ಬ್ರೇಕಿಂಗ್ ನ್ಯೂಸ್
03-06-25 01:33 pm HK News Desk ಕ್ರೈಂ
ವಿಜಯಪುರ, ಮೇ 03 : ಜಿಲ್ಲೆಯ ಮನಗೂಳಿ ಪಟ್ಟಣದ ಕೆನರಾ ಬ್ಯಾಂಕಿನಲ್ಲಿ ಸಿನಿಮೀಯ ರೀತಿಯಲ್ಲಿ ದರೋಡೆ ನಡೆದಿದೆ. ಕಳೆದ ಮೇ 24 ರಂದು ರಾತ್ರಿ ಬ್ಯಾಂಕ್ನಲ್ಲಿದ್ದ 58 ಕೆಜಿ 975 ಗ್ರಾಂ ಚಿನ್ನಾಭರಣ ಅಂದ್ರೆ 58 ಕೋಟಿ ರೂ. ಬೆಳೆಬಾಳುವ ಚಿನ್ನ, ಹಾಗೂ 5.20 ಲಕ್ಷ ನಗದನ್ನು ಕದ್ದು ಆರೋಪಿಗಳು ಪರಾರಿಯಾಗಿದ್ದಾರೆ.
ಈ ಕುರಿತು ಎಸ್ಪಿ ಲಕ್ಷ್ಮಣ ನಿಂಬರಗಿ ಅವರು ಮಾತನಾಡಿದ್ದು, 'ಪ್ರಕರಣಕ್ಕೆ ಸಂಬಂಧಿಸಿದಂತೆ ಮನಗೂಳಿ ಪಟ್ಟಣದ ಕೆನರಾ ಬ್ಯಾಂಕಿನ ಮ್ಯಾನೇಜರ್ ಠಾಣೆಗೆ ಬಂದು ಕಂಪ್ಲೇಂಟ್ ಕೊಟ್ಟಿದ್ದಾರೆ. 23-5-2025ರಂದು ಬ್ಯಾಂಕ್ ಲಾಕ್ ಮಾಡಿ ಸಿಬ್ಬಂದಿ ಹೋಗಿದ್ದರು. 25 ನೇ ತಾರೀಖು ಅವರ ಸಿಬ್ಬಂದಿ ಸ್ವಚ್ಛತೆಗೆ ಎಂದು ಬಂದಾಗ ಶಟರ್ಸ್ ಲಾಕ್ ಕಟ್ ಆಗಿರುವುದು ಗಮನಕ್ಕೆ ಬಂದಿದೆ. ನಂತರ ಪೊಲೀಸ್ ಇಲಾಖೆಗೆ ಮಾಹಿತಿಯನ್ನು ಕೊಟ್ಟಿದ್ದಾರೆ. ನಂತರ ಇದನ್ನು ಪರಿಶೀಲಿಸಿದಾಗ ಬ್ಯಾಂಕ್ಗೆ ಕಳ್ಳರು ಬಂದು ಕದ್ದಿರುವುದು ಗಮನಕ್ಕೆ ಬಂದಿದೆ. ಜನರು ಲೋನ್ಗಾಗಿ ಬಂಗಾರವನ್ನು ಅಡವಿಟ್ಟು ಚಿನ್ನವನ್ನು ಕದ್ದು ಪರಾರಿಯಾಗಿದ್ದಾರೆ . ಪ್ರಕರಣದ ತನಿಖೆಗೆ 8 ತಂಡಗಳನ್ನು ರಚಿಸಿದ್ದೇವೆ. ಆದಷ್ಟು ಬೇಗ ಆರೋಪಿಗಳನ್ನು ಬಂಧಿಸಿ ಪ್ರಕರಣವನ್ನು ತಾರ್ಕಿಕ ಅಂತ್ಯಕ್ಕೆ ತರಲಾಗುವುದು' ಎಂದು ಹೇಳಿದ್ದಾರೆ.
ಬ್ಯಾಂಕ್ ಅಧಿಕಾರಿಗಳು ಲೂಟಿ ಮಾಡಿದ ಸೊತ್ತನ್ನು ಮೌಲ್ಯಮಾಪನ ಮಾಡಿದಾಗ 59 ಕೆಜಿ ಚಿನ್ನವನ್ನು ಕಳವು ಮಾಡಲಾಗಿದೆ ಎಂದು ಕಂಡುಬಂದಿದೆ. ಇದರ ಮೌಲ್ಯ 53 ಕೋಟಿ ಎಂದು ಅಂದಾಜಿಸಲಾಗಿದೆ.
ಪೊಲೀಸರ ದಿಕ್ಕು ತಪ್ಪಿಸಲು ವಾಮಾಚಾರ;
ಕಳ್ಳತನ ಮಾಡಿದ ಆರೋಪಿಗಳು ತನಿಖೆಯ ದಿಕ್ಕು ತಪ್ಪಿಸಲು, ಬ್ಯಾಂಕ್ ಪ್ರವೇಶ ದ್ವಾರದ ಕೀ ಮುರಿದು ಒಳಗೆ ಹೋಗಿ ಕಳ್ಳತನ ಮಾಡಿದ್ದಾರೆ. ನಂತರ ಬ್ಯಾಂಕ್ ಕಿಟಕಿಯ ಸರಳುಗಳನ್ನು ಒಳಗಿನಿಂದಲೇ ಕಟ್ ಮಾಡಿ ಕಿಟಕಿ ಸರಳು ಕಟ್ ಮಾಡಿ ಒಳಗೆ ನುಗ್ಗಿದ್ದಾರೆ ಎಂಬಂತೆ ಬಿಂಬಿಸಿದ್ದಾರೆ. ಅಲ್ಲದೆ, ಬ್ಯಾಂಕ್ ಒಳಗೆ ವಾಮಾಚಾರವಾಗಿದೆ ಎಂದು ಬಿಂಬಿಸಲು ಕಪ್ಪು ಬಟ್ಟೆಯ ಬೊಂಬೆ ಇಟ್ಟು ಪೂಜೆ ಮಾಡಿದ್ದಾರೆ ಎಂಬುವುದು ಕೂಡ ತನಿಖೆಯ ಗಮನ ಬೇರೆಡೆ ಸೆಳೆಯಲು ಎಂದು ಎಂಬುದು ತಿಳಿದುಬಂದಿದೆ.
