ಬ್ರೇಕಿಂಗ್ ನ್ಯೂಸ್
12-06-25 12:31 pm HK News Desk ಕ್ರೈಂ
ಪಣಜಿ, ಜೂ 12 : ಬಕ್ರೀದ್ ಪಾರ್ಟಿಗೆ ಬರಲು ಹೇಳಿ ಮೂವರು ಅಪ್ರಾಪ್ತ ಬಾಲಕಿಯರನ್ನ ಕರೆಸಿ ಇಬ್ಬರು ಸ್ನೇಹಿತರೇ ಅತ್ಯಾಚಾರವೆಸಗಿರುವ ಘಟನೆ ಗೋವಾದಲ್ಲಿ ನಡೆದಿದೆ. ಮೂವರು ಬಾಲಕಿಯರ ಮೇಲೆ ಅತ್ಯಾಚಾರ ಎಸಗಿದ ಆರೋಪದ ಮೇಲೆ ಹೋಟೆಲ್ ಮಾಲಕ, ಮ್ಯಾನೇಜರ್ ಸೇರಿ ನಾಲ್ವರನ್ನ ಬಂಧಿಸಲಾಗಿದೆ. ಜೂನ್ 8 ರಂದು ಈ ಘಟನೆ ನಡೆದಿದ್ದು, ಬಾಲಕಿಯರ ಪೋಷಕರು ಪೊಲೀಸರಿಗೆ ನಾಪತ್ತೆ ದೂರು ದಾಖಲಿಸಿದ ನಂತರ ಘಟನೆ ಬೆಳಕಿಗೆ ಬಂದಿದೆ.
ಬಾಲಕಿಯರು 11, 13 ಮತ್ತು 15 ವರ್ಷ ವಯಸ್ಸಿನವರು ಎಂದು ಗುರುತಿಸಲಾಗಿದ್ದು, ಅವರಲ್ಲಿ ಇಬ್ಬರು ಒಡಹುಟ್ಟಿದವರು. ಪೊಲೀಸರ ಪ್ರಕಾರ, ಬಾಲಕಿಯರಿಗೆ ಸೋಶಿಯಲ್ ಮೀಡಿಯಾದಲ್ಲಿ ಆರೋಪಿಗಳ ಪರಿಚಯವಾಗಿದ, ಪ್ರತಿನಿತ್ಯ ಚಾಟಿಂಗ್ ನಲ್ಲಿ ತೊಡಗಿಕೊಂಡಿದ್ದ ಬಾಲಕಿಯರಿಗೆ, ಬಕ್ರಿದ್ ಹಬ್ಬಕ್ಕೆ ಪಾರ್ಟಿ ಇದೆ ಮಸ್ತಿ ಮಾಡೋಣ ಬನ್ನಿ ಎಂದು ಆರೋಪಿಗಳು ಕರೆದಿದ್ದಾರೆ. ಪಾರ್ಟಿಗೆ ಹೋದ ಬಾಲಕಿಯರು ಮೋಜು ಮಸ್ತಿಯಲ್ಲಿ ತೊಡಗಿದ್ದು ನಂತರ ಸೋಶಿಯಲ್ ಮೀಡಿಯಾ ಸ್ನೇಹಿತರಿಂದಲೇ ಅತ್ಯಾಚಾರಕ್ಕೆ ಒಳಗಾಗಿದ್ದಾರೆ.
ಪೊಲೀಸರು ನಾಪತ್ತೆಯಾಗಿದ್ದ ಬಾಲಕಿಯರನ್ನ ಹುಡುಕಲು ಹಲವಾರು ತಂಡಗಳನ್ನು ರಚಿಸಿದ್ದು ನಂತರ ಅದೇ ದಿನ ಕ್ಯಾಲಂಗುಟ್ ಬೀಚ್ನ ಹೋಟೆಲ್ ರೂಮ್ ನಲ್ಲಿ ಪತ್ತೆಯಾಗಿದ್ದಾರೆ. ಅತ್ಯಾಚಾರವೆಸಗಿದ ಆರೋಪಿಗಳಾದ ಅಲ್ತಾಫ್ (19) ಮತ್ತು ಓಂ (21)ನನ್ನ ಪೊಲೀಸರು ಲಾಕ್ ಮಾಡಿದ್ದಾರೆ.
ಪೊಲೀಸರ ಬಳಿ ಘಟನೆ ಬಗ್ಗೆ ಮಾಹಿತಿ ನೀಡಿರುವ ಬಾಲಕಿಯರು, ಇಬ್ಬರು ಆರೋಪಿಗಳು ಈದ್ ಆಚರಣೆಗೆಂದು ನಮ್ಮನ್ನ ಹೋಟೆಲಿಗೆ ಬರುವಂತೆ ಹೇಳಿದರು. ನಂತರ ಹೋಟೆಲ್ ರೂಮ್ ಗೆ ಕರೆದೊಯ್ದು ಅತ್ಯಾಚಾರವೆಸಗಿದ್ದಾರೆ ಎಂದು ಬಾಯಿಬಿಟ್ಟಿದ್ದಾರೆ.
