ಬ್ರೇಕಿಂಗ್ ನ್ಯೂಸ್
11-06-25 02:03 pm Mangalore Correspondent ಕ್ರೈಂ
ಬಂಟ್ವಾಳ, ಜೂನ್ 11 : ಅಡಿಕೆ ಖರೀದಿ ವ್ಯಾಪಾರ ಮಾಡುತ್ತಿದ್ದ ವ್ಯಕ್ತಿಯೊಬ್ಬ ಬಂಟ್ವಾಳ ಆಸುಪಾಸಿನ 50ಕ್ಕು ಹೆಚ್ಚು ರೈತರಿಂದ ಅಡಿಕೆ ಖರೀದಿಸಿ ಹಣ ಕೊಡದೆ ಕೋಟ್ಯಾಂತರ ರೂಪಾಯಿ ಮೋಸ ಮಾಡಿ ಪರಾರಿಯಾಗಿದ್ದು ಈ ಬಗ್ಗೆ ಬಂಟ್ವಾಳ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಬಂಟ್ವಾಳ ಪೇಟೆಯ ಬಡ್ಡಕಟ್ಟೆಯಲ್ಲಿ ಎ.ಬಿ. ಸುಪಾರಿ ಎಂಬ ಅಂಗಡಿ ಹೊಂದಿರುವ ನಾವೂರು ಗ್ರಾಮದ ಮೈಂದಾಳ ನಿವಾಸಿ ನೌಫಲ್ ಮಹಮ್ಮದ್ ಪರಾರಿಯಾದ ಆರೋಪಿ. 50ಕ್ಕೂ ಅಧಿಕ ಅಡಿಕೆ ಬೆಳೆಗಾರರಿಗೆ ಮೋಸ ಮಾಡಿದ್ದು, ರೈತರು ಬಂಟ್ವಾಳ ಠಾಣೆಗೆ ಬಂದು ದೂರು ದಾಖಲಿಸಿದ್ದಾರೆ. ಪ್ರವೀಣ್ ಡಿ ಸೋಜಾ (45) ಎಂಬವರು ದೂರು ದಾಖಲಿಸಿದ್ದು ಕಳೆದ ಮಾರ್ಚ್ 8 ರಂದು ನೌಫಲ್ ಮಹಮ್ಮದ್ ಅವರ ಎ.ಬಿ ಸುಪಾರಿ ಅಂಗಡಿಗೆ ವಾಹನದಲ್ಲಿ ಹೋಗಿ ಸುಮಾರು 6.5 ಕ್ವಿಂಟಾಲ್ ಅಡಿಕೆಯನ್ನು ಮಾರಾಟ ಮಾಡಿದ್ದು ಅದರ ಮೌಲ್ಯ 3.50 ಲಕ್ಷ ಹಣವನ್ನು ಕೊಟ್ಟಿರಲಿಲ್ಲ. ಹಿಂದಿನಿಂದಲೂ ಅಡಿಕೆ ಕೊಡುತ್ತಿದ್ದುದರಿಂದ ಆಮೇಲೆ ಹಣ ಕೊಡುವುದಾಗಿ ವ್ಯಾಪಾರಿ ಹೇಳಿದ್ದ.
ಪ್ರವೀಣ್ ಡಿಸೋಜಾ ಆನಂತರ ಹಣವನ್ನು ನೀಡುವಂತೆ ಕೇಳತೊಡಗಿದ್ದರು. ಜೂನ್ 9ರಂದು ರಾತ್ರಿ ಆರೋಪಿ ನೌಫಾಲ್ ತಾನು ನಷ್ಟದಲ್ಲಿದ್ದು, ಬಾಕಿ ಹಣವನ್ನು ಸ್ವಲ್ಪ ಸ್ವಲ್ಪವಾಗಿ ನೀಡುವುದಾಗಿ ಮೆಸೇಜ್ ಮಾಡಿದ್ದ. ಇದರಿಂದ ಗಾಬರಿಗೊಂಡ ಪ್ರವೀಣ್, ಮರು ದಿನವೇ ಬೆಳಗ್ಗೆ ಅಂಗಡಿಗೆ ಹೋಗಿ ನೋಡಿದಾಗ ಬೀಗ ಹಾಕಿದ್ದು, ಮನೆಗೂ ಬೀಗ ಹಾಕಿತ್ತು. ಮೊಬೈಲ್ ಸ್ವಿಚ್ಡ್ ಆಫ್ ಆಗಿತ್ತು. ಇದೇ ವೇಳೆ, ವ್ಯಾಪಾರಿ ನೌಫಾಲ್ ಜೊತೆಗೆ ಅಡಿಕೆ ವ್ಯಾಪಾರ ಮಾಡಿ, ಹಣ ಪಡೆಯಲು ಬಾಕಿಯಿದ್ದ ಇತರ 24 ಜನರು ಅಂಗಡಿ ಮುಂದೆ ಸೇರಿದ್ದರು.
