ಬ್ರೇಕಿಂಗ್ ನ್ಯೂಸ್
04-07-25 08:56 pm Bangalore Correspondent ಕ್ರೈಂ
ಬೆಂಗಳೂರು, ಜೂ 04 : ಮನೆ ಕೆಲಸದವಳ ಜೊತೆ ಅಕ್ರಮ ಸಂಬಂಧ ಇಟ್ಟುಕೊಂಡಿದ್ದ ವ್ಯಕ್ತಿಯನ್ನ ಆತನ ಪತ್ನಿಯೇ ಕೊಲೆ ಮಾಡಿರುವ ಘಟನೆ ಬೆಂಗಳೂರಿನ ಸುದ್ದಗುಂಟೆಪಾಳ್ಯದಲ್ಲಿ ನಡೆದಿದೆ.
ಮೃತನನ್ನ ಸಾಫ್ಟ್ವೇರ್ ಕಂಪನಿಯಲ್ಲಿ ಟೆಕ್ಕಿಯಾಗಿ ಕೆಲಸ ಮಾಡುತ್ತಿದ್ದ ಗಂಡ ಭಾಸ್ಕರ್ (41) ಎಂದು ಗುರುತಿಸಲಾಗಿದೆ.
ಪತಿಯ ಮುಖಕ್ಕೆ ಹಲ್ಲೆ ಮಾಡಿ, ಕೊಲೆ ಮಾಡಿದ ನಂತರ ಶವಕ್ಕೆ ಸ್ನಾನ ಮಾಡಿಸಿ ಮಲಗಿಸಿದ್ದಲ್ಲದೆ, ಬಾತ್ರೂಮ್ನಲ್ಲಿ ಜಾರಿ ಬಿದ್ದು ಏಟಾಗಿ ಮೃತಪಟ್ಟಿದ್ದಾರೆ ಎಂದು ಪೊಲೀಸರ ಬಳಿ ಕತೆ ಕಟ್ಟಿದ್ದಾಳೆ.
ಅಸಹಜ ಸಾವು ಪ್ರಕರಣದ ಕಾರಣ ಭಾಸ್ಕರ್ ಮೃತದೇಹವನ್ನ ಪೊಲೀಸರು ಮರಣೋತ್ತರ ಪರೀಕ್ಷೆಗೆ ಕಳುಹಿಸಿಕೊಟ್ಟಿದ್ದರು. ಮರಣೋತ್ತರ ಪರೀಕ್ಷೆ ನಡೆಸಿದಾಗ ಮುಖ ಮತ್ತು ದೇಹಕ್ಕೆ ಯಾವುದೋ ವಸ್ತುವಿನಿಂದ ಹೊಡೆದಿರುವುದು ಪತ್ತೆಯಾಗಿತ್ತು. ಕೂಡಲೇ ಪೊಲೀಸರು ಭಾಸ್ಕರ್ ಹೆಂಡತಿಯನ್ನ ತಮ್ಮ ಶೈಲಿಯಲ್ಲಿ ವಿಚಾರಣೆ ನಡೆಸಿದ್ದಾಗ ಸತ್ಯ ಸತ್ಯತೆ ಹೊರಗೆ ಬಿದ್ದಿದೆ.
ಪತಿಯನ್ನು ಕೊಲೆ ಮಾಡಿದ ಬಳಿಕ ಕಥೆ ಕಟ್ಟುವುದಕ್ಕೆಂದೇ ಮೃತದೇಹವನ್ನು ಸ್ನಾನ ಮಾಡಿಸಿ ಮಲಗಿಸಿದ್ದ ವಿಚಾರವೂ ಬಹಿರಂಗವಾಗಿದೆ. ಇದೀಗ ಅಸಹಜ ಸಾವು ಪ್ರಕರಣವನ್ನು ಕೊಲೆ ಪ್ರಕರಣವಾಗಿ ಪರಿವರ್ತಿಸಿಕೊಂಡಿರುವ ಪೊಲೀಸರು ತನಿಖೆ ಮುಂದುವರಿಸಿದ್ದಾರೆ.
