ಬ್ರೇಕಿಂಗ್ ನ್ಯೂಸ್
03-06-25 01:33 pm HK News Desk ಕ್ರೈಂ
ವಿಜಯಪುರ, ಮೇ 03 : ಜಿಲ್ಲೆಯ ಮನಗೂಳಿ ಪಟ್ಟಣದ ಕೆನರಾ ಬ್ಯಾಂಕಿನಲ್ಲಿ ಸಿನಿಮೀಯ ರೀತಿಯಲ್ಲಿ ದರೋಡೆ ನಡೆದಿದೆ. ಕಳೆದ ಮೇ 24 ರಂದು ರಾತ್ರಿ ಬ್ಯಾಂಕ್ನಲ್ಲಿದ್ದ 58 ಕೆಜಿ 975 ಗ್ರಾಂ ಚಿನ್ನಾಭರಣ ಅಂದ್ರೆ 58 ಕೋಟಿ ರೂ. ಬೆಳೆಬಾಳುವ ಚಿನ್ನ, ಹಾಗೂ 5.20 ಲಕ್ಷ ನಗದನ್ನು ಕದ್ದು ಆರೋಪಿಗಳು ಪರಾರಿಯಾಗಿದ್ದಾರೆ.
ಈ ಕುರಿತು ಎಸ್ಪಿ ಲಕ್ಷ್ಮಣ ನಿಂಬರಗಿ ಅವರು ಮಾತನಾಡಿದ್ದು, 'ಪ್ರಕರಣಕ್ಕೆ ಸಂಬಂಧಿಸಿದಂತೆ ಮನಗೂಳಿ ಪಟ್ಟಣದ ಕೆನರಾ ಬ್ಯಾಂಕಿನ ಮ್ಯಾನೇಜರ್ ಠಾಣೆಗೆ ಬಂದು ಕಂಪ್ಲೇಂಟ್ ಕೊಟ್ಟಿದ್ದಾರೆ. 23-5-2025ರಂದು ಬ್ಯಾಂಕ್ ಲಾಕ್ ಮಾಡಿ ಸಿಬ್ಬಂದಿ ಹೋಗಿದ್ದರು. 25 ನೇ ತಾರೀಖು ಅವರ ಸಿಬ್ಬಂದಿ ಸ್ವಚ್ಛತೆಗೆ ಎಂದು ಬಂದಾಗ ಶಟರ್ಸ್ ಲಾಕ್ ಕಟ್ ಆಗಿರುವುದು ಗಮನಕ್ಕೆ ಬಂದಿದೆ. ನಂತರ ಪೊಲೀಸ್ ಇಲಾಖೆಗೆ ಮಾಹಿತಿಯನ್ನು ಕೊಟ್ಟಿದ್ದಾರೆ. ನಂತರ ಇದನ್ನು ಪರಿಶೀಲಿಸಿದಾಗ ಬ್ಯಾಂಕ್ಗೆ ಕಳ್ಳರು ಬಂದು ಕದ್ದಿರುವುದು ಗಮನಕ್ಕೆ ಬಂದಿದೆ. ಜನರು ಲೋನ್ಗಾಗಿ ಬಂಗಾರವನ್ನು ಅಡವಿಟ್ಟು ಚಿನ್ನವನ್ನು ಕದ್ದು ಪರಾರಿಯಾಗಿದ್ದಾರೆ . ಪ್ರಕರಣದ ತನಿಖೆಗೆ 8 ತಂಡಗಳನ್ನು ರಚಿಸಿದ್ದೇವೆ. ಆದಷ್ಟು ಬೇಗ ಆರೋಪಿಗಳನ್ನು ಬಂಧಿಸಿ ಪ್ರಕರಣವನ್ನು ತಾರ್ಕಿಕ ಅಂತ್ಯಕ್ಕೆ ತರಲಾಗುವುದು' ಎಂದು ಹೇಳಿದ್ದಾರೆ.
