ಬ್ರೇಕಿಂಗ್ ನ್ಯೂಸ್
01-07-25 02:22 pm Bangalore Correspondent ಕ್ರೈಂ
ಬೆಂಗಳೂರು, ಜುಲೈ 1 : ಹಣಕ್ಕಾಗಿ ರಾಜಕಾರಣಿಗಳು ಮತ್ತು ತನ್ನ ಸ್ನೇಹಿತರ ಜೊತೆಗೆ ಮಲಗುವಂತೆ ಪತಿ ಒತ್ತಾಯಿಸುವುದು ಹಾಗೂ ಅತ್ತೆ, ಮಾವ ವರದಕ್ಷಿಣೆಗಾಗಿ ನೀಡುತ್ತಿದ್ದ ಕಿರುಕುಳ ಸಹಿಸಲಾಗದೆ ಮಹಿಳೆಯೊಬ್ಬರು ಪತಿ, ಅತ್ತೆ, ಮಾವನ ವಿರುದ್ಧವೇ ಬನಶಂಕರಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.
ಪತಿ ಯೂನಿಸ್ ಪಾಷಾ ವಿಕೃತ ವರ್ತನೆಯಿಂದ ಬೇಸತ್ತು ದೂರು ದಾಖಲಿಸಿದ್ದಾರೆ. ರಾಜಕಾರಣಿಗಳು ಮತ್ತು ತನ್ನ ಸಹಚರರ ಜೊತೆ ಮಲಗುವಂತೆ ಒತ್ತಾಯಿಸುತ್ತಾನೆ. ಒಪ್ಪದೇ ಇದ್ದುದಕ್ಕೆ ಈಗಾಗಲೇ ಆರು ಬಾರಿ ತಲಾಖ್ ನೀಡಿದ್ದಾನೆ. ಜೊತೆಗೆ ಗರ್ಭಪಾತ ಮಾಡಿಸಿದ್ದಾನೆ. ಅಷ್ಟೇ ಅಲ್ಲದೆ, ತಲೆಗೆ ಗನ್ ಇಟ್ಟು ಬೆದರಿಕೆ ಹಾಕುತ್ತಾನೆ. ಪತ್ನಿ ಮನೆಯವರಿಗೆಲ್ಲ ಮಚ್ಚು, ಲಾಂಗ್ ತೋರಿಸಿ ಬೆದರಿಸುತ್ತಾನೆ ಎಂದು ದೂರಿನಲ್ಲಿ ಆರೋಪಿಸಿದ್ದಾರೆ.
ಸಂತ್ರಸ್ತ ಯುವತಿ 25-6-2021 ರಂದು ಆರೋಪಿ ಯೂನಸ್ ಪಾಷಾನನ್ನು ವಿವಾಹವಾಗಿದ್ದರು. 4 ತಿಂಗಳ ನಂತರ ಆರೋಪಿಗಳಾದ ಯೂನಸ್ ಪಾಷಾ, ಆತನ ತಂದೆ ಚಿಂದ್ ಪಾಷಾ, ತಾಯಿ ಪಹೀನ್ ತಾಜ್ ಸೇರಿಕೊಂಡು ಸಂತ್ರಸ್ತೆಗೆ ಹಿಂಸೆ ನೀಡಲು ಆರಂಭಿಸಿದ್ದಾರೆ. ಈ ಮಧ್ಯೆ, ಸಂತ್ರಸ್ತೆ ಗರ್ಭವತಿಯಾಗಿದ್ದು, ಯೂನಸ್ ಪಾಷಾ ಆಕೆಯ ಹೊಟ್ಟೆಯ ಮೇಲೆ ಒದ್ದು ಹಲ್ಲೆ ಮಾಡಿದ್ದ. 17-12-2021 ರಂದು ಸಂತ್ರಸ್ತೆಯನ್ನು ಹೆದರಿಸಿ ಮತ್ತು ಒತ್ತಾಯಪಡಿಸಿ ಗರ್ಭಪಾತ ಮಾಡಿಸಿದ್ದಾನೆ ಎಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ.
