ಬ್ರೇಕಿಂಗ್ ನ್ಯೂಸ್
01-07-25 02:22 pm Bangalore Correspondent ಕ್ರೈಂ
ಬೆಂಗಳೂರು, ಜುಲೈ 1 : ಹಣಕ್ಕಾಗಿ ರಾಜಕಾರಣಿಗಳು ಮತ್ತು ತನ್ನ ಸ್ನೇಹಿತರ ಜೊತೆಗೆ ಮಲಗುವಂತೆ ಪತಿ ಒತ್ತಾಯಿಸುವುದು ಹಾಗೂ ಅತ್ತೆ, ಮಾವ ವರದಕ್ಷಿಣೆಗಾಗಿ ನೀಡುತ್ತಿದ್ದ ಕಿರುಕುಳ ಸಹಿಸಲಾಗದೆ ಮಹಿಳೆಯೊಬ್ಬರು ಪತಿ, ಅತ್ತೆ, ಮಾವನ ವಿರುದ್ಧವೇ ಬನಶಂಕರಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.
ಪತಿ ಯೂನಿಸ್ ಪಾಷಾ ವಿಕೃತ ವರ್ತನೆಯಿಂದ ಬೇಸತ್ತು ದೂರು ದಾಖಲಿಸಿದ್ದಾರೆ. ರಾಜಕಾರಣಿಗಳು ಮತ್ತು ತನ್ನ ಸಹಚರರ ಜೊತೆ ಮಲಗುವಂತೆ ಒತ್ತಾಯಿಸುತ್ತಾನೆ. ಒಪ್ಪದೇ ಇದ್ದುದಕ್ಕೆ ಈಗಾಗಲೇ ಆರು ಬಾರಿ ತಲಾಖ್ ನೀಡಿದ್ದಾನೆ. ಜೊತೆಗೆ ಗರ್ಭಪಾತ ಮಾಡಿಸಿದ್ದಾನೆ. ಅಷ್ಟೇ ಅಲ್ಲದೆ, ತಲೆಗೆ ಗನ್ ಇಟ್ಟು ಬೆದರಿಕೆ ಹಾಕುತ್ತಾನೆ. ಪತ್ನಿ ಮನೆಯವರಿಗೆಲ್ಲ ಮಚ್ಚು, ಲಾಂಗ್ ತೋರಿಸಿ ಬೆದರಿಸುತ್ತಾನೆ ಎಂದು ದೂರಿನಲ್ಲಿ ಆರೋಪಿಸಿದ್ದಾರೆ.
ಸಂತ್ರಸ್ತ ಯುವತಿ 25-6-2021 ರಂದು ಆರೋಪಿ ಯೂನಸ್ ಪಾಷಾನನ್ನು ವಿವಾಹವಾಗಿದ್ದರು. 4 ತಿಂಗಳ ನಂತರ ಆರೋಪಿಗಳಾದ ಯೂನಸ್ ಪಾಷಾ, ಆತನ ತಂದೆ ಚಿಂದ್ ಪಾಷಾ, ತಾಯಿ ಪಹೀನ್ ತಾಜ್ ಸೇರಿಕೊಂಡು ಸಂತ್ರಸ್ತೆಗೆ ಹಿಂಸೆ ನೀಡಲು ಆರಂಭಿಸಿದ್ದಾರೆ. ಈ ಮಧ್ಯೆ, ಸಂತ್ರಸ್ತೆ ಗರ್ಭವತಿಯಾಗಿದ್ದು, ಯೂನಸ್ ಪಾಷಾ ಆಕೆಯ ಹೊಟ್ಟೆಯ ಮೇಲೆ ಒದ್ದು ಹಲ್ಲೆ ಮಾಡಿದ್ದ. 17-12-2021 ರಂದು ಸಂತ್ರಸ್ತೆಯನ್ನು ಹೆದರಿಸಿ ಮತ್ತು ಒತ್ತಾಯಪಡಿಸಿ ಗರ್ಭಪಾತ ಮಾಡಿಸಿದ್ದಾನೆ ಎಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ.
