ಬ್ರೇಕಿಂಗ್ ನ್ಯೂಸ್
16-05-25 09:20 pm HK News Desk ಕ್ರೈಂ
ಬೆಳಗಾವಿ, ಮೇ 16 : ತಾಲೂಕಿನ ಸಂತಿ ಬಸ್ತವಾಡ ಗ್ರಾಮದ ಮಸೀದಿಯಲ್ಲಿ ಇಟ್ಟಿದ್ದ ಕುರಾನ್ ಹೊತ್ತೊಯ್ದು ಸುಟ್ಟು ಹಾಕಿರುವ ಕಿಡಿಗೇಡಿಗಳನ್ನು ಬಂಧಿಸುವಂತೆ ಆಗ್ರಹಿಸಿ ಬೆಳಗಾವಿಯಲ್ಲಿ ಇಂದು ಬೃಹತ್ ಪ್ರತಿಭಟನೆ ನಡೆಯಿತು.
ಮೇ 11ರಂದು ಸಂತಿ ಬಸ್ತವಾಡ ಗ್ರಾಮದ ಮಸೀದಿಯಲ್ಲಿ ಯಾರೋ ದುಷ್ಕರ್ಮಿಗಳು ಕುರಾನ್ ಹೊತ್ತೊಯ್ದು, 100 ಮೀಟರ್ ಅಂತರದಲ್ಲಿ ಬೆಂಕಿ ಹಚ್ಚಿ ಸುಟ್ಟು ಪರಾರಿಯಾಗಿದ್ದರು. ಬಳಿಕ ಘಟನಾ ಸ್ಥಳಕ್ಕೆ ತೆರಳಿ ಪೊಲೀಸ್ ಕಮಿಷನರ್ ಯಡಾ ಮಾರ್ಟಿನ್ ಮಾರ್ಬನ್ಯಾಂಗ್ ಸಭೆ ನಡೆಸಿ ಶಾಂತಿ ಕಾಪಾಡುವಂತೆ ಮನವಿ ಮಾಡಿಕೊಂಡಿದ್ದರು. ಅಲ್ಲದೇ ಮೂರು ದಿನಗಳೊಳಗೆ ಆರೋಪಿಗಳನ್ನು ಬಂಧಿಸುವುದಾಗಿ ಭರವಸೆ ನೀಡಿದ್ದರು. ಆದರೆ, ಮೂರು ದಿನಗಳು ಕಳೆದರೂ ಆರೋಪಿಗಳ ಸುಳಿವು ಪತ್ತೆಯಾಗದ ಹಿನ್ನೆಲೆ ಇಂದು ಬೆಳಗಾವಿ ಚನ್ನಮ್ಮ ವೃತ್ತದಲ್ಲಿ ಸಾವಿರಾರು ಸಂಖ್ಯೆಯಲ್ಲಿ ಜಮಾಯಿಸಿದ ಮುಸ್ಲಿಂ ಸಮುದಾಯದ ಜನ ಬೃಹತ್ ಪ್ರತಿಭಟನೆ ನಡೆಸಿದರು.







ಪ್ರತಿಭಟನಾಕಾರರು ತ್ರಿವರ್ಣ ಧ್ವಜ ಹಿಡಿದು, ಕೈಗೆ ಕಪ್ಪು ಬಟ್ಟೆ ಕಟ್ಟಿಕೊಂಡು ‘ಕುರಾನ್ ರಕ್ಷಣೆ ನಮ್ಮೆಲ್ಲರ ಕರ್ತವ್ಯ’ ಎಂಬ ಭಿತ್ತಿಪತ್ರ ಪ್ರದರ್ಶಿಸಿದರು. ಪವಿತ್ರ ಕುರಾನ್ ಸುಟ್ಟಿರುವ ಆರೋಪಿಗೆ ಗಲ್ಲಿಗೇರಿಸುವಂತೆ ಪಟ್ಟು ಒತ್ತಾಯಿಸಿದರು.
