ಬ್ರೇಕಿಂಗ್ ನ್ಯೂಸ್
22-12-20 11:00 am Headline Karnataka News Network ಕ್ರೈಂ
ಕಾಸರಗೋಡು, ಡಿ.22 : ಕೇರಳ ಸರಹದ್ದಿನ ಮಂಜೇಶ್ವರ ಸಮುದ್ರದಲ್ಲಿ ಮೀನುಗಾರಿಕೆ ನಡೆಸುತ್ತಿದ್ದ ಮಂಗಳೂರಿನ ಮೀನುಗಾರರ ತಂಡ, ಇಬ್ಬರು ಪೊಲೀಸರನ್ನು ಅಪಹರಿಸಿ ಬಳಿಕ ಮಂಗಳೂರು ಬಂದರಿನಲ್ಲಿ ಇಳಿಸಿದ ಘಟನೆ ನಡೆದಿದೆ.
ಕುಂಬಳೆ ಶಿರಿಯಾದಲ್ಲಿರುವ ಕರಾವಳಿ ಪೊಲೀಸ್ ಠಾಣೆಯ ಸಬ್ ಇನ್ಸ್ಪೆಕ್ಟರ್ ಕೆ.ವಿ. ರಾಜೀವ್ ಕುಮಾರ್ ನೇತೃತ್ವದ ತಂಡ ಸೋಮವಾರ ತಪಾಸಣೆ ನಡೆಸುತ್ತಿದ್ದ ಸಂದರ್ಭ ಮಂಜೇಶ್ವರ ಸಮುದ್ರದಲ್ಲಿ ಕರ್ನಾಟಕ ನೋಂದಣಿಯ ಬೋಟ್ ಕಂಡುಬಂದಿತ್ತು. ಈ ವೇಳೆ ದಾಖಲೆಗಳನ್ನು ಪರಿಶೀಲಿಸಿದಾಗ ಸಂಶಯ ಉಂಟಾಗಿದ್ದು ಪೊಲೀಸರು ಬೋಟ್ನ್ನು ವಶಕ್ಕೆ ಪಡೆದಿದ್ದರು.
ಬೋಟ್ನಲ್ಲಿ 12 ಮಂದಿ ಇದ್ದರೆನ್ನಲಾಗಿದೆ. ವಶಕ್ಕೆ ಪಡೆದ ಹಿನ್ನೆಲೆಯಲ್ಲಿ ಬೋಟ್ನ್ನು ಮಂಜೇಶ್ವರ ಬಂದರಿಗೆ ತಲುಪಿಸಲು ಸೂಚಿಸಿದ ಎಸ್ಸೈ, ಈ ಬೋಟ್ಗೆ ರಘು ಮತ್ತು ಸುಧೀಶ್ ಎಂಬ ಪೊಲೀಸ್ ಸಿಬ್ಬಂದಿಯನ್ನು ಹತ್ತಿಸಿದರು. ಬಳಿಕ ಸಬ್ ಇನ್ಸ್ಪೆಕ್ಟರ್ ರಾಜೀವ್ ಕುಮಾರ್ ಹಾಗೂ ಇತರ ಪೊಲೀಸರು ಅಲ್ಲಿಂದ ಮಂಜೇಶ್ವರ ಬಂದರಿಗೆ ಆಗಮಿಸಿದರು.

ಅವರು ಬಂದರು ತಲುಪಿ ಗಂಟೆಗಳೇ ಕಳೆದರೂ ವಶಕ್ಕೆ ಪಡೆದ ಬೋಟ್ ಬರಲೇ ಇಲ್ಲ. ಈ ಹಿನ್ನೆಲೆಯಲ್ಲಿ ಬೋಟ್ ನಲ್ಲಿದ್ದ ಪೊಲೀಸರನ್ನು ಸಂಪರ್ಕಿಸಿದಾಗ ಬೋಟ್ ಮಂಜೇಶ್ವರ ಬಂದರಿಗೆ ಬಾರದೆ, ವಿರುದ್ಧ ದಿಕ್ಕಿಗೆ ವೇಗವಾಗಿ ತೆರಳುತ್ತಿರುವ ಮಾಹಿತಿ ಲಭಿಸಿತು. ಕೂಡಲೇ ಕಾಸರಗೋಡಿನ ಹಿರಿಯ ಪೊಲೀಸ್ ಅಧಿಕಾರಿಗಳು ಮಂಗಳೂರು ಪೊಲೀಸರನ್ನು ಸಂಪರ್ಕಿಸಿದರು. ಅಷ್ಟರಲ್ಲಿ ಬೋಟ್ ಮಂಗಳೂರು ಬಂದರು ತಲುಪಿದ್ದು, ಇಬ್ಬರು ಪೊಲೀಸರು ಸುರಕ್ಷಿತರಾಗಿದ್ದಾರೆ ಎಂದು ತಿಳಿದು ಬಂದಿತು ಎಂದು ಪೊಲೀಸರು ಘಟನೆಯ ಬಗ್ಗೆ ಮಾಹಿತಿ ನೀಡಿದ್ದಾರೆ.
