ಬ್ರೇಕಿಂಗ್ ನ್ಯೂಸ್
29-05-25 12:44 pm HK News Desk ಕ್ರೈಂ
ಕಾರವಾರ, ಮೇ 29 : ರಾಷ್ಟ್ರೀಯ ಹೆದ್ದಾರಿಯಲ್ಲಿ ದರೋಡೆಗೆ ಹೊಂಚು ಹಾಕಿ ಕುಳಿತಿದ್ದ ಗರುಡಾ ಗ್ಯಾಂಗ್ನ ಮೂವರನ್ನು ಚಾಕು, ಕಾರದಪುಡಿ ಸೇರಿದಂತೆ ಇನ್ನಿತರ ವಸ್ತುಗಳ ಸಹಿತ ಹೆಡೆಮುರಿಕಟ್ಟುವಲ್ಲಿ ಭಟ್ಕಳ ಪೊಲೀಸರು ಯಶಸ್ವಿಯಾಗಿದ್ದಾರೆ. ತಪ್ಪಿಸಿಕೊಂಡಿರುವ ಇನ್ನಿಬ್ಬರ ಪತ್ತೆಗಾಗಿ ಬಲೆ ಬೀಸಲಾಗಿದೆ.
ಮಂಗಳೂರು ಚೊಕ್ಕಬೆಟ್ಟು ರಸ್ತೆಯ ಜಲೀಲ್ ಹುಸೈನ್, ಭಟ್ಕಳದ ಹೆಬಳೆಯ ಗಾಂಧಿನಗರದ ವೃತ್ತಿಯಲ್ಲಿ ಚಾಲಕನಾದ ನಾಸೀರ್ ಹಕೀಮ್ ಎಂಬವರನ್ನು ಬಂಧಿಸಲಾಗಿದೆ. ಇವರಲ್ಲಿ, ಜಲೀಲ್ ಮೇಲೆ ಈಗಾಗಲೇ 11 ಪ್ರಕರಣಗಳು ಹಾಗೂ ನಾಸೀರ್ ವಿರುದ್ಧ 02 ಕೇಸ್ ದಾಖಲಾಗಿವೆ. ಮತ್ತೋರ್ವ ಆರೋಪಿ ಬಾಲಕನಾಗಿದ್ದು, ಈತನ ಮೇಲೆ ಒಂದು ಪ್ರಕರಣವಿದೆ. ಉಳಿದಂತೆ ಕಾರಿನಲ್ಲಿದ್ದ ಇತರ ಇಬ್ಬರು ಪೊಲೀಸರನ್ನು ಕಂಡು ಓಡಿ ಹೋಗಿದ್ದಾರೆ. ಅವರನ್ನ ಮಗ್ಗಂ ಕಾಲೋನಿಯ ಜೀಶಾನ್ ಹಾಗೂ ಬಟ್ಟಾಗಾಂವ ನಿವಾಸಿ ನಬೀಲ್ ಎಂದು ಗುರುತಿಸಲಾಗಿದೆ. ಪರಾರಿಯಾದವರ ಪತ್ತೆಗೆ ವಿಶೇಷ ತಂಡ ರಚಿಸಲಾಗಿದೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.
ಭಟ್ಕಳದ ಬಿಲಾಲಖಂಡ ಗ್ರಾಮದ ಸಾಗರ ರಸ್ತೆಯ ರಾಜ್ಯ ಹೆದ್ದಾರಿಯಲ್ಲಿ ಬುಧವಾರ ಬೆಳಗಿನ ಜಾವ 03 ಗಂಟೆ ಸುಮಾರಿಗೆ ಈ ಐವರು ಆರೋಪಿತರು ದರೋಡೆ ಮಾಡಲು ಸಂಚು ರೂಪಿಸಿದ್ದರು. ಇನ್ನೊವಾದಲ್ಲಿ ಬಂದಿದ್ದ ಇವರು ಹೊಂಚು ಹಾಕಿಕೊಂಡು ಗುಳ್ಳಿ ರಸ್ತೆ ಕ್ರಾಸ್ ಹತ್ತಿರ ಕತ್ತಲೆಯಲ್ಲಿ ಕಾರಿನಲ್ಲಿಯೇ ಕುಳಿತಿದ್ದರು. ಆಗ ಅದೇ ಮಾರ್ಗದಲ್ಲಿ ಬಂದ ಭಟ್ಕಳ ಗ್ರಾಮೀಣ ಠಾಣೆ ಪಿಎಸ್ಐ ರನ್ನಗೌಡ ಪಾಟೀಲ್ ಹಾಗೂ ಸಿಬ್ಬಂದಿ ಆರೋಪಿತರನ್ನು ನೋಡಿ ಅನುಮಾನಗೊಂಡು ವಿಚಾರಿಸಲು ಮುಂದಾದಾಗ, ತಪ್ಪಿಸಿಕೊಳ್ಳಲು ಕಾರನ್ನು ಹಿಮ್ಮುಖವಾಗಿ ಚಲಾಯಿಸಿದ್ದರು. ಆದರೆ ಕಾರು ನಿಯಂತ್ರಣ ತಪ್ಪಿ ಗಟಾರಿನಲ್ಲಿ ಬಿದ್ದಿದೆ. ಆಗ ಗರುಡಾ ಗ್ಯಾಂಗ್ನ ಮೂವರು ಸಿಕ್ಕಿಬಿದ್ದಿದ್ದಾರೆ. ಇನ್ನುಳಿದ ಇಬ್ಬರು ಆರೋಪಿತರು ತಪ್ಪಿಸಿಕೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.
