ಬ್ರೇಕಿಂಗ್ ನ್ಯೂಸ್
05-07-25 11:04 pm HK News Desk ಕ್ರೈಂ
ಪಾಟ್ನಾ, ಜು.5 : ಬಿಹಾರ ವಿಧಾನಸಭೆ ಚುನಾವಣೆಗೂ ಮುನ್ನ ಗುಂಡಿನ ಸದ್ದು ಕೇಳಿದೆ. ಪಾಟ್ನಾದ ಬಿಜೆಪಿಯ ಪ್ರಮುಖ ನಾಯಕ ಹಾಗೂ ಖ್ಯಾತ ಉದ್ಯಮಿ ಗೋಪಾಲ್ ಖೇಮ್ಕಾ ಅವರನ್ನು ಗುಂಡಿಕ್ಕಿ ಹತ್ಯೆ ಮಾಡಲಾಗಿದೆ. ಶುಕ್ರವಾರ ರಾತ್ರಿ ಬಿಹಾರದ ಪಾಟ್ನಾದಲ್ಲಿರುವ ಅವರ ನಿವಾಸದ ಹೊರಗೆ ಅಪರಿಚಿತರು ಶೂಟ್ ಮಾಡಿ ಎಸ್ಕೇಪ್ ಆಗಿದ್ದಾರೆ.
ಗೋಪಾಲ್ ಖೇಮ್ಕಾ ಬಿಹಾರದ ಅತ್ಯಂತ ಹಳೆಯ ಖಾಸಗಿ ಆಸ್ಪತ್ರೆಗಳಲ್ಲಿ ಒಂದಾದ ಮಗಧ ಆಸ್ಪತ್ರೆಯ ಮಾಲೀಕ ಮತ್ತು ಬಿಜೆಪಿಯಲ್ಲೂ ಸಕ್ರಿಯರಾಗಿ ಗುರುತಿಸಿಕೊಂಡವರು. ಪನಾಚೆ ಹೋಟೆಲ್ ಪಕ್ಕದಲ್ಲಿರುವ 'ಟ್ವಿನ್ ಟವರ್' ಸೊಸೈಟಿಯಲ್ಲಿ ವಾಸಿಸುತ್ತಿದ್ದರು. ತಮ್ಮ ನಿವಾಸದ ಸಮೀಪದಲ್ಲೇ ಫ್ಲಾಟ್ ಒಂದನ್ನ ಖರೀದಿ ಮಾಡಿದ್ದರು. ಅದೇ ಫ್ಲಾಟ್ ಗೆ ಹೋಗಲು ಹೊರಟವರು ಕಾರಿನಿಂದ ಇಳಿಯುತ್ತಿದ್ದಂತೆ ಅಡಗಿ ಕುಳಿತ್ತಿದ್ದ ಹಂತಕರು ಗೋಪಾಲ್ ಮೇಲೆ ಗುಂಡು ಹಾರಿಸಿ ಕೊಂದಿದ್ದಾರೆ. ಸ್ಥಳಕ್ಕೆ ತೆರಳಿ ಪರಿಶೀಲನೆ ನಡೆಸಿರುವ ಪೊಲೀಸರು ಒಂದು ಗುಂಡು ಮತ್ತು ಶೆಲ್ ಕೇಸಿಂಗ್ ವಶಪಡಿಸಿಕೊಂಡಿದ್ದಾರೆ.


ಚುನಾವಣೆಗೆ ಕೆಲವೇ ತಿಂಗಳಿರುವಾಗ ಹತ್ಯೆ
ಬಿಹಾರ ವಿಧಾನಸಭೆ ಚುನಾವಣೆಗೆ ಇನ್ನು ಕೆಲವೇ ತಿಂಗಳು ಬಾಕಿ ಇದೆ. ಹೀಗಿರುವಾಗಲೇ ಬಿಜೆಪಿ ನಾಯಕನೊಬ್ಬನನ್ನ ಹತ್ಯೆ ಮಾಡಿರುವುದು ಬಿಜೆಪಿಗರ ಆಕ್ರೋಶಕ್ಕೆ ಕಾರಣವಾಗಿದೆ.
6 ವರ್ಷಗಳ ಹಿಂದೆ ಮಗನ ಹತ್ಯೆ
ವಿಚಿತ್ರವೆಂದರೆ 6 ವರ್ಷಗಳ ಹಿಂದೆ 2018ರಲ್ಲಿ ಗೋಪಾಲ್ ಖೇಮ್ಕಾ ಮಗ ಗುಂಜನ್ ಕೂಡ ಇದೇ ರೀತಿ ಗುಂಡಿನ ದಾಳಿಗೆ ಬಲಿಯಾಗಿದ್ದ. ಪಾಟ್ನಾದ ಹೊರವಲಯದ ವೈಶಾಲಿಯಲ್ಲಿರುವ ಹತ್ತಿ ಕಾರ್ಖಾನೆಯ ಮುಂದೆ ತನ್ನ ಕಾರಿನಿಂದ ಇಳಿಯುತ್ತಿದ್ದಾಗ ಬೈಕ್ನಲ್ಲಿ ಬಂದ ದುಷ್ಕರ್ಮಿಗಳು ಗುಂಡು ಹಾರಿಸಿ ಆತನನ್ನ ಹತ್ಯೆ ಮಾಡಿದ್ದರು. ಇದೀಗ ಅದೇ ರೀತಿಯಲ್ಲಿ ತಂದೆ ಗೋಪಾಲ್ ಕೂಡ ಪ್ರಾಣ ತೆತ್ತಿದ್ದಾರೆ.
Prominent businessman Gopal Khemka was shot dead by an unidentified bike-borne assailant in Patna, Bihar, six years after his son, Gunjan Khemka, was killed in a similar manner.
12-09-26 09:40 pm
HK News Staffer
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
ಬಿಜೆಪಿ ಅಧಿಕಾರಕ್ಕೆ ಬರಲು ನನ್ನ ಸ್ಥಾನ ಬಿಟ್ಟುಕೊಟ್ಟ...
12-09-26 05:56 pm
ಐಎಎಸ್ ತೇರ್ಗಡೆಯಾಗಿದ್ದ ಕೇರಳದ ಮೊದಲ ಬುಡಕಟ್ಟು ಮಹಿಳ...
12-09-26 05:53 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
15-09-26 09:46 am
HK News Staffer
ತುಳುನಾಡಿನಲ್ಲಿ ವಿಭಿನ್ನ ಗಣೇಶ ಚತುರ್ಥಿ ; ಮಣ್ಣಿನ ಮ...
14-09-26 10:01 pm
ಮಂಗಳೂರಿನಲ್ಲಿ ಎರಡು ದಿನ ಸಿಎಂ ಡಿಕೆಶಿ ವಾಸ್ತವ್ಯ ;...
14-09-26 06:02 pm
100 ವರ್ಷಗಳ ಬಳಿಕವೂ ಸ್ವಂತ ಸೂರಿಗಾಗಿ ಕರಾವಳಿಯಲ್ಲಿ...
14-09-26 05:00 pm
Konkan Catholic Credit Society Inaugurated in...
14-09-26 04:18 pm
12-09-26 07:41 pm
HK News Staffer
ಕ್ರಿಪ್ಟೊ ಕರೆನ್ಸಿ ಹೆಸ್ರಲ್ಲಿ ಡಾಕ್ಟರ್ ಗೆ ಮಹಿಳೆಯಿ...
11-09-26 06:38 pm
ಜಾಮೀನು ಪಡೆಯಲು ನಕಲಿ ಆಧಾರ್ ಕಾರ್ಡ್ ಹಾಜರು ; ಉಡು...
11-09-26 01:09 pm
ಬೈಕ್ಗೆ ಡಿಕ್ಕಿ ಹೊಡೆದ ಕಾರು ; ಚಾಮರಾಜನಗರದಲ್ಲಿ ಮೂ...
11-09-26 10:14 am
ಕುಂದಾಪುರದಲ್ಲಿ 8 ಶಾಲಾ ಮಕ್ಕಳ ಬಲಿ ಪಡೆದ ಭೀಕರ ಅಪಘಾ...
10-09-26 08:16 pm