ಮನಗೂಳಿ ಪಟ್ಟಣ ನಿವಾಸಿ ಶಿವನಗೊಂಡ ಅವರು ಮಾತನಾಡಿದ್ದು, 'ಬ್ಯಾಂಕ್ನಲ್ಲಿ ಚಿನ್ನ ಹಾಗೂ ಹಣ ಕಳ್ಳತನವಾಗಿರುವ ಬಗ್ಗೆ ಗ್ರಾಹಕರು ಮನನೊಂದಿದ್ದಾರೆ. ಪೊಲೀಸರು ಆದಷ್ಟು ಬೇಗ ಆರೋಪಿಗಳನ್ನು ಬಂಧಿಸಲಿ. ಬ್ಯಾಂಕ್ನವರು ಮುನ್ನೆಚ್ಚರಿಕೆ ವಹಿಸಬೇಕಿತ್ತು. ಆದಷ್ಟು ಬೇಗ ಇದಕ್ಕೆ ಪರಿಹಾರ ಕಲ್ಪಿಸಿಕೊಡಬೇಕು' ಎಂದು ವಿನಂತಿಸಿಕೊಂಡಿದ್ದಾರೆ.
Thieves decamped with 59 kg of gold jewelry worth Rs 53 crore from the Canara Bank in Karnataka. The theft was from the Mangoli branch of Canara Bank in Vijayapura. The incident is reported to have happened on May 23. This is one of the biggest bank robberies in the country.
14-07-25 12:50 pm
Bangalore Correspondent
Mantralaya, Tungabhadra River, drowning: ತುಂಬ...
13-07-25 08:37 pm
ಆಧ್ಯಾತ್ಮಿಕ ಸಾಧನೆಯತ್ತ ಚಿತ್ತ ; ಗೋಕರ್ಣ ಬಳಿಯ ದಟ್ಟ...
13-07-25 04:03 pm
Shivamogga Jail News, Mobile phone: ಶಿವಮೊಗ್ಗ...
12-07-25 10:47 pm
ಬೀದಿನಾಯಿಗಳಿಗೆ ಬಿರಿಯಾನಿ ಭಾಗ್ಯ ; ಶಾಲೆಗಳಲ್ಲಿ ಮಕ...
12-07-25 07:07 pm
12-07-25 09:25 pm
HK News Desk
Apples New COO, Sabih Khan: ಟೆಕ್ ದೈತ್ಯ ಏಪಲ್ ಸ...
12-07-25 04:21 pm
ಸಾಮೂಹಿಕ ಮತಾಂತರ ; ಮೂರೇ ವರ್ಷಕ್ಕೆ ಚಾಂಗೂರ್ ಬಾಬಾನಿ...
12-07-25 02:15 pm
Coimbatore Serial Blasts, 'Tailor Raja' Arres...
11-07-25 12:08 pm
1500ಕ್ಕೂ ಹೆಚ್ಚು ಹಿಂದು ಮಹಿಳೆಯರನ್ನು ಇಸ್ಲಾಮಿಗೆ ಮ...
10-07-25 11:07 pm
13-07-25 11:13 pm
Mangalore Correspondent
Mangalore News: ಸಾರಿಗೆ ಕಚೇರಿಗಳಿಗೆ ಸ್ವಂತ ಕಟ್ಟಡ...
13-07-25 11:11 pm
Mangalore, E Bus, MP Chowta: ಕೇಂದ್ರ ಸರ್ಕಾರದಿಂ...
13-07-25 10:12 pm
Mangalore DK Transport, DK Group Alwyn Joel N...
13-07-25 07:00 pm
ಬೆಳ್ತಂಗಡಿ ; ಶಿಕ್ಷಕಿಯಾಗಿದ್ದ ವಿವಾಹಿತ ಮಹಿಳೆ ನೇಣು...
13-07-25 05:56 pm
13-07-25 05:23 pm
Bangalore Correspondent
ಅಪ್ರಾಪ್ತ ಬಾಲಕಿಯನ್ನು ಶಾಲೆಗೆ ಕರೆದೊಯ್ಯುವ ನೆಪದಲ್ಲ...
12-07-25 11:10 pm
Dowry Harassment, Mysuru: ಮದುವೆಯಾದ ಎರಡೇ ತಿಂಗಳ...
12-07-25 01:32 pm
Mangalore Job Fraud, KCOCA, Police: ಫಾರಿನ್ ಉದ...
12-07-25 11:59 am
Robbery, Gold Workshop in Kalaburagi: ಕಲಬುರಗಿ...
11-07-25 10:10 pm