ಬ್ರೇಕಿಂಗ್ ನ್ಯೂಸ್
14-06-25 05:59 pm Bengaluru Staff ಕ್ರೈಂ
ಬೆಂಗಳೂರು, ಜೂನ್ 14: ರಾಜ್ಯದಲ್ಲಿ ಭ್ರಷ್ಟರ ಹೆಡೆಮುರಿ ಕಟ್ಟಿ ಸ್ವಸ್ಥ ಸಮಾಜ ಕಟ್ಟುವ ಗುರುತರ ಜವಾಬ್ದಾರಿ ಹೊತ್ತಿರುವ ಲೋಕಾಯುಕ್ತ ಅಧಿಕಾರಿಗಳೇ ಕೋಟಿ ಕೋಟಿ ಕೊಳ್ಳೆ ಹೊಡೆಯುತ್ತಿರುವ ಆರೋಪ ಕೇಳಿಬಂದಿದೆ. ಐಪಿಎಸ್ ಅಧಿಕಾರಿಯೂ ಆಗಿರುವ, ಬೆಂಗಳೂರು ನಗರ ಲೋಕಾಯುಕ್ತ ಎಸ್ಪಿ ಮಹದೇವ ಶ್ರೀನಾಥ ಜೋಶಿ ಮತ್ತು ಇತರ ಹಿರಿಯ ಅಧಿಕಾರಿಗಳ ವಿರುದ್ಧ ಗಂಭೀರ ಆರೋಪ ಕೇಳಿಬಂದಿದ್ದು, ಲೋಕಾಯುಕ್ತ ಅಧಿಕಾರಿಗಳೇ ಈ ಬಗ್ಗೆ ತನಿಖೆ ಆರಂಭಿಸಿದ್ದಾರೆ.
ಅಕ್ರಮ ಆಸ್ತಿ ಗಳಿಸಿರುವ ವಿಚಾರದಲ್ಲಿ ಬೇರೆ ಬೇರೆ ಇಲಾಖೆಯ ಅಧಿಕಾರಿಗಳನ್ನು ಸಂಪರ್ಕಿಸಿ ಲೋಕಾಯುಕ್ತದಿಂದ ದಾಳಿ ನಡೆಸುವುದಾಗಿ ಬೆದರಿಸಿ ಹಣ ಕೀಳುತ್ತಿದ್ದ ಆರೋಪದಲ್ಲಿ ಕೆಎಸ್ಸಾರ್ಪಿಯ ಮಾಜಿ ಕಾನ್ಸ್ ಟೇಬಲ್ ನಿಂಗಪ್ಪ ಎಂಬಾತನನ್ನು ಲೋಕಾಯುಕ್ತ ಬಂಧಿಸಿದ್ದು, ಆತನನ್ನು ವಿಚಾರಣೆ ನಡೆಸಿದಾಗ ಹಿರಿಯ ಅಧಿಕಾರಿಗಳೊಂದಿಗೆ ನಂಟು ಇರುವುದು ಬೆಳಕಿಗೆ ಬಂದಿದೆ. ಈ ಬಗ್ಗೆ ಖಚಿತ ಮಾಹಿತಿ ಆಧರಿಸಿ ಬೆಂಗಳೂರು ಲೋಕಾಯುಕ್ತ ಎಸ್ಪಿ ಶ್ರೀನಾಥ್ ಜೋಶಿ ಅವರನ್ನು ಲೋಕಾಯುಕ್ತದಿಂದಲೇ ತೆಗೆದು ಹಾಕಲಾಗಿದೆ.
