ಬ್ರೇಕಿಂಗ್ ನ್ಯೂಸ್
24-06-25 07:39 pm Bangalore Correspondent ಕ್ರೈಂ
ಬೆಂಗಳೂರು, ಜೂ 24 : ಚೀಟಿ ಹೆಸರಿನಲ್ಲಿ ಬರೋಬ್ಬರಿ 10 ಕೋಟಿ ರೂ. ವಂಚಿಸಿರುವ ಪ್ರಕರಣ ಪುಟ್ಟೇನಹಳ್ಳಿ ಪೊಲೀಸ್ ಠಾಣೆಯಲ್ಲಿ ದಾಖಲಾಗಿದೆ.
ಚೀಟಿ ಹಾಕಿಸಿ ಕೊಂಡಿದ್ದ ಮಹಿಳೆ ತನ್ನ ಕುಟುಂಬ ಸಮೇತ ಪರಾರಿಯಾಗಿದ್ದಾಳೆ. ಈ ಬೆನ್ನಲ್ಲೇ ಇಡೀ ಪ್ರಕರಣವನ್ನು ಸಿಐಡಿಗೆ ವರ್ಗಾವಣೆ ಮಾಡುವಂತೆ ದಕ್ಷಿಣ ವಿಭಾಗದ ಡಿಸಿಪಿ ನಗರ ಪೊಲೀಸ್ ಆಯಕ್ತರಿಗೆ ಪತ್ರ ಬರೆದಿದ್ದಾರೆ.
ವಂಚನೆ ಪ್ರಕರಣ ದಾಖಲಾಗುತ್ತಿದ್ದಂತೆ ಆರೋಪಿಗಳಾದ ಜೆ.ಪಿ.ನಗರದ ನಿವಾಸಿ ಸುಧಾ, ಆಕೆಯ ಪತಿ ಸಿದ್ದಾಚಾರಿ, ಯಶವಂತ ಮತ್ತು ವರ್ಷಿಣಿ ಪರಾರಿಯಾಗಿದ್ದಾರೆ. ಆರೋಪಿ ಗಳು ನೂರಾರು ಮಂದಿಗೆ ಬರೋಬರಿ 10 ಕೋಟಿ ರೂ.ಗೂ ಅಧಿಕ ಹಣ ವಂಚಿಸಿದ್ದಾರೆ ಎಂಬುದು ಪ್ರಾಥಮಿಕ ತನಿಖೆಯಲ್ಲಿ ಬೆಳಕಿಗೆ ಬಂದಿದೆ. ಹೀಗಾಗಿ ಪ್ರಕರಣವನ್ನು ಸಿಐಡಿಗೆ ವರ್ಗಾವಣೆ ಮಾಡುವಂತೆ ಕೋರಲಾಗಿದೆ.
ಸದ್ಯ ವಂಚನೆ ಸಂಬಂಧ ಜೆ.ಪಿ.ನಗರದ ಪುಷ್ಪಲತಾ ಎಂಬುವರು ನೀಡಿದ ದೂರಿನ ಮೇರೆಗೆ ನಾಲ್ವರು ಆರೋಪಿಗಳ ವಿರುದ್ಧ ಪುಟ್ಟೇನಹಳ್ಳಿ ಠಾಣೆ ಪೊಲೀಸರು ಎಫ್ಐಆರ್ ದಾಖಲಿಸಿಕೊಳ್ಳಲಾಗಿದೆ. ಆರೋಪಿ ಸುಧಾ, ತನ್ನ ಪತಿ ಹಾಗೂ ಮಕ್ಕಳ ಜತೆ ಸೇರಿ ಸುಮಾರು 20 ವರ್ಷಗಳಿಂದ ಚೀಟಿ ವ್ಯವಹಾರ ಮಾಡುತ್ತಿದ್ದಾರೆ. ಹೀಗಾಗಿ ಸುಧಾ ಬಳಿ 5 ಲಕ್ಷ ರೂ. ಮೌಲ್ಯದ 2 ಚೀಟಿ ಹಾಕಿದ್ದು, 25 ಸಾವಿರ ರೂ. ಕಟ್ಟುತ್ತಿದ್ದೆ. ಈ ಚೀಟಿಗಳಲ್ಲಿ 40 ಮಂದಿ ಇದ್ದಾರೆ. ಹೀಗೆ 20 ತಿಂಗಳ ಚೀಟಿ ಹಣವನ್ನು ಪಾವತಿ ಮಾಡಿದ್ದೇನೆ. ಈ ಮಧ್ಯೆ ಚೀಟಿ ಎತ್ತಿಕೊಡುವಂತೆ ಕೇಳಿದಾಗ, ಸುಧಾ ಇದೇ ಮೊದಲ ಬಾರಿಗೆ ಚೀಟಿ ಹಾಕಿದ್ದಿರಿಂದ ಕೊನೆಯಲ್ಲಿ ಚೀಟಿ ಎತ್ತಿಕೊಳ್ಳಿ ಎಂದರು. ಹೀಗಾಗಿ ಚೀಟಿ ಎತ್ತಿಕೊಂಡಿರಲಿಲ್ಲ. ಈ ಮಧ್ಯೆ ಸುಧಾ ತನ್ನ ಇಡೀ ಕುಟುಂಬದ ಜತೆ ಜೂ. 3 ರಂದು ರಾತ್ರಿ ಮನೆ ಬಿಟ್ಟು ಪರಾರಿಯಾಗಿದ್ದಾಳೆ. ಹೀಗಾಗಿ ತನ್ನ 10 ಲಕ್ಷ ರೂ. ಚೀಟಿ ಹಣವನ್ನು ಪಡೆದು ಪರಾರಿಯಾಗಿರುವ ಆರೋಪಿಗಳ ವಿರುದ್ಧ ಕ್ರಮಕೈಗೊಳ್ಳುವಂತೆ ಪುಷ್ಪಲತಾ ದೂರಿನಲ್ಲಿ ಕೋರಿದ್ದಾರೆ.
10 ಕೋಟಿ ರೂ.ಗೂ ಅಧಿಕ ವಂಚನೆ:
ಈ ಮಧ್ಯೆ ದಿನೇ ದಿನೆ ಆರೋಪಿಗಳ ವಿರುದ್ಧ ದೂರು ನೀಡುವವರ ಸಂಖ್ಯೆ ಹೆಚ್ಚಾಗುತ್ತಿದ್ದು, ಪ್ರತಿಯೊಬ್ಬ ದೂರುದಾರನಿಂದ ಹಣ ಪಾವತಿಸಿರುವ ಬಗ್ಗೆ ದಾಖಲೆ ಪಡೆಯುವ ಪ್ರಕ್ರಿಯೆ ನಡೆಯುತ್ತಿದೆ. ಪ್ರಾಥಮಿಕವಾಗಿ ಆರೋಪಿಗಳು ಬರೋಬರಿ 10 ಕೋಟಿ ರೂ. ವಂಚಿಸಿರುವುದು ಬೆಳಕಿಗೆ ಬಂದಿದೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.
ಆರೋಪಿಗಳ ಸುಳಿವು ಸಿಕ್ಕರೆ ಸಹಾಯವಾಣಿಗೆ ದೂರು ನೀಡಿ:
ಕೋಟ್ಯಂತರ ರೂ. ದೋಚಿದ ಸುಧಾ ತನ್ನ ಕುಟುಂಬದ ಜೊತೆ ರಾತ್ರೋರಾತ್ರಿ ನಾಪತ್ತೆ ಯಾಗಿದ್ದಾರೆ. ಈ ಬಗ್ಗೆ ಪುಟ್ಟೇನಹಳ್ಳಿ ಪೊಲೀ ಸರು ನಾಲ್ವರು ಆರೋಪಿಗಳ ಫೋಟೋ ಸಹಿತ ಕಾಣೆಯಾದ ಕುರಿತು ಪೊಲೀಸ್ ಪ್ರಕಟಣೆ ಹೊರಡಿಸಿದ್ದು, ಆರೋಪಿಗಳು ಕಂಡು ಬಂದಲ್ಲಿ ಪೊಲೀಸ್ ಸಹಾಯವಾಣಿ 112 ಅಥವಾ ಪೊಲೀ ಸ್ ಠಾಣೆಯ 080-22942566ಗೆ ಮಾಹಿತಿ ನೀಡುವಂತೆ ಪೊಲೀಸರು ಮನವಿ ಮಾಡಿದ್ದಾರೆ.
