ಬ್ರೇಕಿಂಗ್ ನ್ಯೂಸ್
03-07-25 11:03 pm Mangalore Correspondent ಕ್ರೈಂ
ಪುತ್ತೂರು, ಜುಲೈ 3 : ಬಿಜೆಪಿ ಮುಖಂಡ ಜಗನ್ನಿವಾಸ ರಾವ್ ಪುತ್ರನಿಂದ ಗರ್ಭಿಣಿಯಾಗಿ ಮಗುವಿಗೆ ಜನ್ಮವಿತ್ತ ಸಂತ್ರಸ್ತ ಯುವತಿಯ ಜೊತೆಗೆ ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ನಾಗಲಕ್ಷ್ಮಿ ಚೌಧರಿ ಫೋನಲ್ಲಿ ಮಾತನಾಡಿದ್ದು ನ್ಯಾಯ ದೊರಕಿಸಲು ಧ್ವನಿ ಎತ್ತುವುದಾಗಿ ಹೇಳಿದ್ದಾರೆ. ಹಿಂದುಳಿದ ವರ್ಗಗಳ ಆಯೋಗದ ಸದಸ್ಯೆ, ಕಾಂಗ್ರೆಸ್ ನಾಯಕಿ ಪ್ರತಿಭಾ ಕುಳಾಯಿ ಸಂತ್ರಸ್ತ ಯುವತಿಯ ಮನೆಗೆ ಭೇಟಿ ನೀಡಿದ್ದು ಇದೇ ವೇಳೆ ಮಹಿಳಾ ಆಯೋಗದ ಅಧ್ಯಕ್ಷರಿಗೆ ಫೋನಾಯಿಸಿ ದೂರು ಹೇಳಿದ್ದಾರೆ.

ಇದೇ ವೇಳೆ, ಮಾಧ್ಯಮಕ್ಕೆ ಪ್ರತಿಕ್ರಿಯಿಸಿದ ಪ್ರತಿಭಾ ಕುಳಾಯಿ, ಎಷ್ಟೇ ಖರ್ಚಾಗಲಿ ಸಂತ್ರಸ್ತೆಯನ್ನು ಆಕೆಯ ಗಂಡನ ಮನೆಗೆ ಸೇರಿಸುವ ಜವಾಬ್ದಾರಿ ನನ್ನದು. ಇಲ್ಲೀವರೆಗೆ ಸಂತ್ರಸ್ತೆಗೆ ಒಬ್ಬರು ತಾಯಿ ಇದ್ದರು. ಇನ್ಮೇಲೆ ನಾನು ಕೂಡ ತಾಯಿ. ಸಂತ್ರಸ್ತೆ ಕುಟುಂಬದ ಖರ್ಚು ವೆಚ್ಚವನ್ನೆಲ್ಲ ನಾನು ಭರಿಸುತ್ತೇನೆ ಎಂದಿದ್ದಾರೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಜೊತೆ ಮಾತುಕತೆ ಮಾಡುತ್ತೇನೆ. ಸಂತ್ರಸ್ತೆ ಕುಟುಂಬದ ಜೊತೆ ನಿಂತು ನ್ಯಾಯ ಒದಗಿಸುವ ಕೆಲಸ ನನ್ನದು ಎಂದರು.
ಸಂತ್ರಸ್ತೆ ತಾಯಿ ಜೊತೆ ಮಾತನಾಡುವ ವೇಳೆ ನಿಮ್ಮ ಜೊತೆ ನಾನಿದ್ದೇನೆ, ಧೈರ್ಯ ಕಳೆದುಕೊಳ್ಳಬೇಡಿ, ಯಾವುದೇ ಕಾರಣಕ್ಕೂ ಮಾಸ್ಕ್ ಧರಿಸಿಕೊಂಡು ಜೀವನ ಮಾಡಬೇಡಿ, ‘ಅಂತಹ ದೊಡ್ಡ ತಪ್ಪು ನೀವೇನೂ ಮಾಡಿಲ್ಲ, ಇವತ್ತಿಂದ ಮಾಸ್ಕ್ ತೆಗೆದು ಧೈರ್ಯದಿಂದ ಇರಬೇಕು ಎಂದು ಹೇಳಿ ಸಂತ್ರಸ್ತೆ ತಾಯಿ ಮುಖಕ್ಕೆ ಹಾಕಿದ್ದ ಮಾಸ್ಕ್ ಅನ್ನು ಪ್ರತಿಭಾ ಕುಳಾಯಿ ತೆಗೆಸಿದರು. ಇಂತಹ ಘಟನೆಗಳು ನಡೆದಾಗ ಯಾವುದೇ ಕಾರಣಕ್ಕೂ ಮಹಿಳೆಯಾದವಳು ಧೈರ್ಯ ಕಳೆದುಕೊಳ್ಳಬಾರದು, ಬದಲಾಗಿ ಇಂತಹವರ ವಿರುದ್ಧ ಹೋರಾಟ ಮಾಡಬೇಕು ಎಂದರು.