ಪತಿ ಯೂನಸ್ ಪಾಷಾಗೆ ರಾಜಕಾರಣಿಗಳು, ಸ್ಥಳೀಯ ರೌಡಿಗಳ ನಂಟು ಇದೆ. ಆರೋಪಿ ಸಂತ್ರಸ್ತೆಯನ್ನು ಆತನ ರಾಜಕಾರಣಿ ಸ್ನೇಹಿತನಿಗೆ ಮಾರಾಟ ಮಾಡಲು ಪ್ರಯತ್ನಿಸುತ್ತಿದ್ದಾನೆ ಎಂಬುದು ಕೆಲವು ತಿಂಗಳ ಹಿಂದೆ ತಿಳಿದುಬಂದಿದೆ. ಇದರಿಂದ ಭಯಗೊಂಡ ಸಂತ್ರಸ್ತೆ ಎರಡು ತಿಂಗಳಿಂದ ಗಂಡನ ಮನೆ ಬಿಟ್ಟು ಬಂದು ತಾಯಿ ಮನೆಯಲ್ಲಿ ವಾಸವಿದ್ದಾರೆ ಎಂದು ಎಫ್ಐಆರ್ನಲ್ಲಿ ಉಲ್ಲೇಖವಾಗಿದೆ
ಪತಿ ಮಾತ್ರವಲ್ಲ, ಅತ್ತೆ, ಮಾವ ಕೂಡ ವರದಕ್ಷಿಣೆಗಾಗಿ ನಿರಂತರ ಟಾರ್ಚರ್ ನೀಡುತ್ತಾರೆ. ಮಾವ ತನಗೆ ಮಸಾಜ್ ಮಾಡುವಂತೆ ಒತ್ತಾಯ ಮಾಡುತ್ತಾರೆ ಎಂದು ಪತಿ, ಅತ್ತೆ ಹಾಗೂ ಮಾವನ ಮೇಲೆ ಆರೋಪಗಳನ್ನು ಹೊರಿಸಿದ್ದಾರೆ. ದೂರು ಕೊಟ್ಟು ಹಿರಿಯ ಪೊಲೀಸ್ ಅಧಿಕಾರಿಗಳಲ್ಲಿ ತನಗೆ ನ್ಯಾಯ ಕೊಡಿಸಿ ಎಂದು ಮಹಿಳೆ ಕೇಳಿಕೊಂಡಿದ್ದಾರೆ. ಸದ್ಯ ಬನಶಂಕರಿ ಪೊಲೀಸ್ ಠಾಣೆಯಲ್ಲಿ ಆರೋಪಿ ಯೂನಿಸ್ ಮತ್ತು ಆತನ ತಂದೆ, ತಾಯಿ ವಿರುದ್ಧ ಎಫ್ಐಆರ್ ದಾಖಲಾಗಿದೆ
In a disturbing case of domestic abuse and exploitation, a woman from Bengaluru has filed a complaint at the Banashankari Police Station against her husband, mother-in-law, and father-in-law, accusing them of harassment, blackmail, and mental and physical torture.
09-11-25 06:53 pm
Bangalore Correspondent
ಇಪಿಎಫ್ ಸೊಸೈಟಿಯಲ್ಲಿ 70 ಕೋಟಿ ದುರ್ಬಳಕೆ ; ಅಕೌಂಟೆಂ...
09-11-25 03:47 pm
ISIS Terrorists, Umesh Reddy, Parappana Agrah...
08-11-25 10:29 pm
High Court Directs Kalaburagi: ಚಿತ್ತಾಪುರ ಆರೆಸ...
08-11-25 12:38 pm
ಯಾವ ಕ್ರಾಂತಿಯೂ ಆಗಲ್ಲ, ವಾಂತಿಯೂ ಆಗಲ್ಲ.. ನನಗೆ ಸಿದ...
07-11-25 09:59 pm
09-11-25 07:49 pm
HK News Desk
ಮುಸ್ಲಿಂ ವ್ಯಕ್ತಿಯ ಎರಡನೇ ಮದುವೆ ನೋಂದಣಿಗೆ ನಿರಾಕರಣ...
07-11-25 05:21 pm
ಮತಗಳವು ಆರೋಪ ; ರಾಹುಲ್ ವಿರುದ್ಧ ತಿರುಗಿಬಿದ್ದ ಮತದಾ...
07-11-25 11:33 am
'ನವೆಂಬರ್ ಕ್ರಾಂತಿ' ವದಂತಿ ತಳ್ಳಿಹಾಕಿದ ಡಿಸಿಎಂ ; ನ...
06-11-25 10:22 pm
ಐಸಿಸಿ ಮಹಿಳಾ ವಿಶ್ವಕಪ್ ಎತ್ತಿಹಿಡಿದ ಭಾರತದ ವನಿತೆಯರ...
03-11-25 01:13 pm
08-11-25 08:31 pm
Mangalore Correspondent
ಬೆಂಗಳೂರು- ಮಂಗಳೂರು ಹೈಸ್ಪೀಡ್ ಕಾರಿಡಾರ್ ; ಶಿರಾಡ...
07-11-25 10:58 pm
ಕುದ್ರೋಳಿ ಕ್ಷೇತ್ರ ಸ್ಥಾಪಿಸಿದ ಫೆ.21ರಂದು ನಾರಾಯಣ ಗ...
07-11-25 07:23 pm
ಗೋಡಂಬಿ ಉದ್ಯಮಕ್ಕೆ ನೂರು ವರ್ಷ ; ನ.14-16ರಂದು ದೇಶದ...
07-11-25 05:25 pm
ನೆಲ್ಯಾಡಿಯಲ್ಲಿ ಹೊಟೇಲ್ ಉದ್ಯಮ ನಡೆಸುತ್ತಿದ್ದ ಅಭಿಷೇ...
07-11-25 02:18 pm
09-11-25 10:27 pm
Mangalore Correspondent
ಬಹುಕೋಟಿ ವಂಚಕ ರೋಷನ್ ಸಲ್ದಾನಗೆ ಸೇರಿದ 2.85 ಕೋಟಿ ಮ...
09-11-25 03:50 pm
ಕೋಮುದ್ವೇಷದ ಕೊಲೆ ; ಪ್ರತೀಕಾರಕ್ಕೆ ಪ್ರಚೋದಿಸಿ ಇನ್...
08-11-25 11:15 pm
Digital Arrest Scam, Mangalore Online Fraud:...
08-11-25 04:08 pm
ಆರೋಪಿಗೆ ಜಾಮೀನು ನೀಡಲು ಹೋಗಿ ತಾನೇ ತಗ್ಲಾಕ್ಕೊಂಡ !...
07-11-25 11:20 pm