ಚನ್ನಮ್ಮ ವೃತ್ತದಲ್ಲಿ ಸತತ ಒಂದೂವರೆ ಗಂಟೆಗಳ ಕಾಲ ಮಾನವ ಸರಪಳಿ ನಿರ್ಮಿಸಿದ ಪ್ರತಿಭಟನಾಕಾರರು ಘೋಷಣೆ ಕೂಗಿದರು. ರಾಜ್ಯದಲ್ಲಿ ಎಲ್ಲಿಯೂ ಈ ರೀತಿ ಘಟನೆ ನಡೆದಿಲ್ಲ. ಇದರ ಹಿಂದೆ ಕಾಣದ ಕೈಗಳ ಕೈವಾಡವಿದೆ. ಅವರು ಯಾರು..? ಮತ್ತು ಅವರಿಗೆ ಯಾರು ಕುಮ್ಮಕ್ಕು ಕೊಟ್ಟಿದ್ದಾರೆ..? ಎಂಬುದನ್ನು ಪೊಲೀಸರು ಪತ್ತೆ ಹಚ್ಚಬೇಕು. ಕಿಡಿಗೇಡಿಗಳನ್ನು ರಾಜ್ಯ ಸರ್ಕಾರ ಮಟ್ಟ ಹಾಕಬೇಕು. ತಪ್ಪಿತಸ್ಥ ಕಿಡಿಗೇಡಿಗಳನ್ನು ತಕ್ಷಣವೇ ಬಂಧಿಸಿ ಕಠಿಣ ಶಿಕ್ಷೆ ವಿಧಿಸಬೇಕು ಎಂದು ಪ್ರತಿಭಟನಾಕಾರರು ಒತ್ತಾಯಿಸಿದರು.
ಪ್ರತಿಭಟನೆಯಲ್ಲಿ ಭಾಗಿಯಾಗಿದ್ದ ಕೆಲ ಕಿಡಗೇಡಿಗಳು ಪೊಲೀಸರ ಮೇಲೆ ಚಪ್ಪಲಿ ತೂರಿದರು. ಪೊಲೀಸ್ ಆಯುಕ್ತ ಯಡಾ ಮಾರ್ಟಿನ್ ತೂರಿದ ಚಪ್ಪಲಿ ಸಿಪಿಐ ಮೇಲೆ ಬಿತ್ತು. ಪೊಲೀಸರು ಪ್ರತಿಭಟನಾ ನಿರತರನ್ನು ವಾಪಾಸ್ ಕಳುಹಿಸಿದರು.
ಚನ್ನಮ್ಮ ವೃತ್ತದಿಂದ ಜಿಲ್ಲಾಧಿಕಾರಿ ಕಚೇರಿವರೆಗೆ ಪ್ರತಿಭಟನಾ ಮೆರವಣಿಗೆ ನಡೆಸಿದ ಪ್ರತಿಭಟನಾಕಾರರು ಆರೋಪಿಗಳನ್ನು ತಕ್ಷಣವೇ ಪತ್ತೆ ಹಚ್ಚಿ ಬಂಧಿಸಿ, ಕಠಿಣ ಶಿಕ್ಷೆ ವಿಧಿಸುವಂತೆ ಒತ್ತಾಯಿಸಿ ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ಅವರಿಗೆ ಮನವಿ ಸಲ್ಲಿಸಿದರು.
ಪ್ರತಿಭಟನೆಯಲ್ಲಿ ಭಾಗಿಯಾಗಿ ಮಾಧ್ಯಮಗಳ ಜೊತೆಗೆ ಮಾತನಾಡಿದ ಬೆಳಗಾವಿ ಉತ್ತರ ಶಾಸಕ ಆಸೀಫ್ ಸೇಠ್, ಗ್ರಂಥವನ್ನು ಸುಟ್ಟಿರುವುದು ಅತ್ಯಂತ ಕೆಟ್ಟ ಮತ್ತು ದೊಡ್ಡ ಘಟನೆ. ಇದನ್ನು ಯಾರೂ ಸಹಿಸುವುದಿಲ್ಲ. ಇತರ ಸಮುದಾಯದ ಬಾಂಧವರು ಕೂಡ ಘಟನೆ ಖಂಡಿಸಿದ್ದಾರೆ. ಇಂದು ಶಾಂತಿಯುತ ಪ್ರತಿಭಟನೆ ಮಾಡಿದ್ದು, 7 ದಿನಗಳಲ್ಲಿ ಆರೋಪಿಗಳನ್ನು ಬಂಧಿಸುವುದಾಗಿ ಪೊಲೀಸ್ ಕಮಿಷನರ್ ಹೇಳಿದ್ದಾರೆ. ಗ್ರಾಮೀಣ ಪೊಲೀಸ್ ಠಾಣೆ ಸಿಪಿಐ ಮಂಜುನಾಥ್ ಅವರನ್ನ ಅಮಾನತು ಮಾಡಲಾಗಿದೆ. ಒಂದು ವಾರದೊಳಗೆ ಆರೋಪಿಗಳ ಬಂಧನ ಆಗದಿದ್ದರೆ ಸಮಾಜ ಬಾಂಧವರು ಹೇಳಿದಂತೆ ಮುಂದಿನ ಹೆಜ್ಜೆ ಇಡಲಾಗುವುದು ಎಂದರು.
