ಬ್ರೇಕಿಂಗ್ ನ್ಯೂಸ್
01-06-25 07:56 pm HK News Desk ಕ್ರೈಂ
ಬೆಳಗಾವಿ, ಜೂನ್ 1 : ಬೆಳಗಾವಿಯಲ್ಲಿ ಮತ್ತೊಂದು ಗ್ಯಾಂಗ್ ರೇಪ್ ಪ್ರಕರಣ ಬೆಳಕಿಗೆ ಬಂದಿದೆ. ಅಪ್ರಾಪ್ತ ಯುವತಿಯನ್ನು ಅತ್ಯಾಚಾರಗೈದು ವಿಡಿಯೋ ಮಾಡಿ ಬ್ಲಾಕ್ಮೇಲ್ ಮಾಡುತ್ತಿದ್ದ ಐವರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ.
ಈ ಬಗ್ಗೆ ಬೆಳಗಾವಿ ನಗರ ಪೊಲೀಸ್ ಆಯುಕ್ತ ಬೊರಸೆ ಭೂಷಣ್ ಗುಲಾಬರಾವ್ ಹೇಳಿಕೆ ನೀಡಿದ್ದು ಡಿಸೆಂಬರ್ ತಿಂಗಳಲ್ಲಿ ಮೊದಲ ಬಾರಿಗೆ ಪುಸಲಾಯಿಸಿ ಕರೆದೊಯ್ದು ಅತ್ಯಾಚಾರ ಮಾಡಿದ್ದರು. ಒಬ್ಬನ ಮೂಲಕ ಇನ್ನಿತರ ಯುವಕರು ಪರಿಚಯ ಆಗಿದ್ದರು. ಆ ಸಂದರ್ಭದಲ್ಲಿ ವಿಡಿಯೋ ಮಾಡಿದ್ದ ಆರೋಪಿಗಳು ಬಳಿಕ ಜನವರಿ ತಿಂಗಳಲ್ಲಿ ಮತ್ತೆ ಕರೆದಿದ್ದಾರೆ. ವಿಡಿಯೋ ಮುಂದಿಟ್ಟು ಬ್ಲಾಕ್ಮೇಲ್ ಮಾಡಿದ್ದಾರೆ.
ಯುವಕರು ಆನಂತರ ಮತ್ತೆ ಬೇರೊಂದು ಜಾಗಕ್ಕೆ ಬಾಲಕಿಯನ್ನ ಕರೆದಿದ್ದಾರೆ. ಭಯದಿಂದ ಮತ್ತೆ ಬಾಲಕಿ ಹೋದಾಗ ಮೂರು ಜನರಿಂದ ಅತ್ಯಾಚಾರ ಆಗಿದೆ. ಘಟನೆ ಬಗ್ಗೆ ತಂದೆ ತಾಯಿಗೆ ಬಾಲಕಿ ವಿಚಾರ ಹೇಳಿರಲಿಲ್ಲ. ಆಬಳಿಕವೂ ಕರೆ ಮಾಡಿ ಆಕೆಗೆ ಬ್ಲ್ಯಾಕ್ ಮೇಲ್ ಮಾಡುತ್ತಿದ್ದರು. ಬಾರದಿದ್ರೆ ಕೊಲೆ ಮಾಡುವುದಾಗಿ ಜೀವ ಬೆದರಿಕೆ ಹಾಕಿದ್ದರು. ವಿಡಿಯೋವನ್ನು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಮಾಡುವ ಬೆದರಿಕೆ ಹಾಕಿದ್ದಾರೆ. ಇದರಿಂದ ಭಯಗೊಂಡು ಬಾಲಕಿ ಪೋಷಕರ ಗಮನಕ್ಕೆ ತಂದಿದ್ದಾಳೆ. ನಿನ್ನೆ ಎಪಿಎಂಸಿ ಪೊಲೀಸ್ ಠಾಣೆಗೆ ಬಂದು ದೂರು ನೀಡಿದ್ದಾರೆ.
