ಬ್ರೇಕಿಂಗ್ ನ್ಯೂಸ್
05-07-25 11:04 pm HK News Desk ಕ್ರೈಂ
ಪಾಟ್ನಾ, ಜು.5 : ಬಿಹಾರ ವಿಧಾನಸಭೆ ಚುನಾವಣೆಗೂ ಮುನ್ನ ಗುಂಡಿನ ಸದ್ದು ಕೇಳಿದೆ. ಪಾಟ್ನಾದ ಬಿಜೆಪಿಯ ಪ್ರಮುಖ ನಾಯಕ ಹಾಗೂ ಖ್ಯಾತ ಉದ್ಯಮಿ ಗೋಪಾಲ್ ಖೇಮ್ಕಾ ಅವರನ್ನು ಗುಂಡಿಕ್ಕಿ ಹತ್ಯೆ ಮಾಡಲಾಗಿದೆ. ಶುಕ್ರವಾರ ರಾತ್ರಿ ಬಿಹಾರದ ಪಾಟ್ನಾದಲ್ಲಿರುವ ಅವರ ನಿವಾಸದ ಹೊರಗೆ ಅಪರಿಚಿತರು ಶೂಟ್ ಮಾಡಿ ಎಸ್ಕೇಪ್ ಆಗಿದ್ದಾರೆ.
ಗೋಪಾಲ್ ಖೇಮ್ಕಾ ಬಿಹಾರದ ಅತ್ಯಂತ ಹಳೆಯ ಖಾಸಗಿ ಆಸ್ಪತ್ರೆಗಳಲ್ಲಿ ಒಂದಾದ ಮಗಧ ಆಸ್ಪತ್ರೆಯ ಮಾಲೀಕ ಮತ್ತು ಬಿಜೆಪಿಯಲ್ಲೂ ಸಕ್ರಿಯರಾಗಿ ಗುರುತಿಸಿಕೊಂಡವರು. ಪನಾಚೆ ಹೋಟೆಲ್ ಪಕ್ಕದಲ್ಲಿರುವ 'ಟ್ವಿನ್ ಟವರ್' ಸೊಸೈಟಿಯಲ್ಲಿ ವಾಸಿಸುತ್ತಿದ್ದರು. ತಮ್ಮ ನಿವಾಸದ ಸಮೀಪದಲ್ಲೇ ಫ್ಲಾಟ್ ಒಂದನ್ನ ಖರೀದಿ ಮಾಡಿದ್ದರು. ಅದೇ ಫ್ಲಾಟ್ ಗೆ ಹೋಗಲು ಹೊರಟವರು ಕಾರಿನಿಂದ ಇಳಿಯುತ್ತಿದ್ದಂತೆ ಅಡಗಿ ಕುಳಿತ್ತಿದ್ದ ಹಂತಕರು ಗೋಪಾಲ್ ಮೇಲೆ ಗುಂಡು ಹಾರಿಸಿ ಕೊಂದಿದ್ದಾರೆ. ಸ್ಥಳಕ್ಕೆ ತೆರಳಿ ಪರಿಶೀಲನೆ ನಡೆಸಿರುವ ಪೊಲೀಸರು ಒಂದು ಗುಂಡು ಮತ್ತು ಶೆಲ್ ಕೇಸಿಂಗ್ ವಶಪಡಿಸಿಕೊಂಡಿದ್ದಾರೆ.


ಚುನಾವಣೆಗೆ ಕೆಲವೇ ತಿಂಗಳಿರುವಾಗ ಹತ್ಯೆ
ಬಿಹಾರ ವಿಧಾನಸಭೆ ಚುನಾವಣೆಗೆ ಇನ್ನು ಕೆಲವೇ ತಿಂಗಳು ಬಾಕಿ ಇದೆ. ಹೀಗಿರುವಾಗಲೇ ಬಿಜೆಪಿ ನಾಯಕನೊಬ್ಬನನ್ನ ಹತ್ಯೆ ಮಾಡಿರುವುದು ಬಿಜೆಪಿಗರ ಆಕ್ರೋಶಕ್ಕೆ ಕಾರಣವಾಗಿದೆ.
