ಬ್ರೇಕಿಂಗ್ ನ್ಯೂಸ್
03-07-25 07:09 pm HK News Desk ಕ್ರೈಂ
ಜೈಪುರ, ಜು.03: ಅದ್ಧೂರಿಯಾಗಿ ನಡೆಯುತ್ತಿದ್ದ ಮದುವೆ ಸಮಾರಂಭಕ್ಕೆ ಇ.ಡಿ ಅಧಿಕಾರಿಗಳು ದಾಳಿ ನಡೆಸಿದ ಪರಿಣಾಮ ಮಂಟಪದಿಂದಲೇ ವರ ಓಡಿಹೋಗಿರುವ ಘಟನೆ ರಾಜಸ್ಥಾನದ ಜೈಪುರದಲ್ಲಿ ನಡೆದಿದೆ.
ರಾಜಸ್ಥಾನದ ಪ್ರಸಿದ್ಧ ಫೇರ್ಮಾಂಟ್ ಹೋಟೆಲ್ನಲ್ಲಿ ಅದ್ಧೂರಿ ವಿವಾಹ ನಡೆಯುತ್ತಿತ್ತು. ಇದು ಸೌರಭ್ ಅಹುಜಾ ಎಂಬವನ ಅದ್ದೂರಿ ವಿವಾಹವಾಗಿತ್ತು. ಈ ಸೌರಭ್ ಅಹುಜಾ ಮಹಾದೇವ್ ಬೆಟ್ಟಿಂಗ್ ಆ್ಯಪ್ ಹಗರಣದ ಮುಖ್ಯ ಆರೋಪಿಯಾಗಿದ್ದಾನೆ.
15,000 ಕೋಟಿ ರೂಪಾಯಿಗಳ ಮಹಾದೇವ್ ಬೆಟ್ಟಿಂಗ್ ಆ್ಯಪ್ ಹಗರಣಕ್ಕೆ ಸಂಬಂಧಿಸಿದಂತೆ ಈ ದಾಳಿ ನಡೆಸಲಾಗಿತ್ತು. ಸೌರಭ್ ಅಹುಜಾ ಪ್ರಕರಣದಲ್ಲಿ ಮೋಸ್ಟ್ ವಾಂಟೆಡ್ ಆಗಿದ್ದಾನೆ.
ಮದುವೆ ನಡೆಯುತ್ತಿದ್ದ ಬಗ್ಗೆ ಮಾಹಿತಿ ಪಡೆದಿದ್ದ ಇ.ಡಿ ಅಧಿಕಾರಿಗಳು ಮಂಟಪಕ್ಕೆ ದಾಳಿ ಮಾಡಿದ್ದಾರೆ. ಆದರೆ 'ಸಪ್ತಪದಿ' ತುಳಿಯುವ ಮುನ್ನ ಇ.ಡಿ ತನ್ನ ಬಂಧನಕ್ಕೆ ಬರುತ್ತಿರುವ ಬಗ್ಗೆ ಅರಿತ ಸೌರಭ್ ಮಂಟಪದಿಂದಲೇ ಪರಾರಿ ಆಗಿದ್ದಾನೆ.
ಮಂಟಪಕ್ಕೆ ಸೌರಭ್ ಬಂಧನಕ್ಕೆ ಬಂದಿದ್ದ ಅಧಿಕಾರಿಗಳು, ಹಗರಣಕ್ಕೆ ಸಂಬಂಧಿಸಿ ಪ್ರಣವೇಂದ್ರ ಮತ್ತು ಇತರ ಇಬ್ಬರನ್ನು ಬಂಧಿಸಿದ್ದಾರೆ. ಇದಲ್ಲದೆ ಸೌರಭ್ ಎಲ್ಲಿದ್ದಾನೆ ಎಂಬುದರ ಕುರಿತು ಮಾಹಿತಿ ಸಂಗ್ರಹಿಸಲು ವಧು, ಅವರ ಕುಟುಂಬ ಸದಸ್ಯರು ಮತ್ತು ಇತರ ನಿಕಟ ಸಂಬಂಧಿಗಳನ್ನು ಪ್ರಶ್ನಿಸಿದ್ದಾರೆ.
ಜೈಪುರಕ್ಕೆ ಬಂದಿದ್ದ ಇ.ಡಿ:
ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಇ.ಡಿ ಸ್ವಲ್ಪ ಸಮಯದಿಂದ ಸೌರಬ್ನನ್ನು ಟ್ರ್ಯಾಕ್ ಮಾಡುತ್ತಿತ್ತು. ಮದುವೆ ವೇಳೆಯೇ ಅವನನ್ನು ಬಂಧಿಸುವ ನಿಟ್ಟಿನಲ್ಲಿ ರಾಯ್ಪುರದಿಂದ ಜೈಪುರಕ್ಕೆ ಒಂದು ತಂಡವನ್ನು ಕಳುಹಿಸಲಾಗಿತ್ತು ಎಂದು ವರದಿ ತಿಳಿಸಿದೆ.