ಮನೆ ಕೆಲಸದಾಕೆ ಜತೆ ಸಲುಗೆ ;
ಭಾಸ್ಕರ್ ಮನೆ ಕೆಲಸದಾಕೆ ಜತೆ ಸದಾ ಸಲುಗೆಯಿಂದ ಇರುತ್ತಿದ್ದರು. ಇದೇ ಕಾರಣಕ್ಕೆ ಸಾಕಷ್ಟು ಬಾರಿ ಗಂಡ ಹೆಂಡತಿ ನಡುವೆ ಜಗಳವು ಆಗಿತ್ತು. ಎರಡು ದಿನಗಳ ಹಿಂದೆ ರಾತ್ರಿ ಇದೇ ಕಾರಣಕ್ಕೆ ಗಲಾಟೆ ಶುರುವಾಗಿತ್ತು. ಗಲಾಟೆ ವೇಳೆ ಶ್ರುತಿ ಗಂಡನ ಮುಖಕ್ಕೆ ಕೋಪದಿಂದ ಬಲವಾಗಿ ಕೈಗೆ ಸಿಕ್ಕಿದ ವಸ್ತುವಿನಿಂದ ಬಲವಾಗಿ ಹೊಡೆದಿದ್ದಾಳೆ, ಪರಿಣಾಮ ಭಾಸ್ಕರ್ ಸ್ಥಳದಲ್ಲೇ ಉಸಿರು ಚೆಲ್ಲಿದ್ದಾನೆ.
ಮೊದಲನೇ ಪತ್ನಿಗೆ ಡಿವೋರ್ಸ್ ಕೊಟ್ಟಿದ್ದ ಭಾಸ್ಕರ್ ಶ್ರುತಿಯನ್ನು ಮದುವೆಯಾಗಿದ್ದರು. ಮದುವೆಯಾಗಿ ಇಬ್ಬರು ಮಕ್ಕಳಿದ್ದರೂ ಮನೆ ಕೆಲಸದವಳ ಜೊತೆ ಅಕ್ರಮ ಸಂಬಂಧ ಇಟ್ಟುಕೊಂಡಿದ್ದು ಶ್ರುತಿ ಕೋಪಕ್ಕೆ ಕಾರಣವಾಗಿತ್ತು. ಸಂಬಳ ಅಲ್ಲದೇ ಮನೆ ಬಾಡಿಗೆಯಿಂದಲೇ ತಿಂಗಳಿಗೆ 1.15 ಲಕ್ಷ ರೂ. ಆದಾಯ ಬರುತ್ತಿತ್ತು. ಬಂದ ಹಣವನ್ನು ಭಾಸ್ಕರ್ ಅಕ್ರಮ ಸಂಬಂಧ ಹೊಂದಿದ್ದ ಮಹಿಳೆಗೆ ನೀಡುತ್ತಿದ್ದರು. ಕಳೆದ ಒಂದು ತಿಂಗಳಿನಿಂದ ಭಾಸ್ಕರ್ ನಿವಾಸಕ್ಕೆ ಬಾರದೇ ಸ್ನೇಹಿತೆಯ ಮನೆಯಲ್ಲೇ ಇರುತ್ತಿದ್ದರು. ಎರಡು ದಿನದ ಹಿಂದೆ ಮನೆಗೆ ಬಂದಾಗ ಪತ್ನಿ ಶ್ರುತಿ ಈ ವಿಚಾರವನ್ನು ಪ್ರಸ್ತಾಪಿಸಿದ್ದಕ್ಕೆ ಇಬ್ಬರ ಮಧ್ಯೆ ಗಲಾಟೆ ನಡೆದಿದೆ. ಗಲಾಟೆ ವಿಕೋಪಗೆ ತಿರುಗಿ ಶ್ರುತಿ ಪತಿಯನ್ನೇ ಹತ್ಯೆ ಮಾಡಿದ್ದಾಳೆ
ಗಂಡ ಮನೆಗೆ ಕುಡಿದು ಬಂದು ಬಾತ್ ರೂಮ್ನಲ್ಲಿ ಜಾರಿ ಬಿದ್ರು. ಹೀಗಾಗಿ ಅವರಿಗೆ ಸ್ನಾನ ಮಾಡಿಸಿ ಮಲಗಿಸಿದ್ದೆ, ಆದ್ರೆ ನನ್ನ ಗಂಡ ಅಲ್ಲಿಯೇ ಮೃತಪಟ್ಟಿದ್ದಾರೆ ಎಂದು ಪೊಲೀಸರಲ್ಲಿ ನಾಟಕವಾಡಲು ಹೋಗಿ ಜೈಲು ಪಾಲಾಗಿದ್ದಾಳೆ.