ಇನ್ನು ಅಪ್ರಾಪ್ತ ಬಾಲಕಿಯರಿಗೆ ರೂಮ್ ಕೊಟ್ಟಿದ್ದನ್ನ ಪ್ರಶ್ನಿಸಿ ಹೋಟೆಲ್ ಮಾಲೀಕ ಮತ್ತು ಮ್ಯಾನೇಜರ್ ನನ್ನ ಪೊಲೀಸ್ರು ಬಂಧಿಸಿ ಗ್ರಹಚಾರ ಬಿಡಿಸಿದ್ದಾರೆ.
Three Minors Lured to Birthday Party, Later raped; Three Arrested in Goa including hotel owner. In a shocking incident reported from Goa, three underage girls were allegedly abused after being invited to a birthday celebration by acquaintances. The incident, which occurred on June 8, has led to the arrest of two young men and a hotel owner.
29-05-26 04:30 pm
HK News Staffer
ಸಿದ್ದರಾಮಯ್ಯ ರಾಜೀನಾಮೆಗೆ ರಾಜ್ಯಪಾಲರಿಂದ ಅಧಿಕೃತ ಮು...
29-05-26 10:29 am
ರಾಜ್ಯದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬರಲು ಸಿದ್ದರಾ...
28-05-26 06:18 pm
CM Siddaramaiah, Supporters crying, Kaveri: ಸ...
28-05-26 05:31 pm
ರಾಜ್ಯಸಭೆಗೆ ಹೋಗಲ್ಲ, ರಾಜ್ಯದಲ್ಲೇ ಸಕ್ರಿಯ ರಾಜಕಾರಣದ...
28-05-26 04:34 pm
29-05-26 06:17 pm
HK News Staffer
ಟಿಎಂಸಿಯಲ್ಲಿ ಬಿರುಕು ; 50 ಶಾಸಕರು, ಸಂಸದರು ಬಿಜೆಪಿ...
27-05-26 09:17 pm
ಕೇರಳ ರಾಜಕಾರಣದಲ್ಲಿ ಭಾರೀ ಸಂಚಲನ..! ಮಾಜಿ ಸಿಎಂ ಪಿಣ...
27-05-26 08:36 pm
ಜೂನ್, ಜುಲೈನಲ್ಲಿ 12 ಪರಿಷತ್ ಸ್ಥಾನಗಳಿಗೆ ಚುನಾವಣೆ...
26-05-26 12:54 pm
ಗೃಹಲಕ್ಷ್ಮಿ ಪಡೆಯಲು ಬಯೋಮೆಟ್ರಿಕ್ ಕಡ್ಡಾಯ ; ಕೂಡಲೇ...
26-05-26 12:50 pm
28-05-26 02:45 pm
HK News Staffer
ಡಿಸಿಎಂ ಆಗಬೇಕೆಂಬ ಪೋಸ್ಟ್ ಸಾಮಾಜಿಕ ಜಾಲತಾಣದಲ್ಲಿ ಹಾ...
28-05-26 02:28 pm
ಕುದುರೆಮುಖ ಅದಿರು ಕಂಪನಿ ಕಾರ್ಮಿಕರ ಬೇಡಿಕೆ ಈಡೇರಿಸಿ...
27-05-26 12:29 pm
ಕಟೀಲು ಶಿಬರೂರಿನಲ್ಲಿ ಮರಳು ದರೋಡೆ ರಾಜಾರೋಷ ; ಇಲ್ಲಿ...
26-05-26 09:02 pm
ನೌಕಾಪಡೆ ಸಬ್ ಲೆಫ್ಟಿನೆಂಟ್ ಆಗಿ ನೇಮಕಗೊಂಡ ನಿಶೆಲ್ ಡ...
26-05-26 07:52 pm
29-05-26 03:05 pm
HK News Staffer
ಬಕ್ರೀದ್ ಹಿನ್ನೆಲೆ, ರಾತ್ರೋರಾತ್ರಿ ಮನೆ ಕೊಟ್ಟಿಗೆಯಲ...
28-05-26 09:44 pm
ಕರ್ತವ್ಯದಲ್ಲಿದ್ದ ಟ್ರಾಫಿಕ್ ಪೊಲೀಸರಿಗೆ ಡಿಕ್ಕಿ ಹೊಡ...
28-05-26 10:43 am
ನಿಲ್ಲಿಸಿದ್ದ ಬೈಕ್ ಕದ್ದು ಪರಾರಿಯಾಗಿದ್ದ ಇಬ್ಬರು ನಟ...
27-05-26 08:34 pm
ಉರ್ವ ಪೊಲೀಸ್ ಸಿಬ್ಬಂದಿ ಮೇಲೆ ಹಲ್ಲೆ ಮಾಡಿ ಕೇರಳಕ್ಕೆ...
27-05-26 07:56 pm