ಬ್ರೇಕಿಂಗ್ ನ್ಯೂಸ್
29-05-25 06:38 pm Mangaluru Correspondent ಕ್ರೈಂ
ಮಂಗಳೂರು, ಮೇ 29: ಕೊಳತ್ತಮಜಲು ನಿವಾಸಿ ಅಬ್ದುಲ್ ರಹಿಮಾನ್ ಎಂಬವರ ಕೊಲೆ ಪ್ರಕರಣಕ್ಕೆ ಸಂಬಂಧಿಸಿ ಬಂಟ್ವಾಳ ಗ್ರಾಮಾಂತರ ಪೊಲೀಸರು ಮೂವರು ಆರೋಪಿಗಳನ್ನು ಬಂಧಿಸಿದ್ದು ತೀವ್ರ ವಿಚಾರಣೆಗೆ ಒಳಪಡಿಸಿದ್ದಾರೆ.
ಈ ಬಗ್ಗೆ ದಕ್ಷಿಣ ಕನ್ನಡ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಯತೀಶ್ ಎನ್. ಅವರು ಪ್ರಕಟಣೆ ಹೊರಡಿಸಿದ್ದು, ಬಂಟ್ವಾಳ ತಾಲೂಕು ಕುರಿಯಾಳ ಗ್ರಾಮದ ಮುಂಡರಕೋಡಿಯ ದೀಪಕ್ (21), ಅಮ್ಮುಂಜೆ ಗ್ರಾಮದ ಶಿವಾಜಿನಗರದ ಪೃಥ್ವಿರಾಜ್ (21), ಅಮ್ಮುಂಜೆ ಗ್ರಾಮದ ಶಿವಾಜಿನಗರದ ಚಿಂತನ್ (19) ಅವರನ್ನು ವಶಕ್ಕೆ ಪಡೆಯಲಾದ ಆರೋಪಿಗಳು ಎಂದು ತಿಳಿಸಿದ್ದಾರೆ.
ಬಂಟ್ವಾಳ ಪೊಲೀಸ್ ಉಪಾಧೀಕ್ಷಕ ವಿಜಯಪ್ರಸಾದ್ ತನಿಖಾಧಿಕಾರಿಯಾಗಿದ್ದು, ಇವರ ನೇತೃತ್ವದಲ್ಲಿ ಐದು ತನಿಖಾ ತಂಡಗಳನ್ನು ರಚಿಸಿ ಆರೋಪಿಗಳ ಪತ್ತೆ ಕಾರ್ಯ ನಡೆಸಲಾಗಿದೆ. ತನಿಖಾ ತಂಡವು ಮೇ 29ರಂದು ಬಂಟ್ವಾಳ ಕಳ್ಳಿಗೆ ಗ್ರಾಮದ ಕನಪಾಡಿ ಎಂಬಲ್ಲಿ ಮೂವರು ಆರೋಪಿಗಳನ್ನು ವಶಕ್ಕೆ ಪಡೆದಿದ್ದಾರೆ. ಬಂಟ್ವಾಳ ಗ್ರಾಮಾಂತರ ಠಾಣೆಯಲ್ಲಿ ದೀಪಕ್, ಸುಮಿತ್ ಮತ್ತು 15 ಮಂದಿಯ ವಿರುದ್ಧ ಎಫ್ಐಆರ್ ದಾಖಲಾಗಿದೆ. ಅಬ್ದುಲ್ ರಹಿಮಾನ್ ಬೆಂಜನಪದವು ಬಳಿಯ ಇರಾಕೋಡಿ ಎಂಬಲ್ಲಿ ಮರಳು ಅನ್ ಲೋಡ್ ಮಾಡುತ್ತಿದ್ದಾಗ ಎರಡು ಸ್ಕೂಟರ್ ನಲ್ಲಿ ಬಂದಿದ್ದವರು ತಲವಾರು ದಾಳಿ ನಡೆಸಿದ್ದರು. ಅಬ್ದುಲ್ ರಹಿಮಾನ್ ಸ್ಥಳದಲ್ಲೇ ಸಾವನ್ನಪ್ಪಿದ್ದರೆ, ಅವರ ಜೊತೆಗಿದ್ದ ಕಲಂದರ್ ಶಾಫಿ ಎಂಬಾತ ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದ.
ಆರೋಪಿಗಳು ಪರಿಚಿತರೇ ಆಗಿದ್ದು ಹಳೆ ದ್ವೇಷವೇ ಅಥವಾ ಸುಹಾಸ್ ಶೆಟ್ಟಿ ಕೊಲೆಗೆ ಪ್ರತೀಕಾರಕ್ಕಾಗಿ ಕೊಲೆ ಮಾಡಿದ್ದಾರೆಯೇ ಎನ್ನುವ ಬಗ್ಗೆ ತನಿಖೆ ನಡೆಸುತ್ತಿದ್ದಾರೆ. ಇತರ ಆರೋಪಿಗಳ ಪತ್ತೆ ಕಾರ್ಯ ಪ್ರಗತಿಯಲ್ಲಿದೆ ಎಂದು ಪೊಲೀಸರು ತಿಳಿಸಿದ್ದಾರೆ.
Mangalore Bantwal Abdul Rahiman Murder Case, Police Confirm Arrest of Three Accused
12-09-26 09:40 pm
HK News Staffer
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
ಬಿಜೆಪಿ ಅಧಿಕಾರಕ್ಕೆ ಬರಲು ನನ್ನ ಸ್ಥಾನ ಬಿಟ್ಟುಕೊಟ್ಟ...
12-09-26 05:56 pm
ಐಎಎಸ್ ತೇರ್ಗಡೆಯಾಗಿದ್ದ ಕೇರಳದ ಮೊದಲ ಬುಡಕಟ್ಟು ಮಹಿಳ...
12-09-26 05:53 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
14-09-26 10:01 pm
HK News Staffer
ಮಂಗಳೂರಿನಲ್ಲಿ ಎರಡು ದಿನ ಸಿಎಂ ಡಿಕೆಶಿ ವಾಸ್ತವ್ಯ ;...
14-09-26 06:02 pm
100 ವರ್ಷಗಳ ಬಳಿಕವೂ ಸ್ವಂತ ಸೂರಿಗಾಗಿ ಕರಾವಳಿಯಲ್ಲಿ...
14-09-26 05:00 pm
Konkan Catholic Credit Society Inaugurated in...
14-09-26 04:18 pm
Konkan Catholic Credit Society Mangalore: ಹಣಕ...
13-09-26 10:11 pm
12-09-26 07:41 pm
HK News Staffer
ಕ್ರಿಪ್ಟೊ ಕರೆನ್ಸಿ ಹೆಸ್ರಲ್ಲಿ ಡಾಕ್ಟರ್ ಗೆ ಮಹಿಳೆಯಿ...
11-09-26 06:38 pm
ಜಾಮೀನು ಪಡೆಯಲು ನಕಲಿ ಆಧಾರ್ ಕಾರ್ಡ್ ಹಾಜರು ; ಉಡು...
11-09-26 01:09 pm
ಬೈಕ್ಗೆ ಡಿಕ್ಕಿ ಹೊಡೆದ ಕಾರು ; ಚಾಮರಾಜನಗರದಲ್ಲಿ ಮೂ...
11-09-26 10:14 am
ಕುಂದಾಪುರದಲ್ಲಿ 8 ಶಾಲಾ ಮಕ್ಕಳ ಬಲಿ ಪಡೆದ ಭೀಕರ ಅಪಘಾ...
10-09-26 08:16 pm