ಬ್ರೇಕಿಂಗ್ ನ್ಯೂಸ್
10-06-25 12:44 pm Bangalore Correspondent ಕ್ರೈಂ
ಬೆಂಗಳೂರು, ಜೂ 10 : ವೃದ್ಧ ದಂಪತಿಗೆ ಡಿಜಿಟಲ್ ಅರೆಸ್ಟ್ ಮೂಲಕ ವಂಚಿಸಿದ್ದ ಇಬ್ಬರು ಆರೋಪಿಗಳನ್ನ ಬೆಂಗಳೂರು ಆಗ್ನೇಯ ವಿಭಾಗದ ಸಿಇಎನ್ ಠಾಣೆ ಪೊಲೀಸರು ಬಂಧಿಸಿದ್ದಾರೆ. ನಾರಾಯಣ್ ಸಿಂಗ್ ಚೌಧರಿ ಹಾಗೂ ಈಶ್ವರ್ ಸಿಂಗ್ ಬಂಧಿತ ಆರೋಪಿಗಳು. ಮಂಜುನಾಥ್ ನೀಡಿದ ದೂರಿನನ್ವಯ ತನಿಖೆ ಕೈಗೊಂಡಿದ್ದ ಪೊಲೀಸರು ಇಬ್ಬರು ಆರೋಪಿಗಳನ್ನು ಬಂಧಿಸಿರುವುದಾಗಿ ತಿಳಿಸಿದ್ದಾರೆ.
ಇಂಜಿನಿಯರ್ ಆಗಿದ್ದ ಮಂಜುನಾಥ್ 31 ವರ್ಷಗಳ ಕಾಲ ನೈಜೀರಿಯಾದಲ್ಲಿ ಕೆಲಸ ನಿರ್ವಹಿಸಿ, ನಿವೃತ್ತಿಯ ಬಳಿಕ ಬೆಂಗಳೂರಿನಲ್ಲಿ ವಾಸವಾಗಿದ್ದಾರೆ. ಬ್ಯಾಂಕ್ನ ಪ್ರತಿನಿಧಿಗಳ ಸೋಗಿನಲ್ಲಿ ಮಾರ್ಚ್ ತಿಂಗಳಿನಲ್ಲಿ ಮಂಜುನಾಥ್ ಅವರಿಗೆ ಕರೆ ಮಾಡಿದ್ದ ಆರೋಪಿಗಳು, "ಕ್ರೆಡಿಟ್ ಕಾರ್ಡ್ ಲಿಮಿಟ್ ಓವರ್ ಡ್ಯೂ ಆಗಿದೆ" ಎಂದು ವಿವರಗಳನ್ನು ಪಡೆದುಕೊಂಡಿದ್ದರು. ಬಳಿಕ ನಿಮ್ಮ ಖಾತೆಯ ಮೂಲಕ ಅಕ್ರಮವಾಗಿ ಹಣ ವರ್ಗಾವಣೆಯಾಗಿದೆ, ಆದ್ದರಿಂದ ಇಡಿ, ಸಿಬಿಐನಲ್ಲಿ ಪ್ರಕರಣ ದಾಖಲಾಗಿದೆ ಎಂದಿದ್ದರು. ನಂತರ ನಕಲಿ ವಾರೆಂಟ್ನ ಫೋಟೋ ಕಳಿಸಿ "ನಿಮ್ಮನ್ನ ಬಂಧಿಸುತ್ತಿದ್ದು, ತಿಹಾರ್ ಜೈಲಿನಲ್ಲಿರಿಸಲಿದ್ದೇವೆ" ಎಂದು ಬೆದರಿಸಿದ್ದರು. ಹೀಗೆ.. ಮೂರು ತಿಂಗಳ ಕಾಲ ಬೆದರಿಸುತ್ತ ವಿವಿಧ ಹಂತಗಳಲ್ಲಿ 4.79 ಕೋಟಿ ರೂಪಾಯಿ ಸುಲಿಗೆಗೈದಿದ್ದ ಆರೋಪಿಗಳು, ಆಸ್ತಿ ಪತ್ರಗಳ ಕಾಪಿಗಳನ್ನು ಸಹ ಪಡೆದುಕೊಂಡಿದ್ದರು. ವಂಚಕರ ಕಿರುಕುಳ ಅತಿಯಾದಾಗ ಅದನ್ನು ತಾಳಲಾರದ ದಂಪತಿ ಆಗ್ನೇಯ ವಿಭಾಗದ ಸಿಇಎನ್ ಠಾಣೆ ಪೊಲೀಸರಿಗೆ ಮಾಹಿತಿ ನೀಡಿದ್ದರು.
ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಂಡ ಪೊಲೀಸರು ವೃದ್ಧ ದಂಪತಿಯ ಖಾತೆಯಿಂದ ಹಣ ವರ್ಗಾವಣೆ ಮಾಡಿಕೊಂಡಿದ್ದ ನಾರಾಯಣ್ ಸಿಂಗ್ ಚೌಧರಿ ಹಾಗೂ ಈಶ್ವರ್ ಸಿಂಗ್ ಅವರನ್ನು ಬಂಧಿಸಿದ್ದಾರೆ. ವಂಚಿಸಿದ ಹಣವನ್ನ ಆರೋಪಿಗಳು ಶ್ರೀಲಂಕಾದಲ್ಲಿ ಕ್ಯಾಸಿನೋ ಆಡಲು ಬಳಸಿರುವುದು ಸಹ ಗೊತ್ತಾಗಿದೆ. ಸದ್ಯ ಆರೋಪಿತರ ವಿಚಾರಣೆ ನಡೆಸಲಾಗುತ್ತಿದ್ದು, ವಂಚಿಸಿದ ಹಣವನ್ನು ಜಪ್ತಿ ಮಾಡಲಾಗುತ್ತಿದೆ ಎಂದು ಬೆಂಗಳೂರು ಆಗ್ನೇಯ ವಿಭಾಗದ ಡಿಸಿಪಿ ಸಾರಾ ಫಾತೀಮಾ ತಿಳಿಸಿದ್ದಾರೆ.
In a shocking case of cyber fraud, an elderly couple in Bengaluru was duped of ₹4.79 crore by fraudsters posing as bank and law enforcement officials. The accused, Narayan Singh Choudhary and Ishwar Singh, have been arrested by the Central Crime Branch (CEN) Police of Bengaluru’s Southeast Division.
14-03-26 10:14 pm
HK News Staffer
ಮಲೆನಾಡಿಗೆ ಇಂಡಿಗೋ ಆಘಾತ ; ವಿಮಾನ ದುರಂತ ಹಿನ್ನೆಲೆ,...
13-03-26 12:09 pm
ಮಂತ್ರಾಲಯದಿಂದ ಮಂಗಳೂರಿಗೆ ಬರುತ್ತಿದ್ದ ಖಾಸಗಿ ಬಸ್ಸಿ...
13-03-26 09:44 am
ಮಗಳಿಗೆ ಮದುವೆಯಾಗದ ಚಿಂತೆಯಲ್ಲಿ ಆಟೋ ಚಾಲಕ ಆತ್ಮಹತ್ಯ...
12-03-26 02:48 pm
13 ವರ್ಷಗಳಿಂದ ಜೀವನ್ಮರಣ ಹೋರಾಟ ; ಕೋಮಾದಲ್ಲಿದ್ದ ಯು...
11-03-26 07:16 pm
14-03-26 10:31 pm
HK News Staffer
ವಿಮಾನ ಪ್ರಯಾಣಿಕರಿಗೂ ತಟ್ಟಿದ ಇರಾನ್–ಇಸ್ರೇಲ್ ಯುದ್ಧ...
14-03-26 07:38 pm
ಇರಾನ್ ಸರ್ವೋಚ್ಛ ನಾಯಕ ಮೊಜ್ತಾಬಾ ಅಲಿ ಖಮೇನಿ ಬಗ್ಗೆ...
14-03-26 12:51 pm
ಅಮೆರಿಕಾ ವೈಮಾನಿಕ ದಾಳಿಯಲ್ಲಿ ಮೊಜ್ತಬಾ ಖಮೇನಿಗೂ ಪೆಟ...
13-03-26 04:18 pm
ಜಮ್ಮು ಕಾಶ್ಮೀರ ಮಾಜಿ ಮುಖ್ಯಮಂತ್ರಿ ಫಾರೂಕ್ ಅಬ್ದುಲ್...
13-03-26 11:24 am
14-03-26 09:26 pm
HK News Desk
ಕಂದಾಯ- ಅರಣ್ಯ ಭೂಮಿ ಗುರುತಿಸಲು ಜಿಲ್ಲಾ ಮಟ್ಟದಲ್ಲಿ...
14-03-26 08:31 pm
ಬೈಕ್ ಅಪಘಾತದಲ್ಲಿ ಗಾಯಗೊಂಡಿದ್ದ ಬಂಟ್ವಾಳದ ಯುವ ಛಾಯಾ...
14-03-26 06:07 pm
‘ಕ್ರಿಶ್ಚಿಯನ್ ಯುವಕ’ನಿಂದ ದೈವ ನರ್ತನ ಸೇವೆ ; ಪಂಬದ...
14-03-26 05:19 pm
ಮಾರ್ಚ್ 16ರಿಂದ 28ರ ವರೆಗೆ ಮಂಗಳೂರಿನಿಂದ ಶಾರ್ಜಾಕ್ಕ...
13-03-26 10:04 pm
12-03-26 11:20 pm
mangalore
ಸುರತ್ಕಲ್ ಗ್ಯಾರೇಜ್ ನಿಂದ ವಾಹನಗಳ ಬಿಡಿಭಾಗ ಕಳವು ;...
12-03-26 10:53 pm
ಬೆಂಗಳೂರು ; ಕಾಲೇಜು ಮುಗಿಸಿ ವಾಪಸ್ಸಾಗುತ್ತಿದ್ದಾಗ ಅ...
12-03-26 12:12 pm
ನಾಪತ್ತೆಯಾಗಿದ್ದ ಕೊಣಾಜೆಯ ಯುವಕ ಸೋಮೇಶ್ವರದ ಕೆರೆಯಲ್...
11-03-26 10:58 am
ಕೇರಳ ಚುನಾವಣೆ ಹಿನ್ನೆಲೆ ; ರೈಲಿನಲ್ಲಿ ತಪಾಸಣೆ ಬಿಗಿ...
10-03-26 08:32 pm