ಬ್ರೇಕಿಂಗ್ ನ್ಯೂಸ್
29-05-25 11:04 pm Mangalore Correspondent ಕ್ರೈಂ
ಮಂಗಳೂರು, ಮೇ 29 : ಕೋಮು ವೈಷಮ್ಯದ ಕೊಲೆ, ಗಲಾಟೆ ನಡುವೆಯೇ ಬಂಟ್ವಾಳದ ಹಿಂದೂ ಜಾಗರಣ ವೇದಿಕೆ ಮುಖಂಡನಿಗೆ ಜೈಷ್- ಇ -ಮೊಹಮ್ಮದ್ ಉಗ್ರ ಸಂಘಟನೆ ಹೆಸರಿನಲ್ಲಿ ಜೀವ ಬೆದರಿಕೆ ಬಂದಿದೆ. ಉರ್ದು ಭಾಷೆಯಲ್ಲಿ ವಾಟ್ಸ್ಅಪ್ ಮೂಲಕ ಆಡಿಯೋ ಮೆಸೇಜ್ ಬಂದಿದ್ದು, ಈ ಬಗ್ಗೆ ಬಂಟ್ವಾಳ ಪೊಲೀಸರಿಗೆ ದೂರು ನೀಡಲಾಗಿದೆ.
ಹಿಂದೂ ಜಾಗರಣ ವೇದಿಕೆಯ ಜಿಲ್ಲಾ ಸಂಯೋಜಕ ನರಸಿಂಹ ಮಾಣಿ ಎಂಬವರಿಗೆ ಬೆದರಿಕೆ ಬಂದಿದ್ದು ಹಿಂದಿಯಲ್ಲಿ ವಾಟ್ಸಪ್ ಮೆಸೇಜ್ ಬಂದಿದೆ. ಹಲವು ಹಿಂದೂ ಮುಖಂಡರ ಲಿಸ್ಟ್ ರೆಡಿ ಮಾಡಿದ್ದೇವೆ. ನಿನ್ನ ಹೆಸರು ಲಿಸ್ಟ್ ನಲ್ಲಿ ಮೊದಲಿಗಿದೆ. ನಿನ್ನ ಎಲ್ಲಾ ಚಲನವಲನಗಳನ್ನು ಗಮನಿಸುತ್ತಿದ್ದೇವೆ. ಕೊಲೆಯಾದ ಸುಹಾಸ್ ಶೆಟ್ಟಿ ಕೂಡಾ ನಮ್ಮ ಲಿಸ್ಟ್ ನಲ್ಲಿದ್ದ. ಆದರೆ ಯಾರೋ ಒಳ್ಳೆಯ ಜನ ಅವನನ್ನು ಕೊಂದು ಹಾಕಿದ್ದಾರೆ.


ನಿನ್ನ ಸ್ನೇಹಿತ ರಂಜಿತ್ ಎಂಬವನನ್ನು ಕೊಲ್ಲುತ್ತೇವೆ. ತಲೆಗೆ ಕಡಿದು ಸುಲಭವಾಗಿ ಕೊಲ್ಲುವುದಿಲ್ಲ. ಮೊದಲು ಆತನ ಕೈಕಾಲು ಕಡಿಯುತ್ತೇವೆ. ನಂತರ ತಲೆ ಕಡಿದು ದೆಹಲಿಯ ಮೈನ್ ಗೇಟ್ ನಲ್ಲಿ ನೇತಾಡಿಸುತ್ತೇವೆ. ನಾವು ದೆಹಲಿಗೆ ಬಂದು ತಲುಪಿಯಾಗಿದೆ. ನಿಮ್ಮ ಉಲ್ಟಾ ಲೆಕ್ಕಾಚಾರ ಸ್ಟಾರ್ಟ್ ಆಗಿದೆ. ನಿನ್ನನ್ನು ಹೇಗೆ ಕೊಲ್ಲುತ್ತೇವೆ ಎಂದು ಅಲ್ಲಾನಿಗು ಗೊತ್ತಿಲ್ಲ ಎಂದು ಬರೆದಿದ್ದಾರೆ.
ನಿನ್ನ ಕೊಂದ ರೀತಿ ಹೇಗಿರಬೇಕು ಅಂದ್ರೆ, ಅದನ್ನು ನೋಡಿ ಜನ ಕೊಲ್ಲುವ ವಿಧಾನವನ್ನೇ ಮರೆಯಲಿದ್ದಾರೆ. ಮುಸ್ಲಿಮರಿಗೆ ತೊಂದರೆ ಕೊಡೋದನ್ನು ಬಿಟ್ಟು ನಿನ್ನ ಬಗ್ಗೆ ಯೋಚಿಸು. ನಿಮ್ಮ ಪಾರ್ಟಿ ಅಥವಾ ಯಾವುದೇ ಮುಖಂಡರು ನಿಮ್ಮನ್ನು ರಕ್ಷಿಸಲು ಸಾಧ್ಯವಿಲ್ಲ. ನಿಮ್ಮ ಜೊತೆಗೆ ನಿಮ್ಮ ಮುಖಂಡರನ್ನು ಕೂಡ ಮುಗಿಸಲಾಗುವುದು. ಇದು ಜೈಶ್ ಮುಜಾಹಿದೀನ್ ಸಂಘಟನೆಯ ಸಂದೇಶ ಎಂದು ಜೀವ ಬೆದರಿಕೆ ಆಡಿಯೋದಲ್ಲಿ ಹೇಳಿದ್ದಾರೆ.