ಎಪಿಎಂಸಿ ಠಾಣೆಯಲ್ಲಿ ಪೋಕ್ಸೊ ಕಾಯ್ದೆಯಲ್ಲಿ ಎಫ್ಐಆರ್ ದಾಖಲಾಗಿದೆ. ದೂರು ದಾಖಲಾದ 24 ಗಂಟೆಯಲ್ಲಿ ಐದು ಜನ ಆರೋಪಿಗಳನ್ನ ಬಂಧಿಸಲಾಗಿದೆ. ಇಬ್ಬರು ಆರೋಪಿ ಬಾಲಾಪರಾಧಿ ಇದ್ದಾರೆ. ಇನ್ನೋರ್ವ ಆರೋಪಿ ಬಂಧನಕ್ಕೂ ಶೋಧ ನಡೆಸುತ್ತಿದ್ದೇವೆ. ಆರೋಪಿಗಳಿಗೆ ಕಠಿಣ ಶಿಕ್ಷೆ ಕೊಡಿಸುವ ನಿಟ್ಟಿನಲ್ಲಿ ಪ್ರಯತ್ನ ಮಾಡುತ್ತೇವೆ ಎಂದು ಹೇಳಿದ್ದಾರೆ. ಇತ್ತೀಚೆಗಷ್ಟೆ ಅಪ್ರಾಪ್ತ ಬಾಲಕಿಯನ್ನು ರೆಸಾರ್ಟ್ ನಲ್ಲಿ ಗ್ಯಾಂಗ್ ರೇಪ್ ಮಾಡಿದ್ದ ಘಟನೆ ನಡೆದಿತ್ತು. ಅದಕ್ಕೆ ಸಂಬಂಧಿಸಿ ಐವರನ್ನು ಪೊಲೀಸರು ಬಂಧನ ಮಾಡಿದ್ದರು.
A 15-year-old girl was allegedly abducted by six youngsters in Belagavi and was subjected to repeated sexual assault. The accused reportedly filmed the crime and used the video to blackmail the girl, continuing to exploit her over time.
12-09-26 09:40 pm
HK News Staffer
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
ಬಿಜೆಪಿ ಅಧಿಕಾರಕ್ಕೆ ಬರಲು ನನ್ನ ಸ್ಥಾನ ಬಿಟ್ಟುಕೊಟ್ಟ...
12-09-26 05:56 pm
ಐಎಎಸ್ ತೇರ್ಗಡೆಯಾಗಿದ್ದ ಕೇರಳದ ಮೊದಲ ಬುಡಕಟ್ಟು ಮಹಿಳ...
12-09-26 05:53 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
14-09-26 10:01 pm
HK News Staffer
ಮಂಗಳೂರಿನಲ್ಲಿ ಎರಡು ದಿನ ಸಿಎಂ ಡಿಕೆಶಿ ವಾಸ್ತವ್ಯ ;...
14-09-26 06:02 pm
100 ವರ್ಷಗಳ ಬಳಿಕವೂ ಸ್ವಂತ ಸೂರಿಗಾಗಿ ಕರಾವಳಿಯಲ್ಲಿ...
14-09-26 05:00 pm
Konkan Catholic Credit Society Inaugurated in...
14-09-26 04:18 pm
Konkan Catholic Credit Society Mangalore: ಹಣಕ...
13-09-26 10:11 pm
12-09-26 07:41 pm
HK News Staffer
ಕ್ರಿಪ್ಟೊ ಕರೆನ್ಸಿ ಹೆಸ್ರಲ್ಲಿ ಡಾಕ್ಟರ್ ಗೆ ಮಹಿಳೆಯಿ...
11-09-26 06:38 pm
ಜಾಮೀನು ಪಡೆಯಲು ನಕಲಿ ಆಧಾರ್ ಕಾರ್ಡ್ ಹಾಜರು ; ಉಡು...
11-09-26 01:09 pm
ಬೈಕ್ಗೆ ಡಿಕ್ಕಿ ಹೊಡೆದ ಕಾರು ; ಚಾಮರಾಜನಗರದಲ್ಲಿ ಮೂ...
11-09-26 10:14 am
ಕುಂದಾಪುರದಲ್ಲಿ 8 ಶಾಲಾ ಮಕ್ಕಳ ಬಲಿ ಪಡೆದ ಭೀಕರ ಅಪಘಾ...
10-09-26 08:16 pm