ಬ್ರೇಕಿಂಗ್ ನ್ಯೂಸ್
05-07-25 11:04 pm HK News Desk ಕ್ರೈಂ
ಪಾಟ್ನಾ, ಜು.5 : ಬಿಹಾರ ವಿಧಾನಸಭೆ ಚುನಾವಣೆಗೂ ಮುನ್ನ ಗುಂಡಿನ ಸದ್ದು ಕೇಳಿದೆ. ಪಾಟ್ನಾದ ಬಿಜೆಪಿಯ ಪ್ರಮುಖ ನಾಯಕ ಹಾಗೂ ಖ್ಯಾತ ಉದ್ಯಮಿ ಗೋಪಾಲ್ ಖೇಮ್ಕಾ ಅವರನ್ನು ಗುಂಡಿಕ್ಕಿ ಹತ್ಯೆ ಮಾಡಲಾಗಿದೆ. ಶುಕ್ರವಾರ ರಾತ್ರಿ ಬಿಹಾರದ ಪಾಟ್ನಾದಲ್ಲಿರುವ ಅವರ ನಿವಾಸದ ಹೊರಗೆ ಅಪರಿಚಿತರು ಶೂಟ್ ಮಾಡಿ ಎಸ್ಕೇಪ್ ಆಗಿದ್ದಾರೆ.
ಗೋಪಾಲ್ ಖೇಮ್ಕಾ ಬಿಹಾರದ ಅತ್ಯಂತ ಹಳೆಯ ಖಾಸಗಿ ಆಸ್ಪತ್ರೆಗಳಲ್ಲಿ ಒಂದಾದ ಮಗಧ ಆಸ್ಪತ್ರೆಯ ಮಾಲೀಕ ಮತ್ತು ಬಿಜೆಪಿಯಲ್ಲೂ ಸಕ್ರಿಯರಾಗಿ ಗುರುತಿಸಿಕೊಂಡವರು. ಪನಾಚೆ ಹೋಟೆಲ್ ಪಕ್ಕದಲ್ಲಿರುವ 'ಟ್ವಿನ್ ಟವರ್' ಸೊಸೈಟಿಯಲ್ಲಿ ವಾಸಿಸುತ್ತಿದ್ದರು. ತಮ್ಮ ನಿವಾಸದ ಸಮೀಪದಲ್ಲೇ ಫ್ಲಾಟ್ ಒಂದನ್ನ ಖರೀದಿ ಮಾಡಿದ್ದರು. ಅದೇ ಫ್ಲಾಟ್ ಗೆ ಹೋಗಲು ಹೊರಟವರು ಕಾರಿನಿಂದ ಇಳಿಯುತ್ತಿದ್ದಂತೆ ಅಡಗಿ ಕುಳಿತ್ತಿದ್ದ ಹಂತಕರು ಗೋಪಾಲ್ ಮೇಲೆ ಗುಂಡು ಹಾರಿಸಿ ಕೊಂದಿದ್ದಾರೆ. ಸ್ಥಳಕ್ಕೆ ತೆರಳಿ ಪರಿಶೀಲನೆ ನಡೆಸಿರುವ ಪೊಲೀಸರು ಒಂದು ಗುಂಡು ಮತ್ತು ಶೆಲ್ ಕೇಸಿಂಗ್ ವಶಪಡಿಸಿಕೊಂಡಿದ್ದಾರೆ.
ಚುನಾವಣೆಗೆ ಕೆಲವೇ ತಿಂಗಳಿರುವಾಗ ಹತ್ಯೆ
ಬಿಹಾರ ವಿಧಾನಸಭೆ ಚುನಾವಣೆಗೆ ಇನ್ನು ಕೆಲವೇ ತಿಂಗಳು ಬಾಕಿ ಇದೆ. ಹೀಗಿರುವಾಗಲೇ ಬಿಜೆಪಿ ನಾಯಕನೊಬ್ಬನನ್ನ ಹತ್ಯೆ ಮಾಡಿರುವುದು ಬಿಜೆಪಿಗರ ಆಕ್ರೋಶಕ್ಕೆ ಕಾರಣವಾಗಿದೆ.
6 ವರ್ಷಗಳ ಹಿಂದೆ ಮಗನ ಹತ್ಯೆ
ವಿಚಿತ್ರವೆಂದರೆ 6 ವರ್ಷಗಳ ಹಿಂದೆ 2018ರಲ್ಲಿ ಗೋಪಾಲ್ ಖೇಮ್ಕಾ ಮಗ ಗುಂಜನ್ ಕೂಡ ಇದೇ ರೀತಿ ಗುಂಡಿನ ದಾಳಿಗೆ ಬಲಿಯಾಗಿದ್ದ. ಪಾಟ್ನಾದ ಹೊರವಲಯದ ವೈಶಾಲಿಯಲ್ಲಿರುವ ಹತ್ತಿ ಕಾರ್ಖಾನೆಯ ಮುಂದೆ ತನ್ನ ಕಾರಿನಿಂದ ಇಳಿಯುತ್ತಿದ್ದಾಗ ಬೈಕ್ನಲ್ಲಿ ಬಂದ ದುಷ್ಕರ್ಮಿಗಳು ಗುಂಡು ಹಾರಿಸಿ ಆತನನ್ನ ಹತ್ಯೆ ಮಾಡಿದ್ದರು. ಇದೀಗ ಅದೇ ರೀತಿಯಲ್ಲಿ ತಂದೆ ಗೋಪಾಲ್ ಕೂಡ ಪ್ರಾಣ ತೆತ್ತಿದ್ದಾರೆ.