ಬ್ಯಾಂಕ್ ಅಧಿಕಾರಿಗಳು ಲೂಟಿ ಮಾಡಿದ ಸೊತ್ತನ್ನು ಮೌಲ್ಯಮಾಪನ ಮಾಡಿದಾಗ 59 ಕೆಜಿ ಚಿನ್ನವನ್ನು ಕಳವು ಮಾಡಲಾಗಿದೆ ಎಂದು ಕಂಡುಬಂದಿದೆ. ಇದರ ಮೌಲ್ಯ 53 ಕೋಟಿ ಎಂದು ಅಂದಾಜಿಸಲಾಗಿದೆ.
ಪೊಲೀಸರ ದಿಕ್ಕು ತಪ್ಪಿಸಲು ವಾಮಾಚಾರ;
ಕಳ್ಳತನ ಮಾಡಿದ ಆರೋಪಿಗಳು ತನಿಖೆಯ ದಿಕ್ಕು ತಪ್ಪಿಸಲು, ಬ್ಯಾಂಕ್ ಪ್ರವೇಶ ದ್ವಾರದ ಕೀ ಮುರಿದು ಒಳಗೆ ಹೋಗಿ ಕಳ್ಳತನ ಮಾಡಿದ್ದಾರೆ. ನಂತರ ಬ್ಯಾಂಕ್ ಕಿಟಕಿಯ ಸರಳುಗಳನ್ನು ಒಳಗಿನಿಂದಲೇ ಕಟ್ ಮಾಡಿ ಕಿಟಕಿ ಸರಳು ಕಟ್ ಮಾಡಿ ಒಳಗೆ ನುಗ್ಗಿದ್ದಾರೆ ಎಂಬಂತೆ ಬಿಂಬಿಸಿದ್ದಾರೆ. ಅಲ್ಲದೆ, ಬ್ಯಾಂಕ್ ಒಳಗೆ ವಾಮಾಚಾರವಾಗಿದೆ ಎಂದು ಬಿಂಬಿಸಲು ಕಪ್ಪು ಬಟ್ಟೆಯ ಬೊಂಬೆ ಇಟ್ಟು ಪೂಜೆ ಮಾಡಿದ್ದಾರೆ ಎಂಬುವುದು ಕೂಡ ತನಿಖೆಯ ಗಮನ ಬೇರೆಡೆ ಸೆಳೆಯಲು ಎಂದು ಎಂಬುದು ತಿಳಿದುಬಂದಿದೆ.
ಮನಗೂಳಿ ಪಟ್ಟಣ ನಿವಾಸಿ ಶಿವನಗೊಂಡ ಅವರು ಮಾತನಾಡಿದ್ದು, 'ಬ್ಯಾಂಕ್ನಲ್ಲಿ ಚಿನ್ನ ಹಾಗೂ ಹಣ ಕಳ್ಳತನವಾಗಿರುವ ಬಗ್ಗೆ ಗ್ರಾಹಕರು ಮನನೊಂದಿದ್ದಾರೆ. ಪೊಲೀಸರು ಆದಷ್ಟು ಬೇಗ ಆರೋಪಿಗಳನ್ನು ಬಂಧಿಸಲಿ. ಬ್ಯಾಂಕ್ನವರು ಮುನ್ನೆಚ್ಚರಿಕೆ ವಹಿಸಬೇಕಿತ್ತು. ಆದಷ್ಟು ಬೇಗ ಇದಕ್ಕೆ ಪರಿಹಾರ ಕಲ್ಪಿಸಿಕೊಡಬೇಕು' ಎಂದು ವಿನಂತಿಸಿಕೊಂಡಿದ್ದಾರೆ.
Thieves decamped with 59 kg of gold jewelry worth Rs 53 crore from the Canara Bank in Karnataka. The theft was from the Mangoli branch of Canara Bank in Vijayapura. The incident is reported to have happened on May 23. This is one of the biggest bank robberies in the country.
31-12-25 10:57 pm
Bangalore Correspondent
ಕೋಗಿಲು ಬಡಾವಣೆ ವಿವಾದ ನಡುವೆಯೇ ಕೇರಳ ಸಿಎಂ ಪಿಣರಾಯಿ...
