ಬ್ರೇಕಿಂಗ್ ನ್ಯೂಸ್
05-07-25 11:04 pm HK News Desk ಕ್ರೈಂ
ಪಾಟ್ನಾ, ಜು.5 : ಬಿಹಾರ ವಿಧಾನಸಭೆ ಚುನಾವಣೆಗೂ ಮುನ್ನ ಗುಂಡಿನ ಸದ್ದು ಕೇಳಿದೆ. ಪಾಟ್ನಾದ ಬಿಜೆಪಿಯ ಪ್ರಮುಖ ನಾಯಕ ಹಾಗೂ ಖ್ಯಾತ ಉದ್ಯಮಿ ಗೋಪಾಲ್ ಖೇಮ್ಕಾ ಅವರನ್ನು ಗುಂಡಿಕ್ಕಿ ಹತ್ಯೆ ಮಾಡಲಾಗಿದೆ. ಶುಕ್ರವಾರ ರಾತ್ರಿ ಬಿಹಾರದ ಪಾಟ್ನಾದಲ್ಲಿರುವ ಅವರ ನಿವಾಸದ ಹೊರಗೆ ಅಪರಿಚಿತರು ಶೂಟ್ ಮಾಡಿ ಎಸ್ಕೇಪ್ ಆಗಿದ್ದಾರೆ.
ಗೋಪಾಲ್ ಖೇಮ್ಕಾ ಬಿಹಾರದ ಅತ್ಯಂತ ಹಳೆಯ ಖಾಸಗಿ ಆಸ್ಪತ್ರೆಗಳಲ್ಲಿ ಒಂದಾದ ಮಗಧ ಆಸ್ಪತ್ರೆಯ ಮಾಲೀಕ ಮತ್ತು ಬಿಜೆಪಿಯಲ್ಲೂ ಸಕ್ರಿಯರಾಗಿ ಗುರುತಿಸಿಕೊಂಡವರು. ಪನಾಚೆ ಹೋಟೆಲ್ ಪಕ್ಕದಲ್ಲಿರುವ 'ಟ್ವಿನ್ ಟವರ್' ಸೊಸೈಟಿಯಲ್ಲಿ ವಾಸಿಸುತ್ತಿದ್ದರು. ತಮ್ಮ ನಿವಾಸದ ಸಮೀಪದಲ್ಲೇ ಫ್ಲಾಟ್ ಒಂದನ್ನ ಖರೀದಿ ಮಾಡಿದ್ದರು. ಅದೇ ಫ್ಲಾಟ್ ಗೆ ಹೋಗಲು ಹೊರಟವರು ಕಾರಿನಿಂದ ಇಳಿಯುತ್ತಿದ್ದಂತೆ ಅಡಗಿ ಕುಳಿತ್ತಿದ್ದ ಹಂತಕರು ಗೋಪಾಲ್ ಮೇಲೆ ಗುಂಡು ಹಾರಿಸಿ ಕೊಂದಿದ್ದಾರೆ. ಸ್ಥಳಕ್ಕೆ ತೆರಳಿ ಪರಿಶೀಲನೆ ನಡೆಸಿರುವ ಪೊಲೀಸರು ಒಂದು ಗುಂಡು ಮತ್ತು ಶೆಲ್ ಕೇಸಿಂಗ್ ವಶಪಡಿಸಿಕೊಂಡಿದ್ದಾರೆ.


ಚುನಾವಣೆಗೆ ಕೆಲವೇ ತಿಂಗಳಿರುವಾಗ ಹತ್ಯೆ
ಬಿಹಾರ ವಿಧಾನಸಭೆ ಚುನಾವಣೆಗೆ ಇನ್ನು ಕೆಲವೇ ತಿಂಗಳು ಬಾಕಿ ಇದೆ. ಹೀಗಿರುವಾಗಲೇ ಬಿಜೆಪಿ ನಾಯಕನೊಬ್ಬನನ್ನ ಹತ್ಯೆ ಮಾಡಿರುವುದು ಬಿಜೆಪಿಗರ ಆಕ್ರೋಶಕ್ಕೆ ಕಾರಣವಾಗಿದೆ.