ಆರೋಪಿ ನೌಫಾಲ್ ತನ್ನೊಂದಿಗೆ ಅಡಿಕೆ ಮತ್ತು ಕರಿಮೆಣಸು ವ್ಯಾಪಾರ ಮಾಡಿಕೊಂಡಿದ್ದವರಿಗೆ ಒಟ್ಟು ರೂ. 94,77,810 /- ನ್ನು ನೀಡದೆ ನಂಬಿಕೆ ದ್ರೋಹ ಮತ್ತು ವಂಚನೆ ಮಾಡುವ ಉದ್ದೇಶದಿಂದ ತಲೆಮರೆಸಿಕೊಂಡಿದ್ದಾನೆ. ಈ ಬಗ್ಗೆ ಬಂಟ್ವಾಳ ನಗರ ಠಾಣೆಯಲ್ಲಿ ಪ್ರವೀಣ್ ಡಿಸೋಜ ದೂರಿನಂತೆ, ಅಕ್ರ: 64/2025 ಕಲಂ: 316(2) 318(4) ಬಿಎನ್ಎಸ್ -2023 ರಂತೆ ಪ್ರಕರಣ ದಾಖಲಾಗಿದೆ.
ನೌಫಾಲ್ ಮಹಮ್ಮದ್ ಹಲವಾರು ವರ್ಷಗಳಿಂದ ಅಡಿಕೆ ವ್ಯಾಪಾರ ಮಾಡಿಕೊಂಡಿದ್ದು ಆಸುಪಾಸಿನ ಕೃಷಿಕರ ವಿಶ್ವಾಸ ಗಳಿಸಿದ್ದ. ಹಣ ಬಾಕಿ ಇರಿಸಿದ್ದರೆ, ಚೀಟಿಯಲ್ಲಿ ಬರೆದು ಕೊಡುತ್ತಿದ್ದ. ಕೇವಲ ವಿಶ್ವಾಸದಿಂದಲೇ ಅಡಿಕೆ ವ್ಯವಹಾರ ನಡೆಯುತ್ತಿತ್ತು. ವ್ಯಾಪಾರಿಯೇ ಸಾಕಷ್ಟು ಕೃಷಿಕರ ಮನೆಗೆ ತೆರಳಿ ಅಡಿಕೆಯನ್ನು ತನ್ನ ವಾಹನದಲ್ಲಿ ತುಂಬಿಸಿ ತರುತ್ತಿದ್ದ. ಆದರೆ ಕೆಲವು ಸಮಯಗಳಿಂದ ಹೀಗೆ ತಂದಿದ್ದ ಅಡಿಕೆಗೆ ಪ್ರತಿಯಾಗಿ ಹಣವನ್ನು ನೀಡದೆ ವಂಚನೆ ಮಾಡಿರುವ ಆರೋಪ ಕೇಳಿಬಂದಿದೆ. ಕೆಲವರಿಗೆ 30 ಲಕ್ಷಕ್ಕೂ ಹೆಚ್ಚಿನ ಮತ್ತು ಇನ್ನು ಕೆಲವರಿಗೆ 50 ಸಾವಿರ ರೂ.ಗಳಷ್ಟು ವಂಚಿಸಿದ್ದಾನೆ ಎಂದು ತಿಳಿದುಬಂದಿದೆ.
Mangalore Arecanut Trader Cheats Over 50 Farmers of Crores, Shop Locked, Accused Absconds After Massive Fraud in Bantwal.
