರು.
A shocking incident has rocked the city as a schoolboy allegedly killed his close friend following a minor altercation. The deceased has been identified as Chethan, a student who was reportedly on good terms with the accused. According to early reports, the two boys were involved in a heated argument that unexpectedly escalated into violence. The exact nature of the dispute
24-06-25 05:23 pm
Bangalore Correspondent
Lokayukta Raid, Karnataka: ಬೆಂಗಳೂರು, ಶಿವಮೊಗ್ಗ...
24-06-25 01:53 pm
Kodi Sri ; ರಾಜ್ಯದಲ್ಲಿ ಸಂಕ್ರಾಂತಿ ಬಳಿಕ ರಾಜಕೀಯ ವ...
22-06-25 07:52 pm
Heart Attack, Hassan: ಊಟಕ್ಕೆ ಕುಳಿತುಕೊಳ್ಳುವಾಗ...
22-06-25 12:36 pm
Iran Attack Illegal,War, CM Siddaramaiah; ಇರಾ...
21-06-25 02:48 pm
24-06-25 12:03 pm
HK News Desk
ಅಮೆರಿಕದ ಮೇಲೆ ತಿರುಗಿಬಿದ್ದ ಇರಾನ್ ! ಕತಾರ್ನಲ್ಲಿರ...
24-06-25 01:02 am
NEET ಪರೀಕ್ಷೆಯಲ್ಲಿ ಮಗಳಿಗೆ ಕಡಿಮೆ ಅಂಕ ; ಕೂಲಿನಿಂದ...
23-06-25 08:54 pm
Rapper Tommy Genesis, Controversy: ಹಿಂದು ದೇವತ...
23-06-25 04:37 pm
VP Jagdeep Dhankhar; ಜೂನ್ 25 ಸಂವಿಧಾನ ಹತ್ಯೆಗೈದ...
22-06-25 07:48 pm
24-06-25 01:36 pm
Mangalore Correspondent
Iran Qatar, War, Mangalore Flight: ಗಲ್ಫ್ ರಾಷ್...
24-06-25 11:19 am
Zakariya Jokatte, Mangalore: ಮಂಗಳೂರಿನಲ್ಲಿ ಸ್ಕ...
23-06-25 11:01 pm
Udupi BJP, Kishore Kumar: ಉಡುಪಿ ಬಿಜೆಪಿಯಲ್ಲಿ ಬ...
23-06-25 10:28 pm
Journalist Vijay Kotian, Brand Mangalore Awar...
23-06-25 09:48 pm
23-06-25 08:51 pm
HK News Desk
Manipal, Udupi Murder: ಮಣಿಪಾಲ ; ಹೆತ್ತ ತಾಯಿಯನ್...
23-06-25 11:47 am
Sandhya Pavithra Nagaraj Fraud; ಸೌಜನ್ಯಾ ಹೆಸರಿ...
21-06-25 08:58 pm
Crime Mangalore, Bantwal Attack, Fake News; ಬ...
21-06-25 12:21 pm
Brahmavar, Udupi Murder, Crime: ಪತ್ನಿಗೆ ಮೊಬೈಲ...
20-06-25 02:04 pm