ಸಾವಿರಾರು ಸಂಖ್ಯೆಯಲ್ಲಿ ಪ್ರತಿಭಟನಾಕಾರರು ಸೇರಿದ್ದರಿಂದ ಮುಂಜಾಗ್ರತ ಕ್ರಮವಾಗಿ ಡಿಸಿಪಿ ರೋಹನ್ ಜಗದೀಶ್ ನೇತೃತ್ವದಲ್ಲಿ ನಾಲ್ಕು ಕೆಎಸ್ಆರ್ಪಿ ತುಕಡಿಗಳು ಹಾಗೂ ಸಾವಿರಕ್ಕೂ ಅಧಿಕ ಪೊಲೀಸರನ್ನು ನಿಯೋಜಿಸಲಾಗಿತ್ತು. ಖುದ್ದು ಪೊಲೀಸ್ ಕಮಿಷನರ್ ಯಡಾ ಮಾರ್ಟಿನ್ ಮಾರ್ಬನ್ಯಾಂಗ್ ಕೂಡ ಸ್ಥಳದಲ್ಲಿ ಹಾಜರಿದ್ದು, ಭದ್ರತೆ ಪರಿಶೀಲಿಸಿದರು.
Members of the Muslim community gathered in large numbers at Chennamma Circle here on Friday, May 16, to protest condemning the alleged burning of a copy of the Quran in Santi Bastwad village in the district.
09-11-25 06:53 pm
Bangalore Correspondent
ಇಪಿಎಫ್ ಸೊಸೈಟಿಯಲ್ಲಿ 70 ಕೋಟಿ ದುರ್ಬಳಕೆ ; ಅಕೌಂಟೆಂ...
09-11-25 03:47 pm
ISIS Terrorists, Umesh Reddy, Parappana Agrah...
08-11-25 10:29 pm
High Court Directs Kalaburagi: ಚಿತ್ತಾಪುರ ಆರೆಸ...
08-11-25 12:38 pm
ಯಾವ ಕ್ರಾಂತಿಯೂ ಆಗಲ್ಲ, ವಾಂತಿಯೂ ಆಗಲ್ಲ.. ನನಗೆ ಸಿದ...
07-11-25 09:59 pm
09-11-25 07:49 pm
HK News Desk
ಮುಸ್ಲಿಂ ವ್ಯಕ್ತಿಯ ಎರಡನೇ ಮದುವೆ ನೋಂದಣಿಗೆ ನಿರಾಕರಣ...
07-11-25 05:21 pm
ಮತಗಳವು ಆರೋಪ ; ರಾಹುಲ್ ವಿರುದ್ಧ ತಿರುಗಿಬಿದ್ದ ಮತದಾ...
07-11-25 11:33 am
'ನವೆಂಬರ್ ಕ್ರಾಂತಿ' ವದಂತಿ ತಳ್ಳಿಹಾಕಿದ ಡಿಸಿಎಂ ; ನ...
06-11-25 10:22 pm
ಐಸಿಸಿ ಮಹಿಳಾ ವಿಶ್ವಕಪ್ ಎತ್ತಿಹಿಡಿದ ಭಾರತದ ವನಿತೆಯರ...
03-11-25 01:13 pm
08-11-25 08:31 pm
Mangalore Correspondent
ಬೆಂಗಳೂರು- ಮಂಗಳೂರು ಹೈಸ್ಪೀಡ್ ಕಾರಿಡಾರ್ ; ಶಿರಾಡ...
07-11-25 10:58 pm
ಕುದ್ರೋಳಿ ಕ್ಷೇತ್ರ ಸ್ಥಾಪಿಸಿದ ಫೆ.21ರಂದು ನಾರಾಯಣ ಗ...
07-11-25 07:23 pm
ಗೋಡಂಬಿ ಉದ್ಯಮಕ್ಕೆ ನೂರು ವರ್ಷ ; ನ.14-16ರಂದು ದೇಶದ...
07-11-25 05:25 pm
ನೆಲ್ಯಾಡಿಯಲ್ಲಿ ಹೊಟೇಲ್ ಉದ್ಯಮ ನಡೆಸುತ್ತಿದ್ದ ಅಭಿಷೇ...
07-11-25 02:18 pm
09-11-25 03:50 pm
Mangalore Correspondent
ಕೋಮುದ್ವೇಷದ ಕೊಲೆ ; ಪ್ರತೀಕಾರಕ್ಕೆ ಪ್ರಚೋದಿಸಿ ಇನ್...
08-11-25 11:15 pm
Digital Arrest Scam, Mangalore Online Fraud:...
08-11-25 04:08 pm
ಆರೋಪಿಗೆ ಜಾಮೀನು ನೀಡಲು ಹೋಗಿ ತಾನೇ ತಗ್ಲಾಕ್ಕೊಂಡ !...
07-11-25 11:20 pm
ಹಗಲು ಕುರಾನ್ ಬೋಧಕ, ರಾತ್ರಿ ಮನೆಗಳ್ಳ..! ಬೀಗ ಹಾಕಿದ...
07-11-25 08:05 pm