22-01-26 10:27 pm
Bangalore Correspondent
ಕುಕ್ಕೆ ಸುಬ್ರಹ್ಮಣ್ಯ ; 2 ತಿಂಗಳಲ್ಲಿ 14 ಕೋಟಿಗೂ ಹೆ...
22-01-26 05:20 pm
ಚಾಮರಾಜನಗರದಲ್ಲಿ ಚಿರತೆ ದಾಳಿ ; ಪಾದಯಾತ್ರೆಗೆ ಹೊರಟ್...
21-01-26 01:31 pm
ರಾಯಚೂರಿನಲ್ಲಿ ಭೀಕರ ಅಪಘಾತ ; ಬೊಲೆರೋ - ಪಿಕ್ಅ...
21-01-26 12:30 pm
ಬಾರ್ ಲೈಸನ್ಸ್ ನೀಡಲು 1.5 ಕೋಟಿ ಲಂಚ ; 25 ಲಕ್ಷ ರೂ....
20-01-26 02:15 pm
22-01-26 10:16 pm
HK News Desk
ರೈಲಿನ ಶೌಚಾಲಯದಲ್ಲಿ ಎರಡು ಗಂಟೆ ಲಾಕ್ ಮಾಡಿಕೊಂಡ ಯುವ...
22-01-26 01:52 pm
ಗ್ರೀನ್ ಲ್ಯಾಂಡ್ ; ಯುರೋಪ್ ರಾಷ್ಟ್ರಗಳ ಮೇಲೆ ಸುಂಕ ಹ...
22-01-26 01:16 pm
ಆಂಧ್ರದಲ್ಲಿ ಮತ್ತೆ ಬಸ್ ಬೆಂಕಿ ; ಟೈರ್ ಸ್ಫೋಟಗೊಂಡು...
22-01-26 11:26 am
ಶಬರಿಮಲೆ ಚಿನ್ನ ಲೂಟಿ ಪ್ರಕರಣ ; ಕೇರಳ, ಕರ್ನಾಟಕ, ತಮ...
21-01-26 11:10 am
23-01-26 11:44 am
Mangalore Correspondent
ಗಂಡ - ಹೆಂಡತಿ ಜಗಳ ; ಪುತ್ತೂರು ಕೋರ್ಟಿನಲ್ಲಿ ಜಡ್ಜ್...
22-01-26 02:55 pm
ಆರೆಸ್ಸೆಸ್ ಮುಖಂಡ ಕಲ್ಲಡ್ಕ ಪ್ರಭಾಕರ ಭಟ್ ವಿರುದ್ಧ ಮ...
21-01-26 10:55 pm
ಸ್ವಚ್ಛತೆ, ತ್ಯಾಜ್ಯಮುಕ್ತ ಗ್ರಾಮ, ಪರಿಸರ ಸ್ನೇಹಿ ಆಡ...
21-01-26 06:18 pm
ಬಂಗ್ಲೆಗುಡ್ಡೆ ಕಾಡಿನಲ್ಲಿ ಸಿಕ್ಕಿದ ಏಳು ಅಸ್ಥಿಪಂಜರಗ...
21-01-26 11:53 am
22-01-26 10:12 pm
Mangalore Correspondent
ಸ್ವಾಮೀಜಿಗೆ ಬ್ಲ್ಯಾಕ್ಮೇಲ್ ; ಒಂದು ಕೋಟಿಗೆ ಡಿಮ್ಯಾಂ...
22-01-26 02:40 pm
ಜೂಜಾಡಿ ಸಾಲ ; ಹಣದಾಸೆಗೆ ಇಂಜೆಕ್ಷನ್ ನೀಡಿ ಸ್ವಂತ...
21-01-26 09:35 pm
Actor Kicha Sudeep, Fraud: ನಟ ಕಿಚ್ಚ ಸುದೀಪ್, ಮ...
20-01-26 07:51 pm
ಸಿಎಂ ಕ್ಲಾಸ್ ಬೆನ್ನಲ್ಲೇ ಅಲರ್ಟ್ ಆದ ಬೆಂಗಳೂರು ಖಾಕಿ...
20-01-26 05:01 pm