ಬ್ರೇಕಿಂಗ್ ನ್ಯೂಸ್
29-05-25 11:04 pm Mangalore Correspondent ಕ್ರೈಂ
ಮಂಗಳೂರು, ಮೇ 29 : ಕೋಮು ವೈಷಮ್ಯದ ಕೊಲೆ, ಗಲಾಟೆ ನಡುವೆಯೇ ಬಂಟ್ವಾಳದ ಹಿಂದೂ ಜಾಗರಣ ವೇದಿಕೆ ಮುಖಂಡನಿಗೆ ಜೈಷ್- ಇ -ಮೊಹಮ್ಮದ್ ಉಗ್ರ ಸಂಘಟನೆ ಹೆಸರಿನಲ್ಲಿ ಜೀವ ಬೆದರಿಕೆ ಬಂದಿದೆ. ಉರ್ದು ಭಾಷೆಯಲ್ಲಿ ವಾಟ್ಸ್ಅಪ್ ಮೂಲಕ ಆಡಿಯೋ ಮೆಸೇಜ್ ಬಂದಿದ್ದು, ಈ ಬಗ್ಗೆ ಬಂಟ್ವಾಳ ಪೊಲೀಸರಿಗೆ ದೂರು ನೀಡಲಾಗಿದೆ.
ಹಿಂದೂ ಜಾಗರಣ ವೇದಿಕೆಯ ಜಿಲ್ಲಾ ಸಂಯೋಜಕ ನರಸಿಂಹ ಮಾಣಿ ಎಂಬವರಿಗೆ ಬೆದರಿಕೆ ಬಂದಿದ್ದು ಹಿಂದಿಯಲ್ಲಿ ವಾಟ್ಸಪ್ ಮೆಸೇಜ್ ಬಂದಿದೆ. ಹಲವು ಹಿಂದೂ ಮುಖಂಡರ ಲಿಸ್ಟ್ ರೆಡಿ ಮಾಡಿದ್ದೇವೆ. ನಿನ್ನ ಹೆಸರು ಲಿಸ್ಟ್ ನಲ್ಲಿ ಮೊದಲಿಗಿದೆ. ನಿನ್ನ ಎಲ್ಲಾ ಚಲನವಲನಗಳನ್ನು ಗಮನಿಸುತ್ತಿದ್ದೇವೆ. ಕೊಲೆಯಾದ ಸುಹಾಸ್ ಶೆಟ್ಟಿ ಕೂಡಾ ನಮ್ಮ ಲಿಸ್ಟ್ ನಲ್ಲಿದ್ದ. ಆದರೆ ಯಾರೋ ಒಳ್ಳೆಯ ಜನ ಅವನನ್ನು ಕೊಂದು ಹಾಕಿದ್ದಾರೆ.


ನಿನ್ನ ಸ್ನೇಹಿತ ರಂಜಿತ್ ಎಂಬವನನ್ನು ಕೊಲ್ಲುತ್ತೇವೆ. ತಲೆಗೆ ಕಡಿದು ಸುಲಭವಾಗಿ ಕೊಲ್ಲುವುದಿಲ್ಲ. ಮೊದಲು ಆತನ ಕೈಕಾಲು ಕಡಿಯುತ್ತೇವೆ. ನಂತರ ತಲೆ ಕಡಿದು ದೆಹಲಿಯ ಮೈನ್ ಗೇಟ್ ನಲ್ಲಿ ನೇತಾಡಿಸುತ್ತೇವೆ. ನಾವು ದೆಹಲಿಗೆ ಬಂದು ತಲುಪಿಯಾಗಿದೆ. ನಿಮ್ಮ ಉಲ್ಟಾ ಲೆಕ್ಕಾಚಾರ ಸ್ಟಾರ್ಟ್ ಆಗಿದೆ. ನಿನ್ನನ್ನು ಹೇಗೆ ಕೊಲ್ಲುತ್ತೇವೆ ಎಂದು ಅಲ್ಲಾನಿಗು ಗೊತ್ತಿಲ್ಲ ಎಂದು ಬರೆದಿದ್ದಾರೆ.
ನಿನ್ನ ಕೊಂದ ರೀತಿ ಹೇಗಿರಬೇಕು ಅಂದ್ರೆ, ಅದನ್ನು ನೋಡಿ ಜನ ಕೊಲ್ಲುವ ವಿಧಾನವನ್ನೇ ಮರೆಯಲಿದ್ದಾರೆ. ಮುಸ್ಲಿಮರಿಗೆ ತೊಂದರೆ ಕೊಡೋದನ್ನು ಬಿಟ್ಟು ನಿನ್ನ ಬಗ್ಗೆ ಯೋಚಿಸು. ನಿಮ್ಮ ಪಾರ್ಟಿ ಅಥವಾ ಯಾವುದೇ ಮುಖಂಡರು ನಿಮ್ಮನ್ನು ರಕ್ಷಿಸಲು ಸಾಧ್ಯವಿಲ್ಲ. ನಿಮ್ಮ ಜೊತೆಗೆ ನಿಮ್ಮ ಮುಖಂಡರನ್ನು ಕೂಡ ಮುಗಿಸಲಾಗುವುದು. ಇದು ಜೈಶ್ ಮುಜಾಹಿದೀನ್ ಸಂಘಟನೆಯ ಸಂದೇಶ ಎಂದು ಜೀವ ಬೆದರಿಕೆ ಆಡಿಯೋದಲ್ಲಿ ಹೇಳಿದ್ದಾರೆ.