6 ವರ್ಷಗಳ ಹಿಂದೆ ಮಗನ ಹತ್ಯೆ
ವಿಚಿತ್ರವೆಂದರೆ 6 ವರ್ಷಗಳ ಹಿಂದೆ 2018ರಲ್ಲಿ ಗೋಪಾಲ್ ಖೇಮ್ಕಾ ಮಗ ಗುಂಜನ್ ಕೂಡ ಇದೇ ರೀತಿ ಗುಂಡಿನ ದಾಳಿಗೆ ಬಲಿಯಾಗಿದ್ದ. ಪಾಟ್ನಾದ ಹೊರವಲಯದ ವೈಶಾಲಿಯಲ್ಲಿರುವ ಹತ್ತಿ ಕಾರ್ಖಾನೆಯ ಮುಂದೆ ತನ್ನ ಕಾರಿನಿಂದ ಇಳಿಯುತ್ತಿದ್ದಾಗ ಬೈಕ್ನಲ್ಲಿ ಬಂದ ದುಷ್ಕರ್ಮಿಗಳು ಗುಂಡು ಹಾರಿಸಿ ಆತನನ್ನ ಹತ್ಯೆ ಮಾಡಿದ್ದರು. ಇದೀಗ ಅದೇ ರೀತಿಯಲ್ಲಿ ತಂದೆ ಗೋಪಾಲ್ ಕೂಡ ಪ್ರಾಣ ತೆತ್ತಿದ್ದಾರೆ.
Prominent businessman Gopal Khemka was shot dead by an unidentified bike-borne assailant in Patna, Bihar, six years after his son, Gunjan Khemka, was killed in a similar manner.
09-11-25 06:53 pm
Bangalore Correspondent
ಇಪಿಎಫ್ ಸೊಸೈಟಿಯಲ್ಲಿ 70 ಕೋಟಿ ದುರ್ಬಳಕೆ ; ಅಕೌಂಟೆಂ...
09-11-25 03:47 pm
ISIS Terrorists, Umesh Reddy, Parappana Agrah...
08-11-25 10:29 pm
High Court Directs Kalaburagi: ಚಿತ್ತಾಪುರ ಆರೆಸ...
08-11-25 12:38 pm
ಯಾವ ಕ್ರಾಂತಿಯೂ ಆಗಲ್ಲ, ವಾಂತಿಯೂ ಆಗಲ್ಲ.. ನನಗೆ ಸಿದ...
07-11-25 09:59 pm
09-11-25 07:49 pm
HK News Desk
ಮುಸ್ಲಿಂ ವ್ಯಕ್ತಿಯ ಎರಡನೇ ಮದುವೆ ನೋಂದಣಿಗೆ ನಿರಾಕರಣ...
07-11-25 05:21 pm
ಮತಗಳವು ಆರೋಪ ; ರಾಹುಲ್ ವಿರುದ್ಧ ತಿರುಗಿಬಿದ್ದ ಮತದಾ...
07-11-25 11:33 am
'ನವೆಂಬರ್ ಕ್ರಾಂತಿ' ವದಂತಿ ತಳ್ಳಿಹಾಕಿದ ಡಿಸಿಎಂ ; ನ...
06-11-25 10:22 pm
ಐಸಿಸಿ ಮಹಿಳಾ ವಿಶ್ವಕಪ್ ಎತ್ತಿಹಿಡಿದ ಭಾರತದ ವನಿತೆಯರ...
03-11-25 01:13 pm
08-11-25 08:31 pm
Mangalore Correspondent
ಬೆಂಗಳೂರು- ಮಂಗಳೂರು ಹೈಸ್ಪೀಡ್ ಕಾರಿಡಾರ್ ; ಶಿರಾಡ...
07-11-25 10:58 pm
ಕುದ್ರೋಳಿ ಕ್ಷೇತ್ರ ಸ್ಥಾಪಿಸಿದ ಫೆ.21ರಂದು ನಾರಾಯಣ ಗ...
07-11-25 07:23 pm
ಗೋಡಂಬಿ ಉದ್ಯಮಕ್ಕೆ ನೂರು ವರ್ಷ ; ನ.14-16ರಂದು ದೇಶದ...
07-11-25 05:25 pm
ನೆಲ್ಯಾಡಿಯಲ್ಲಿ ಹೊಟೇಲ್ ಉದ್ಯಮ ನಡೆಸುತ್ತಿದ್ದ ಅಭಿಷೇ...
07-11-25 02:18 pm
09-11-25 10:27 pm
Mangalore Correspondent
ಬಹುಕೋಟಿ ವಂಚಕ ರೋಷನ್ ಸಲ್ದಾನಗೆ ಸೇರಿದ 2.85 ಕೋಟಿ ಮ...
09-11-25 03:50 pm
ಕೋಮುದ್ವೇಷದ ಕೊಲೆ ; ಪ್ರತೀಕಾರಕ್ಕೆ ಪ್ರಚೋದಿಸಿ ಇನ್...
08-11-25 11:15 pm
Digital Arrest Scam, Mangalore Online Fraud:...
08-11-25 04:08 pm
ಆರೋಪಿಗೆ ಜಾಮೀನು ನೀಡಲು ಹೋಗಿ ತಾನೇ ತಗ್ಲಾಕ್ಕೊಂಡ !...
07-11-25 11:20 pm