ಬ್ರೇಕಿಂಗ್ ನ್ಯೂಸ್
07-06-25 10:39 pm Mangalore Correspondent ಕ್ರೈಂ
ಮಂಗಳೂರು, ಜೂನ್ 7 : ನಗರದ ಯೆಯ್ಯಾಡಿಯ ಬಾರ್ ಒಂದರಲ್ಲಿ ಎರಡು ಗ್ಯಾಂಗ್ ಸದಸ್ಯರು ಕುಡಿದ ಮತ್ತಿನಲ್ಲಿ ಜಗಳವಾಡಿದ್ದು, ಕೌಶಿಕ್ ಎಂಬ ಯುವಕನ ಮೇಲೆ ಒಂದು ತಂಡದ ಸದಸ್ಯರು ಚೂರಿಯಲ್ಲಿ ಹಲ್ಲೆಗೈದು ಕೊಲೆಗೆ ಯತ್ನಿಸಿದ್ದಾರೆ. ಕೌಶಿಕ್ ತೀವ್ರ ಗಾಯಗೊಂಡಿದ್ದು, ಎಜೆ ಆಸ್ಪತ್ರೆಗೆ ದಾಖಲಾಗಿದ್ದಾರೆ.
ಈ ಬಗ್ಗೆ ಕೌಶಿಕ್ ಸ್ನೇಹಿತ ರಾಹುಲ್ ಕದ್ರಿ ಠಾಣೆಗೆ ದೂರು ನೀಡಿದ್ದು, ಎಫ್ಐಆರ್ ದಾಖಲಾಗಿದೆ. ಜೂನ್ 6ರಂದು ಮಧ್ಯಾಹ್ನ ಬಾರ್ ನಲ್ಲಿ ಗಲಾಟೆ ನಡೆದಿದ್ದು, ಕೌಶಿಕ್ ಮತ್ತು ಮತ್ತೊಂದು ಟೇಬಲ್ ನಲ್ಲಿ ಕುಳಿತಿದ್ದ ಮೂರು ಮಂದಿ ಅವಾಚ್ಯ ಶಬ್ದಗಳಿಂದ ನಿಂದಿಸಿ ಬೈದಾಡುತ್ತಿದ್ದರು. ಸ್ನೇಹಿತ ರಾಹುಲ್ ಎರಡೂ ಕಡೆಯವರನ್ನು ಸಮಾಧಾನ ಮಾಡುತ್ತಿದ್ದಾಗಲೇ ಹೊರಗಿನಿಂದ ಚೂರಿ ಹಿಡಿದುಕೊಂಡು ಬಂದು ಕೌಶಿಕ್ ಹೊಟ್ಟೆ ಮತ್ತು ಎದೆಯ ಭಾಗಕ್ಕೆ ಇರಿದಿದ್ದಾನೆ. ಕೌಶಿಕ್ ಬೊಬ್ಬೆ ಹೊಡೆಯುತ್ತಿದ್ದಂತೆ ಅಲ್ಲಿದ್ದವರು ಎಲ್ಲ ಓಡಿ ಹೋಗಿದ್ದರು.
ಬಾರ್ ಸಿಬಂದ್ ಕೌಶಿಕ್ ನನ್ನು ಆಸ್ಪತ್ರೆಗೆ ಕರೆದೊಯ್ದಿದ್ದರು. ಆತ ಹೇಳಿದ ಮಾಹಿತಿ ಪ್ರಕಾರ, ಒಂದು ತಿಂಗಳ ಹಿಂದೆ ಕೌಶಿಕ್ ಮತ್ತು ಸಂತೋಷ್ ಮಧ್ಯೆ ಗಲಾಟೆಯಾಗಿದ್ದು. ಇದೇ ವಿಚಾರದಲ್ಲಿ ಪರಿಚಯದ ಆಟೋ ಚಾಲಕ ಚೈನೀಸ್ ಗಣೇಶ್, ಶಿಜು, ಬೃಜೇಶ್ ಎಂಬವರು ತಗಾದೆ ತೆಗೆದು ಜಗಳಕ್ಕೆ ಬಂದಿದ್ದಾರೆ. ಈ ವೇಳೆ ಬೃಜೇಶ್ ಎಂಬಾತ ಚೂರಿಯಿಂದ ಹೊಟ್ಟೆಗೆ ಮತ್ತು ಎದೆಯ ಭಾಗಕ್ಕೆ ಇರಿದು ಜೀವ ಬೆದರಿಕೆ ಹಾಕಿದ್ದಾಗಿ ತಿಳಿಸಿದ್ದಾನೆ. ಇದರ ಬಗ್ಗೆ ಕದ್ರಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
A gang clash at a bar in Yeyyadi turned violent when a youth named Kaushik was stabbed in the chest and stomach during a heated argument. He was rushed to AJ Hospital in critical condition. The incident occurred on June 6 when two groups got into a fight under the influence of alcohol. According to a complaint filed by Kaushik’s friend Rahul at Kadri police station, a man identified as Brijesh allegedly attacked Kaushik with a knife. Police have registered a case and launched an investigation.
