ಬ್ರೇಕಿಂಗ್ ನ್ಯೂಸ್
26-06-25 10:49 pm Mangalore Correspondent ಕ್ರೈಂ
ಮಂಗಳೂರು, ಜೂನ್ 26 : ಷೇರು ಮಾರುಕಟ್ಟೆಯಲ್ಲಿ ಹೂಡಿಕೆ ಮಾಡಿ, ದುಪ್ಪಟ್ಟು ಮಾಡಿಸುತ್ತೇನೆಂದು ಹೇಳಿ ಕುಟುಂಬಸ್ಥರಿಂದಲೇ ಕೋಟ್ಯಂತರ ರೂಪಾಯಿ ಹಣ ಪಡೆದು ವಂಚಿಸಿದ ಬಳಿಕ ದಿಢೀರ್ ನಾಪತ್ತೆಯಾಗಿದ್ದ ಕೃಷ್ಣಪ್ರಸಾದ್ ಶೆಟ್ಟಿ ಎಂಬಾತನನ್ನು ಒಂದೂವರೆ ವರ್ಷದ ಬಳಿಕ ಮಂಗಳೂರಿನ ಸಿಇಎನ್ ಪೊಲೀಸರು ಬಂಧಿಸಿದ್ದಾರೆ.
ಕೃಷ್ಣಪ್ರಸಾದ್ ಶೆಟ್ಟಿ ಮೂಲತಃ ಕುಂದಾಪುರ ತಾಲೂಕಿನ ಸಿದ್ದಾಪುರದ ಬಂಟಕೋಡು ಎಂಬಲ್ಲಿನ ನಿವಾಸಿಯಾಗಿದ್ದು, 2016ರಲ್ಲಿ ಮಂಗಳೂರಿನ ಯುವತಿಯನ್ನು ಮದುವೆಯಾಗಿದ್ದ. ಆನಂತರ, ಯುವತಿ ಕುಟುಂಬಸ್ಥರನ್ನು ನಂಬಿಸಿ ಹಣ ಪಡೆದಿದ್ದು, ಷೇರು ಮಾರುಕಟ್ಟೆಯಲ್ಲಿ ದಿನವಹಿ ವಹಿವಾಟು ನಡೆಸಿದರೆ ಗರಿಷ್ಠ ಲಾಭ ಸಿಗುತ್ತದೆ ಎಂದು ನಂಬಿಸಿದ್ದ. ಆತನ ಮಾತನ್ನು ನಂಬಿ ಹಲವಾರು ಮಂದಿ ಹಣ ಹೂಡಿಕೆ ಮಾಡಿದ್ದರು. ಈ ರೀತಿ ಹೂಡಿಕೆ ಮಾಡಿದವರು ಹೆಚ್ಚಿನವರು ಸಂಬಂಧಿಕರೇ ಆಗಿದ್ದರು. ಇದಲ್ಲದೆ, ಪತ್ನಿಯ ಒಡವೆ, ಆಸ್ತಿಯ ಹಣವನ್ನೂ ಪಡೆದು ಹೂಡಿಕೆ ಮಾಡಿಸಿದ್ದ.
ಎಲ್ಲರ ಹಣ ಪಡೆದು ತನ್ನದೇ ಹೆಸರಿನಲ್ಲಿ ಷೇರು ಮಾರುಕಟ್ಟೆಯ ಯುಎಫ್ಓ ಟ್ರೇಡಿಂಗ್ ನಲ್ಲಿ ಹೂಡಿಕೆ ಮಾಡಿದ್ದಾನೆ ಎನ್ನಲಾಗಿದ್ದು, ಅದರಲ್ಲಿ ಭಾರೀ ನಷ್ಟಕ್ಕೀಡಾಗಿದ್ದ. ಸಂಬಂಧಿಕರು ಅನೇಕರು ಹಣ ನೀಡಿದ್ದು ಅವರು ಮರಳಿ ಕೇಳತೊಡಗಿದ್ದಾಗ 2023ರ ನವೆಂಬರ್ ತಿಂಗಳಲ್ಲಿ ದಿಢೀರ್ ಕಾಣೆಯಾಗಿದ್ದ. ಪತ್ನಿ ಜೊತೆಗೆ ಮಂಗಳೂರಿನ ಬಂಟ್ಸ್ ಹಾಸ್ಟೆಲಿಗೆ ಕಾರಿನಲ್ಲಿ ಬಂದು, ಆಕೆಯನ್ನು ಕಾರಿನಲ್ಲಿ ಕೂರಿಸಿ ಆಕ್ಸಿಸ್ ಬ್ಯಾಂಕಿಗೆಂದು ತೆರಳಿ ಅಲ್ಲಿಂದಲೇ ನಾಪತ್ತೆಯಾಗಿದ್ದ. ಆನಂತರ, ಎಲ್ಲಿ ಹೋಗಿದ್ದಾನೆಂದು ತಿಳಿಯದೇ ಸಂಬಂಧಿಕರು ಪೊಲೀಸ್ ಠಾಣೆ ಮೆಟ್ಟಿಲೇರಿದ್ದರು. ಬಂದರು ಠಾಣೆಯಲ್ಲಿ ದಾಖಲಾಗಿದ್ದ ಮೋಸದ ಪ್ರಕರಣ ಬಳಿಕ ಸಿಇಎನ್ ಠಾಣೆಗೆ ವರ್ಗಾವಣೆಗೊಂಡಿತ್ತು. ಕಳೆದ ಜೂನ್ 3ರಂದು ಕುಂದಾಪುರದ ತನ್ನ ಮನೆಗೆ ಬಂದಿದ್ದಾನೆಂದು ತಿಳಿದ ಮಂಗಳೂರು ಪೊಲೀಸರು ತೆರಳಿ ವಶಕ್ಕೆ ಪಡೆದಿದ್ದಾರೆ ಎನ್ನುವುದು ತಡವಾಗಿ ತಿಳಿದುಬಂದಿದೆ.
