ಬ್ರೇಕಿಂಗ್ ನ್ಯೂಸ್
04-07-25 06:21 pm Mangalore Correspondent ಕ್ರೈಂ
ಮಂಗಳೂರು, ಜುಲೈ 4: ಬಿಜೆಪಿ ಯುವಮೋರ್ಚಾ ಮುಖಂಡ ಪ್ರವೀಣ್ ನೆಟ್ಟಾರು ಕೊಲೆ ಪ್ರಕರಣದಲ್ಲಿ ತಲೆಮರೆಸಿಕೊಂಡಿದ್ದ ಪ್ರಮುಖ ಆರೋಪಿ ಅಬ್ದುಲ್ ರಹಿಮಾನ್ ಎಂಬಾತನನ್ನು ಎನ್ಐಎ ಅಧಿಕಾರಿಗಳು ಕೇರಳದ ಕಣ್ಣೂರಿನ ಏರ್ಪೋರ್ಟ್ ನಲ್ಲಿ ಬಂಧಿಸಿದ್ದಾರೆ. ಎರಡು ವರ್ಷಗಳಿಂದ ವಿದೇಶದಲ್ಲಿದ್ದ ರಹಿಮಾನ್ ಕತಾರ್ ನಿಂದ ಕಣ್ಣೂರು ವಿಮಾನ ನಿಲ್ದಾಣಕ್ಕೆ ಬಂದಿಳಿಯುತ್ತಲೇ ಎನ್ಐಎ ಬಲೆಗೆ ಕೆಡವಿದೆ.
ಇದೇ ಎಪ್ರಿಲ್ ತಿಂಗಳಲ್ಲಿ ಅಬ್ದುಲ್ ರಹಿಮಾನ್ ಸೇರಿದಂತೆ ಮೂವರು ತಲೆಮರೆಸಿಕೊಂಡಿದ್ದವರು ಸೇರಿ ನಾಲ್ವರ ವಿರುದ್ಧ ಎನ್ಐಎ ಚಾರ್ಜ್ ಶೀಟ್ ಸಲ್ಲಿಸಿತ್ತು. ಪ್ರಕರಣದಲ್ಲಿ ತಲೆಮರೆಸಿಕೊಂಡಿದ್ದ ಆರು ಮಂದಿಯ ಸುಳಿವು ಕೊಟ್ಟವರಿಗೆ ಬಹುಮಾನ ನೀಡುವುದಾಗಿ ಎನ್ಐಎ ಪ್ರಕಟಿಸಿತ್ತು. ಅಬ್ದುಲ್ ರಹಿಮಾನ್ ಹೆಸರಲ್ಲಿ ನಾಲ್ಕು ಲಕ್ಷ ಬಹುಮಾನ ಘೋಷಣೆಯಾಗಿತ್ತು. ಪ್ರವೀಣ್ ನೆಟ್ಟಾರು ಕೊಲೆ ಪ್ರಕರಣದಲ್ಲಿ ಭಾಗಿಯಾದ ಆರೋಪಿಗಳನ್ನು ಎನ್ಐಎ ಬಂಧನ ಮಾಡುತ್ತಿದ್ದಂತೆ ತಲೆಮರೆಸಿಕೊಂಡಿದ್ದ ಅಬ್ದುಲ್ ರಹಿಮಾನ್, ಸದ್ದಿಲ್ಲದೆ ವಿದೇಶಕ್ಕೆ ಹಾರಿದ್ದ.
ಈ ಬಗ್ಗೆ ಮಾಹಿತಿ ಪಡೆದಿದ್ದ ಎನ್ಐಎ ಲುಕೌಟ್ ನೋಟಿಸ್ ಜಾರಿ ಮಾಡಿತ್ತು. ಇದೀಗ ಕತಾರ್ ಏರ್ಪೋರ್ಟ್ ನಿಂದ ನೇರ ವಿಮಾನದಲ್ಲಿ ಕೇರಳದ ಕಣ್ಣೂರಿಗೆ ಬಂದಿಳಿಯುತ್ತಿದ್ದಾಗಲೇ ಮಾಹಿತಿ ಪಡೆದ ಎನ್ಐಎ ಅಧಿಕಾರಿಗಳು, ಅಲ್ಲಿಗೆ ತೆರಳಿ ವಶಕ್ಕೆ ಪಡೆದಿದ್ದಾರೆ. ಪಿಎಫ್ಐ ಪ್ರಮುಖರ ಸೂಚನೆಯಂತೆ ಅಬ್ದುಲ್ ರಹಿಮಾನ್ ಮತ್ತು ಇತರರು ಸೇರಿ ಪ್ರವೀಣ್ ನೆಟ್ಟಾರು ಕೊಲೆಗೆ ಸಂಚು ರೂಪಿಸಿದ್ದರು. ಪ್ರಕರಣದಲ್ಲಿ ಒಟ್ಟು 28 ಮಂದಿಯ ವಿರುದ್ಧ ಚಾರ್ಜ್ ಶೀಟ್ ಹಾಕಲಾಗಿದೆ ಎಂದು ಎನ್ಐಎ ಪತ್ರಿಕಾ ಹೇಳಿಕೆಯಲ್ಲಿ ತಿಳಿಸಿದೆ.
