ಬ್ರೇಕಿಂಗ್ ನ್ಯೂಸ್
14-05-25 09:23 pm Mangaluru staff ಕ್ರೈಂ
ಮಂಗಳೂರು, ಮೇ 14: ಹಿಂದು ಸಂಘಟನೆ ಕಾರ್ಯಕರ್ತ ಸುಹಾಸ್ ಶೆಟ್ಟಿ ಕೊಲೆ ಪ್ರಕರಣದಲ್ಲಿ ಭಾಗಿಯಾಗಿ ತಲೆಮರೆಸಿಕೊಂಡಿದ್ದ ಮತ್ತೆ ಮೂವರು ಆರೋಪಿಗಳನ್ನು ಮಂಗಳೂರು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ.
ಮೇ 1ರಂದು ಬಜ್ಪೆ ಬಳಿಯ ಕಿನ್ನಿಪದವು ಎಂಬಲ್ಲಿ ನಡೆದ ಸುಹಾಸ್ ಶೆಟ್ಟಿ ಕೊಲೆ ಪ್ರಕರಣದಲ್ಲಿ ಶಾಮೀಲಾಗಿ ಆನಂತರ ತಲೆಮರೆಸಿಕೊಂಡಿದ್ದ ಮೂವರನ್ನು ಪೊಲೀಸರು ಬಂಧನ ಮಾಡಿದ್ದಾರೆ. ಸುರತ್ಕಲ್ ಕಳವಾರು ನಿವಾಸಿ ಅಜರುದ್ದೀನ್ @ ಅಜರ್ @ ಅಜ್ಜು(29), ಕಾಪು ಬಳಿಯ ಬೆಳಪು ನಿವಾಸಿ ಅಬ್ದುಲ್ ಖಾದರ್ @ ನೌಫಲ್(24), ಫರಂಗಿಪೇಟೆ ಬಳಿಯ ಕುಂಪನಮಜಲು ನಿವಾಸಿ ನೌಷದ್ @ ವಾಮಂಜೂರು ನೌಷದ್ @ ಚೊಟ್ಟೆ ನೌಷದ್(39) ಬಂಧಿತರು.
ಆರೋಪಿಗಳ ಪೈಕಿ ಅಜರುದ್ದೀನ್ ವಿರುದ್ಧ ಈ ಹಿಂದೆ ಪಣಂಬೂರು, ಸುರತ್ಕಲ್, ಮುಲ್ಕಿ ಪೊಲೀಸ್ ರಾಣೆಗಳಲ್ಲಿ ಮೂರು ಕಳವು ಪ್ರಕರಣ ದಾಖಲಾಗಿರುತ್ತದೆ. ಈತನೇ ಪ್ರಮುಖ ಆರೋಪಿಗಳಿಗೆ ಸುಹಾಸ್ ಶೆಟ್ಟಿಯ ಚಲನವಲನದ ಬಗ್ಗೆ ಮಾಹಿತಿ ನೀಡಿದ್ದ ಎಂದು ಪೊಲೀಸರು ತಿಳಿಸಿದ್ದಾರೆ. ಆರೋಪಿ ಅಬ್ದುಲ್ ಖಾದರ್ ಆರೋಪಿಗಳು ಕೊಲೆ ಕೃತ್ಯದ ಬಳಿಕ ಕಾರಿನಲ್ಲಿ ಪರಾರಿಯಾಗುವ ವೇಳೆ ಆರೋಪಿಗಳಿಗೆ ಸಹಕರಿಸಿದ್ದ. ಇನ್ನೋರ್ವ ಆರೋಪಿ ನೌಷದ್ ಉಳಿದ ಆರೋಪಿಗಳ ಜೊತೆ ಸಂಚು ರೂಪಿಸಿ ಕೊಲೆ ಕೃತ್ಯದಲ್ಲಿ ಭಾಗಿಯಾಗಿದ್ದ. ಈ ಹಿಂದೆ ಸುರತ್ಕಲ್, ಬಜ್ಪೆ, ಮೂಡಬಿದ್ರಿ, ಮಂಗಳೂರು ಉತ್ತರ, ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣೆಗಳಲ್ಲಿ ಕೊಲೆ, ಕೊಲೆ ಯತ್ನ, ದರೋಡೆಗೆ ಸಂಚು ಸೇರಿದಂತೆ ಒಟ್ಟು 6 ಪ್ರಕರಣಗಳು ದಾಖಲಾಗಿರುತ್ತದೆ.
