ಬ್ರೇಕಿಂಗ್ ನ್ಯೂಸ್
17-05-25 05:00 pm Bangalore Correspondent ಕ್ರೈಂ
ಬೆಂಗಳೂರು, ಮೇ 17 : ಸಿಗರೇಟ್ ತಂದು ಕೊಡದಿರುವ ಕೋಪಕ್ಕೆ R15 ಬೈಕ್ಗೆ ಕಾರಿನಿಂದ ಗುದ್ದಿದ ಪರಿಣಾಮ ಓರ್ವ ಸಾಫ್ಟ್ ವೇರ್ ಉದ್ಯೋಗಿ ಜೀವ ಕಳೆದುಕೊಂಡ ಘಟನೆ ನಗರದ ಕೋಣನಕುಂಟೆ ಕ್ರಾಸ್ನ ಕನಕಪುರ ರಸ್ತೆ ತಿರುವಿನ ಬಳಿ ನಡೆದಿದೆ.
ಸಂಜಯ್ ಉಸಿರು ಚೆಲ್ಲಿದ ಸಾಫ್ಟ್ವೇರ್ ಇಂಜಿನಿಯರ್. ಆರೋಪಿ ಕಾರು ಚಾಲಕ ಪ್ರತೀಕ್ನನ್ನು ಸುಬ್ರಹ್ಮಣ್ಯಪುರ ಠಾಣೆಯ ಪೊಲೀಸರು ಅರೆಸ್ಟ್ ಮಾಡಿದ್ದಾರೆ. ಸಂಜಯ್ ಹಾಗೂ ಚೇತನ್ ಎನ್ನುವ ಇಬ್ಬರು ಸಾಫ್ಟ್ವೇರ್ ಇಂಜಿನಿಯರ್ ಗಳು. ವರ್ಕ್ ಫ್ರಮ್ ಹೋಂ ಕೆಲಸ ಮಾಡಿ ಟೀ ಕುಡಿಯಲು ಮೇ 10 ರಂದು ಬೆಳಗಿನ ಜಾವ 4 ಗಂಟೆಗೆ ಕೋಣನಕುಂಟೆ ಕ್ರಾಸ್ನಲ್ಲಿ ತಳ್ಳು ಗಾಡಿ ಬಳಿಗೆ ಬಂದಿದ್ದರು.
ಈ ವೇಳೆ ಬರ್ತ್ಡೇ ಪಾರ್ಟಿ ಮುಗಿಸಿಕೊಂಡು ಆರ್ಆರ್ ನಗರ ಮನೆ ಕಡೆಗೆ ಕೊಲೆಗಾರ ಪ್ರತೀಕ್ ದಂಪತಿ ಕಾರಿನಲ್ಲಿ ತೆರಳುತ್ತಿದ್ದರು. ಆಗ ಕೋಣನಕುಂಟೆ ಕ್ರಾಸ್ ಬಳಿ ಕಾರು ನಿಲ್ಲಿಸಿ, ಕೆಳಗೆ ಇಳಿಯದೇ ಸಿಗರೇಟ್ ತಂದು ಕೊಡುವಂತೆ ಟೀ ಕುಡಿಯುತ್ತಿದ್ದ ಸಂಜಯ್ ಅಂಡ್ ಚೇತನ್ಗೆ ಹೇಳ್ತಾರೆ. ಆದ್ರೆ ಇದಕ್ಕೆ ಇಬ್ಬರು ವಿರೋಧ ವ್ಯಕ್ತಪಡಿಸುತ್ತಾರೆ. ನೀವೇ ಬೇಕಿದ್ರೆ ಬಂದು ಸಿಗರೇಟ್ ತೆಗೆದುಕೊಳ್ಳಿ ಅಂತ ತಮ್ಮ ಪಾಡಿಗೆ ತಾವು ಟೀ ಕುಡಿಯುತ್ತಿದ್ದರು.
ಈ ವೇಳೆ ಟೀ ಅಂಗಡಿ ಬಳಿಯೇ ಪ್ರತೀಕ್ ದಂಪತಿ ಹಾಗೂ ಸಾಫ್ಟ್ವೇರ್ ಉದ್ಯೋಗಿಗಳ ಮಧ್ಯೆ ಗಲಾಟೆ ನಡೆದಿದೆ. ಸ್ಥಳದಲ್ಲಿದ್ದ ಜನರು ಈ ಗಲಾಟೆಯನ್ನು ತಿಳಿಗೊಳಿಸಿ ಕಳುಹಿಸಿದ್ದರು. ಸಾಫ್ಟ್ವೇರ್ ಉದ್ಯೋಗಿಗಳು ಇಬ್ಬರು ತಮ್ಮ R15 ಬೈಕ್ ಹತ್ತಿಕೊಂಡು ಮನೆಗೆ ಹೊರಟಿದ್ರು . ಆದರೆ ಕೋಣನಕುಂಟೆ ಕ್ರಾಸ್ನ ಕನಕಪುರ ರಸ್ತೆ ತಿರುವಿನ ಬಳಿ ಬೈಕ್ ಯೂಟರ್ನ್ ತೆಗೆದುಕೊಳ್ಳುವ ಸಮಯದಲ್ಲಿ ಬೈಕ್ಗೆ ಕಾರಿನಿಂದ ಭೀಕರವಾಗಿ ಪ್ರತೀಕ್ ಡಿಕ್ಕಿ ಹೊಡೆದಿದ್ದಾನೆ.