ಕರ್ನಾಟಕ ನೋಂದಣಿಯ ಬೋಟ್ನಲ್ಲಿ ಅಗತ್ಯ ದಾಖಲೆ ಇಲ್ಲದಿದ್ದ ಕಾರಣ ಅದನ್ನು ವಶಕ್ಕೆ ಪಡೆಯಲಾಗಿತ್ತು ಎಂದು ಕುಂಬಳೆ ಕರಾವಳಿ ಪೊಲೀಸರು ತಿಳಿಸಿದ್ದಾರೆ. ಈ ನಡುವೆ ಪೊಲೀಸರನ್ನು ಹೊತ್ತೊಯ್ದ ಆರೋಪದಲ್ಲಿ ಬೋಟ್ನಲ್ಲಿದ್ದವರ ಮೇಲೆ ಕೇಸು ದಾಖಲಾಗಿದೆ ಎಂದು ತಿಳಿದುಬಂದಿದೆ.
Cops who came to verify boat documents are said to be kidnapped by fishermen's and then later left them in Mangalore Fishing Harbour. The Police personals were of Kumble Police Station.
07-02-26 05:09 pm
HK News Desk
ಸಿದ್ದರಾಮಯ್ಯರೇ ಐದು ವರ್ಷ ಸಿಎಂ ; ಪುತ್ರ ಯತೀಂದ್ರ ಪ...
07-02-26 02:58 pm
Sanjana Bus Fire Accident, Nelamangala: ಮತ್ತೊ...
06-02-26 12:30 pm
ಭವಿಷ್ಯ ಹೇಳುವ ನೆಪದಲ್ಲಿ ಬೇಟೆ? ರೀಲ್ಸ್ ರಾಣಿಯ ಹಿಂದ...
05-02-26 05:52 pm
ಗದಗದಲ್ಲಿ ಭೀಕರ ರಸ್ತೆ ಅಪಘಾತ ; ಕ್ರೂಸರ್ - ಕ್ಯಾಂಟರ...
05-02-26 03:11 pm
07-02-26 10:53 pm
HK News Desk
ಕಣ್ಣೆದುರೇ ನಡೆದ ಅಚ್ಚರಿ ; 1 ಲಕ್ಷ ರೂ. ಮೌಲ್ಯದ ಚಿನ...
06-02-26 10:58 pm
ಕೊರಿಯನ್ ವೆಬ್ ಸಿರೀಸ್ ವ್ಯಸನ, ತಂದೆಯ ಎರಡು ಕೋಟಿ ಸಾ...
06-02-26 08:47 pm
SBI ಬ್ಯಾಂಕ್ ಕಿತಾಪತಿ ; 2 ಕೋಟಿ ಮೌಲ್ಯದ ಚಿನ್ನ–ಬೆಳ...
06-02-26 08:17 pm
ನೇಪಾಳದ ಗಡಿಯಲ್ಲಿ ಮದುವೆ ದಿಬ್ಬಣ ಕರೆದೊಯ್ಯುತ್ತಿದ್ದ...
06-02-26 07:04 pm
07-02-26 12:55 pm
HK staffer
DK Shivakumar, Puttur: ಪಕ್ಷ ಏನು ಹೇಳುತ್ತೋ ಅದೇ...
07-02-26 11:53 am
ಬಿಜೆಪಿಯವರು ತಿಪ್ಪರಲಾಗ ಹೊಡೆದ್ರೂ ಅಧಿಕಾರಕ್ಕೆ ಬರಲ್...
06-02-26 10:56 pm
ಡಿಕೆಶಿ ಸಿಎಂ ಆಗಿಯೇ ಪುತ್ತೂರು ಕಾಂಗ್ರೆಸ್ ಕಚೇರಿ ಉದ...
06-02-26 10:42 pm
Veerendra Heggade, Dharmasthala: ಶಿವರಾತ್ರಿಗೆ...
06-02-26 09:01 pm
07-02-26 10:48 pm
HK News Desk
ಡಿಜಿಟಲ್ ಅರೆಸ್ಟ್ ; ಮಹಿಳೆಗೆ 15 ನಿಮಿಷದಲ್ಲಿ 50 ಲಕ...
07-02-26 10:07 pm
ಪುತ್ತೂರಿನಲ್ಲಿ ಒಂದು ಕ್ವಿಂಟಾಲ್ ಗಾಂಜಾ ವಶಕ್ಕೆ ; ಪ...
07-02-26 08:14 pm
Shivamogga Conversion: ಶಿಕ್ಷಕಿಯಾದ ಬಳಿಕ ಪತ್ನಿ...
07-02-26 06:44 pm
Bangalore Cat Kidnap: ಬೆಂಗಳೂರಿನಲ್ಲಿ ಠಾಣೆ ಮೆಟ್...
07-02-26 05:21 pm