ಬ್ರೇಕಿಂಗ್ ನ್ಯೂಸ್
09-08-20 06:52 pm Headline Karnataka News Network ಕ್ರೈಂ
ಹೈದರಾಬಾದ್, ಆಗಸ್ಟ್ 10: ಹಣ ಎಂದರೆ ಹೆಣವೂ ಬಾಯಿ ಬಿಡುತ್ತೆ ಅಂತಾರೆ. ಇನ್ನು ಸಂಬಂಧಗಳ ಬಗ್ಗೆ ಬೇರೆ ಹೇಳ ಬೇಕಾಗಿಲ್ಲ. ಹಣದ ಮುಂದೆ ಯಾವ ಸಂಬಂಧಕ್ಕೂ ಇಂದು ಬೆಲೆ ಇಲ್ಲದಂತಾಗಿದೆ. 3 ಕೋಟಿ ರೂಪಾಯಿ ಮೌಲ್ಯದ ಆಸ್ತಿಗೆ ತಂದೆಯನ್ನೇ ಮಕ್ಕಳು ಬೀದಿಗೆ ತಳ್ಳಿದ ಹೃದಯ ವಿದ್ರಾವಕ ಘಟನೆ ಸಿದ್ದಿಪೇಟ್ ಎಂಬಲ್ಲಿ ನಲ್ಲಿ ಬೆಳಕಿಗೆ ಬಂದಿದೆ.
ಜೀವಿತಾವಧಿಯಲ್ಲಿ ಅಂದಾಜು 3 ಕೋಟಿ ರೂ. ಮೌಲ್ಯದ ಆಸ್ತಿಯನ್ನು ಸಂಪಾದಿಸಿದ ತಂದೆಯನ್ನು ಬೀದಿಗೆ ತಳ್ಳಿ ಅವರ ಹೆಸರಿನಲ್ಲಿದ್ದ 3 ಕೋಟಿ ರೂ. ಮೌಲ್ಯದ ಆಸ್ತಿಯನ್ನು ಹಂಚಿಕೊಂಡ ಘಟನೆ ತೆಲಂಗಾಣದ ಸಿದ್ದಿಪೇಟ್ ಜಿಲ್ಲೆಯ ಮಧಿರಾ ಎಂಬಲ್ಲಿ ನಡೆದಿದೆ.
ಕೊನೆಗೆ ಅಣ್ಣತಮ್ಮಂದಿರು ವಯಸ್ಸಾದ ಅಪ್ಪನ ಜವಾಬ್ದಾರಿ ಹೊರಲು ನಿರಾಕರಿಸಿ ಬೀದಿಗೆ ತಳ್ಳಿದ್ದಾರೆ. ಬೀದಿಗೆ ಬಿದ್ದ ವೃದ್ಧರಿಗೆ ಗ್ರಾಮದ ಜನರು ಊಟ ಕೊಡಲು ಮುಂದಾದರೆ, ಕೊಡದಂತೆ ಅವರನ್ನೂ ಬೆದರಿಸಿದ್ದ ಅವರ ಗತಿ ಏನಾಯಿತು ನೋಡಿ.

ತೆಲಂಗಾಣದ ಸಿದ್ದಿಪೇಟ್ ಜಿಲ್ಲೆಯ ಮಧಿರಾ ಗ್ರಾಮದ ಪೋತು ಸುಧಾಕರ್ (45), ಪೋತು ಜನಾರ್ದನ (48) ಮತ್ತು ಪೋತು ರವೀಂದರ್ (52) ಈ ಅಮಾನವೀಯ ಕೃತ್ಯ ಎಸಗಿದ್ದಾರೆ.
ಇದೀಗ ತೀವ್ರ ಅನಾರೋಗ್ಯಕ್ಕೆ ತುತ್ತಾಗಿರುವ ಈ ಮೂವರ ತಂದೆ ಪೋತು ಮಲ್ಲಯ್ಯ (79) ಅವರನ್ನು ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ.
