ಬ್ರೇಕಿಂಗ್ ನ್ಯೂಸ್
05-07-25 11:04 pm HK News Desk ಕ್ರೈಂ
ಪಾಟ್ನಾ, ಜು.5 : ಬಿಹಾರ ವಿಧಾನಸಭೆ ಚುನಾವಣೆಗೂ ಮುನ್ನ ಗುಂಡಿನ ಸದ್ದು ಕೇಳಿದೆ. ಪಾಟ್ನಾದ ಬಿಜೆಪಿಯ ಪ್ರಮುಖ ನಾಯಕ ಹಾಗೂ ಖ್ಯಾತ ಉದ್ಯಮಿ ಗೋಪಾಲ್ ಖೇಮ್ಕಾ ಅವರನ್ನು ಗುಂಡಿಕ್ಕಿ ಹತ್ಯೆ ಮಾಡಲಾಗಿದೆ. ಶುಕ್ರವಾರ ರಾತ್ರಿ ಬಿಹಾರದ ಪಾಟ್ನಾದಲ್ಲಿರುವ ಅವರ ನಿವಾಸದ ಹೊರಗೆ ಅಪರಿಚಿತರು ಶೂಟ್ ಮಾಡಿ ಎಸ್ಕೇಪ್ ಆಗಿದ್ದಾರೆ.
ಗೋಪಾಲ್ ಖೇಮ್ಕಾ ಬಿಹಾರದ ಅತ್ಯಂತ ಹಳೆಯ ಖಾಸಗಿ ಆಸ್ಪತ್ರೆಗಳಲ್ಲಿ ಒಂದಾದ ಮಗಧ ಆಸ್ಪತ್ರೆಯ ಮಾಲೀಕ ಮತ್ತು ಬಿಜೆಪಿಯಲ್ಲೂ ಸಕ್ರಿಯರಾಗಿ ಗುರುತಿಸಿಕೊಂಡವರು. ಪನಾಚೆ ಹೋಟೆಲ್ ಪಕ್ಕದಲ್ಲಿರುವ 'ಟ್ವಿನ್ ಟವರ್' ಸೊಸೈಟಿಯಲ್ಲಿ ವಾಸಿಸುತ್ತಿದ್ದರು. ತಮ್ಮ ನಿವಾಸದ ಸಮೀಪದಲ್ಲೇ ಫ್ಲಾಟ್ ಒಂದನ್ನ ಖರೀದಿ ಮಾಡಿದ್ದರು. ಅದೇ ಫ್ಲಾಟ್ ಗೆ ಹೋಗಲು ಹೊರಟವರು ಕಾರಿನಿಂದ ಇಳಿಯುತ್ತಿದ್ದಂತೆ ಅಡಗಿ ಕುಳಿತ್ತಿದ್ದ ಹಂತಕರು ಗೋಪಾಲ್ ಮೇಲೆ ಗುಂಡು ಹಾರಿಸಿ ಕೊಂದಿದ್ದಾರೆ. ಸ್ಥಳಕ್ಕೆ ತೆರಳಿ ಪರಿಶೀಲನೆ ನಡೆಸಿರುವ ಪೊಲೀಸರು ಒಂದು ಗುಂಡು ಮತ್ತು ಶೆಲ್ ಕೇಸಿಂಗ್ ವಶಪಡಿಸಿಕೊಂಡಿದ್ದಾರೆ.


ಚುನಾವಣೆಗೆ ಕೆಲವೇ ತಿಂಗಳಿರುವಾಗ ಹತ್ಯೆ
ಬಿಹಾರ ವಿಧಾನಸಭೆ ಚುನಾವಣೆಗೆ ಇನ್ನು ಕೆಲವೇ ತಿಂಗಳು ಬಾಕಿ ಇದೆ. ಹೀಗಿರುವಾಗಲೇ ಬಿಜೆಪಿ ನಾಯಕನೊಬ್ಬನನ್ನ ಹತ್ಯೆ ಮಾಡಿರುವುದು ಬಿಜೆಪಿಗರ ಆಕ್ರೋಶಕ್ಕೆ ಕಾರಣವಾಗಿದೆ.
6 ವರ್ಷಗಳ ಹಿಂದೆ ಮಗನ ಹತ್ಯೆ
ವಿಚಿತ್ರವೆಂದರೆ 6 ವರ್ಷಗಳ ಹಿಂದೆ 2018ರಲ್ಲಿ ಗೋಪಾಲ್ ಖೇಮ್ಕಾ ಮಗ ಗುಂಜನ್ ಕೂಡ ಇದೇ ರೀತಿ ಗುಂಡಿನ ದಾಳಿಗೆ ಬಲಿಯಾಗಿದ್ದ. ಪಾಟ್ನಾದ ಹೊರವಲಯದ ವೈಶಾಲಿಯಲ್ಲಿರುವ ಹತ್ತಿ ಕಾರ್ಖಾನೆಯ ಮುಂದೆ ತನ್ನ ಕಾರಿನಿಂದ ಇಳಿಯುತ್ತಿದ್ದಾಗ ಬೈಕ್ನಲ್ಲಿ ಬಂದ ದುಷ್ಕರ್ಮಿಗಳು ಗುಂಡು ಹಾರಿಸಿ ಆತನನ್ನ ಹತ್ಯೆ ಮಾಡಿದ್ದರು. ಇದೀಗ ಅದೇ ರೀತಿಯಲ್ಲಿ ತಂದೆ ಗೋಪಾಲ್ ಕೂಡ ಪ್ರಾಣ ತೆತ್ತಿದ್ದಾರೆ.
