ಬ್ರೇಕಿಂಗ್ ನ್ಯೂಸ್
10-06-25 12:44 pm Bangalore Correspondent ಕ್ರೈಂ
ಬೆಂಗಳೂರು, ಜೂ 10 : ವೃದ್ಧ ದಂಪತಿಗೆ ಡಿಜಿಟಲ್ ಅರೆಸ್ಟ್ ಮೂಲಕ ವಂಚಿಸಿದ್ದ ಇಬ್ಬರು ಆರೋಪಿಗಳನ್ನ ಬೆಂಗಳೂರು ಆಗ್ನೇಯ ವಿಭಾಗದ ಸಿಇಎನ್ ಠಾಣೆ ಪೊಲೀಸರು ಬಂಧಿಸಿದ್ದಾರೆ. ನಾರಾಯಣ್ ಸಿಂಗ್ ಚೌಧರಿ ಹಾಗೂ ಈಶ್ವರ್ ಸಿಂಗ್ ಬಂಧಿತ ಆರೋಪಿಗಳು. ಮಂಜುನಾಥ್ ನೀಡಿದ ದೂರಿನನ್ವಯ ತನಿಖೆ ಕೈಗೊಂಡಿದ್ದ ಪೊಲೀಸರು ಇಬ್ಬರು ಆರೋಪಿಗಳನ್ನು ಬಂಧಿಸಿರುವುದಾಗಿ ತಿಳಿಸಿದ್ದಾರೆ.
ಇಂಜಿನಿಯರ್ ಆಗಿದ್ದ ಮಂಜುನಾಥ್ 31 ವರ್ಷಗಳ ಕಾಲ ನೈಜೀರಿಯಾದಲ್ಲಿ ಕೆಲಸ ನಿರ್ವಹಿಸಿ, ನಿವೃತ್ತಿಯ ಬಳಿಕ ಬೆಂಗಳೂರಿನಲ್ಲಿ ವಾಸವಾಗಿದ್ದಾರೆ. ಬ್ಯಾಂಕ್ನ ಪ್ರತಿನಿಧಿಗಳ ಸೋಗಿನಲ್ಲಿ ಮಾರ್ಚ್ ತಿಂಗಳಿನಲ್ಲಿ ಮಂಜುನಾಥ್ ಅವರಿಗೆ ಕರೆ ಮಾಡಿದ್ದ ಆರೋಪಿಗಳು, "ಕ್ರೆಡಿಟ್ ಕಾರ್ಡ್ ಲಿಮಿಟ್ ಓವರ್ ಡ್ಯೂ ಆಗಿದೆ" ಎಂದು ವಿವರಗಳನ್ನು ಪಡೆದುಕೊಂಡಿದ್ದರು. ಬಳಿಕ ನಿಮ್ಮ ಖಾತೆಯ ಮೂಲಕ ಅಕ್ರಮವಾಗಿ ಹಣ ವರ್ಗಾವಣೆಯಾಗಿದೆ, ಆದ್ದರಿಂದ ಇಡಿ, ಸಿಬಿಐನಲ್ಲಿ ಪ್ರಕರಣ ದಾಖಲಾಗಿದೆ ಎಂದಿದ್ದರು. ನಂತರ ನಕಲಿ ವಾರೆಂಟ್ನ ಫೋಟೋ ಕಳಿಸಿ "ನಿಮ್ಮನ್ನ ಬಂಧಿಸುತ್ತಿದ್ದು, ತಿಹಾರ್ ಜೈಲಿನಲ್ಲಿರಿಸಲಿದ್ದೇವೆ" ಎಂದು ಬೆದರಿಸಿದ್ದರು. ಹೀಗೆ.. ಮೂರು ತಿಂಗಳ ಕಾಲ ಬೆದರಿಸುತ್ತ ವಿವಿಧ ಹಂತಗಳಲ್ಲಿ 4.79 ಕೋಟಿ ರೂಪಾಯಿ ಸುಲಿಗೆಗೈದಿದ್ದ ಆರೋಪಿಗಳು, ಆಸ್ತಿ ಪತ್ರಗಳ ಕಾಪಿಗಳನ್ನು ಸಹ ಪಡೆದುಕೊಂಡಿದ್ದರು. ವಂಚಕರ ಕಿರುಕುಳ ಅತಿಯಾದಾಗ ಅದನ್ನು ತಾಳಲಾರದ ದಂಪತಿ ಆಗ್ನೇಯ ವಿಭಾಗದ ಸಿಇಎನ್ ಠಾಣೆ ಪೊಲೀಸರಿಗೆ ಮಾಹಿತಿ ನೀಡಿದ್ದರು.
ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಂಡ ಪೊಲೀಸರು ವೃದ್ಧ ದಂಪತಿಯ ಖಾತೆಯಿಂದ ಹಣ ವರ್ಗಾವಣೆ ಮಾಡಿಕೊಂಡಿದ್ದ ನಾರಾಯಣ್ ಸಿಂಗ್ ಚೌಧರಿ ಹಾಗೂ ಈಶ್ವರ್ ಸಿಂಗ್ ಅವರನ್ನು ಬಂಧಿಸಿದ್ದಾರೆ. ವಂಚಿಸಿದ ಹಣವನ್ನ ಆರೋಪಿಗಳು ಶ್ರೀಲಂಕಾದಲ್ಲಿ ಕ್ಯಾಸಿನೋ ಆಡಲು ಬಳಸಿರುವುದು ಸಹ ಗೊತ್ತಾಗಿದೆ. ಸದ್ಯ ಆರೋಪಿತರ ವಿಚಾರಣೆ ನಡೆಸಲಾಗುತ್ತಿದ್ದು, ವಂಚಿಸಿದ ಹಣವನ್ನು ಜಪ್ತಿ ಮಾಡಲಾಗುತ್ತಿದೆ ಎಂದು ಬೆಂಗಳೂರು ಆಗ್ನೇಯ ವಿಭಾಗದ ಡಿಸಿಪಿ ಸಾರಾ ಫಾತೀಮಾ ತಿಳಿಸಿದ್ದಾರೆ.
In a shocking case of cyber fraud, an elderly couple in Bengaluru was duped of ₹4.79 crore by fraudsters posing as bank and law enforcement officials. The accused, Narayan Singh Choudhary and Ishwar Singh, have been arrested by the Central Crime Branch (CEN) Police of Bengaluru’s Southeast Division.
09-11-25 06:53 pm
Bangalore Correspondent
ಇಪಿಎಫ್ ಸೊಸೈಟಿಯಲ್ಲಿ 70 ಕೋಟಿ ದುರ್ಬಳಕೆ ; ಅಕೌಂಟೆಂ...
09-11-25 03:47 pm
ISIS Terrorists, Umesh Reddy, Parappana Agrah...
08-11-25 10:29 pm
High Court Directs Kalaburagi: ಚಿತ್ತಾಪುರ ಆರೆಸ...
08-11-25 12:38 pm
ಯಾವ ಕ್ರಾಂತಿಯೂ ಆಗಲ್ಲ, ವಾಂತಿಯೂ ಆಗಲ್ಲ.. ನನಗೆ ಸಿದ...
07-11-25 09:59 pm
09-11-25 07:49 pm
HK News Desk
ಮುಸ್ಲಿಂ ವ್ಯಕ್ತಿಯ ಎರಡನೇ ಮದುವೆ ನೋಂದಣಿಗೆ ನಿರಾಕರಣ...
07-11-25 05:21 pm
ಮತಗಳವು ಆರೋಪ ; ರಾಹುಲ್ ವಿರುದ್ಧ ತಿರುಗಿಬಿದ್ದ ಮತದಾ...
07-11-25 11:33 am
'ನವೆಂಬರ್ ಕ್ರಾಂತಿ' ವದಂತಿ ತಳ್ಳಿಹಾಕಿದ ಡಿಸಿಎಂ ; ನ...
06-11-25 10:22 pm
ಐಸಿಸಿ ಮಹಿಳಾ ವಿಶ್ವಕಪ್ ಎತ್ತಿಹಿಡಿದ ಭಾರತದ ವನಿತೆಯರ...
03-11-25 01:13 pm
08-11-25 08:31 pm
Mangalore Correspondent
ಬೆಂಗಳೂರು- ಮಂಗಳೂರು ಹೈಸ್ಪೀಡ್ ಕಾರಿಡಾರ್ ; ಶಿರಾಡ...
07-11-25 10:58 pm
ಕುದ್ರೋಳಿ ಕ್ಷೇತ್ರ ಸ್ಥಾಪಿಸಿದ ಫೆ.21ರಂದು ನಾರಾಯಣ ಗ...
07-11-25 07:23 pm
ಗೋಡಂಬಿ ಉದ್ಯಮಕ್ಕೆ ನೂರು ವರ್ಷ ; ನ.14-16ರಂದು ದೇಶದ...
07-11-25 05:25 pm
ನೆಲ್ಯಾಡಿಯಲ್ಲಿ ಹೊಟೇಲ್ ಉದ್ಯಮ ನಡೆಸುತ್ತಿದ್ದ ಅಭಿಷೇ...
07-11-25 02:18 pm
09-11-25 10:27 pm
Mangalore Correspondent
ಬಹುಕೋಟಿ ವಂಚಕ ರೋಷನ್ ಸಲ್ದಾನಗೆ ಸೇರಿದ 2.85 ಕೋಟಿ ಮ...
09-11-25 03:50 pm
ಕೋಮುದ್ವೇಷದ ಕೊಲೆ ; ಪ್ರತೀಕಾರಕ್ಕೆ ಪ್ರಚೋದಿಸಿ ಇನ್...
08-11-25 11:15 pm
Digital Arrest Scam, Mangalore Online Fraud:...
08-11-25 04:08 pm
ಆರೋಪಿಗೆ ಜಾಮೀನು ನೀಡಲು ಹೋಗಿ ತಾನೇ ತಗ್ಲಾಕ್ಕೊಂಡ !...
07-11-25 11:20 pm