ಸಿರಿಯಾ ,ಪಾಕಿಸ್ತಾನ, ಅಫಘಾನಿಸ್ತಾನ, ಸೌದಿ ಅರೇಬಿಯಾದ ಮೊಬೈಲ್ ಸಂಖ್ಯೆಗಳಿಂದ ಮೆಸೇಜ್ ಬಂದಿದ್ದು ಇದರ ಹಿಂದೆ ಸ್ಥಳೀಯರೇ ಉಗ್ರರ ಸಂಪರ್ಕ ಇರುವವರು ಇದ್ದಾರೆ. ಇಲ್ಲದೇ ಇದ್ದರೆ ನಮ್ಮ ಮೊಬೈಲ್ ಸಂಖ್ಯೆ ಅವರಿಗೆ ಹೇಗೆ ತಿಳಿಯುತ್ತದೆ. ಈ ಬಗ್ಗೆ ಎನ್ಐಎ ತನಿಖೆಯಾದರೆ ಎಲ್ಲವೂ ಹೊರಬರುತ್ತದೆ ಎಂದು ಜೀವ ಬೆದರಿಕೆ ಬಗ್ಗೆ ಬಂಟ್ವಾಳ ಪೊಲೀಸರಿಗೆ ನೀಡಿದ ದೂರಿನಲ್ಲಿ ನರಸಿಂಹ ಮಾಣಿ ತಿಳಿಸಿದ್ದಾರೆ.
Mangalore Hindu Organization Leaders Receive Death Threats in the Name of Jaish e Mohammed, Message Says 'Only Allah Knows How We'll Kill You'
23-01-26 03:21 pm
Bangalore Correspondent
ವಿಧಾನಸಭೆ ಅಧಿವೇಶನ ; ಭಾಷಣ ಅರ್ಧಕ್ಕೆ ಬಿಟ್ಟು ತೆರಳಿ...
22-01-26 10:27 pm
ಕುಕ್ಕೆ ಸುಬ್ರಹ್ಮಣ್ಯ ; 2 ತಿಂಗಳಲ್ಲಿ 14 ಕೋಟಿಗೂ ಹೆ...
22-01-26 05:20 pm
ಚಾಮರಾಜನಗರದಲ್ಲಿ ಚಿರತೆ ದಾಳಿ ; ಪಾದಯಾತ್ರೆಗೆ ಹೊರಟ್...
21-01-26 01:31 pm
ರಾಯಚೂರಿನಲ್ಲಿ ಭೀಕರ ಅಪಘಾತ ; ಬೊಲೆರೋ - ಪಿಕ್ಅ...
21-01-26 12:30 pm
22-01-26 10:16 pm
HK News Desk
ರೈಲಿನ ಶೌಚಾಲಯದಲ್ಲಿ ಎರಡು ಗಂಟೆ ಲಾಕ್ ಮಾಡಿಕೊಂಡ ಯುವ...
22-01-26 01:52 pm
ಗ್ರೀನ್ ಲ್ಯಾಂಡ್ ; ಯುರೋಪ್ ರಾಷ್ಟ್ರಗಳ ಮೇಲೆ ಸುಂಕ ಹ...
22-01-26 01:16 pm
ಆಂಧ್ರದಲ್ಲಿ ಮತ್ತೆ ಬಸ್ ಬೆಂಕಿ ; ಟೈರ್ ಸ್ಫೋಟಗೊಂಡು...
22-01-26 11:26 am
ಶಬರಿಮಲೆ ಚಿನ್ನ ಲೂಟಿ ಪ್ರಕರಣ ; ಕೇರಳ, ಕರ್ನಾಟಕ, ತಮ...
21-01-26 11:10 am
23-01-26 05:12 pm
Udupi Staffer
Mangalore Asha Pandit Death, Instagram: ಮಂಗಳೂ...
23-01-26 11:44 am
ಗಂಡ - ಹೆಂಡತಿ ಜಗಳ ; ಪುತ್ತೂರು ಕೋರ್ಟಿನಲ್ಲಿ ಜಡ್ಜ್...
22-01-26 02:55 pm
ಆರೆಸ್ಸೆಸ್ ಮುಖಂಡ ಕಲ್ಲಡ್ಕ ಪ್ರಭಾಕರ ಭಟ್ ವಿರುದ್ಧ ಮ...
21-01-26 10:55 pm
ಸ್ವಚ್ಛತೆ, ತ್ಯಾಜ್ಯಮುಕ್ತ ಗ್ರಾಮ, ಪರಿಸರ ಸ್ನೇಹಿ ಆಡ...
21-01-26 06:18 pm
23-01-26 03:34 pm
Mangalore Correspondent
29 ವರ್ಷಗಳ ಹಿಂದೆ ತಾಯಿ, ಮಗನನ್ನು ಕೊಲೆಗೈದು ಚಿನ್ನಾ...
22-01-26 10:12 pm
ಸ್ವಾಮೀಜಿಗೆ ಬ್ಲ್ಯಾಕ್ಮೇಲ್ ; ಒಂದು ಕೋಟಿಗೆ ಡಿಮ್ಯಾಂ...
22-01-26 02:40 pm
ಜೂಜಾಡಿ ಸಾಲ ; ಹಣದಾಸೆಗೆ ಇಂಜೆಕ್ಷನ್ ನೀಡಿ ಸ್ವಂತ...
21-01-26 09:35 pm
Actor Kicha Sudeep, Fraud: ನಟ ಕಿಚ್ಚ ಸುದೀಪ್, ಮ...
20-01-26 07:51 pm