ಬ್ರೇಕಿಂಗ್ ನ್ಯೂಸ್
01-07-25 04:36 pm Mangalore Correspondent ಕ್ರೈಂ
ಮಂಗಳೂರು, ಜುಲೈ 1 : 2020ರಲ್ಲಿ ಮುಲ್ಕಿಯಲ್ಲಿ ನಡೆದ ಕೊಲೆ ಪ್ರಕರಣಕ್ಕೆ ಸಂಬಂಧಿಸಿ ಹೈಕೋರ್ಟ್ ನಿಂದ ಜಾಮೀನು ರದ್ದಾಗಿದ್ದರೂ ನಕಲಿ ಪಾಸ್ ಪೋರ್ಟ್ ಬಳಸಿ ವಿದೇಶದಲ್ಲಿ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಮಂಗಳೂರು ಪೊಲೀಸರು ಅರೆಸ್ಟ್ ಮಾಡಿದ್ದಾರೆ. ಬಂಧಿತನನ್ನು ಮೊಹಮ್ಮದ್ ಮುಸ್ತಫಾ @ ಮುಸ್ತಾ ಎಂದು ಗುರುತಿಸಲಾಗಿದೆ.
ಆರೋಪಿ ಮೊಹಮ್ಮದ್ ಮುಸ್ತಫಾ 2020ರ ಜೂನ್ 5 ರಂದು ಮುಲ್ಕಿಯ ವಿಜಯ ಸನ್ನಿದಿ ಹೆದ್ದಾರಿ ಬಳಿ ಹಾಡಹಗಲೇ ರಸ್ತೆಯಲ್ಲಿ ಅಬ್ದುಲ್ ಲತೀಫ್ ಎಂಬವನನ್ನು ಇತರ ಆರೋಪಿಗಳೊಂದಿಗೆ ಸೇರಿ ಕೊಲೆ ಮಾಡಿದ್ದ. ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಗಳಾದ ದಾವೂದ್ ಹಕೀಂ, ಮೊಹಮ್ಮದ್ ಮುಸ್ತಾಫ ಸೇರಿ ಒಟ್ಟು 10 ಮಂದಿ ವಿರುದ್ಧ ದೋಷಾರೋಪ ಪಟ್ಟಿಯನ್ನು ನ್ಯಾಯಾಲಯಕ್ಕೆ ಸಲ್ಲಿಸಲಾಗಿತ್ತು.
ಆರೋಪಿಗೆ 2020ರ ಅಕ್ಚೋಬರ್ 10 ರಂದು ಹೈಕೋರ್ಟ್ ಜಾಮೀನು ನೀಡಿತ್ತು. 2022ರ ಏಪ್ರಿಲ್ 22ರಂದು ಕೋರ್ಟ್ ಆತನ ಜಾಮೀನು ರದ್ದುಪಡಿಸಿತ್ತು. ಆದರೆ ಆರೋಪಿ ಮುಸ್ತಫಾ ನಕಲಿ ಪಾಸ್ ಪೋರ್ಟ್ ಬಳಸಿ ವಿದೇಶಕ್ಕೆ ಪರಾರಿಯಾಗಿದ್ದು ಮೂರು ವರ್ಷ ಒಮಾನ್ ದೇಶದಲ್ಲಿ ಉಳಿದುಕೊಂಡಿದ್ದ. ಆರೋಪಿ ಈಗ ಅಕ್ರಮವಾಗಿ ಒಮನ್ ದೇಶದಿಂದ ನೇಪಾಳದ ಮೂಲಕ ಭಾರತಕ್ಕೆ ಪ್ರವೇಶಿಸಿದ್ದು ಅಲ್ಲಿಂದ ಮುಲ್ಕಿಗೆ ಬಂದಿದ್ದ.