Prominent businessman Gopal Khemka was shot dead by an unidentified bike-borne assailant in Patna, Bihar, six years after his son, Gunjan Khemka, was killed in a similar manner.
17-10-25 08:39 pm
HK News Desk
ಆರೆಸ್ಸೆಸ್ ಚಟುವಟಿಕೆ ಕಡಿವಾಣಕ್ಕೆ ಕೌಂಟರ್ ; ಸಾರ್ವಜ...
17-10-25 05:27 pm
ಸರ್ಕಾರಿ ಸ್ಥಳಗಳಲ್ಲಿ ಆರೆಸ್ಸೆಸ್ ಚಟುವಟಿಕೆಗೆ ಬ್ರೇಕ...
16-10-25 09:04 pm
ನವೆಂಬರಲ್ಲಿ ಅಧಿಕಾರ ಬಿಡಲು ಹೈಕಮಾಂಡ್ ಹೇಳಿಲ್ಲ, ಸಿದ...
16-10-25 04:44 pm
ಆರೆಸ್ಸೆಸ್ ಚಟುವಟಿಕೆ ನಿಷೇಧ ; ಸಚಿವ ಪ್ರಿಯಾಂಕ ಖರ್ಗ...
16-10-25 04:40 pm
17-10-25 05:25 pm
HK News Desk
ಗುಜರಾತ್ ನಲ್ಲಿ ದಿಢೀರ್ ಸಂಪುಟ ಸರ್ಜರಿ ! ಸಿಎಂ ಭೂಪೇ...
16-10-25 10:52 pm
ಕಂದಹಾರ್ ಮೇಲೆ ಪಾಕ್ ವಾಯುಪಡೆ ಬಾಂಬ್ ದಾಳಿ ; ತಾಲಿಬಾ...
15-10-25 11:02 pm
ರಾಜಸ್ಥಾನದಲ್ಲಿ ಭೀಕರ ಬಸ್ ದುರಂತ ; ಮಕ್ಕಳು, ಮಹಿಳೆಯ...
15-10-25 12:09 pm
ಟ್ರಂಪ್ ಒತ್ತಡ ನಡುವೆಯೇ ಭಾರತದಲ್ಲಿ ಗೂಗಲ್ ಸಂಸ್ಥೆ ಭ...
14-10-25 10:33 pm
17-10-25 09:36 pm
Mangalore Correspondent
1971ರ ಭಾರತ - ಪಾಕ್ ಯುದ್ಧದಲ್ಲಿ ಹೆಲಿಕಾಪ್ಟರ್ ನಿಂದ...
16-10-25 10:37 pm
ತಲೆಮರೆಸಿಕೊಂಡ ಆರೋಪಿಗಳ ಬೆನ್ನುಬಿದ್ದ ಮಂಗಳೂರು ಪೊಲೀ...
16-10-25 08:26 pm
ಪ್ರಿಯಾಂಕ ಖರ್ಗೆ ಮಾತು ಸರಿಯಾಗಿಯೇ ಇದೆ, ಸಮಾಜದಲ್ಲಿ...
16-10-25 05:09 pm
ತೆಂಕುತಿಟ್ಟಿನ ಪ್ರಸಿದ್ಧ ಭಾಗವತ, ಗಾನ ಕೋಗಿಲೆ ದಿನೇಶ...
16-10-25 01:11 pm
17-10-25 03:27 pm
Bangalore Correspondent
Vitla Honeytrap case, Police, Mangalore: ಬಶೀರ...
17-10-25 03:23 pm
ಆತ್ಮಶಕ್ತಿ ಬೆನ್ನಲ್ಲೇ ಒಡಿಯೂರು ಸಹಕಾರಿ ಬ್ಯಾಂಕಿಗೂ...
17-10-25 11:56 am
ಕೆಪಿಸಿಸಿಯಲ್ಲಿ ಕೆಲಸ ಮಾಡುತ್ತಿದ್ದೇನೆಂದು ಹೇಳಿ ಹಲವ...
17-10-25 11:53 am
ಹುಷಾರಿಲ್ಲದ ವೈದ್ಯೆ ಪತ್ನಿಯನ್ನು ಕೈಯಾರೆ ಇಂಜೆಕ್ಷನ್...
15-10-25 04:51 pm