ಕಾರಿನಲ್ಲಿದ್ದ ಚಾಕು, ಕಾರದ ಪುಡಿ, ಮಂಕಿಕ್ಯಾಪ್, ಬೆಲ್ಟ್, ತಾಡಪತ್ರೆ ಸೇರಿ ಇತರ ವಸ್ತ್ರಗಳನ್ನು ವಶಕ್ಕೆ ಪಡೆಯಲಾಗಿದೆ. ಭಟ್ಕಳ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಕಲಂ 310(4), 310(5), ಬಿಎನ್ಎಸ್-2023 ಅಡಿ ಪ್ರಕರಣ ದಾಖಲಾಗಿದೆ.
Garuda Gang from Mangalore Caught Lurking on Highway for Robbery, Armed with Knives and Chili Powder, Nabbed in the Dark by Alert Karwar Police.
24-06-26 05:55 pm
HK News Staffer
ಅಡ್ಡ ಮತದಾನ ; ರಾಜ್ಯ ನಾಯಕತ್ವದ ನಿರ್ಲಕ್ಷ್ಯವೇ ಕಾರಣ...
23-06-26 05:58 pm
ಅಡ್ಡ ಮತದಾನ; ಧರ್ಮಸ್ಥಳದಲ್ಲಿ ಶಾಸಕರು ಬಂದು ಆಣೆ ಮಾಡ...
22-06-26 08:18 pm
ವಿಧಾನ ಪರಿಷತ್ ಚುನಾವಣೆಗೂ ಮುನ್ನ ರಹಸ್ಯ ಸಭೆ ; ಬಿಜೆ...
22-06-26 03:44 pm
ಆಸ್ಪತ್ರೆ ಸಿಬ್ಬಂದಿ ಸ್ಪಂದಿಸದಿದ್ದರೆ ಚಿಂತೆ ಬೇಡ ;...
22-06-26 12:51 pm
25-06-26 12:13 pm
HK News Staffer
ಕೂಲ್ ಸಿಟಿ ಯುರೋಪಿನಲ್ಲೀಗ ಬಿಸಿಲ ಹೊಡೆತ ; ಫ್ರಾನ್ಸ್...
24-06-26 01:51 pm
ಮಾಹಿತಿ ಹಕ್ಕು ನಿಯಮಗಳಿಗೆ ಮಹಾರಾಷ್ಟ್ರ ಸರ್ಕಾರ ತಿದ್...
23-06-26 10:47 pm
ಟಿಎಂಸಿಯಲ್ಲಿ ರಾಜಕೀಯ ಭೂಕಂಪ ; ಮಮತಾ ಬ್ಯಾನರ್ಜಿ ಅಧ...
23-06-26 12:21 pm
ಕತಾರ್ ಕೈಗಾರಿಕಾ ಪ್ರದೇಶದಲ್ಲಿ ಭಾರೀ ಸ್ಫೋಟ ; 54 ಜನ...
22-06-26 12:55 pm
23-06-26 06:02 pm
HK News Staffer
ಬಸ್ ಚಲಿಸುತ್ತಿದ್ದಾಗಲೇ ಬಿಪಿ ಲೋ ಆಗಿ ಕುಸಿದ ಚಾಲಕ !...
23-06-26 03:18 pm
ಮುಸ್ಲಿಮರಿಗೆ ಸಚಿವ ಸ್ಥಾನ ; ಕಾಂಗ್ರೆಸಿಗೆ ಓಟ್ ಹಾಕದ...
23-06-26 11:49 am
ಉಡುಪಿ ಕೋರ್ಟ್ಗೆ ಇ-ಮೇಲ್ ಮೂಲಕ ಬಾಂಬ್ ಬೆದರಿಕೆ; ಕೆ...
22-06-26 05:23 pm
Dr Kakkillaya News: ಕೊರಾನಾ ಮಾಸ್ಕ್ ಹಾಕಿಲ್ಲವೆಂದ...
21-06-26 08:59 pm
25-06-26 01:00 pm
HK News Staffer
ಹಸೆಮಣೆ ಏರಬೇಕಿದ್ದವಳೇ ಭಾವಿ ಪತಿಯನ್ನು ಫೋಟೊ ಶೂಟ್ ನ...
24-06-26 09:28 pm
30 ಲಕ್ಷ ಸಾಲ, ಲಿವ್-ಇನ್ ಸಂಬಂಧಕ್ಕೆ ಪೋಷಕರ ವಿರೋಧ ;...
24-06-26 08:53 pm
ರಾಮ ಮಂದಿರವನ್ನ ಸ್ಫೋಟಿಸಲು ಪ್ಲಾನ್ ಮಾಡಿದ್ವಿ ! ;...
24-06-26 07:53 pm
ಅಯೋಧ್ಯೆ ರಾಮ ಮಂದಿರ ಹೆಸರಲ್ಲಿ ದೇಣಿಗೆ ; 200 ಕೋಟಿ...
24-06-26 05:57 pm