ಬ್ರೇಕಿಂಗ್ ನ್ಯೂಸ್
23-06-25 11:47 am Udupi Correspondent ಕ್ರೈಂ
ಉಡುಪಿ, ಜೂನ್ 23 : ಮಗನೇ ತನ್ನ ತಾಯಿಯನ್ನು ಕತ್ತು ಹಿಸುಕಿ ಕೊಲೆಗೈದು ನಾಟಕವಾಡಿದ್ದ ಕೃತ್ಯ ಮಣಿಪಾಲದಲ್ಲಿ ತಡವಾಗಿ ಬೆಳಕಿಗೆ ಬಂದಿದೆ. ಮಹಿಳೆಯ ಸಾವಿನ ಬಗ್ಗೆ ಸಂಶಯ ವ್ಯಕ್ತವಾಗಿದ್ದರಿಂದ ಪೊಲೀಸರು ಮರಣೋತ್ತರ ಪರೀಕ್ಷೆ ನಡೆಸಿದ್ದು ಮಗನೇ ಕತ್ತು ಹಿಸುಕಿ ಕೊಲೆಗೈದ ಕೃತ್ಯವೆಂದು ಪತ್ತೆಯಾಗಿದೆ.
ಕೊಲೆಗೀಡಾದವರು ಮಣಿಪಾಲ ನಿವಾಸಿ ಪದ್ಮಾಬಾಯಿ (45) ಎಂಬವರಾಗಿದ್ದು ಮೃತರ ಪುತ್ರ ಈಶ ನಾಯ್ಕ್ (26) ನನ್ನು ಪೊಲೀಸರು ಬಂಧಿಸಿದ್ದಾರೆ. ಜೂನ್ 18ರಂದು ರಾತ್ರಿ ಪದ್ಮಾಬಾಯಿ ಅವರನ್ನು ಸೊಂಟ ನೋವೆಂದು ಉಡುಪಿ ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿತ್ತು. ಅಂದು ರಾತ್ರಿ ಪದ್ಮಾಬಾಯಿ ಅವರ ತಂಗಿ ಶಿಲ್ಪಾ ಅವರಿಗೆ ಕರೆ ಮಾಡಿದ್ದ ಈಶ ನಾಯ್ಕ್, ತಾಯಿಗೆ ಉಷಾರಿಲ್ಲ, ಆಸ್ಪತ್ರೆಗೆ ಕರೆದುಕೊಂಡು ಹೋಗಲು ಹಣ ಕಳುಹಿಸುವಂತೆ ತಿಳಿಸಿದ್ದ. ಅದರಂತೆ ಶಿಲ್ಪಾ ಆನ್ಲೈನಲ್ಲಿ ಹಣ ಕಳುಹಿಸಿದ್ದರು.
ಮರುದಿನ ಬೆಳಗ್ಗೆ ಚಿಕ್ಕಮ್ಮ ಶಿಲ್ಪಾಗೆ ಕರೆ ಮಾಡಿದ ಈಶ ನಾಯ್ಕ್ ತಾಯಿ ಮೃತಪಟ್ಟಿರುವುದಾಗಿ ತಿಳಿಸಿದ್ದ. ಶಿಲ್ಪಾ ಬಳಿಕ ಆಸ್ಪತ್ರೆಗೆ ಬಂದು ನೋಡಿದಾಗ ಪದ್ಮಬಾಯಿ ಅವರ ಕುತ್ತಿಗೆ ಬಳಿ ಗಾಯದ ಗುರುತುಗಳಿದ್ದವು. ಹೀಗಾಗಿ ಸಾವಿನಲ್ಲಿ ಸಂಶಯ ಇರುವುದಾಗಿ ಶಿಲ್ಪಾ ನೀಡಿದ ದೂರಿನಂತೆ ಮಣಿಪಾಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.
ಮಣಿಪಾಲ ಆಸ್ಪತ್ರೆಯಲ್ಲಿ ಶವ ಪರೀಕ್ಷೆ ನಡೆಸಿದ್ದು ಪದ್ಮಾಬಾಯಿ ಅವರನ್ನು ಜೂನ್ 18ರಂದು ರಾತ್ರಿಯಿಂದ ಜೂನ್ 19ರ ಬೆಳಗಿನ ನಡುವೆ ಯಾರೋ ದುಷ್ಕರ್ಮಿಗಳು ಕತ್ತು ಹಿಸುಕಿ ಕೊಲೆ ಮಾಡಿರುವುದಾಗಿ ಕಂಡುಬಂದಿತ್ತು. ಅದರಂತೆ ಮಣಿಪಾಲ ಪೊಲೀಸರು ಕೊಲೆ ಪ್ರಕರಣವೆಂದು ಪರಿಗಣಿಸಿ ತನಿಖೆ ನಡೆಸಿದ್ದರು. ತನಿಖೆಯ ವೇಳೆ ಈಶ ನಾಯ್ಕ್ ನನ್ನು ವಶಕ್ಕೆ ಪಡೆದು ವಿಚಾರಿಸಿದಾಗ, ಮಗನೇ ಹಣಕ್ಕಾಗಿ ಹಾಗೂ ಕೌಟುಂಬಿಕ ಕಲಹದಿಂದ ತಾಯಿಯನ್ನು ಕೊಲೆ ಮಾಡಿರುವುದಾಗಿ ಪತ್ತೆಯಾಗಿದ್ದು ಪೊಲೀಸರು ಆತನನ್ನು ಬಂಧಿಸಿದ್ದಾರೆ.