ಸದ್ಯಕ್ಕೆ ಆರೋಪಿ ಕೃಷ್ಣಪ್ರಸಾದ್ ಮಂಗಳೂರು ಜೈಲಿನಲ್ಲಿದ್ದು, ಜೆರೋದಾ ಸೇರಿದಂತೆ ವಿವಿಧ ಷೇರು ಮಾರುಕಟ್ಟೆ ಟ್ರೇಡಿಂಗ್ ನಲ್ಲಿ ಹೂಡಿಕೆ ಮಾಡಿರುವ ಬಗ್ಗೆ ಮಾಹಿತಿ ಕೇಳಿ ಪೊಲೀಸರು ಕಂಪನಿಗಳಿಗೆ ಪತ್ರ ರವಾನಿಸಿದ್ದಾರೆ. ಒಂದೂವರೆ ವರ್ಷದಲ್ಲಿ ದೆಹಲಿ, ಬೆಂಗಳೂರು ಸೇರಿ ವಿವಿಧ ಕಡೆಗಳಲ್ಲಿ ನೆಲೆಸಿದ್ದ ಕೃಷ್ಣಪ್ರಸಾದ್, ಅಲ್ಲಿಯೂ ಷೇರು ಮಾರುಕಟ್ಟೆ ವಹಿವಾಟು ನಡೆಸಿದ್ದ ಎನ್ನುವ ಮಾಹಿತಿಯಿದೆ. ಕೆಲವು ಸಂಬಂಧಿಕರು ತಮ್ಮ ಸ್ನೇಹಿತರಿಂದಲೇ ಹಣ ಪಡೆದು ದುಪ್ಪಟ್ಟು ಲಾಭದ ಆಸೆಯಿಂದ ಷೇರು ಮಾರುಕಟ್ಟೆಗೆ ಹೂಡಿಕೆ ಮಾಡಿಸಿದ್ದರು. ಅಂದಾಜು 6 ಕೋಟಿಗೂ ಹೆಚ್ಚು ಹಣ ನೀರಿನಲ್ಲಿಟ್ಟ ಹೋಮದಂತೆ ಖಾಲಿಯಾಗಿದೆ ಎಂದು ಹೇಳುತ್ತಿದ್ದು, ಹಣ ಕಳಕೊಂಡವರು ಹಿಡಿಶಾಪ ಹಾಕುತ್ತಿದ್ದಾರೆ.
Mangaluru police have arrested a man accused of duping his own relatives of several crores by promising high returns through stock market investments. The accused, who had been missing for over one and a half years, was finally nabbed by the CEN (Cyber, Economic, and Narcotics) police. The arrested man, Krishnaprasad Shetty, hails from Bantakodu, Siddapura in Kundapur taluk.
26-06-25 10:37 pm
HK News Desk
Heart Attack, Hassan District: ಹಾಸನ ಜಿಲ್ಲೆಯಲ್...
26-06-25 02:15 pm
ಬೈಕ್ ಟ್ಯಾಕ್ಸಿ ನಿಷೇಧಿಸುವ ಅಧಿಕಾರ ರಾಜ್ಯ ಸರ್ಕಾರಕ್...
26-06-25 12:44 pm
Bangalore Old Couple Suicide, Crime: ಬೆಂಗಳೂರಲ...
25-06-25 10:32 pm
Bomb Threat, Arrest, Udupi: ಲವ್ ನಿರಾಕರಿಸಿದ್ದಕ...
25-06-25 02:56 pm
26-06-25 10:22 pm
HK News Desk
ರೈಲು ಹಳಿ ಮೇಲೆ ಕಾರು ಓಡಿಸಿ ಹುಚ್ಚಾಟ ; ಆಂಟಿಯ ರಂಪಾ...
26-06-25 07:40 pm
PFI Hit List 977, Kerala, NIA: ಕೇರಳದಲ್ಲಿ ಹಿಂದ...
25-06-25 10:05 pm
Vijayan Chennai, Donation, Property: ದಾಂಪತ್ಯ...
25-06-25 07:40 pm
ಕದನ ವಿರಾಮ ಉಲ್ಲಂಘನೆ ; ಕೂಡಲೇ ಸೇನಾ ಕಾರ್ಯಾಚರಣೆ ನ...
25-06-25 11:10 am
26-06-25 10:08 pm
Mangalore Correspondent
St. Anthony’s Church Puttur, News, Cemetery:...
26-06-25 12:02 pm
Canara Bank, Suicide, Mangalore: ತಾನು ಕೆಲಸ ಮಾ...
26-06-25 11:52 am
Lokayukta Raids Mangalore City Corporation, M...
25-06-25 10:46 pm
C T Ravi, Mangalore, Kharge: ತುರ್ತು ಸ್ಥಿತಿ ಸಂ...
25-06-25 09:27 pm
26-06-25 10:49 pm
Mangalore Correspondent
Varkady, Manjeshwar Crime, Son Kills Mother:...
26-06-25 05:32 pm
Mangalore Youth, IIT Bombay Campus, Crime Bra...
26-06-25 02:54 pm
“Pastor Alwyn Dmello, Mangalore: The Foreign...
26-06-25 12:42 am
Puttur rape, Crime: ಸಹಪಾಠಿ ವಿದ್ಯಾರ್ಥಿನಿಯನ್ನು...
25-06-25 11:11 pm