ಪೋತು ಮಲ್ಲಯ್ಯ ಅವರು ತಮ್ಮ ಜೀವಿತಾವಧಿಯಲ್ಲಿ ಅಂದಾಜು 3 ಕೋಟಿ ರೂ. ಮೌಲ್ಯದ ಆಸ್ತಿಯನ್ನು ಮಾಡಿದ್ದರು. ಅಲ್ಲದೆ, 6 ಎಕರೆ ಭೂಮಿಯನ್ನು ಪತ್ನಿಯ ಹೆಸರಿಗೆ ನೋಂದಾಯಿಸಿಕೊಟ್ಟಿದ್ದರು. ಸಾಕಷ್ಟು ಚಿನ್ನಾಭರಣ ಮತ್ತು ಬೆಳ್ಳಿ ವಸ್ತುಗಳನ್ನು ಮಾಡಿಸಿದ್ದರು. ಈ ಎಲ್ಲ ಆಸ್ತಿ ಮತ್ತು ಚಿನ್ನಾಭರಣ, ಬೆಳ್ಳಿ ವಸ್ತುಗಳನ್ನು ಅವರ ಮೂವರೂ ಮಕ್ಕಳು ಸಮನಾಗಿ ಹಂಚಿಕೊಂಡಿದ್ದರು. ಆದರೆ, ಭೂಮಿ ತಾಯಿಯ ಹೆಸರಿನಲ್ಲಿ ಇದ್ದುದರಿಂದ ಅವರಿಗೆ ಏನೂ ಮಾಡಲಾಗಿರಲಿಲ್ಲ.
ಆಸ್ತಿ ಎಲ್ಲವೂ ತಮ್ಮ ಹೆಸರಿಗೆ ನೋಂದಾಣಿಯಾಗುತ್ತಲೇ ಬಾಲ ಬಿಚ್ಚಿದ ‘ವರ’ಪುತ್ರರು, ತಮ್ಮ ತಂದೆಯ ಜವಾಬ್ದಾರಿಯನ್ನು ಹೊತ್ತುಕೊಳ್ಳಲು ಒಬ್ಬೊಬ್ಬರಾಗಿ ನಿರಾಕರಿಸುತ್ತಾ ಮನೆಯಿಂದ ಹೊರಹಾಕಿದರು.
ಕೊನೆಗೆ ಗ್ರಾಮದಲ್ಲಿ ಬೀದಿ, ಬೀದಿ ಅಲೆಯುತ್ತಾ, ಬೀದಿ ಬದಿಯ ಜಗಲಿಯ ಮೇಲೆ ಮಲಗಿಕೊಳ್ಳುತ್ತಿದ್ದ ವೃದ್ಧ ಮಲ್ಲಯ್ಯ ಅವರಿಗೆ ಗ್ರಾಮಸ್ಥರು ಊಟ ಕೊಟ್ಟು ಸಮಾಧಾನಪಡಿಸುತ್ತಿದ್ದರು. ಆದರೆ, ತಮ್ಮ ತಂದೆಗೆ ಊಟ ಕೊಟ್ಟವರೊಂದಿಗೆ ಜಗಳಕ್ಕಿಳಿಯುತ್ತಿದ್ದ ಈ ಕುಲ ಪುತ್ರರು ಊಟ ಕೊಡದಂತೆ ತಾಕೀತು ಮಾಡುತ್ತಿದ್ದರು.

ಮಲ್ಲಯ್ಯ ಅವರ ಪರಿಸ್ಥಿತಿಯ ಕುರಿತು ದೂರು ಬಂದ ಹಿನ್ನೆಲೆಯಲ್ಲಿ ಇದನ್ನು ಆಧರಿಸಿ ಪೊಲೀಸರು ಮೂವರು ಪುತ್ರರನ್ನು ಬಂಧಿಸಿ, ಹಿರಿಯ ನಾಗರಿಕರ ನಿರ್ವಹಣೆ ಮತ್ತು ಕ್ಷೇಮಾಭಿವೃದ್ಧಿ ಕಾಯ್ದೆ, 2007ರ 24ನೇ ವಿಧಿ ಮತ್ತು ಐಪಿಸಿ 420ರ ಪ್ರಕಾರ ಆರೋಪ ಹೊರಿಸಿ ಬಂಧಿತರನ್ನು ಹುಜುರಾಬಾದ್ ಜೈಲಿನಲ್ಲಿ ಇರಿಸಲಾಗಿದೆ .
