ಬ್ರೇಕಿಂಗ್ ನ್ಯೂಸ್
15-05-25 11:06 pm HK News Desk ಕ್ರೈಂ
ದಾವಣಗೆರೆ, ಮೇ 14 : ಗೋಲ್ಡ್ ಲೋನ್ ಆಫೀಸರ್ ಒಬ್ಬ ತಾನು ಕೆಲಸ ಮಾಡುತ್ತಿದ್ದ ಬ್ಯಾಂಕ್ಗೇ ಕನ್ನ ಹಾಕಿ, ಕೆಜಿಗಟ್ಟಲೆ ಚಿನ್ನಾಭರಣಗಳನ್ನು ಕದ್ದು ಬೇರೊಂದು ಬ್ಯಾಂಕ್ನಲ್ಲಿ ಅಡವಿಟ್ಟಿರುವಂತಹ ಘಟನೆ ಬೆಳಕಿಗೆ ಬಂದಿದೆ.
ದಾವಣಗೆರೆಯ ದೇವರಾಜ್ ಅರಸ್ ಬಡಾವಣೆಯ ವಾಸಿಯಾಗಿರುವ ಸಂಜಯ್ ಟಿಪಿ ಎಂಬಾತ ನಿಟ್ಟುವಳ್ಳಿಯಲ್ಲಿರುವ ಸಿಎಸ್ಬಿ ಬ್ಯಾಂಕ್ನಲ್ಲಿ ಗೋಲ್ಡ್ ಲೋನ್ ಆಫೀಸರ್ ಆಗಿ ಕೆಲಸ ಮಾಡುತ್ತಿದ್ದ.
ಕೆಲಸ ಮಾಡುತ್ತಿದ್ದ ಬ್ಯಾಂಕ್ನಿಂದ ಒಟ್ಟು 2.61 ಕೋಟಿ ಮೌಲ್ಯದ 3 ಕೆಜಿ 643 ಗ್ರಾಂ ಚಿನ್ನಾಭರಣವನ್ನು ಕದ್ದು, ಬೇರೊಂದು ಬ್ಯಾಂಕ್ನಲ್ಲಿ ಅಡವಿಟ್ಟಿದ್ದ.
ಒಂದು ದಿನ ಬ್ಯಾಂಕ್ ಆಡಿಟ್ ಮಾಡುವಾಗ ಬಂಗಾರ ಕಡಿಮೆ ಇರುವುದು ಬೆಳಕಿಗೆ ಬಂದಿದೆ. ತಕ್ಷಣ ಮ್ಯಾನೇಜರ್ ಈ ಬಗ್ಗೆ ಕೆಟಿಜೆ ನಗರ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದಾರೆ. ದೂರು ದಾಖಲಿಸಿಕೊಂಡ ಪೊಲೀಸರು ಬ್ಯಾಂಕಿನಲ್ಲಿ ಗೋಲ್ಡ್ ಲೋನ್ ಆಫೀಸರ್ ಆಗಿ ಕೆಲಸ ಮಾಡುತಿದ್ದ ಸಂಜಯ್ನನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದಾಗ ಬಂಗಾರದ ಆಭರಣಗಳನ್ನು ಕಳ್ಳತನ ಮಾಡಿರುವುದಾಗಿ ಒಪ್ಪಿಕೊಂಡಿದ್ದಾನೆ.
ಕಳವು ಮಾಡಿದ ಚಿನ್ನಾಭರಣಗಳನ್ನು ದಾವಣಗೆರೆ ನಗರದ ಫೆಡರಲ್ ಬ್ಯಾಂಕ್, ಫೆಡ್ ಬ್ಯಾಂಕ್ ಹಾಗೂ ಪಿ.ಬಿ.ರಸ್ತೆಯಲ್ಲಿರುವ ಮಣಪ್ಪುರಂ ಗೋಲ್ಡ್ ಲೋನ್ ಪೈನಾನ್ಸ್ ಶಾಖೆಯಲ್ಲಿ ತಂದೆ, ತಾಯಿ ಹಾಗೂ ಸ್ನೇಹಿತರ ಹೆಸರಿನಲ್ಲಿ ಅಡ ಇಟ್ಟು ಸಾಲ ಪಡೆದಿರುವುದಾಗಿ ಒಪ್ಪಿಕೊಂಡಿದ್ದಾನೆ. ಆತ ಅಡವಿಟ್ಟಿದ್ದ ಒಟ್ಟು 2.61 ಕೋಟಿ ಮೌಲ್ಯದ 3 ಕೆಜಿ 643 ಗ್ರಾಂ ಬಂಗಾರದ ಆಭರಣಗಳನ್ನು ಕೆಟಿಜೆ ನಗರ ಪೊಲೀಸರು ವಶಪಡಿಸಿಕೊಂಡಿದ್ದಾರೆ.