ನಿಂಗಪ್ಪ ಎಂಬ ವ್ಯಕ್ತಿ ತಾನು ಲೋಕಾಯುಕ್ತ ಡಿವೈಎಸ್ಪಿ ಎಂದು ಹೇಳಿ ಪರಿಚಯ ಮಾಡಿಕೊಂಡು ಬೆಂಗಳೂರು ಸೇರಿ ರಾಜ್ಯದಲ್ಲಿ ಬೇರೆ ಬೇರೆ ಜಿಲ್ಲೆಯ ಸರ್ಕಾರಿ ಅಧಿಕಾರಿಗಳಿಗೆ ಕರೆ ಮಾಡಿ ದಾಳಿ ಮಾಡುವುದಾಗಿ ಬೆದರಿಸುತ್ತಿದ್ದ. ಈ ವೇಳೆ, ಡೀಲ್ ಕುದುರಿಸುತ್ತಿದ್ದ ನಿಂಗಪ್ಪ ಅದರ ಪಾಲನ್ನು ಲೋಕಾಯುಕ್ತದ ಅಸಲಿ ಅಧಿಕಾರಿಗಳಿಗೆ ಕೊಡುತ್ತಿದ್ದ ಎನ್ನುವುದು ತನಿಖೆಯಲ್ಲಿ ತಿಳಿದುಬಂದಿದೆ. ಈ ಬಗ್ಗೆ ನಿಂಗಪ್ಪ ಮತ್ತು ಲೋಕಾಯುಕ್ತ ಎಸ್ಪಿ ಶ್ರೀನಾಥ್ ಜೋಷಿ ಮಾತನಾಡಿರುವ ಕಾಲ್ ಡಿಟೈಲ್ಸ್ ಸಿಕ್ಕಿದ್ದು, ಅದರಲ್ಲಿ ಭ್ರಷ್ಟಾಚಾರದ ರಹಸ್ಯ ಅಡಗಿದೆ ಎಂದು ಹೇಳಲಾಗುತ್ತಿದೆ.

ಇದಲ್ಲದೆ, ಈ ರೀತಿ ಭ್ರಷ್ಟಾಚಾರದಲ್ಲಿ ಗಳಿಸಿದ ಅಕ್ರಮ ಸಂಪತ್ತನ್ನು ಕಾನೂನು ಕಣ್ಣಿನಿಂದ ಮತ್ತು ತೆರಿಗೆ ತಪ್ಪಿಸಲು ಬಿಟ್ ಕಾಯಿನ್ ಮೇಲೆ ಹೂಡಿಕೆ ಮಾಡಿದ್ದಾರೆ ಎಂಬ ಮಾಹಿತಿಯೂ ಇದೆ. ಶ್ರೀನಾಥ್ ಜೋಷಿ ಅವರಲ್ಲದೆ, ಓರಗೆಯ ಇನ್ನೊಬ್ಬ ಐಪಿಎಸ್ ಅಧಿಕಾರಿಯೂ ಇದೇ ರೀತಿ ಅಕ್ರಮ ಹಣ ಮಾಡಿದ್ದಾರೆಂಬ ಆರೋಪ ಇದೆ. ಈ ವಿಚಾರ ಮುಖ್ಯಮಂತ್ರಿ ಸಿದ್ದರಾಮಯ್ಯ ಗಮನಕ್ಕೆ ಬರುತ್ತಲೇ ಆರೋಪ ಹೊತ್ತವರನ್ನು ಇಲಾಖೆಯಿಂದ ಬಿಡುಗಡೆ ಮಾಡಲಾಗಿದೆ. ಆದರೆ ಅವರ ಮೇಲೆ ಕ್ರಮ ಜರುಗಿಸುವ ಬದಲು ಮೃದು ಧೋರಣೆ ತಳೆದಿದ್ದಾರೆ ಎನ್ನುವ ವಿಚಾರವೂ ಚರ್ಚೆಗೀಡಾಗಿದೆ. ಇದೊಂದು ರೀತಿಯಲ್ಲಿ ಬೇಲಿಯೇ ಎದ್ದು ಹೊಲ ಮೇಯ್ದಂತೆ ಆಗಿದ್ದು, ಹೈಕೋರ್ಟ್ ನಿಂದ ಫುಲ್ ಪವರ್ ಪಡೆದು ಮೀಸೆ ತಿರುವಿಕೊಂಡಿದ್ದ ಲೋಕಾಯುಕ್ತ ಅಧಿಕಾರಿಗಳ ಬಗ್ಗೆ ಸಾರ್ವಜನಿಕ ನೆಲೆಯಲ್ಲಿ ಅನುಮಾನ ತೋರುವಂತಾಗಿದೆ.
