ಬ್ರೇಕಿಂಗ್ ನ್ಯೂಸ್
21-12-20 09:34 pm Dilip : Bengaluru Correspondent ಕ್ರೈಂ
ಗುವಾಹತಿ, ಡಿ.21: ಬೆಂಗಳೂರಿನ ನರ್ಸಿಂಗ್ ಕಾಲೇಜು ಒಂದರಲ್ಲಿ ದಾಖಲಾತಿಗಾಗಿ ಆಗಮಿಸಿದ್ದ ಅಸ್ಸಾಂ ರಾಜ್ಯದ ಬರ್ಪೇಟ ಜಿಲ್ಲೆಯ ಹೌಲಿ ಎಂಬ ಪಟ್ಟಣದ 20 ವರ್ಷದ ವಿದ್ಯಾರ್ಥಿನಿಯ ಶಂಕಾಸ್ಪದ ಸಾವಿನ ಪ್ರಕರಣ ಆಕೆಯ ಹುಟ್ಟೂರಿನಲ್ಲಿ ಬೃಹತ್ ಪ್ರತಿಭಟನೆಗೆ ಕಾರಣವಾಗಿದೆ. ಶುಕ್ರವಾರ ರಾತ್ರಿ ಆಕೆಯ ಅಂತ್ಯಕ್ರಿಯೆ ನಡೆದ ನಂತರ ಹೌಲಿ ಪಟ್ಟಣದ ನೂರಾರು ಜನರು ಪ್ರತಿಭಟನೆ ನಡೆಸಿದ್ದು ನ್ಯಾಯಕ್ಕಾಗಿ ಆಗ್ರಹಿಸಿದ್ದಾರೆ. ಬೆಂಗಳೂರು ಪೊಲೀಸರು ಪ್ರಕರಣದ ಕೂಲಕಂಕಷ ತನಿಖೆ ನಡೆಸಬೇಕೆಂದು ಆಗ್ರಹಿಸಿದ್ದಾರೆ.
ಅಸ್ಸಾಂ ಮೂಲದ ಯುವತಿ ಬೆಂಗಳೂರಿನಲ್ಲಿ ಪ್ಯಾರಾ ಮೆಡಿಕಲ್ ವಿದ್ಯಾರ್ಥಿಯಾಗಿದ್ದ ಅನೀಸುರ್ ರೆಹಮಾನ್ ನಿವಾಸದಲ್ಲಿ ಶಂಕಾಸ್ಪದವಾಗಿ ಸಾವಿಗೀಡಾಗಿದ್ದಳು. ಅಸ್ಸಾಂ ಮೂಲದವನೇ ಆಗಿರುವ 21 ವರ್ಷದ ಅನೀಸುರ್ ರೆಹಮಾನ್ ನನ್ನು ಪೊಲೀಸರು ಅತ್ಯಾಚಾರ ಮತ್ತು ಕೊಲೆ ಪ್ರಕರಣದಲ್ಲಿ ಬಂಧಿಸಿದ್ದಾರೆ.
ಸಂತ್ರಸ್ತೆಯ ತಂದೆ ಅಸ್ಸಾಂನಲ್ಲಿ ಸರಕಾರಿ ಆಸ್ಪತ್ರೆಯೊಂದರ ಲ್ಯಾಬ್ ಟೆಕ್ನೀಷಿಯನ್ ಆಗಿದ್ದಾರೆ. ಉತ್ತಮ ಶಿಕ್ಷಣಕ್ಕಾಗಿ ಮಗಳು ಬೆಂಗಳೂರಿಗೆ ತೆರಳಿದ್ದಳು. ಆದರೆ, ಆಕೆ ಇಲ್ಲಿ ಬಂದ ಕೂಡಲೇ ಹೇಗೆ ಸಾವನ್ನಪ್ಪಿದ್ದಾಳೆ ಎಂಬ ಬಗ್ಗೆ ನಿಖರ ಕಾರಣ ಇನ್ನೂ ತಿಳಿದುಬಂದಿಲ್ಲ. ಹೀಗಾಗಿ ಸಮಗ್ರ ತನಿಖೆ ನಡೆಸಬೇಕೆಂದು ಆಕೆಯ ಕುಟುಂಬಸ್ಥರು ಆಗ್ರಹಿಸಿದ್ದಾರೆ. ಆರೋಪಿಯ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕೆಂದು ಊರಿನ ಜನ ಆಗ್ರಹಿಸುತ್ತಿದ್ದಾರೆ.