ಮಹಾದೇವ್ ಬೆಟ್ಟಿಂಗ್ ಆ್ಯಪ್ ದೇಶದೆಲ್ಲೆಡೆ ಸಂಚಲನ ಸೃಷ್ಟಿಸಿದೆ. ಈ ಹಗರಣದಲ್ಲಿ ಖ್ಯಾತನಾಮರು ಸೇರಿ ಹಲವರ ಹೆಸರು ಕೂಡ ಹರಿದಾಡಿದೆ. ಬಾಲಿವುಡ್ನಲ್ಲೂ ಈ ಸಂಬಂಧ ಕೆಲವರನ್ನು ವಿಚಾರಣೆಗೆ ಒಳಪಡಿಸಲಾಗಿದೆ.
ಈ ಹಿಂದೆ ನಟ ಮತ್ತು ಫಿಟೈಸ್ ಪ್ರಭಾವಿ ಸಾಹಿಲ್ ಖಾನ್ ನನ್ನು ಈ ಹಗರಣ ಸಂಬಂಧ ಬಂಧಿಸಲಾಗಿತ್ತು. ಸದ್ಯ ಜೈಪುರದಲ್ಲಿ ಬಂಧಿತರಾಗಿರುವ ಅರೋಪಿಗಳನ್ನು ವಿಚಾರಣೆ ನಡೆಸಿ, ಸೌರಭ್ ಕುರಿತು ಮಾಹಿತಿ ಕಲೆಹಾಕಲಾಗುತ್ತಿದೆ ಎಂದು ವರದಿ ತಿಳಿಸಿದೆ.
The Enforcement Directorate (ED) team from Raipur, Chhattisgarh, conducted a raid at private hotel located in the Kukas area of Jaipur. The action was taken in connection with the ongoing investigation into the Mahadev Betting App case. According to ED sources, the agency had received a confidential tip-off that several individuals associated with the betting app were staying at the hotel to attend a wedding.
21-09-25 01:28 pm
Bangalore Correspondent
ಕೆಮ್ಮಣ್ಣು ಗುಂಡಿ ಫಾಲ್ಸ್ ನಲ್ಲಿ ಸೆಲ್ಫಿ ತೆಗೆದುಕೊಳ...
20-09-25 10:57 pm
ಜಾತಿ ಗಣತಿಗೆ ಸರ್ವ ಸಿದ್ಧತೆ ; ಗಣತಿಗೆ 1.75 ಲಕ್ಷ ಶ...
20-09-25 10:26 pm
Hassan Instagram, Suicide: ಪಾರ್ಕ್ ನಲ್ಲಿ ಯುವತಿ...
20-09-25 02:59 pm
Cm Siddaramaiah, Caste Survey: ಜಾತಿ ಸಮೀಕ್ಷೆ ಮ...
19-09-25 10:04 pm
20-09-25 11:03 pm
HK News Desk
ಪಾಕಿಸ್ತಾನಕ್ಕೆ ಹೋದರೆ ನನ್ನ ಮನೆಗೆ ಹೋದ ಅನುಭವ ಆಗುತ...
20-09-25 11:42 am
ಸಿಂಗಾಪುರದಲ್ಲಿ ಸ್ಕ್ಯೂಬಾ ಡೈವಿಂಗ್ ಅವಘಡ: ಬಾಲಿವುಡ್...
19-09-25 05:45 pm
Yasin Malik: ಲಷ್ಕರ್ ಮುಖ್ಯಸ್ಥ ಹಫೀಜ್ ಸಯೀದ್ ಭೇ...
19-09-25 02:24 pm
ಕೇಂದ್ರೀಕೃತ ಸಾಫ್ಟ್ವೇರ್ ಬಳಸಿ ಬೂತ್ಗಳಿಂದಲೇ ಮತದಾ...
18-09-25 08:14 pm
20-09-25 10:39 pm
Mangalore Correspondent
Scdcc Bank, Mangalore: ಎಸ್ಸಿಡಿಸಿಸಿ ಬ್ಯಾಂಕ್ ನಿ...
20-09-25 09:37 pm
Indiana Hospital, Mangalore: ಇಂಡಿಯಾನ ಆಸ್ಪತ್ರೆ...
20-09-25 09:34 pm
Mangalore, Kumpala, Suicide: ಸೋಮೇಶ್ವರ ಕಡಲ ಕಿನ...
20-09-25 08:46 pm
ಜಾತಿ, ಶೈಕ್ಷಣಿಕ ಸಮೀಕ್ಷೆ ; 47 ಹಿಂದು ಉಪ ಜಾತಿಗಳಲ್...
20-09-25 08:29 pm
21-09-25 02:30 pm
Bangalore Correspondent
ತುಂಬೆ, ಉಪ್ಪಿನಂಗಡಿಯಲ್ಲಿ ಹಟ್ಟಿಯಿಂದ ದನ ಕದ್ದು ಮಾಂ...
20-09-25 05:11 pm
Kasaragod Sexual Abuse: ಅಪ್ರಾಪ್ತ ಬಾಲಕನಿಗೆ ಸಲಿ...
18-09-25 11:44 am
Vijayapura Bank Robbery: SBI ಬ್ಯಾಂಕ್ ದರೋಡೆ ;...
17-09-25 09:44 pm
Mangalore Crime, Cattle Theft: ಅಡ್ಯಾರ್ ನಲ್ಲಿ...
17-09-25 06:04 pm