ಪತಿ ಯೂನಸ್ ಪಾಷಾಗೆ ರಾಜಕಾರಣಿಗಳು, ಸ್ಥಳೀಯ ರೌಡಿಗಳ ನಂಟು ಇದೆ. ಆರೋಪಿ ಸಂತ್ರಸ್ತೆಯನ್ನು ಆತನ ರಾಜಕಾರಣಿ ಸ್ನೇಹಿತನಿಗೆ ಮಾರಾಟ ಮಾಡಲು ಪ್ರಯತ್ನಿಸುತ್ತಿದ್ದಾನೆ ಎಂಬುದು ಕೆಲವು ತಿಂಗಳ ಹಿಂದೆ ತಿಳಿದುಬಂದಿದೆ. ಇದರಿಂದ ಭಯಗೊಂಡ ಸಂತ್ರಸ್ತೆ ಎರಡು ತಿಂಗಳಿಂದ ಗಂಡನ ಮನೆ ಬಿಟ್ಟು ಬಂದು ತಾಯಿ ಮನೆಯಲ್ಲಿ ವಾಸವಿದ್ದಾರೆ ಎಂದು ಎಫ್ಐಆರ್ನಲ್ಲಿ ಉಲ್ಲೇಖವಾಗಿದೆ
ಪತಿ ಮಾತ್ರವಲ್ಲ, ಅತ್ತೆ, ಮಾವ ಕೂಡ ವರದಕ್ಷಿಣೆಗಾಗಿ ನಿರಂತರ ಟಾರ್ಚರ್ ನೀಡುತ್ತಾರೆ. ಮಾವ ತನಗೆ ಮಸಾಜ್ ಮಾಡುವಂತೆ ಒತ್ತಾಯ ಮಾಡುತ್ತಾರೆ ಎಂದು ಪತಿ, ಅತ್ತೆ ಹಾಗೂ ಮಾವನ ಮೇಲೆ ಆರೋಪಗಳನ್ನು ಹೊರಿಸಿದ್ದಾರೆ. ದೂರು ಕೊಟ್ಟು ಹಿರಿಯ ಪೊಲೀಸ್ ಅಧಿಕಾರಿಗಳಲ್ಲಿ ತನಗೆ ನ್ಯಾಯ ಕೊಡಿಸಿ ಎಂದು ಮಹಿಳೆ ಕೇಳಿಕೊಂಡಿದ್ದಾರೆ. ಸದ್ಯ ಬನಶಂಕರಿ ಪೊಲೀಸ್ ಠಾಣೆಯಲ್ಲಿ ಆರೋಪಿ ಯೂನಿಸ್ ಮತ್ತು ಆತನ ತಂದೆ, ತಾಯಿ ವಿರುದ್ಧ ಎಫ್ಐಆರ್ ದಾಖಲಾಗಿದೆ
In a disturbing case of domestic abuse and exploitation, a woman from Bengaluru has filed a complaint at the Banashankari Police Station against her husband, mother-in-law, and father-in-law, accusing them of harassment, blackmail, and mental and physical torture.
05-04-26 10:45 pm
HK News Staffer
ತಡಿಯಂಡಮೋಳ್ ಬೆಟ್ಟಕ್ಕೆ ಚಾರಣ ತೆರಳಿದ್ದ ಶರಣ್ಯ ಮೂರು...
05-04-26 07:24 pm
ಟೋಲ್ ಬೂತ್ಗಳಲ್ಲಿ ಇನ್ಮುಂದೆ ಸಂಚಾರ ಸರಾಗ ; ದೇಶಾದ್...
04-04-26 07:33 pm
ಪಶ್ಚಿಮ ಏಷ್ಯಾ ಸಂಘರ್ಷ; ಭಾರತದ ರಾಜತಾಂತ್ರಿಕ ನಡೆಯನ್...
03-04-26 04:14 pm
ಬಾಗಲಕೋಟ, ದಾವಣಗೆರೆ ಉಪ ಚುನಾವಣೆ; ಗೆಲುವು ಕಷ್ಟ- ಗು...
03-04-26 03:48 pm
05-04-26 12:37 pm
HK News Staffer
ಇರಾನ್ ಗೆ ಅಮೆರಿಕ ಮತ್ತೆ 48 ಗಂಟೆಗಳ ಗಡುವು ; ಒಂದು...
04-04-26 10:53 pm
ಅಣ್ಣಾಮಲೈ ಹೊರಗಿಟ್ಟು ಬಿಜೆಪಿ ಪಟ್ಟಿ ಬಿಡುಗಡೆ; ತಮಿಳ...
03-04-26 07:52 pm
50 ವರ್ಷಗಳ ಬಳಿಕ ಮಾನವ ಸಹಿತ ಚಂದ್ರಯಾನ; ಅಮೆರಿಕ, ಕೆ...
03-04-26 07:35 am
ಚಿಂತಿಸಬೇಡಿ, ನಿಮ್ಮ ಹಡಗು ಸುರಕ್ಷಿತ; ಹಾರ್ಮುಜ್ ಜಲಸ...
02-04-26 10:24 pm
03-04-26 11:43 am
HK News Staffer
ಧರ್ಮಸ್ಥಳ ಎಐ ವಿಡಿಯೋ ಪ್ರಕರಣ; ಯೂಟ್ಯೂಬರ್ ಎಂ.ಡಿ....
02-04-26 02:43 pm
ದೂರು ನೀಡಲು ಬಂದ ಮಹಿಳೆಯೊಂದಿಗೆ ಸಂಬಂಧ ಬೆಳೆಸುವುದು...
01-04-26 09:04 pm
ಮುಸ್ಲಿಂ ಮದುವೆಯಲ್ಲಿ ಕೊರಗಜ್ಜ ದೈವದ ಅನುಕರಣೆ ; ಮದು...
31-03-26 10:06 pm
Moodbidri Accident: ಮೂಡುಬಿದ್ರೆ ; ರಸ್ತೆ ಬದಿ ನಿ...
31-03-26 09:02 pm
05-04-26 11:03 am
HK News Staffer
ನಾಸಿಕ್ ಭೀಕರ ದುರಂತ; ನಿಯಂತ್ರಣ ತಪ್ಪಿ ಬಾವಿಗೆ ಬಿದ್...
04-04-26 05:42 pm
ಅತ್ತೆ, ಮಾವನ ಕಿರುಕುಳಕ್ಕೆ ಬೇಸತ್ತು ಗರ್ಭಿಣಿ ಮಹಿಳೆ...
04-04-26 05:39 pm
ಇನ್ಫೋಸಿಸ್ ಸಿಎಸ್ಆರ್ ಫಂಡ್ ತೆಗೆಸಿಕೊಡುವುದಾಗಿ ವಂಚನ...
04-04-26 04:36 pm
ಮಂಗಳೂರಿನಲ್ಲಿ ಎಪ್ರಿಲ್ 19ರಂದು ಸೀ ಬ್ರೀಜ್ ಮ್ಯಾರಥಾ...
04-04-26 11:32 am