ಬ್ರೇಕಿಂಗ್ ನ್ಯೂಸ್
05-07-25 09:06 pm Mangalore Correspondent ಕ್ರೈಂ
ಮಂಗಳೂರು, ಜುಲೈ 5 : ಸಹಪಾಠಿ ಯುವತಿಯನ್ನು ಮದುವೆಯಾಗುವುದಾಗಿ ನಂಬಿಸಿ ಗರ್ಭಿಣಿಯಾಗಿಸಿ ವಂಚಿಸಿದ ಪ್ರಕರಣಕ್ಕೆ ಸಂಬಂಧಿಸಿ ಪುತ್ತೂರು ಪೊಲೀಸರು ಆರೋಪಿ ಕೃಷ್ಣ ರಾವ್ ಪರಾರಿಯಾಗಲು ಸಹಕರಿಸಿದ ಆತನ ತಂದೆ ಬಿಜೆಪಿ ಮುಖಂಡ ಪಿ.ಜಿ.ಜಗನ್ನಿವಾಸ್ ರಾವ್ ಅವರನ್ನೂ ಅರೆಸ್ಟ್ ಮಾಡಿದ್ದಾರೆ.
ಯುವತಿಗೆ ವಂಚಿಸಿದ ಪ್ರಕರಣದಲ್ಲಿ ಎಫ್ಐಆರ್ ದಾಖಲಾದ ಕಳೆದ ಹತ್ತು ದಿನಗಳಿಂದ ನಾಪತ್ತೆಯಾಗಿದ್ದ ಆರೋಪಿ ಕೃಷ್ಣ ಜೆ. ರಾವ್ (21) ನನ್ನು ಪೊಲೀಸರು ಮೈಸೂರಿನ ಟಿ ನರಸೀಪುರದಲ್ಲಿ ಶುಕ್ರವಾರ ರಾತ್ರಿ ಬಂಧಿಸಿದ್ದರು. ಈ ನಡುವೆ, ಜಗನ್ನಿವಾಸ ರಾವ್ ಅವರನ್ನೂ ಪೊಲೀಸರು ವಶಕ್ಕೆ ಪಡೆದು ವಿಚಾರಣೆ ನಡೆಸಿದ್ದರು. ಪುತ್ರನ ಬಂಧನ ಆಗುತ್ತಲೇ ಆತ ಪರಾರಿಯಾಗಲು ಸಹಕರಿಸಿದ ಆರೋಪದಲ್ಲಿ ತಂದೆಯನ್ನೂ ಬಂಧನ ಮಾಡಿದ್ದಾರೆ.
ಅಪ್ಪ ಮತ್ತು ಮಗನಿಗೆ ವೈದ್ಯಕೀಯ ತಪಾಸಣೆ ನಡೆಸಿದ ಬಳಿಕ ಪೊಲೀಸರು ಪುತ್ತೂರಿನ ನ್ಯಾಯಾಲಯದ ಮುಂದೆ ಹಾಜರುಪಡಿಸಿದ್ದು ತಂದೆ ಜಗನ್ನಿವಾಸ ರಾವ್ ಗೆ ಜಾಮೀನು ನೀಡಿದ್ದರೆ, ಪುತ್ರನಿಗೆ ನ್ಯಾಯಾಂಗ ಬಂಧನ ವಿಧಿಸಲಾಗಿದೆ. ಇದರಂತೆ, ಕೃಷ್ಣ ರಾವ್ ಜೈಲು ಸೇರಿದ್ದಾನೆ.
.