31-12-25 10:57 pm
Bangalore Correspondent
ಕೋಗಿಲು ಬಡಾವಣೆ ವಿವಾದ ನಡುವೆಯೇ ಕೇರಳ ಸಿಎಂ ಪಿಣರಾಯಿ...
31-12-25 02:35 pm
ಧಾರವಾಡದ ಕೃಷಿ ವಿಶ್ವವಿದ್ಯಾಲಯಕ್ಕೆ ಚಕ್ರವರ್ತಿ ಸೂಲಿ...
30-12-25 11:12 pm
ಬಯೋಕಾನ್ ಕಂಪನಿ ಟೆಕ್ಕಿ ಆಫೀಸ್ ಕಟ್ಟಡದ ಆರನೇ ಮಹಡಿಯಿ...
30-12-25 10:14 pm
ವ್ಯವಸ್ಥಾಪನಾ ಸಮಿತಿ ಸದಸ್ಯರನ್ನು ವಜಾಗೊಳಿಸುವ ಅಧಿಕಾ...
30-12-25 06:34 pm
30-12-25 06:48 pm
HK News Desk
ಹಿಂದುಗಳ ಮನೆ ಸುಡುತ್ತಿದ್ದರೆ ಮಹಮ್ಮದ್ ಯೂನಸ್ ಕೊಳಲು...
30-12-25 03:32 pm
ರಸ್ತೆ ಬದಿ ನಮಾಜ್ ಮಾಡುತ್ತಿದ್ದ ಪ್ಯಾಲೆಸ್ತೀನ್ ವ್...
27-12-25 04:29 pm
ನಮ್ಮನ್ನಿಲ್ಲಿ ಬದುಕಲು ಬಿಡುತ್ತಿಲ್ಲ, ಗಡಿಯನ್ನು ತೆರ...
27-12-25 01:46 pm
ತಿರುವನಂತಪುರಂ ಮಹಾನಗರ ಪಾಲಿಕೆಯಲ್ಲಿ ಬಿಜೆಪಿ ಮೇಯರ್...
26-12-25 09:41 pm
01-01-26 09:43 am
Mangalore Correspondent
ಧರ್ಮಸ್ಥಳ ಪ್ರಕರಣದಲ್ಲಿ ಕ್ಷೇತ್ರದ ಪರ ಬೆಳ್ತಂಗಡಿ ಕೋ...
31-12-25 10:57 pm
ಕೋಗಿಲು ಬಡಾವಣೆಯ ಅಕ್ರಮ ವಲಸಿಗರು ಎಲ್ಲಿಯವರು? ಇಲ್ಲಿ...
31-12-25 09:16 pm
ಕೋಟೆಕಾರು ಪ.ಪಂ ಸಭೆ ; ಸರ್ಕಾರಿ ಜಮೀನು ಅತಿಕ್ರಮಣ ಪರ...
31-12-25 03:35 pm
ಶೀಘ್ರದಲ್ಲೇ ಸ್ಕ್ಯಾನ್ ಜೆಟ್ ವಿಮಾನ ಸೇವೆ ; ವಿಜಯ್ ಮ...
31-12-25 11:47 am
31-12-25 07:05 pm
Mangalore Correspondent
ಶಿರ್ವದಲ್ಲಿ ಸ್ಕೂಟರ್ ಕಳ್ಳತನ ; ಅಂತರ್ ಜಿಲ್ಲಾ ಕಳ್ಳ...
31-12-25 07:05 pm
ಪುತ್ತೂರಿನ ನಿವೃತ್ತ ಪ್ರಾಂಶುಪಾಲರ ಮನೆಗೆ ನುಗ್ಗಿ ಕಳ...
31-12-25 05:48 pm
ಸ್ಟಾಕ್ ಮಾರ್ಕೆಟ್ ಹೆಸ್ರಲ್ಲಿ ವಂಚಕರಿಂದ ಪಂಗನಾಮ ; 5...
30-12-25 10:40 pm
ಬ್ರಹ್ಮರಕೂಟ್ಲು ಟೋಲ್ ಗೇಟ್ ಸಿಬ್ಬಂದಿಗಳಿಗೆ ಹಲ್ಲೆ ;...
30-12-25 12:42 pm