6 ವರ್ಷಗಳ ಹಿಂದೆ ಮಗನ ಹತ್ಯೆ
ವಿಚಿತ್ರವೆಂದರೆ 6 ವರ್ಷಗಳ ಹಿಂದೆ 2018ರಲ್ಲಿ ಗೋಪಾಲ್ ಖೇಮ್ಕಾ ಮಗ ಗುಂಜನ್ ಕೂಡ ಇದೇ ರೀತಿ ಗುಂಡಿನ ದಾಳಿಗೆ ಬಲಿಯಾಗಿದ್ದ. ಪಾಟ್ನಾದ ಹೊರವಲಯದ ವೈಶಾಲಿಯಲ್ಲಿರುವ ಹತ್ತಿ ಕಾರ್ಖಾನೆಯ ಮುಂದೆ ತನ್ನ ಕಾರಿನಿಂದ ಇಳಿಯುತ್ತಿದ್ದಾಗ ಬೈಕ್ನಲ್ಲಿ ಬಂದ ದುಷ್ಕರ್ಮಿಗಳು ಗುಂಡು ಹಾರಿಸಿ ಆತನನ್ನ ಹತ್ಯೆ ಮಾಡಿದ್ದರು. ಇದೀಗ ಅದೇ ರೀತಿಯಲ್ಲಿ ತಂದೆ ಗೋಪಾಲ್ ಕೂಡ ಪ್ರಾಣ ತೆತ್ತಿದ್ದಾರೆ.
Prominent businessman Gopal Khemka was shot dead by an unidentified bike-borne assailant in Patna, Bihar, six years after his son, Gunjan Khemka, was killed in a similar manner.
29-05-26 04:30 pm
HK News Staffer
ಸಿದ್ದರಾಮಯ್ಯ ರಾಜೀನಾಮೆಗೆ ರಾಜ್ಯಪಾಲರಿಂದ ಅಧಿಕೃತ ಮು...
29-05-26 10:29 am
ರಾಜ್ಯದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬರಲು ಸಿದ್ದರಾ...
28-05-26 06:18 pm
CM Siddaramaiah, Supporters crying, Kaveri: ಸ...
28-05-26 05:31 pm
ರಾಜ್ಯಸಭೆಗೆ ಹೋಗಲ್ಲ, ರಾಜ್ಯದಲ್ಲೇ ಸಕ್ರಿಯ ರಾಜಕಾರಣದ...
28-05-26 04:34 pm
29-05-26 06:17 pm
HK News Staffer
ಟಿಎಂಸಿಯಲ್ಲಿ ಬಿರುಕು ; 50 ಶಾಸಕರು, ಸಂಸದರು ಬಿಜೆಪಿ...
27-05-26 09:17 pm
ಕೇರಳ ರಾಜಕಾರಣದಲ್ಲಿ ಭಾರೀ ಸಂಚಲನ..! ಮಾಜಿ ಸಿಎಂ ಪಿಣ...
27-05-26 08:36 pm
ಜೂನ್, ಜುಲೈನಲ್ಲಿ 12 ಪರಿಷತ್ ಸ್ಥಾನಗಳಿಗೆ ಚುನಾವಣೆ...
26-05-26 12:54 pm
ಗೃಹಲಕ್ಷ್ಮಿ ಪಡೆಯಲು ಬಯೋಮೆಟ್ರಿಕ್ ಕಡ್ಡಾಯ ; ಕೂಡಲೇ...
26-05-26 12:50 pm
28-05-26 02:45 pm
HK News Staffer
ಡಿಸಿಎಂ ಆಗಬೇಕೆಂಬ ಪೋಸ್ಟ್ ಸಾಮಾಜಿಕ ಜಾಲತಾಣದಲ್ಲಿ ಹಾ...
28-05-26 02:28 pm
ಕುದುರೆಮುಖ ಅದಿರು ಕಂಪನಿ ಕಾರ್ಮಿಕರ ಬೇಡಿಕೆ ಈಡೇರಿಸಿ...
27-05-26 12:29 pm
ಕಟೀಲು ಶಿಬರೂರಿನಲ್ಲಿ ಮರಳು ದರೋಡೆ ರಾಜಾರೋಷ ; ಇಲ್ಲಿ...
26-05-26 09:02 pm
ನೌಕಾಪಡೆ ಸಬ್ ಲೆಫ್ಟಿನೆಂಟ್ ಆಗಿ ನೇಮಕಗೊಂಡ ನಿಶೆಲ್ ಡ...
26-05-26 07:52 pm
29-05-26 08:30 pm
HK News Staffer
ಕಾರಿನ ಟೈಯರ್ ಬ್ಲಾಸ್ಟ್ ಆಗಿ ರಸ್ತೆಬದಿ ನಿಂತಿದ್ದ...
29-05-26 03:05 pm
ಬಕ್ರೀದ್ ಹಿನ್ನೆಲೆ, ರಾತ್ರೋರಾತ್ರಿ ಮನೆ ಕೊಟ್ಟಿಗೆಯಲ...
28-05-26 09:44 pm
ಕರ್ತವ್ಯದಲ್ಲಿದ್ದ ಟ್ರಾಫಿಕ್ ಪೊಲೀಸರಿಗೆ ಡಿಕ್ಕಿ ಹೊಡ...
28-05-26 10:43 am
ನಿಲ್ಲಿಸಿದ್ದ ಬೈಕ್ ಕದ್ದು ಪರಾರಿಯಾಗಿದ್ದ ಇಬ್ಬರು ನಟ...
27-05-26 08:34 pm