19-07-26 08:34 pm
HK News Desk
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
ನಾಲ್ಕು ತಿಂಗಳಲ್ಲೇ ಅಂತ್ಯಗೊಂಡ ನವಜೀವನ! ಅನಾರೋಗ್ಯದ...
13-07-26 10:21 pm
ರಾಜ್ಯದಲ್ಲಿ 72,000ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕ...
13-07-26 02:50 pm
3-4 ತಿಂಗಳಲ್ಲಿ ಗ್ರಾಮ ಪಂಚಾಯತಿ ಚುನಾವಣೆ ; ಕ್ಷೇತ್ರ...
13-07-26 10:32 am
21-07-26 09:03 pm
HK News Staffer
ಧರ್ಮೇಂದ್ರ ಪ್ರಧಾನ್ ರಾಜಿನಾಮೆ ಹೊರತು ಪ್ರತಿಭಟನೆ ನಿ...
21-07-26 06:23 pm
ಮತ್ತೆ ಕೋವಿಡ್ ಸದ್ದು; ಆಂಧ್ರದಲ್ಲಿ RF.5 ರೂಪಾಂತರ ಪ...
20-07-26 03:42 pm
ನೀಟ್ ಪರೀಕ್ಷೆ ಅಕ್ರಮ ; ರಾಜಧಾನಿ ದೆಹಲಿಯಲ್ಲಿ ಬೀದಿಗ...
20-07-26 02:22 pm
ಕೇರಳದಲ್ಲಿ ಫುಟ್ಬಾಲ್ ಜ್ವರ ; ಮಧ್ಯರಾತ್ರಿ ಫೈನಲ್ ವೀ...
19-07-26 09:37 pm
21-07-26 11:02 pm
HK News Desk
ಸಾಣೂರು-ಬಿಕರ್ನಕಟ್ಟೆ ಚತುಷ್ಪಥ ರಸ್ತೆ ಕಾಮಗಾರಿ; ಬನ್...
21-07-26 09:41 pm
ನೀಟ್ ಪರೀಕ್ಷೆ ಅಕ್ರಮ ; ಸೋನಂ ವಾಂಗ್ಚುಕ್ ಹೋರಾಟಕ್ಕೆ...
20-07-26 09:32 pm
ನಿಯಂತ್ರಣ ತಪ್ಪಿ ಚರಂಡಿಗೆ ಉರುಳಿ ಬಿದ್ದ ಕಾರು; ಅಪಘ...
20-07-26 03:14 pm
ಲಾವಣ್ಯ ಹತ್ಯೆ ; ಅವನನ್ನ ನಮ್ಮ ಕೈಗೆ ಒಪ್ಪಿಸಿ, ಊರಿನ...
17-07-26 10:25 pm
21-07-26 08:03 pm
Mangaluru Staffer
ಮ್ಯಾಟ್ರಿಮೋನಿ ಆ್ಯಪ್ನಲ್ಲಿ ಶುರುವಾದ ಪ್ರೀತಿ ; ಮದು...
21-07-26 04:54 pm
Ravi Shetty, Accident, Mangalore: ನಿಯಂತ್ರಣ ತಪ...
21-07-26 12:18 pm
ಉಕ್ರೇನ್ ಸರಕು ಹಡಗಿನ ಮೇಲೆ ರಷ್ಯಾ ಕ್ಷಿಪಣಿ ದಾಳಿ ;...
21-07-26 11:47 am
ತ್ರಿಪುರಾ ಡಿಜಿಪಿ ಅನುರಾಗ್ ಧನಕರ್ ಕಚೇರಿಯಲ್ಲಿ ಗುಂಡ...
20-07-26 10:17 pm