A shocking murder has come to light in the Suddguntepalya area of Bengaluru, where a woman allegedly killed her husband over his extramarital affair with their housemaid and attempted to cover up the crime by staging it as a bathroom accident. The deceased has been identified as Bhaskar (41).
10-07-25 09:53 pm
Bangalore Correspondent
ED Raid Congress MLA Subba Reddy: ಮಲೇಶ್ಯಾ, ಬ್...
10-07-25 12:45 pm
ಹರಿಪ್ರಸಾದ್ ಹೇಳಿಕೆಗೆ ಬಿಜೆಪಿ ಕೆಂಡಾಮಂಡಲ ; ಅರ್ಧ ನ...
09-07-25 10:45 pm
Chamarajanagar Heart Attack, Student; 'ಹೃದಯ"ಕ...
09-07-25 04:12 pm
ಬೆಂಗಳೂರಿನಲ್ಲಿ ಐದು ಕಡೆ ಎನ್ಐಎ ದಾಳಿ ; ಭಯೋತ್ಪಾದಕ...
09-07-25 01:53 pm
11-07-25 12:08 pm
HK News Desk
1500ಕ್ಕೂ ಹೆಚ್ಚು ಹಿಂದು ಮಹಿಳೆಯರನ್ನು ಇಸ್ಲಾಮಿಗೆ ಮ...
10-07-25 11:07 pm
Bangle Seller, Changur Baba Arrest, Uttar Pra...
10-07-25 03:24 pm
Amit Shah; ರಾಜಕೀಯ ನಿವೃತ್ತಿ ಬಳಿಕ ವೇದ, ಉಪನಿಷತ್...
10-07-25 01:00 pm
ಗೋಮಾಂಸ ತಿನ್ನಿಸಿ ಮತಾಂತರಕ್ಕೆ ಯತ್ನ ; ಫೇಸ್ಬುಕ್ಕಲ್...
07-07-25 08:45 pm
10-07-25 07:23 pm
Mangalore Correspondent
Mangalore, Traffic Constable, Lokayukta, Tasl...
10-07-25 04:01 pm
ಮಂಗಳೂರಿನ ಟೈಲರಿಂಗ್ ಶಾಪಲ್ಲೇ ಕುಸಿದು ಬಿದ್ದಿದ್ದ ನವ...
09-07-25 10:25 pm
Mangalore Home Minister Parameshwara, Peace M...
09-07-25 10:17 pm
Peace Meeting, Mangalore, Brijesh Chowta, Ash...
09-07-25 09:01 pm
10-07-25 08:09 pm
HK News Desk
Kerala Couple, Chit Fund Scam; ಚಿಟ್ ಫಂಡ್ ಹೆಸರ...
10-07-25 01:05 pm
Double Murder Hassan, crime: ಆಸ್ತಿ ವಿಚಾರಕ್ಕೆ...
10-07-25 12:04 pm
Drugs News, Mangalore: ಮಂಗಳೂರಿಗೆ ಡ್ರಗ್ಸ್ ಪೂರೈ...
09-07-25 10:56 pm
Kerala Chit Fund, Fraud, Mangalore: 20 ವರ್ಷಗಳ...
08-07-25 10:01 pm