ಬ್ರೇಕಿಂಗ್ ನ್ಯೂಸ್
29-06-25 02:26 pm HK News Desk ಕ್ರೈಂ
ತುಮಕೂರು, ಜೂನ್ 29 : ತನ್ನ ಅಕ್ರಮ ಸಂಬಂಧಕ್ಕೆ ಅಡ್ಡಿಯಾಗಿದ್ದ ಪತಿಯನ್ನು ಪ್ರಿಯಕರನೊಂದಿಗೆ ಸೇರಿ ಪತ್ನಿಯೇ ಕಣ್ಣಿಗೆ ಖಾರದ ಪುಡಿ ಎರಚಿ ಕುತ್ತಿಗೆ ಮೇಲೆ ಕಾಲಿಟ್ಟು ಉಸಿರುಕಟ್ಟಿಸಿ ಕೊಲೆ ಮಾಡಿರುವ ಘಟನೆ ತುಮಕೂರಿನಲ್ಲಿ ನಡೆದಿದೆ.
ತುಮಕೂರು ಜಿಲ್ಲೆಯ ತಿಪಟೂರು ತಾಲೂಕಿನ ಕಾಡುಶೆಟ್ಟಿ ಹಳ್ಳಿಯಲ್ಲಿ ಈ ಘಟನೆ ನಡೆದಿದ್ದು ಪತಿಯನ್ನು ಪ್ರಿಯಕರನ ಜೊತೆ ಸೇರಿ ಪತ್ನಿಯೇ ಕೊಲೆ ಮಾಡಿದ್ದಾಳೆ. ತಿಪಟೂರು ತಾಲೂಕಿನ 50 ವರ್ಷದ ಶಂಕರಮೂರ್ತಿ ಎಂಬವರನ್ನು ಅವರ ಪತ್ನಿ ಸುಮಂಗಳಾ ಮತ್ತು ಆಕೆಯ ಪ್ರಿಯಕರ ನಾಗರಾಜು ಹತ್ಯೆ ಮಾಡಿದ್ದು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ.
ತಿಪಟೂರು ತಾಲೂಕಿನ ನೊಣವಿನಕೆರೆ ಬಳಿಯ ಕಾಡುಶೆಟ್ಟಿಹಳ್ಳಿಯಲ್ಲಿ ಜೂನ್ 24 ರಂದು ಈ ಕೊಲೆ ನಡೆದಿದೆ. ಕೊಲೆಯ ನಂತರ ಶವವನ್ನು ಗೋಣಿಚೀಲದಲ್ಲಿ ತುಂಬಿ ಸುಮಾರು 30 ಕಿಮೀ ಸಾಗಿಸಿ, ತುರುವೇಕೆರೆ ತಾಲೂಕಿನ ದಂಡನಶಿವರ ಪೊಲೀಸ್ ಠಾಣಾ ವ್ಯಾಪ್ತಿಯ ತೋಟದ ಬಾವಿಯೊಂದಕ್ಕೆ ಎಸೆದಿದ್ದಾರೆ. ಪ್ರಕರಣಕ್ಕೆ ಸಂಬಂಧಿಸಿ ನೊಣವಿನಕೆರೆ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿತ್ತು. ಸುಮಂಗಳಾ ತಿಪಟೂರು ನಗರದ ಕಲ್ಪತರು ಕಾಲೇಜಿನ ಗರ್ಲ್ಸ್ ಹಾಸ್ಟೆಲ್ನಲ್ಲಿ ಅಡುಗೆ ಕೆಲಸ ಮಾಡುತ್ತಿದ್ದರು. ಇದೇ ವೇಳೆ, ಕರಡಾಳು ಸಂತೆ ಗ್ರಾಮದ ನಾಗರಾಜು ಜೊತೆ ಅಕ್ರಮ ಸಂಬಂಧ ಬೆಳೆಸಿದ್ದಳು. ಇವರ ಸಂಬಂಧಕ್ಕೆ ಪತಿ ಶಂಕರಮೂರ್ತಿ ಅಡ್ಡಿಯಾಗಿದ್ದ. ಈ ಕಾರಣಕ್ಕಾಗಿ, ಸುಮಂಗಲಾ ಮತ್ತು ನಾಗರಾಜು ಸೇರಿ ಶಂಕರಮೂರ್ತಿ ಕೊಲೆಗೆ ಯೋಜನೆ ರೂಪಿಸಿದ್ದರು.
ಜೂನ್ 24 ರಂದು ಶಂಕರಮೂರ್ತಿ ತೋಟದ ಮನೆಯಲ್ಲಿ ಒಬ್ಬಂಟಿ ಮಲಗಿದ್ದಾಗ ಸುಮಂಗಲಾ ಮತ್ತು ನಾಗರಾಜು ಆತನ ಕಣ್ಣಿಗೆ ಖಾರದ ಪುಡಿ ಎರಚಿ, ದೊಣ್ಣೆಯಿಂದ ಹೊಡೆದು, ಕೊನೆಗೆ ಕುತ್ತಿಗೆ ಮೇಲೆ ಕಾಲಿಟ್ಟು ಭೀಕರವಾಗಿ ಕೊಲೆ ಮಾಡಿದ್ದಾರೆ. ಬಳಿಕ ಶವವನ್ನು ಗೋಣಿಚೀಲದಲ್ಲಿ ತುಂಬಿ, ಸುಮಾರು 30 ಕಿಮೀ ದೂರದ ತುರುವೇಕೆರೆ ಎಂಬಲ್ಲಿಗೆ ಒಯ್ದು ತೋಟದ ಬಾವಿಗೆ ಎಸೆದಿದ್ದಾರೆ. ಕೃತ್ಯದ ನಂತರ, ಆರೋಪಿಗಳು ಯಾವುದೇ ಶಂಕೆಗೆ ಒಳಗಾಗದಂತೆ ಗ್ರಾಮಕ್ಕೆ ಹಿಂದಿರುಗಿದ್ದರು.