Prominent businessman Gopal Khemka was shot dead by an unidentified bike-borne assailant in Patna, Bihar, six years after his son, Gunjan Khemka, was killed in a similar manner.
16-06-26 12:26 pm
HK News Staffer
ಧರ್ಮಸ್ಥಳದ ಬುರುಡೆ ಕೇಸಿಗೆ ಬಿಗ್ ಟ್ವಿಸ್ಟ್ ; ಎಸ್ಐಟ...
12-06-26 12:02 pm
ಪದತ್ಯಾಗದ ತರಾತುರಿಯಲ್ಲೇ ಸಿದ್ದರಾಮಯ್ಯ ಕುರುಬ ಸಮುದಾ...
11-06-26 08:31 pm
ಹಳಸಿತೇ ಜಮೀರ್ - ಸಿದ್ದು ಸ್ನೇಹ ಸಂಬಂಧ? ನಿಮ್ಮ ಆಪ್ತ...
11-06-26 07:36 pm
ಮಗು ಕರುಣಿಸಿದ ಪ್ರಕರಣ; ಕೊನೆಗೂ ರಾಜಿ ಸಂಧಾನಕ್ಕಿಳಿದ...
11-06-26 01:53 pm
15-06-26 11:18 am
HK News Staffer
ಬಿರಿಯಾನಿ ಹೆಸರಲ್ಲಿ ಮಹಿಳೆಯ ಮಾನ ಕಳೆದ ಟೆಕ್ಕಿ! ತಮಾ...
14-06-26 09:46 pm
ಸಹಕಾರಿ ಬ್ಯಾಂಕುಗಳಲ್ಲಿ ಸರ್ವಾಧಿಕಾರಕ್ಕೆ ಬ್ರೇಕ್ !...
14-06-26 07:17 pm
ಅಸ್ಸಾಂನಲ್ಲಿ 18 ವರ್ಷ ಮೇಲ್ಪಟ್ಟವರಿಗೆ ಆಧಾರ್ ಕಾರ್ಡ...
14-06-26 04:49 pm
ಕೇರಳದಲ್ಲಿ ಜೂನ್ 15ರಿಂದ 'ಪ್ರಿಯದರ್ಶಿನಿ' ಉಚಿತ ಬಸ್...
14-06-26 01:08 pm
16-06-26 11:35 am
HK News Staffer
ಧರ್ಮಸ್ಥಳ ಬುರುಡೆ ಪ್ರಕರಣ ; ಗಿರೀಶ್ ಮಟ್ಟಣ್ಣನವರ್,...
15-06-26 04:52 pm
ಅಂಬಾನಿ ಕುಟುಂಬದ ಗುರೂಜಿ ಜೊತೆ ಕೊಲ್ಲೂರು ಮೂಕಾಂಬಿಕೆ...
14-06-26 09:47 pm
ದ.ಕ. ಜಿಲ್ಲೆಯ 14 ಪ್ರಮುಖ ರಸ್ತೆ ಅಭಿವೃದ್ದಿ ಕಾಮಗಾರ...
14-06-26 02:37 pm
ಧರ್ಮಸ್ಥಳ ಬುರುಡೆ ಪ್ರಕರಣಕ್ಕೆ ಮತ್ತೊಂದು ಟ್ವಿಸ್ಟ್:...
13-06-26 05:28 pm
16-06-26 08:32 pm
HK News Staffer
SIT Car Accident: ಎಸ್ಐಟಿ ಎಸ್ಪಿ ಸೈಮನ್ ಪ್ರಯಾಣಿಸ...
16-06-26 05:10 pm
Chandrashekhar, Belthangady: ಬೆಳ್ತಂಗಡಿ ಸರ್ಕಾರ...
16-06-26 02:34 pm
ಉಳ್ಳಾಲ ; ಸ್ನಾನಕ್ಕೆಂದು ಕೋಣೆಗೆ ತೆರಳಿದ್ದ ಪಿಯುಸಿ...
16-06-26 10:33 am
ಮಕ್ಕಳ ಕಣ್ಣೆದುರೇ ತಾಯಿಯ ಬರ್ಬರ ಹತ್ಯೆ! ಬೆಟ್ಟಿಂಗ್...
15-06-26 09:21 pm