ಬ್ರೇಕಿಂಗ್ ನ್ಯೂಸ್
29-06-25 11:23 pm Mangalore Correspondent ಕ್ರೈಂ
ಮಂಗಳೂರು, ಜೂನ್ 29 : ಓಎಲ್ ಎಕ್ಸ್ ಏಪ್ ನಲ್ಲಿ ಕಾರು ತೋರಿಸಿ ಮಾರಾಟ ಮಾಡುವ ನೆಪದಲ್ಲಿ ಹಣ ಪಡೆದು ವಂಚನೆ ಎಸಗುತ್ತಿದ್ದ ಬನವಾಸಿ ಮೂಲದ ವ್ಯಕ್ತಿಯನ್ನು ಮಂಗಳೂರು ಸೆನ್ ಪೊಲೀಸರು ಅರೆಸ್ಟ್ ಮಾಡಿದ್ದಾರೆ. ಉತ್ತರ ಕನ್ನಡ ಜಿಲ್ಲೆಯ ಬನವಾಸಿ, ಸರ್ಕಾರಿ ಆಸ್ಪತ್ರೆ ಹತ್ತಿರದ ಸೊರಬಾ ರಸ್ತೆ ನಿವಾಸಿ ರವಿಚಂದ್ರ ಮಂಜುನಾಥ ರೇವಣಕರ(29) ಬಂಧಿತ.
ಓಎಲ್ಎಕ್ಸ್ ನಲ್ಲಿ ಕಾರು ಇದೆಯೆಂದು ತೋರಿಸಿ, ಮಾರಾಟ ಮಾಡುವ ನೆಪದಲ್ಲಿ ಮಂಗಳೂರಿನ ವ್ಯಕ್ತಿಯಿಂದ 2.50 ಲಕ್ಷ ಪಡೆದು ವಂಚನೆ ಎಸಗಿದ್ದ ಕುರಿತು ಮಂಗಳೂರಿನ ಸೆನ್ ಕ್ರೈಂ ಠಾಣೆಯಲ್ಲಿ ಜೂನ್ 28ರಂದು ಪ್ರಕರಣ ದಾಖಲಾಗಿತ್ತು.
ಪೊಲೀಸರು ಕಾರು ಮಾರಾಟದ ಹೆಸರಿನಲ್ಲಿ ವಂಚನೆ ಮಾಡಿದ ಆರೋಪಿ ಜಾಡು ಹಿಡಿಯಲು ಮುಂದಾಗಿದ್ದರು. ಈ ವೇಳೆ, ಆರೋಪಿ ಹೊಸಪೇಟೆಯಲ್ಲಿರುವ ಬಗ್ಗೆ ಮಾಹಿತಿ ತಿಳಿದು, ಅಲ್ಲಿಯೇ ಬೇರೆ ಕರ್ತವ್ಯದ್ದಲ್ಲಿದ್ದ ಸೆನ್ ಪೊಲೀಸರ ತಂಡವನ್ನು ಹೊಸಪೇಟೆಗೆ ಕಳುಹಿಸಿ ಆರೋಪಿತನನ್ನು ವಶಕ್ಕೆ ಪಡೆದಿದ್ದಾರೆ.
ತನಿಖೆಯ ವೇಳೆ ಆರೋಪಿ ಮಂಜುನಾಥ್ ವಿವಿಧ ಬ್ಯಾಂಕ್ ಗಳಲ್ಲಿ ಒಟ್ಟು 21 ಬ್ಯಾಂಕ್ ಖಾತೆಗಳನ್ನು ಹೊಂದಿರುವುದಲ್ಲದೆ, ಎಂಟು ಸಿಮ್ ಕಾರ್ಡ್ ಗಳನ್ನು ಬಳಕೆ ಮಾಡಿದ್ದು ಕಂಡು ಬಂದಿರುತ್ತದೆ. ಆತ ಬಳಸುತ್ತಿದ್ದ 8 ಮೊಬೈಲ್ ನಂಬ್ರಗಳ ಮೇಲೆ 80ಕ್ಕೂ ಹೆಚ್ಚಿನ ಸೈಬರ್ ವಂಚನೆ ದೂರುಗಳು ದಾಖಲಾಗಿರುವುದು ತಿಳಿದುಬಂದಿದೆ. ಆರೋಪಿತ ಕಳೆದ ಮೂರು ವರ್ಷಗಳಿಂದ OLX APP ನಲ್ಲಿ ಕಾರು ಮಾರಾಟದ ಹೆಸರಿನಲ್ಲಿ ಹಣ ಪಡೆದು ವಂಚನೆ ಎಸಗುತ್ತಿರುವುದು ಬೆಳಕಿಗೆ ಬಂದಿದೆ. ತಾನು ಉಪಯೋಗಿಸುತ್ತಿದ್ದ ಮೊಬೈಲ್ ನಂಬರನ್ನು ಕೆಲವು ದಿನಗಳ ಮಟ್ಟಿಗೆ ಬಳಸಿದ ಬಳಿಕ ಮಾರಾಟ ಮಾಡುತ್ತಿದ್ದ. ಆನಂತರ, ಹೊಸ ಸಿಮ್ ಗಳನ್ನು ಉಪಯೋಗಿಸುತ್ತಿದ್ದ. ಇದರಿಂದಾಗಿ ಕೇಸು ದಾಖಲಾದರೂ, ಸಿಕ್ಕಿಬೀಳದೆ ಚಾಣಾಕ್ಷತನ ಮೆರೆದಿದ್ದ.