ಆರೋಪಿ ಪ್ರತೀಕ್ ಕಾರಿನಿಂದ ಗುದ್ದಿದ ರಭಸಕ್ಕೆ ಸಂಜಯ್ ಬೈಕ್ ಅಂಗಡಿ ಶೆಟರ್ಗೆ ಬಡಿದು ಬಿದ್ದಿದೆ. ಈ ವೇಳೆ ಇಬ್ಬರು ಪ್ರಜ್ಞಾ ಹೀನರಾಗಿ ಕೆಳಗೆ ಬಿದ್ದಿದ್ದರು. ತಕ್ಷಣ ಇಬ್ಬರನ್ನು ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ಆದರೆ ಸಂಜಯ್ ಸ್ಥಿತಿ ಚಿಂತಾಜನಕ ಆಗಿದ್ದರಿಂದ ಚಿಕಿತ್ಸೆ ಫಲಕಾರಿಯಾಗದೇ 2 ದಿನದ ಹಿಂದೆ ಕೊನೆಯುಸಿರೆಳೆದಿದ್ದಾನೆ. ಈ ಬಗ್ಗೆ ತನಿಖೆ ನಡೆಸಿದ್ದ ಸುಬ್ರಹ್ಮಣ್ಯಪುರ ಠಾಣೆ ಪೊಲೀರು ಆರೋಪಿ ಪ್ರತೀಕ್ನನ್ನು ಬಂಧಿಸಿದ್ದಾರೆ.
Car runs over #Bengaluru techie, killing him, after he refuses to buy cigarettes for driver
— The Times Of India (@timesofindia) May 17, 2025
Read: https://t.co/5tz9lSAODS pic.twitter.com/1rpJY9GfeO
A 29-year-old software engineer was killed, and his friend injured in a violent hit-and-run incident in Bengaluru, reportedly triggered by a dispute over a cigarette.
14-07-25 01:43 pm
HK News Desk
Dr B Saroja Devi Death: 17ನೇ ವಯಸ್ಸಲ್ಲೇ ಚಿತ್ರರ...
14-07-25 12:50 pm
Mantralaya, Tungabhadra River, drowning: ತುಂಬ...
13-07-25 08:37 pm
ಆಧ್ಯಾತ್ಮಿಕ ಸಾಧನೆಯತ್ತ ಚಿತ್ತ ; ಗೋಕರ್ಣ ಬಳಿಯ ದಟ್ಟ...
13-07-25 04:03 pm
Shivamogga Jail News, Mobile phone: ಶಿವಮೊಗ್ಗ...
12-07-25 10:47 pm
12-07-25 09:25 pm
HK News Desk
Apples New COO, Sabih Khan: ಟೆಕ್ ದೈತ್ಯ ಏಪಲ್ ಸ...
12-07-25 04:21 pm
ಸಾಮೂಹಿಕ ಮತಾಂತರ ; ಮೂರೇ ವರ್ಷಕ್ಕೆ ಚಾಂಗೂರ್ ಬಾಬಾನಿ...
12-07-25 02:15 pm
Coimbatore Serial Blasts, 'Tailor Raja' Arres...
11-07-25 12:08 pm
1500ಕ್ಕೂ ಹೆಚ್ಚು ಹಿಂದು ಮಹಿಳೆಯರನ್ನು ಇಸ್ಲಾಮಿಗೆ ಮ...
10-07-25 11:07 pm
13-07-25 11:13 pm
Mangalore Correspondent
Mangalore News: ಸಾರಿಗೆ ಕಚೇರಿಗಳಿಗೆ ಸ್ವಂತ ಕಟ್ಟಡ...
13-07-25 11:11 pm
Mangalore, E Bus, MP Chowta: ಕೇಂದ್ರ ಸರ್ಕಾರದಿಂ...
13-07-25 10:12 pm
Mangalore DK Transport, DK Group Alwyn Joel N...
13-07-25 07:00 pm
ಬೆಳ್ತಂಗಡಿ ; ಶಿಕ್ಷಕಿಯಾಗಿದ್ದ ವಿವಾಹಿತ ಮಹಿಳೆ ನೇಣು...
13-07-25 05:56 pm
13-07-25 05:23 pm
Bangalore Correspondent
ಅಪ್ರಾಪ್ತ ಬಾಲಕಿಯನ್ನು ಶಾಲೆಗೆ ಕರೆದೊಯ್ಯುವ ನೆಪದಲ್ಲ...
12-07-25 11:10 pm
Dowry Harassment, Mysuru: ಮದುವೆಯಾದ ಎರಡೇ ತಿಂಗಳ...
12-07-25 01:32 pm
Mangalore Job Fraud, KCOCA, Police: ಫಾರಿನ್ ಉದ...
12-07-25 11:59 am
Robbery, Gold Workshop in Kalaburagi: ಕಲಬುರಗಿ...
11-07-25 10:10 pm