ಆರೋಪಿಗಳನ್ನು ನ್ಯಾಯಾಲಯಕ್ಕೆ ಹಾಜರುಪಡಿಸಿದ್ದು, ಅಜರುದ್ದೀನ್ ಜೈಲು ಸೇರಿದ್ದಾನೆ. ಅಬ್ದುಲ್ ಖಾದರ್ ಮತ್ತು ನೌಷದ್ ಅವರನ್ನು ಹೆಚ್ಚಿನ ತನಿಖೆಗಾಗಿ ಏಳು ದಿನಗಳ ಪೊಲೀಸ್ ಕಸ್ಟಡಿಗೆ ಪಡೆಯಲಾಗಿದೆ. ಕೊಲೆ ಪ್ರಕರಣದಲ್ಲಿ ಎರಡೇ ದಿನದಲ್ಲಿ ಎಂಟು ಮಂದಿಯನ್ನು ಬಂಧಿಸಲಾಗಿತ್ತು. ಘಟನೆ ಸಂಬಂಧಿಸಿ ಇತರ ಆರೋಪಿಗಳನ್ನು ಬಂಧಿಸಲು ಎನ್ಐಎ ತನಿಖೆ ಮಾಡಿಸಬೇಕೆಂದು ಬಿಜೆಪಿ ನಾಯಕರು ಒತ್ತಾಯಿಸಿದ್ದರು.
Mangalore Suhas Shetty murder case, three more arrested by CCB police.
11-02-26 11:02 pm
HK News Desk
Breast Cancer Awareness Drive Goes Nationwide...
11-02-26 01:34 pm
ಸ್ತನ ಕ್ಯಾನ್ಸರ್ ಬಗ್ಗೆ ದೇಶವ್ಯಾಪಿ ಜಾಗೃತಿ ; ಕಲಬರಗ...
11-02-26 01:09 pm
ಛೆ… ಇವಳೆಂಥ ಮಗಳು! ಅಮ್ಮನ ಖಾಸಗಿ ಅಂಗ, ದೊಡ್ಡಮ್ಮನ ಬ...
09-02-26 07:20 pm
ಶಿವಮೊಗ್ಗದ ಕಾರು ಚಾಲಕನಲ್ಲಿ 19 ಬಾಡಿಗೆ ಬ್ಯಾಂಕ್ ಖಾ...
09-02-26 01:30 pm
12-02-26 10:51 pm
HK News Desk
ನಕಲಿ ಷೇರು ಹೂಡಿಕೆ ಆ್ಯಪ್ ಹೆಸರಲ್ಲಿ ದುಪ್ಪಟ್ಟು ಲಾಭ...
12-02-26 09:31 pm
ಅಮೆರಿಕದಲ್ಲಿ ಪೊಲೀಸ್ ಅಧಿಕಾರಿ ಕಾರು ಗುದ್ದಿ ಭಾರತೀಯ...
12-02-26 09:19 pm
260 ಜನರನ್ನು ಬಲಿ ಪಡೆದ ಅಹಮದಾಬಾದ್ ವಿಮಾನ ಪತನ ; ಇಂ...
12-02-26 01:40 pm
ಡಿಕೆ - ಸಿದ್ದು ಪವರ್ ಫೈಟ್ ; ‘ರಾಜಕಾರಣ ಮಾಡೋಕೆ ಬಂದ...
12-02-26 01:09 pm
13-02-26 01:06 am
HK News Desk
ಮೋದಿ ಹೆಸರಲ್ಲಿ ಹತ್ತು ನಮೋ ಕುಟೀರ ನಿರ್ಮಾಣ ಯೋಜನೆ ;...
12-02-26 10:36 pm
ಲವ್ ಜಿಹಾದ್ ಆರೋಪ ; ಸುರತ್ಕಲ್ ಲೇಡಿಸ್ ಪಿಜಿಯಲ್ಲಿ ಹ...
12-02-26 05:55 pm
ಕೈಗಾರಿಕೆಗಳ ಮಾಲಿನ್ಯ ತಡೆಯಲು ಅಧಿಕಾರಿಗಳು ವಿಫಲ ; ವ...
12-02-26 04:05 pm
ಚಲಿಸುತ್ತಿದ್ದ ಓಮ್ನಿ ಕಾರಿನಲ್ಲಿ ದಿಢೀರ್ ಬೆಂಕಿ ; ರ...
12-02-26 03:38 pm
13-02-26 12:54 am
HK News Desk
ವಿಷದ ಲಡ್ಡು ತಿನ್ನಿಸಿ 6 ಜನರ ಹತ್ಯೆ ; ದೆಹಲಿಯಲ್ಲಿ...
12-02-26 02:34 pm
ಫ್ಲ್ಯಾಟ್, ಚಿನ್ನದ ನೆಪದಲ್ಲಿ ಮುಂಬೈನ ಮಹಿಳಾ ಉದ್ಯಮಿ...
11-02-26 10:54 pm
ನಕಲಿ ದಾಖಲೆ ಸೃಷ್ಟಿಸಿ ಕೋಟ್ಯಂತರ ಬೆಲೆಯ ಜಮೀನು ಗುಳು...
11-02-26 09:10 pm
ಸಚಿವ ಬೈರತಿ ಸುರೇಶ್ ಕಚೇರಿಯಲ್ಲೇ 300 ಗ್ರಾಂ ಚಿನ್ನಾ...
10-02-26 09:05 pm