ಸದ್ರಿ ಕಾರ್ಯಾಚರಣೆಯನ್ನು ಮಂಗಳೂರು ನಗರ ಸೆನ್ ಕ್ರೈಂ ಪೊಲೀಸ್ ಠಾಣಾ ಅಧಿಕಾರಿ ಮತ್ತು ಸಿಬ್ಬಂದಿ ಹಿರಿಯ ಅಧಿಕಾರಿಗಳ ಮಾರ್ಗದರ್ಶನದಲ್ಲಿ ನಡೆಸಿರುತ್ತಾರೆ.
In a major breakthrough, Mangaluru CEN Crime Police have arrested a notorious cyber fraudster who scammed people by pretending to sell cars on OLX, a popular online marketplace. The accused, identified as Ravichandra Manjunath Revannakar (29), hails from Banavasi in Uttara Kannada district, near the government hospital on Soraba Road.
21-09-25 01:28 pm
Bangalore Correspondent
ಕೆಮ್ಮಣ್ಣು ಗುಂಡಿ ಫಾಲ್ಸ್ ನಲ್ಲಿ ಸೆಲ್ಫಿ ತೆಗೆದುಕೊಳ...
20-09-25 10:57 pm
ಜಾತಿ ಗಣತಿಗೆ ಸರ್ವ ಸಿದ್ಧತೆ ; ಗಣತಿಗೆ 1.75 ಲಕ್ಷ ಶ...
20-09-25 10:26 pm
Hassan Instagram, Suicide: ಪಾರ್ಕ್ ನಲ್ಲಿ ಯುವತಿ...
20-09-25 02:59 pm
Cm Siddaramaiah, Caste Survey: ಜಾತಿ ಸಮೀಕ್ಷೆ ಮ...
19-09-25 10:04 pm
20-09-25 11:03 pm
HK News Desk
ಪಾಕಿಸ್ತಾನಕ್ಕೆ ಹೋದರೆ ನನ್ನ ಮನೆಗೆ ಹೋದ ಅನುಭವ ಆಗುತ...
20-09-25 11:42 am
ಸಿಂಗಾಪುರದಲ್ಲಿ ಸ್ಕ್ಯೂಬಾ ಡೈವಿಂಗ್ ಅವಘಡ: ಬಾಲಿವುಡ್...
19-09-25 05:45 pm
Yasin Malik: ಲಷ್ಕರ್ ಮುಖ್ಯಸ್ಥ ಹಫೀಜ್ ಸಯೀದ್ ಭೇ...
19-09-25 02:24 pm
ಕೇಂದ್ರೀಕೃತ ಸಾಫ್ಟ್ವೇರ್ ಬಳಸಿ ಬೂತ್ಗಳಿಂದಲೇ ಮತದಾ...
18-09-25 08:14 pm
20-09-25 10:39 pm
Mangalore Correspondent
Scdcc Bank, Mangalore: ಎಸ್ಸಿಡಿಸಿಸಿ ಬ್ಯಾಂಕ್ ನಿ...
20-09-25 09:37 pm
Indiana Hospital, Mangalore: ಇಂಡಿಯಾನ ಆಸ್ಪತ್ರೆ...
20-09-25 09:34 pm
Mangalore, Kumpala, Suicide: ಸೋಮೇಶ್ವರ ಕಡಲ ಕಿನ...
20-09-25 08:46 pm
ಜಾತಿ, ಶೈಕ್ಷಣಿಕ ಸಮೀಕ್ಷೆ ; 47 ಹಿಂದು ಉಪ ಜಾತಿಗಳಲ್...
20-09-25 08:29 pm
21-09-25 02:30 pm
Bangalore Correspondent
ತುಂಬೆ, ಉಪ್ಪಿನಂಗಡಿಯಲ್ಲಿ ಹಟ್ಟಿಯಿಂದ ದನ ಕದ್ದು ಮಾಂ...
20-09-25 05:11 pm
Kasaragod Sexual Abuse: ಅಪ್ರಾಪ್ತ ಬಾಲಕನಿಗೆ ಸಲಿ...
18-09-25 11:44 am
Vijayapura Bank Robbery: SBI ಬ್ಯಾಂಕ್ ದರೋಡೆ ;...
17-09-25 09:44 pm
Mangalore Crime, Cattle Theft: ಅಡ್ಯಾರ್ ನಲ್ಲಿ...
17-09-25 06:04 pm