ಪ್ರವೀಣ್ ನೆಟ್ಟಾರು ಅವರನ್ನು ಸುಳ್ಯ ತಾಲೂಕಿನ ಬೆಳ್ಳಾರೆಯಲ್ಲಿ 2022ರ ಜುಲೈ 26ರಂದು ಕೊಲೆ ಮಾಡಲಾಗಿತ್ತು. ಹಿಂದುಗಳನ್ನು ಭಯಪಡಿಸುವುದು ಮತ್ತು ಸಮಾಜದಲ್ಲಿ ಕೋಮು ದ್ವೇಷದ ಗಲಾಟೆ ಎಬ್ಬಿಸುವ ಉದ್ದೇಶದಿಂದ ಕೊಲೆ ನಡೆಸಲಾಗಿತ್ತು ಎಂದು ಎನ್ಐಎ ದೆಹಲಿ ಕಚೇರಿಯಲ್ಲಿ ಪ್ರತ್ಯೇಕ ಎಫ್ಐಆರ್ ದಾಖಲಿಸಲಾಗಿತ್ತು.
In a major breakthrough in the Praveen Nettaru murder case, the National Investigation Agency (NIA) has arrested one of the key accused, Abdul Rahiman, who had been absconding abroad for nearly two years. He was taken into custody by NIA officials at Kerala’s Kannur International Airport upon his arrival from Qatar.
17-12-25 10:30 pm
HK News Desk
ಯಶವಂತಪುರ - ಕಾರವಾರ ಗೋಮಟೇಶ್ವರ ಎಕ್ಸ್ ಪ್ರೆಸ್ ರೈಲು...
17-12-25 12:45 pm
ಶೃಂಗೇರಿ ; ಬಿಕಾಂ ಓದುತ್ತಿದ್ದ ವಿದ್ಯಾರ್ಥಿನಿ ಹಠಾತ್...
17-12-25 12:42 pm
ಶಿವಮೊಗ್ಗ, ಧಾರವಾಡ ಸೇರಿ ಹಲವೆಡೆ ಲೋಕಾಯುಕ್ತ ದಾಳಿ ;...
16-12-25 03:08 pm
ಮಂಗಳೂರು ಬೆನ್ನಲ್ಲೇ ತುಮಕೂರು ಜಿಲ್ಲಾಧಿಕಾರಿ ಕಚೇರಿಗ...
16-12-25 12:57 pm
17-12-25 10:27 pm
HK News Desk
ಆಸ್ಟ್ರೇಲಿಯಾ ಬೋಂಡಿ ಬೀಚ್ ದಾಳಿ ; ಹೈದ್ರಾಬಾದ್ ಮೂಲದ...
17-12-25 01:38 pm
ಯುಕೆಯ ಮಿಡ್ಲಾಂಡ್ಸ್ ನಲ್ಲಿ ಕನ್ನಡ ರಾಜ್ಯೋತ್ಸವ ; ಬರ...
16-12-25 06:33 pm
ಭಟ್ಕಳ ತಹಸೀಲ್ದಾರ್ ಕಚೇರಿಗೂ ಸ್ಫೋಟದ ಬೆದರಿಕೆ ; ತಮಿ...
16-12-25 01:56 pm
ಪಾಕಿಸ್ತಾನದ ಎರಡು ವಿವಿಗಳಲ್ಲಿ ಸಂಸ್ಕೃತ ಕಲಿಯಲು ಕೋರ...
15-12-25 08:12 pm
17-12-25 08:54 pm
Mangalore Correspondent
New year 2026, Mangalore Rules: ಹೊಸ ವರ್ಷಾಚರಣೆ...
17-12-25 08:19 pm
Udupi, Baby death: ಉಡುಪಿ ; ತಾಯಿ ಕೈಯಿಂದ ಜಾರಿ ಬ...
17-12-25 05:23 pm
Mangalore Jail, Fight, Ccb Police: ಮಂಗಳೂರು ಜೈ...
17-12-25 05:05 pm
Mangalore Landslide, Death: ಗುಡ್ಡ ಕುಸಿದು ಕಾರ್...
16-12-25 10:25 pm
17-12-25 11:14 am
Bangalore Correspondent
ಕದ್ರಿಯಲ್ಲಿ ಬೈಕ್ ಕದ್ದು ಭಟ್ಕಳದಲ್ಲಿ ಮಹಿಳೆಯ ಸರ ಕಸ...
16-12-25 10:35 pm
Mangalore Crime, Robbery, Mukka: 'ಬಂಗಾರ್ ಒಲ್ಪ...
15-12-25 10:26 pm
Udupi Murder, Brahmavar, Update: ಕುಡಿದ ಮತ್ತಿನ...
15-12-25 05:37 pm
Brahmavar Murder, Udupi Crime: ಎಣ್ಣೆ ಪಾರ್ಟಿಯಲ...
15-12-25 12:19 pm