ಇದೇ ವೇಳೆ ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ನಾಗಲಕ್ಷ್ಮೀ ಜೊತೆ ಸಂತ್ರಸ್ತೆಯ ತಾಯಿ ನಮಿತಾ ಫೋನಲ್ಲಿ ಮಾತನಾಡಿದರು. ಈ ವೇಳೆ ನ್ಯಾಯ ದೊರಕಿಸಿ ಕೊಡುವಂತೆ ಸಂತ್ರಸ್ತೆಯ ತಾಯಿ ನಮಿತಾ ಕೇಳಿಕೊಂಡರು. ಫೋನ್ ಸಂಭಾಷಣೆಯಲ್ಲಿ ಧೈರ್ಯ ಹೇಳಿದ ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ನಾಗಲಕ್ಷ್ಮೀ, ಎಲ್ಲ ರೀತಿಯ ಸಹಕಾರ ನೀಡುವುದಾಗಿ ಹೇಳಿದ್ದಾರೆ.
The Karnataka State Women’s Commission chairperson Nagalakshmi Chaudhary personally intervened by calling the victim—who is pregnant after being abandoned by the son of BJP leader Jagannivas Rao—and assured her of support and justice.
25-07-26 03:06 pm
HK News Staffer
ಧಾರವಾಡ ; ಮಗ ರೈಲು ಹಳಿಗೆ ಬಿದ್ದು ಆತ್ಮಹತ್ಯೆ, ಸಾವಿ...
23-07-26 08:05 pm
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
26-07-26 01:32 pm
HK News Staffer
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
NEET ಪ್ರತಿಭಟನೆ ಹಿಂಸಾಚಾರ ; 117 ಶಂಕಿತರ ಫೋಟೋ ಬಿಡ...
24-07-26 03:25 pm
ಪ್ರಶ್ನೆಪತ್ರಿಕೆ ಸೋರಿಕೆ ; ಕೇಂದ್ರ ಸರ್ಕಾರದ ಭರವಸೆಗ...
24-07-26 11:18 am
27-07-26 09:48 pm
HK News Staffer
ಕ್ಯಾನ್ಸರ್ ವಿರುದ್ಧ ಹೋರಾಟದ ನಡುವೆಯೇ ಸೇವಾ ಕೈಂಕರ್ಯ...
27-07-26 08:24 pm
ಚಿನ್ನದ ರಿಂಗ್, ಡಾಲರ್ ಸಹಿತ ಬೆಲೆಬಾಳುವ ವಸ್ತುಗಳಿದ್...
26-07-26 09:57 pm
ಕದ್ರಿ ಯುದ್ಧ ಸ್ಮಾರಕದ ಬಳಿ ಟಿ-55 ಯುದ್ಧ ಟ್ಯಾಂಕರ್...
26-07-26 09:14 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
27-07-26 11:07 pm
Mangaluru Staffer
ಕಾಪುವಿನಲ್ಲಿ ಎಕ್ಸ್ಪ್ರೆಸ್ ಬಸ್ಗಳ ದರ್ಪ! ಟೈಮಿಂಗ್...
27-07-26 10:21 pm
ಸಚಿವ ಸ್ಥಾನ ಕೊಡಿಸಲು ಮೂರು ಕೋಟಿ ಬೇಡಿಕೆ ; ಕೇರಳದ ಶ...
27-07-26 09:04 pm
ಬೆಂಗಳೂರು ಗ್ಯಾರೇಜ್ ನಲ್ಲಿ ಅಗ್ನಿ ಅವಘಡ ; ಜಾಗ್ವಾರ...
27-07-26 07:35 pm
ಎಪಿಎಂಸಿ ಕಾರ್ಯದರ್ಶಿ ವಿರುದ್ಧ ಲೈಂಗಿಕ ಕಿರುಕುಳ ಆರೋ...
27-07-26 01:09 pm