ಬಿಡಿಎ ಮತ್ತು ಅಬಕಾರಿ ಇಲಾಖೆಗಳ ಅಧಿಕಾರಿಗಳಿಗೆ ಕರೆ ಮಾಡಿ ಹಣ ವಸೂಲಿ ಮಾಡುತ್ತಿದ್ದ ಪ್ರಕರಣದಲ್ಲಿ ಲೋಕಾಯುಕ್ತ ಎಸ್ಪಿ ವಂಶಿಕೃಷ್ಣ ನೇತೃತ್ವದ ತಂಡವು ನಿಂಗಪ್ಪನನ್ನು ಬಂಧಿಸಿ ವಿಚಾರಣೆ ಕೈಗೊಂಡಾಗ ಪ್ರಕರಣ ಬೆಳಕಿಗೆ ಬಂದಿದೆ. ಇಲಾಖೆಯ ಹಿರಿಯ ಅಧಿಕಾರಿಗಳೇ ನಿಂಗಪ್ಪ ಜೊತೆಗೆ ಶಾಮೀಲಾಗಿದ್ದಾರೆಂಬ ಮಾಹಿತಿ ದೊರಕಿದೆ.
In a stunning twist that has sent shockwaves across Karnataka’s administrative and anti-corruption circles, senior Lokayukta officials, including Bengaluru City Lokayukta SP Mahadev Srinath Joshi (an IPS officer), have come under the scanner for alleged involvement in a multi-crore extortion racket.
12-09-26 09:40 pm
HK News Staffer
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
ಬಿಜೆಪಿ ಅಧಿಕಾರಕ್ಕೆ ಬರಲು ನನ್ನ ಸ್ಥಾನ ಬಿಟ್ಟುಕೊಟ್ಟ...
12-09-26 05:56 pm
ಐಎಎಸ್ ತೇರ್ಗಡೆಯಾಗಿದ್ದ ಕೇರಳದ ಮೊದಲ ಬುಡಕಟ್ಟು ಮಹಿಳ...
12-09-26 05:53 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
14-09-26 10:01 pm
HK News Staffer
ಮಂಗಳೂರಿನಲ್ಲಿ ಎರಡು ದಿನ ಸಿಎಂ ಡಿಕೆಶಿ ವಾಸ್ತವ್ಯ ;...
14-09-26 06:02 pm
100 ವರ್ಷಗಳ ಬಳಿಕವೂ ಸ್ವಂತ ಸೂರಿಗಾಗಿ ಕರಾವಳಿಯಲ್ಲಿ...
14-09-26 05:00 pm
Konkan Catholic Credit Society Inaugurated in...
14-09-26 04:18 pm
Konkan Catholic Credit Society Mangalore: ಹಣಕ...
13-09-26 10:11 pm
12-09-26 07:41 pm
HK News Staffer
ಕ್ರಿಪ್ಟೊ ಕರೆನ್ಸಿ ಹೆಸ್ರಲ್ಲಿ ಡಾಕ್ಟರ್ ಗೆ ಮಹಿಳೆಯಿ...
11-09-26 06:38 pm
ಜಾಮೀನು ಪಡೆಯಲು ನಕಲಿ ಆಧಾರ್ ಕಾರ್ಡ್ ಹಾಜರು ; ಉಡು...
11-09-26 01:09 pm
ಬೈಕ್ಗೆ ಡಿಕ್ಕಿ ಹೊಡೆದ ಕಾರು ; ಚಾಮರಾಜನಗರದಲ್ಲಿ ಮೂ...
11-09-26 10:14 am
ಕುಂದಾಪುರದಲ್ಲಿ 8 ಶಾಲಾ ಮಕ್ಕಳ ಬಲಿ ಪಡೆದ ಭೀಕರ ಅಪಘಾ...
10-09-26 08:16 pm