ಪುತ್ತೂರಿನ ಮಹಿಳಾ ಠಾಣೆಯಲ್ಲಿ ಯುವತಿಗೆ ವಂಚಿಸಿದ ಬಗ್ಗೆ ಜೂನ್ 21ರಂದು ಪ್ರಕರಣ ದಾಖಲಾಗಿತ್ತು. ಇದರ ಬೆನ್ನಲ್ಲೇ ಆರೋಪಿ ಕೃಷ್ಣ ರಾವ್ ತಲೆಮರೆಸಿಕೊಂಡಿದ್ದ. ಆನಂತರ ವಿಷಯ ರಾಜಕೀಯ ಸ್ವರೂಪ ಪಡೆದು ತೀವ್ರ ವಿವಾದಕ್ಕೀಡಾಗುತ್ತಲೇ ಬಿಜೆಪಿ ಮುಖಂಡ ಜಗನ್ನಿವಾಸ ರಾವ್ ಆಸ್ಪತ್ರೆಗೆ ದಾಖಲಾಗಿದ್ದರು. ಜುಲೈ 1ರಂದು ರಾವ್ ಆಸ್ಪತ್ರೆಯಿಂದ ಬಿಡುಗಡೆಯಾಗಿ ಮನೆಗೆ ಬಂದಿದ್ದರು. ಪೊಲೀಸರು ಅವರನ್ನು ವಿಚಾರಣೆ ನಡೆಸಿ ಮಗನ ಬಗ್ಗೆ ಮಾಹಿತಿ ಪಡೆದಿದ್ದರು.
In connection with the case where a young woman was allegedly cheated and impregnated by her classmate under the pretext of marriage, Puttur police have arrested both the accused, Krishna Rao, and his father, BJP leader P.G. Jagannivasa Rao, for aiding his son’s escape.
12-09-26 09:40 pm
HK News Staffer
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
ಬಿಜೆಪಿ ಅಧಿಕಾರಕ್ಕೆ ಬರಲು ನನ್ನ ಸ್ಥಾನ ಬಿಟ್ಟುಕೊಟ್ಟ...
12-09-26 05:56 pm
ಐಎಎಸ್ ತೇರ್ಗಡೆಯಾಗಿದ್ದ ಕೇರಳದ ಮೊದಲ ಬುಡಕಟ್ಟು ಮಹಿಳ...
12-09-26 05:53 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
15-09-26 09:46 am
HK News Staffer
ತುಳುನಾಡಿನಲ್ಲಿ ವಿಭಿನ್ನ ಗಣೇಶ ಚತುರ್ಥಿ ; ಮಣ್ಣಿನ ಮ...
14-09-26 10:01 pm
ಮಂಗಳೂರಿನಲ್ಲಿ ಎರಡು ದಿನ ಸಿಎಂ ಡಿಕೆಶಿ ವಾಸ್ತವ್ಯ ;...
14-09-26 06:02 pm
100 ವರ್ಷಗಳ ಬಳಿಕವೂ ಸ್ವಂತ ಸೂರಿಗಾಗಿ ಕರಾವಳಿಯಲ್ಲಿ...
14-09-26 05:00 pm
Konkan Catholic Credit Society Inaugurated in...
14-09-26 04:18 pm
12-09-26 07:41 pm
HK News Staffer
ಕ್ರಿಪ್ಟೊ ಕರೆನ್ಸಿ ಹೆಸ್ರಲ್ಲಿ ಡಾಕ್ಟರ್ ಗೆ ಮಹಿಳೆಯಿ...
11-09-26 06:38 pm
ಜಾಮೀನು ಪಡೆಯಲು ನಕಲಿ ಆಧಾರ್ ಕಾರ್ಡ್ ಹಾಜರು ; ಉಡು...
11-09-26 01:09 pm
ಬೈಕ್ಗೆ ಡಿಕ್ಕಿ ಹೊಡೆದ ಕಾರು ; ಚಾಮರಾಜನಗರದಲ್ಲಿ ಮೂ...
11-09-26 10:14 am
ಕುಂದಾಪುರದಲ್ಲಿ 8 ಶಾಲಾ ಮಕ್ಕಳ ಬಲಿ ಪಡೆದ ಭೀಕರ ಅಪಘಾ...
10-09-26 08:16 pm