ನೊಣವಿನಕೆರೆ ಪೊಲೀಸರು ತನಿಖೆ ಆರಂಭಿಸಿದ್ದು, ಅಕ್ರಮ ಸಂಬಂಧ ಮಾಹಿತಿ ಆಧರಿಸಿ ಸುಮಂಗಳಾಳನ್ನು ವಶಕ್ಕೆ ಪಡೆದು ವಿಚಾರಿಸಿದಾಗ ಕೊಲೆ ಕೃತ್ಯ ಬೆಳಕಿಗೆ ಬಂದಿದೆ. ಶವವನ್ನು ತೋಟದ ಬಾವಿಯಿಂದ ತೆಗೆಯಲಾಗಿದೆ. ತಿಪಟೂರಿನಲ್ಲಿ ಈ ಘಟನೆ ಸ್ಥಳೀಯರಲ್ಲಿ ತೀವ್ರ ಚರ್ಚೆಗೆ ಕಾರಣವಾಗಿದೆ.
A man was found dead under suspicious circumstances in Kadushetti Halli, a village near Nonavinakere in Tipatur taluk, Tumakuru district. The incident, which occurred on June 24, has led to the detention of the man's wife and one other individual for questioning. The deceased has been identified as 50-year-old Shankaramoorthy, a resident of the village
24-06-26 05:55 pm
HK News Staffer
ಅಡ್ಡ ಮತದಾನ ; ರಾಜ್ಯ ನಾಯಕತ್ವದ ನಿರ್ಲಕ್ಷ್ಯವೇ ಕಾರಣ...
23-06-26 05:58 pm
ಅಡ್ಡ ಮತದಾನ; ಧರ್ಮಸ್ಥಳದಲ್ಲಿ ಶಾಸಕರು ಬಂದು ಆಣೆ ಮಾಡ...
22-06-26 08:18 pm
ವಿಧಾನ ಪರಿಷತ್ ಚುನಾವಣೆಗೂ ಮುನ್ನ ರಹಸ್ಯ ಸಭೆ ; ಬಿಜೆ...
22-06-26 03:44 pm
ಆಸ್ಪತ್ರೆ ಸಿಬ್ಬಂದಿ ಸ್ಪಂದಿಸದಿದ್ದರೆ ಚಿಂತೆ ಬೇಡ ;...
22-06-26 12:51 pm
24-06-26 01:51 pm
HK News Staffer
ಮಾಹಿತಿ ಹಕ್ಕು ನಿಯಮಗಳಿಗೆ ಮಹಾರಾಷ್ಟ್ರ ಸರ್ಕಾರ ತಿದ್...
23-06-26 10:47 pm
ಟಿಎಂಸಿಯಲ್ಲಿ ರಾಜಕೀಯ ಭೂಕಂಪ ; ಮಮತಾ ಬ್ಯಾನರ್ಜಿ ಅಧ...
23-06-26 12:21 pm
ಕತಾರ್ ಕೈಗಾರಿಕಾ ಪ್ರದೇಶದಲ್ಲಿ ಭಾರೀ ಸ್ಫೋಟ ; 54 ಜನ...
22-06-26 12:55 pm
ಮರಳು ಮಾಫಿಯಾ ಅಟ್ಟಹಾಸಕ್ಕೆ ಬಿಜೆಪಿ ನಾಯಕ ಸಜೀವ ದಹನ;...
18-06-26 07:17 pm
23-06-26 06:02 pm
HK News Staffer
ಬಸ್ ಚಲಿಸುತ್ತಿದ್ದಾಗಲೇ ಬಿಪಿ ಲೋ ಆಗಿ ಕುಸಿದ ಚಾಲಕ !...
23-06-26 03:18 pm
ಮುಸ್ಲಿಮರಿಗೆ ಸಚಿವ ಸ್ಥಾನ ; ಕಾಂಗ್ರೆಸಿಗೆ ಓಟ್ ಹಾಕದ...
23-06-26 11:49 am
ಉಡುಪಿ ಕೋರ್ಟ್ಗೆ ಇ-ಮೇಲ್ ಮೂಲಕ ಬಾಂಬ್ ಬೆದರಿಕೆ; ಕೆ...
22-06-26 05:23 pm
Dr Kakkillaya News: ಕೊರಾನಾ ಮಾಸ್ಕ್ ಹಾಕಿಲ್ಲವೆಂದ...
21-06-26 08:59 pm
24-06-26 09:28 pm
HK News Desk
30 ಲಕ್ಷ ಸಾಲ, ಲಿವ್-ಇನ್ ಸಂಬಂಧಕ್ಕೆ ಪೋಷಕರ ವಿರೋಧ ;...
24-06-26 08:53 pm
ರಾಮ ಮಂದಿರವನ್ನ ಸ್ಫೋಟಿಸಲು ಪ್ಲಾನ್ ಮಾಡಿದ್ವಿ ! ;...
24-06-26 07:53 pm
ಅಯೋಧ್ಯೆ ರಾಮ ಮಂದಿರ ಹೆಸರಲ್ಲಿ ದೇಣಿಗೆ ; 200 ಕೋಟಿ...
24-06-26 05:57 pm
Mangalore Minor student Suicide: ಅಪ್ರಾಪ್ತೆಗೆ...
24-06-26 02:25 pm