31-12-25 02:35 pm
ಧಾರವಾಡದ ಕೃಷಿ ವಿಶ್ವವಿದ್ಯಾಲಯಕ್ಕೆ ಚಕ್ರವರ್ತಿ ಸೂಲಿ...
30-12-25 11:12 pm
ಬಯೋಕಾನ್ ಕಂಪನಿ ಟೆಕ್ಕಿ ಆಫೀಸ್ ಕಟ್ಟಡದ ಆರನೇ ಮಹಡಿಯಿ...
30-12-25 10:14 pm
ವ್ಯವಸ್ಥಾಪನಾ ಸಮಿತಿ ಸದಸ್ಯರನ್ನು ವಜಾಗೊಳಿಸುವ ಅಧಿಕಾ...
30-12-25 06:34 pm
30-12-25 06:48 pm
HK News Desk
ಹಿಂದುಗಳ ಮನೆ ಸುಡುತ್ತಿದ್ದರೆ ಮಹಮ್ಮದ್ ಯೂನಸ್ ಕೊಳಲು...
30-12-25 03:32 pm
ರಸ್ತೆ ಬದಿ ನಮಾಜ್ ಮಾಡುತ್ತಿದ್ದ ಪ್ಯಾಲೆಸ್ತೀನ್ ವ್...
27-12-25 04:29 pm
ನಮ್ಮನ್ನಿಲ್ಲಿ ಬದುಕಲು ಬಿಡುತ್ತಿಲ್ಲ, ಗಡಿಯನ್ನು ತೆರ...
27-12-25 01:46 pm
ತಿರುವನಂತಪುರಂ ಮಹಾನಗರ ಪಾಲಿಕೆಯಲ್ಲಿ ಬಿಜೆಪಿ ಮೇಯರ್...
26-12-25 09:41 pm
01-01-26 09:43 am
Mangalore Correspondent
ಧರ್ಮಸ್ಥಳ ಪ್ರಕರಣದಲ್ಲಿ ಕ್ಷೇತ್ರದ ಪರ ಬೆಳ್ತಂಗಡಿ ಕೋ...
31-12-25 10:57 pm
ಕೋಗಿಲು ಬಡಾವಣೆಯ ಅಕ್ರಮ ವಲಸಿಗರು ಎಲ್ಲಿಯವರು? ಇಲ್ಲಿ...
31-12-25 09:16 pm
ಕೋಟೆಕಾರು ಪ.ಪಂ ಸಭೆ ; ಸರ್ಕಾರಿ ಜಮೀನು ಅತಿಕ್ರಮಣ ಪರ...
31-12-25 03:35 pm
ಶೀಘ್ರದಲ್ಲೇ ಸ್ಕ್ಯಾನ್ ಜೆಟ್ ವಿಮಾನ ಸೇವೆ ; ವಿಜಯ್ ಮ...
31-12-25 11:47 am
31-12-25 07:05 pm
Mangalore Correspondent
ಶಿರ್ವದಲ್ಲಿ ಸ್ಕೂಟರ್ ಕಳ್ಳತನ ; ಅಂತರ್ ಜಿಲ್ಲಾ ಕಳ್ಳ...
31-12-25 07:05 pm
ಪುತ್ತೂರಿನ ನಿವೃತ್ತ ಪ್ರಾಂಶುಪಾಲರ ಮನೆಗೆ ನುಗ್ಗಿ ಕಳ...
31-12-25 05:48 pm
ಸ್ಟಾಕ್ ಮಾರ್ಕೆಟ್ ಹೆಸ್ರಲ್ಲಿ ವಂಚಕರಿಂದ ಪಂಗನಾಮ ; 5...
30-12-25 10:40 pm
ಬ್ರಹ್ಮರಕೂಟ್ಲು ಟೋಲ್ ಗೇಟ್ ಸಿಬ್ಬಂದಿಗಳಿಗೆ ಹಲ್ಲೆ ;...
30-12-25 12:42 pm