A shocking incident has come to light in Manipal where a man staged a drama after allegedly murdering his own mother by strangulation. The crime, initially masked as a medical emergency, was uncovered following a postmortem examination that confirmed foul play. The deceased has been identified as Padmabai (45), a resident of Manipal. Her son, Eesh Nayak (26), has been arrested by the Manipal police in connection with the murder.
31-12-25 10:57 pm
Bangalore Correspondent
ಕೋಗಿಲು ಬಡಾವಣೆ ವಿವಾದ ನಡುವೆಯೇ ಕೇರಳ ಸಿಎಂ ಪಿಣರಾಯಿ...
31-12-25 02:35 pm
ಧಾರವಾಡದ ಕೃಷಿ ವಿಶ್ವವಿದ್ಯಾಲಯಕ್ಕೆ ಚಕ್ರವರ್ತಿ ಸೂಲಿ...
30-12-25 11:12 pm
ಬಯೋಕಾನ್ ಕಂಪನಿ ಟೆಕ್ಕಿ ಆಫೀಸ್ ಕಟ್ಟಡದ ಆರನೇ ಮಹಡಿಯಿ...
30-12-25 10:14 pm
ವ್ಯವಸ್ಥಾಪನಾ ಸಮಿತಿ ಸದಸ್ಯರನ್ನು ವಜಾಗೊಳಿಸುವ ಅಧಿಕಾ...
30-12-25 06:34 pm
30-12-25 06:48 pm
HK News Desk
ಹಿಂದುಗಳ ಮನೆ ಸುಡುತ್ತಿದ್ದರೆ ಮಹಮ್ಮದ್ ಯೂನಸ್ ಕೊಳಲು...
30-12-25 03:32 pm
ರಸ್ತೆ ಬದಿ ನಮಾಜ್ ಮಾಡುತ್ತಿದ್ದ ಪ್ಯಾಲೆಸ್ತೀನ್ ವ್...
27-12-25 04:29 pm
ನಮ್ಮನ್ನಿಲ್ಲಿ ಬದುಕಲು ಬಿಡುತ್ತಿಲ್ಲ, ಗಡಿಯನ್ನು ತೆರ...
27-12-25 01:46 pm
ತಿರುವನಂತಪುರಂ ಮಹಾನಗರ ಪಾಲಿಕೆಯಲ್ಲಿ ಬಿಜೆಪಿ ಮೇಯರ್...
26-12-25 09:41 pm
01-01-26 09:43 am
Mangalore Correspondent
ಧರ್ಮಸ್ಥಳ ಪ್ರಕರಣದಲ್ಲಿ ಕ್ಷೇತ್ರದ ಪರ ಬೆಳ್ತಂಗಡಿ ಕೋ...
31-12-25 10:57 pm
ಕೋಗಿಲು ಬಡಾವಣೆಯ ಅಕ್ರಮ ವಲಸಿಗರು ಎಲ್ಲಿಯವರು? ಇಲ್ಲಿ...
31-12-25 09:16 pm
ಕೋಟೆಕಾರು ಪ.ಪಂ ಸಭೆ ; ಸರ್ಕಾರಿ ಜಮೀನು ಅತಿಕ್ರಮಣ ಪರ...
31-12-25 03:35 pm
ಶೀಘ್ರದಲ್ಲೇ ಸ್ಕ್ಯಾನ್ ಜೆಟ್ ವಿಮಾನ ಸೇವೆ ; ವಿಜಯ್ ಮ...
31-12-25 11:47 am
31-12-25 07:05 pm
Mangalore Correspondent
ಶಿರ್ವದಲ್ಲಿ ಸ್ಕೂಟರ್ ಕಳ್ಳತನ ; ಅಂತರ್ ಜಿಲ್ಲಾ ಕಳ್ಳ...
31-12-25 07:05 pm
ಪುತ್ತೂರಿನ ನಿವೃತ್ತ ಪ್ರಾಂಶುಪಾಲರ ಮನೆಗೆ ನುಗ್ಗಿ ಕಳ...
31-12-25 05:48 pm
ಸ್ಟಾಕ್ ಮಾರ್ಕೆಟ್ ಹೆಸ್ರಲ್ಲಿ ವಂಚಕರಿಂದ ಪಂಗನಾಮ ; 5...
30-12-25 10:40 pm
ಬ್ರಹ್ಮರಕೂಟ್ಲು ಟೋಲ್ ಗೇಟ್ ಸಿಬ್ಬಂದಿಗಳಿಗೆ ಹಲ್ಲೆ ;...
30-12-25 12:42 pm