ವರದಿಗಳ ಪ್ರಕಾರ ಸಂಜಯ್ ಆನ್ ಲೈನ್ ಬೆಟ್ಟಿಂಗ್ ಚಾಳಿಗೆ ಬಿದಿದ್ದ. ಪದೇ ಪದೇ ಗೋವಾಕ್ಕೆ ಹೋಗಿ ಕ್ಯಾಸಿನೋಗಳಲ್ಲಿ ಗೇಮ್ ಆಡುತ್ತಿದ್ದ. ತಾನು ಐಷಾರಾಮಿ ಜೀವನ ನಡೆಸಬೇಕೆಂದು ಕನಸು ಕಂಡಿದ್ದ. ಆತ ಕಳ್ಳತನ ಮಾಡಿದ ಹಣವನ್ನೆಲ್ಲಾ ಆನ್ ಲೈನ್ ಬೆಟ್ಟಿಂಗ್ನಲ್ಲೇ ಕಳೆದಿದ್ದಾನೆ ಎಂದು ತಿಳಿದು ಬಂದಿದೆ.
Addicted to Online Gaming, SBI Staff Steals Gold from Bank and Pledges it Elsewhere; 2.61 Crore Worth gold Seized, Accused Nabbed. The arrested has been identified as Devraj.
24-06-26 05:55 pm
HK News Staffer
ಅಡ್ಡ ಮತದಾನ ; ರಾಜ್ಯ ನಾಯಕತ್ವದ ನಿರ್ಲಕ್ಷ್ಯವೇ ಕಾರಣ...
23-06-26 05:58 pm
ಅಡ್ಡ ಮತದಾನ; ಧರ್ಮಸ್ಥಳದಲ್ಲಿ ಶಾಸಕರು ಬಂದು ಆಣೆ ಮಾಡ...
22-06-26 08:18 pm
ವಿಧಾನ ಪರಿಷತ್ ಚುನಾವಣೆಗೂ ಮುನ್ನ ರಹಸ್ಯ ಸಭೆ ; ಬಿಜೆ...
22-06-26 03:44 pm
ಆಸ್ಪತ್ರೆ ಸಿಬ್ಬಂದಿ ಸ್ಪಂದಿಸದಿದ್ದರೆ ಚಿಂತೆ ಬೇಡ ;...
22-06-26 12:51 pm
25-06-26 12:13 pm
HK News Staffer
ಕೂಲ್ ಸಿಟಿ ಯುರೋಪಿನಲ್ಲೀಗ ಬಿಸಿಲ ಹೊಡೆತ ; ಫ್ರಾನ್ಸ್...
24-06-26 01:51 pm
ಮಾಹಿತಿ ಹಕ್ಕು ನಿಯಮಗಳಿಗೆ ಮಹಾರಾಷ್ಟ್ರ ಸರ್ಕಾರ ತಿದ್...
23-06-26 10:47 pm
ಟಿಎಂಸಿಯಲ್ಲಿ ರಾಜಕೀಯ ಭೂಕಂಪ ; ಮಮತಾ ಬ್ಯಾನರ್ಜಿ ಅಧ...
23-06-26 12:21 pm
ಕತಾರ್ ಕೈಗಾರಿಕಾ ಪ್ರದೇಶದಲ್ಲಿ ಭಾರೀ ಸ್ಫೋಟ ; 54 ಜನ...
22-06-26 12:55 pm
23-06-26 06:02 pm
HK News Staffer
ಬಸ್ ಚಲಿಸುತ್ತಿದ್ದಾಗಲೇ ಬಿಪಿ ಲೋ ಆಗಿ ಕುಸಿದ ಚಾಲಕ !...
23-06-26 03:18 pm
ಮುಸ್ಲಿಮರಿಗೆ ಸಚಿವ ಸ್ಥಾನ ; ಕಾಂಗ್ರೆಸಿಗೆ ಓಟ್ ಹಾಕದ...
23-06-26 11:49 am
ಉಡುಪಿ ಕೋರ್ಟ್ಗೆ ಇ-ಮೇಲ್ ಮೂಲಕ ಬಾಂಬ್ ಬೆದರಿಕೆ; ಕೆ...
22-06-26 05:23 pm
Dr Kakkillaya News: ಕೊರಾನಾ ಮಾಸ್ಕ್ ಹಾಕಿಲ್ಲವೆಂದ...
21-06-26 08:59 pm
25-06-26 01:00 pm
HK News Staffer
ಹಸೆಮಣೆ ಏರಬೇಕಿದ್ದವಳೇ ಭಾವಿ ಪತಿಯನ್ನು ಫೋಟೊ ಶೂಟ್ ನ...
24-06-26 09:28 pm
30 ಲಕ್ಷ ಸಾಲ, ಲಿವ್-ಇನ್ ಸಂಬಂಧಕ್ಕೆ ಪೋಷಕರ ವಿರೋಧ ;...
24-06-26 08:53 pm
ರಾಮ ಮಂದಿರವನ್ನ ಸ್ಫೋಟಿಸಲು ಪ್ಲಾನ್ ಮಾಡಿದ್ವಿ ! ;...
24-06-26 07:53 pm
ಅಯೋಧ್ಯೆ ರಾಮ ಮಂದಿರ ಹೆಸರಲ್ಲಿ ದೇಣಿಗೆ ; 200 ಕೋಟಿ...
24-06-26 05:57 pm