In a shocking case of financial fraud, a couple from JP Nagar, Bengaluru, has allegedly duped hundreds of people of over ₹10 crore under the pretense of running a chit fund. The accused—Sudha, her husband Siddachari, along with associates Yashwanth and Varshini—have reportedly gone missing overnight, prompting a wider investigation.
21-09-25 01:28 pm
Bangalore Correspondent
ಕೆಮ್ಮಣ್ಣು ಗುಂಡಿ ಫಾಲ್ಸ್ ನಲ್ಲಿ ಸೆಲ್ಫಿ ತೆಗೆದುಕೊಳ...
20-09-25 10:57 pm
ಜಾತಿ ಗಣತಿಗೆ ಸರ್ವ ಸಿದ್ಧತೆ ; ಗಣತಿಗೆ 1.75 ಲಕ್ಷ ಶ...
20-09-25 10:26 pm
Hassan Instagram, Suicide: ಪಾರ್ಕ್ ನಲ್ಲಿ ಯುವತಿ...
20-09-25 02:59 pm
Cm Siddaramaiah, Caste Survey: ಜಾತಿ ಸಮೀಕ್ಷೆ ಮ...
19-09-25 10:04 pm
20-09-25 11:03 pm
HK News Desk
ಪಾಕಿಸ್ತಾನಕ್ಕೆ ಹೋದರೆ ನನ್ನ ಮನೆಗೆ ಹೋದ ಅನುಭವ ಆಗುತ...
20-09-25 11:42 am
ಸಿಂಗಾಪುರದಲ್ಲಿ ಸ್ಕ್ಯೂಬಾ ಡೈವಿಂಗ್ ಅವಘಡ: ಬಾಲಿವುಡ್...
19-09-25 05:45 pm
Yasin Malik: ಲಷ್ಕರ್ ಮುಖ್ಯಸ್ಥ ಹಫೀಜ್ ಸಯೀದ್ ಭೇ...
19-09-25 02:24 pm
ಕೇಂದ್ರೀಕೃತ ಸಾಫ್ಟ್ವೇರ್ ಬಳಸಿ ಬೂತ್ಗಳಿಂದಲೇ ಮತದಾ...
18-09-25 08:14 pm
20-09-25 10:39 pm
Mangalore Correspondent
Scdcc Bank, Mangalore: ಎಸ್ಸಿಡಿಸಿಸಿ ಬ್ಯಾಂಕ್ ನಿ...
20-09-25 09:37 pm
Indiana Hospital, Mangalore: ಇಂಡಿಯಾನ ಆಸ್ಪತ್ರೆ...
20-09-25 09:34 pm
Mangalore, Kumpala, Suicide: ಸೋಮೇಶ್ವರ ಕಡಲ ಕಿನ...
20-09-25 08:46 pm
ಜಾತಿ, ಶೈಕ್ಷಣಿಕ ಸಮೀಕ್ಷೆ ; 47 ಹಿಂದು ಉಪ ಜಾತಿಗಳಲ್...
20-09-25 08:29 pm
21-09-25 02:30 pm
Bangalore Correspondent
ತುಂಬೆ, ಉಪ್ಪಿನಂಗಡಿಯಲ್ಲಿ ಹಟ್ಟಿಯಿಂದ ದನ ಕದ್ದು ಮಾಂ...
20-09-25 05:11 pm
Kasaragod Sexual Abuse: ಅಪ್ರಾಪ್ತ ಬಾಲಕನಿಗೆ ಸಲಿ...
18-09-25 11:44 am
Vijayapura Bank Robbery: SBI ಬ್ಯಾಂಕ್ ದರೋಡೆ ;...
17-09-25 09:44 pm
Mangalore Crime, Cattle Theft: ಅಡ್ಯಾರ್ ನಲ್ಲಿ...
17-09-25 06:04 pm