ಮೂರು ವರ್ಷಗಳಿಂದ ನ್ಯಾಯಾಲಯಕ್ಕೆ ವಿಚಾರಣೆಗೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಆರೋಪಿ ಕುರಿತು ಸುಳಿವು ಪಡೆದ ಪೊಲೀಸರ ವಿಶೇಷ ತಂಡ ಮೂಲ್ಕಿಯ ಪಕ್ಷಿಕೆರೆ ಬಳಿ ಸೋಮವಾರ ಆತನನ್ನು ಬಂಧಿಸಿದೆ. ಆತನಿಗೆ ನ್ಯಾಯಾಂಗ ಬಂಧನ ವಿಧಿಸಲಾಗಿದೆ ಎಂದು ಪೊಲೀಸ್ ಕಮಿಷನರ್ ಸುಧೀರ್ ಕುಮಾರ್ ರೆಡ್ಡಿ ತಿಳಿಸಿದ್ದಾರೆ. ಆರೋಪಿ ನಕಲಿ ಪಾಸ್ ಪೋರ್ಟ್ ಹೊಂದಿರುವ ಬಗ್ಗೆ ಬೆಂಗಳೂರಿನ ಬಸವನಗುಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಆತನ ವಿರುದ್ಧ ಮೂಲ್ಕಿ ಠಾಣೆಯಲ್ಲಿ 4 ಮತ್ತು ಇತರೆ ಜಿಲ್ಲೆಯಲ್ಲಿ ಒಟ್ಟು 5 ಪ್ರಕರಣಗಳು ದಾಖಲಾಗಿವೆ. ಚಿಕ್ಕಮಗಳೂರು, ಉಡುಪಿ ಜಿಲ್ಲೆಯ ಠಾಣೆಗಳಲ್ಲಿ ಮುಸ್ತಫ ವಿರುದ್ಧ ಎರಡು ಪ್ರಕರಣಗಳಲ್ಲಿ ವಾರಂಟ್ ಜಾರಿಯಾಗಿತ್ತು.
An accused in the high-profile Mulki Abdul Latif murder case, who had been absconding abroad for nearly three years using a fake passport, has been arrested by Mangaluru Police. The arrested individual has been identified as Mohammed Mustafa, also known as Musta.
21-09-25 01:28 pm
Bangalore Correspondent
ಕೆಮ್ಮಣ್ಣು ಗುಂಡಿ ಫಾಲ್ಸ್ ನಲ್ಲಿ ಸೆಲ್ಫಿ ತೆಗೆದುಕೊಳ...
20-09-25 10:57 pm
ಜಾತಿ ಗಣತಿಗೆ ಸರ್ವ ಸಿದ್ಧತೆ ; ಗಣತಿಗೆ 1.75 ಲಕ್ಷ ಶ...
20-09-25 10:26 pm
Hassan Instagram, Suicide: ಪಾರ್ಕ್ ನಲ್ಲಿ ಯುವತಿ...
20-09-25 02:59 pm
Cm Siddaramaiah, Caste Survey: ಜಾತಿ ಸಮೀಕ್ಷೆ ಮ...
19-09-25 10:04 pm
20-09-25 11:03 pm
HK News Desk
ಪಾಕಿಸ್ತಾನಕ್ಕೆ ಹೋದರೆ ನನ್ನ ಮನೆಗೆ ಹೋದ ಅನುಭವ ಆಗುತ...
20-09-25 11:42 am
ಸಿಂಗಾಪುರದಲ್ಲಿ ಸ್ಕ್ಯೂಬಾ ಡೈವಿಂಗ್ ಅವಘಡ: ಬಾಲಿವುಡ್...
19-09-25 05:45 pm
Yasin Malik: ಲಷ್ಕರ್ ಮುಖ್ಯಸ್ಥ ಹಫೀಜ್ ಸಯೀದ್ ಭೇ...
19-09-25 02:24 pm
ಕೇಂದ್ರೀಕೃತ ಸಾಫ್ಟ್ವೇರ್ ಬಳಸಿ ಬೂತ್ಗಳಿಂದಲೇ ಮತದಾ...
18-09-25 08:14 pm
20-09-25 10:39 pm
Mangalore Correspondent
Scdcc Bank, Mangalore: ಎಸ್ಸಿಡಿಸಿಸಿ ಬ್ಯಾಂಕ್ ನಿ...
20-09-25 09:37 pm
Indiana Hospital, Mangalore: ಇಂಡಿಯಾನ ಆಸ್ಪತ್ರೆ...
20-09-25 09:34 pm
Mangalore, Kumpala, Suicide: ಸೋಮೇಶ್ವರ ಕಡಲ ಕಿನ...
20-09-25 08:46 pm
ಜಾತಿ, ಶೈಕ್ಷಣಿಕ ಸಮೀಕ್ಷೆ ; 47 ಹಿಂದು ಉಪ ಜಾತಿಗಳಲ್...
20-09-25 08:29 pm
21-09-25 02:30 pm
Bangalore Correspondent
ತುಂಬೆ, ಉಪ್ಪಿನಂಗಡಿಯಲ್ಲಿ ಹಟ್ಟಿಯಿಂದ ದನ ಕದ್ದು ಮಾಂ...
20-09-25 05:11 pm
Kasaragod Sexual Abuse: ಅಪ್ರಾಪ್ತ ಬಾಲಕನಿಗೆ ಸಲಿ...
18-09-25 11:44 am
Vijayapura Bank Robbery: SBI ಬ್ಯಾಂಕ್ ದರೋಡೆ ;...
17-09-25 09:44 pm
Mangalore Crime, Cattle Theft: ಅಡ್ಯಾರ್ ನಲ್ಲಿ...
17-09-25 06:04 pm