ಅನೀಸುರ್ ರೆಹಮಾನ್ ಇದ್ದ ಬಾಡಿಗೆ ಮನೆಯ ಮಾಲಕ ನೀಡಿದ ದೂರಿನಂತೆ ಪ್ರಕರಣ ದಾಖಲಾಗಿದೆ. ಸಂತ್ರಸ್ತ ಯುವತಿ ಪ್ರಜ್ಞಾಹೀನಳಾಗಿ ಬಿದ್ದಿರುವುದು ಹಾಗೂ ಆಕೆಯ ಜನನಾಂಗದ ಭಾಗದಲ್ಲಿ ರಕ್ತಸ್ರಾವವಾಗುತ್ತಿದ್ದುದನ್ನು ಗಮನಿಸಿದ್ದಾಗಿ ದೂರಿನಲ್ಲಿ ತಿಳಿಸಿದ್ದಾರೆ. ಆಕೆಯ ಮೇಲೆ ಅತ್ಯಾಚಾರವಾಗಿದೆಯೇ ಎಂಬುದು ದೃಢಪಟ್ಟಿಲ್ಲ. ಪೋಸ್ಟ್ ಮಾರ್ಟಂ ವರದಿ ಬಳಿಕವೇ ಏನಾಗಿದೆ ಎನ್ನುವುದು ತಿಳಿದುಬರಲಿದೆ ಎಂದು ಪೊಲೀಸರು ಹೇಳಿದ್ದಾರೆ.
ಯುವತಿ ಶಂಕಾಸ್ಪದ ಸಾವಿನ ಹಿನ್ನೆಲೆಯಲ್ಲಿ ಅಸ್ಸಾಂ ರಾಜ್ಯದ ಕಾಂಗ್ರೆಸ್ ಸಂಸದ ಅಬ್ದುಲ್ ಖಲೀಖ್ ಹಾಗೂ ಎಐಯುಡಿಎಫ್ ಸಂಸದ ಬದ್ರುದ್ದೀನ್ ಅಜ್ಮಲ್, ಕರ್ನಾಟಕ ಸಿಎಂ ಬಿ.ಎಸ್ ಯಡಿಯೂರಪ್ಪ ಅವರಿಗೆ ಪತ್ರ ಬರೆದು ಪ್ರಕರಣದ ಸಮಗ್ರ ತನಿಖೆಗೆ ಆಗ್ರಹಿಸಿದ್ದಾರೆ.
A group of residents and students' organisations, on Friday, took out a massive candlelight march in Howly in Assam's Barpeta district, the hometown of a 20-year-old nursing student in Bengaluru who was allegedly murdered in the city on Wednesday.
13-07-25 08:37 pm
HK News Desk
ಆಧ್ಯಾತ್ಮಿಕ ಸಾಧನೆಯತ್ತ ಚಿತ್ತ ; ಗೋಕರ್ಣ ಬಳಿಯ ದಟ್ಟ...
13-07-25 04:03 pm
Shivamogga Jail News, Mobile phone: ಶಿವಮೊಗ್ಗ...
12-07-25 10:47 pm
ಬೀದಿನಾಯಿಗಳಿಗೆ ಬಿರಿಯಾನಿ ಭಾಗ್ಯ ; ಶಾಲೆಗಳಲ್ಲಿ ಮಕ...
12-07-25 07:07 pm
ಧರ್ಮಸ್ಥಳ ಘಟನೆ ; ಒಬ್ಬ ವ್ಯಕ್ತಿಯ ಪರವಾಗಿ ವಕೀಲರು ದ...
11-07-25 06:36 pm
12-07-25 09:25 pm
HK News Desk
Apples New COO, Sabih Khan: ಟೆಕ್ ದೈತ್ಯ ಏಪಲ್ ಸ...
12-07-25 04:21 pm
ಸಾಮೂಹಿಕ ಮತಾಂತರ ; ಮೂರೇ ವರ್ಷಕ್ಕೆ ಚಾಂಗೂರ್ ಬಾಬಾನಿ...
12-07-25 02:15 pm
Coimbatore Serial Blasts, 'Tailor Raja' Arres...
11-07-25 12:08 pm
1500ಕ್ಕೂ ಹೆಚ್ಚು ಹಿಂದು ಮಹಿಳೆಯರನ್ನು ಇಸ್ಲಾಮಿಗೆ ಮ...
10-07-25 11:07 pm
13-07-25 11:13 pm
Mangalore Correspondent
Mangalore News: ಸಾರಿಗೆ ಕಚೇರಿಗಳಿಗೆ ಸ್ವಂತ ಕಟ್ಟಡ...
13-07-25 11:11 pm
Mangalore, E Bus, MP Chowta: ಕೇಂದ್ರ ಸರ್ಕಾರದಿಂ...
13-07-25 10:12 pm
Mangalore DK Transport, DK Group Alwyn Joel N...
13-07-25 07:00 pm
ಬೆಳ್ತಂಗಡಿ ; ಶಿಕ್ಷಕಿಯಾಗಿದ್ದ ವಿವಾಹಿತ ಮಹಿಳೆ ನೇಣು...
13-07-25 05:56 pm
13-07-25 05:23 pm
Bangalore Correspondent
ಅಪ್ರಾಪ್ತ ಬಾಲಕಿಯನ್ನು ಶಾಲೆಗೆ ಕರೆದೊಯ್ಯುವ ನೆಪದಲ್ಲ...
12-07-25 11:10 pm
Dowry Harassment, Mysuru: ಮದುವೆಯಾದ ಎರಡೇ ತಿಂಗಳ...
12-07-25 01:32 pm
Mangalore Job Fraud, KCOCA, Police: ಫಾರಿನ್ ಉದ...
12-07-25 11:59 am
Robbery, Gold Workshop in Kalaburagi: ಕಲಬುರಗಿ...
11-07-25 10:10 pm