ಸಿರಿಯಾ ,ಪಾಕಿಸ್ತಾನ, ಅಫಘಾನಿಸ್ತಾನ, ಸೌದಿ ಅರೇಬಿಯಾದ ಮೊಬೈಲ್ ಸಂಖ್ಯೆಗಳಿಂದ ಮೆಸೇಜ್ ಬಂದಿದ್ದು ಇದರ ಹಿಂದೆ ಸ್ಥಳೀಯರೇ ಉಗ್ರರ ಸಂಪರ್ಕ ಇರುವವರು ಇದ್ದಾರೆ. ಇಲ್ಲದೇ ಇದ್ದರೆ ನಮ್ಮ ಮೊಬೈಲ್ ಸಂಖ್ಯೆ ಅವರಿಗೆ ಹೇಗೆ ತಿಳಿಯುತ್ತದೆ. ಈ ಬಗ್ಗೆ ಎನ್ಐಎ ತನಿಖೆಯಾದರೆ ಎಲ್ಲವೂ ಹೊರಬರುತ್ತದೆ ಎಂದು ಜೀವ ಬೆದರಿಕೆ ಬಗ್ಗೆ ಬಂಟ್ವಾಳ ಪೊಲೀಸರಿಗೆ ನೀಡಿದ ದೂರಿನಲ್ಲಿ ನರಸಿಂಹ ಮಾಣಿ ತಿಳಿಸಿದ್ದಾರೆ.
Mangalore Hindu Organization Leaders Receive Death Threats in the Name of Jaish e Mohammed, Message Says 'Only Allah Knows How We'll Kill You'
24-06-26 05:55 pm
HK News Staffer
ಅಡ್ಡ ಮತದಾನ ; ರಾಜ್ಯ ನಾಯಕತ್ವದ ನಿರ್ಲಕ್ಷ್ಯವೇ ಕಾರಣ...
23-06-26 05:58 pm
ಅಡ್ಡ ಮತದಾನ; ಧರ್ಮಸ್ಥಳದಲ್ಲಿ ಶಾಸಕರು ಬಂದು ಆಣೆ ಮಾಡ...
22-06-26 08:18 pm
ವಿಧಾನ ಪರಿಷತ್ ಚುನಾವಣೆಗೂ ಮುನ್ನ ರಹಸ್ಯ ಸಭೆ ; ಬಿಜೆ...
22-06-26 03:44 pm
ಆಸ್ಪತ್ರೆ ಸಿಬ್ಬಂದಿ ಸ್ಪಂದಿಸದಿದ್ದರೆ ಚಿಂತೆ ಬೇಡ ;...
22-06-26 12:51 pm
25-06-26 12:13 pm
HK News Staffer
ಕೂಲ್ ಸಿಟಿ ಯುರೋಪಿನಲ್ಲೀಗ ಬಿಸಿಲ ಹೊಡೆತ ; ಫ್ರಾನ್ಸ್...
24-06-26 01:51 pm
ಮಾಹಿತಿ ಹಕ್ಕು ನಿಯಮಗಳಿಗೆ ಮಹಾರಾಷ್ಟ್ರ ಸರ್ಕಾರ ತಿದ್...
23-06-26 10:47 pm
ಟಿಎಂಸಿಯಲ್ಲಿ ರಾಜಕೀಯ ಭೂಕಂಪ ; ಮಮತಾ ಬ್ಯಾನರ್ಜಿ ಅಧ...
23-06-26 12:21 pm
ಕತಾರ್ ಕೈಗಾರಿಕಾ ಪ್ರದೇಶದಲ್ಲಿ ಭಾರೀ ಸ್ಫೋಟ ; 54 ಜನ...
22-06-26 12:55 pm
23-06-26 06:02 pm
HK News Staffer
ಬಸ್ ಚಲಿಸುತ್ತಿದ್ದಾಗಲೇ ಬಿಪಿ ಲೋ ಆಗಿ ಕುಸಿದ ಚಾಲಕ !...
23-06-26 03:18 pm
ಮುಸ್ಲಿಮರಿಗೆ ಸಚಿವ ಸ್ಥಾನ ; ಕಾಂಗ್ರೆಸಿಗೆ ಓಟ್ ಹಾಕದ...
23-06-26 11:49 am
ಉಡುಪಿ ಕೋರ್ಟ್ಗೆ ಇ-ಮೇಲ್ ಮೂಲಕ ಬಾಂಬ್ ಬೆದರಿಕೆ; ಕೆ...
22-06-26 05:23 pm
Dr Kakkillaya News: ಕೊರಾನಾ ಮಾಸ್ಕ್ ಹಾಕಿಲ್ಲವೆಂದ...
21-06-26 08:59 pm
24-06-26 09:28 pm
HK News Desk
30 ಲಕ್ಷ ಸಾಲ, ಲಿವ್-ಇನ್ ಸಂಬಂಧಕ್ಕೆ ಪೋಷಕರ ವಿರೋಧ ;...
24-06-26 08:53 pm
ರಾಮ ಮಂದಿರವನ್ನ ಸ್ಫೋಟಿಸಲು ಪ್ಲಾನ್ ಮಾಡಿದ್ವಿ ! ;...
24-06-26 07:53 pm
ಅಯೋಧ್ಯೆ ರಾಮ ಮಂದಿರ ಹೆಸರಲ್ಲಿ ದೇಣಿಗೆ ; 200 ಕೋಟಿ...
24-06-26 05:57 pm
Mangalore Minor student Suicide: ಅಪ್ರಾಪ್ತೆಗೆ...
24-06-26 02:25 pm