ಬ್ರೇಕಿಂಗ್ ನ್ಯೂಸ್
06-07-25 01:23 pm HK News Desk ಕ್ರೈಂ
ಚಾಮರಾಜನಗರ, ಜು 05: ಗರ್ಭಿಣಿ ಹೆಂಡತಿಯನ್ನ ತಾಳಿ ಕಟ್ಟಿದ ಪತಿಯೇ ಕೊಲೆ ಮಾಡಿರುವ ಘಟನೆ ತಾಲೂಕಿನ ಡೊಳ್ಳಿಪುರದ ತೋಟದ ಮನೆಯಲ್ಲಿ ನಡೆದಿದೆ.
ಶುಭಾ ಎರಡೂವರೆ ತಿಂಗಳ ಗರ್ಭಿಣಿ, ಸಂತೋಷದಲ್ಲಿ ತೇಲಾಡುತ್ತಿದ್ದ ಹೆಂಡತಿಗೆ ಮನೆಯಲ್ಲೇ ಕೊಲೆಗಡುಕ ಅಡ್ಡಾಡಿಕೊಂಡಿರುವ ವಿಷಯ ಗೊತ್ತಿರಲಿಲ್ಲ. ಇತ್ತ ಗಂಡನಿಗೆ ಹಣಕಾಸಿನ ತೊಂದರೆ, ಹೀಗಾಗಿ ಪತ್ನಿ ಶುಭಾಳಿಗೆ ತವರು ಮನೆಯಿಂದ ಹಣ ತರುವಂತೆ ಪದೇ ಪದೇ ಪೀಡಿಸುತ್ತಿದ್ದ. ಶುಭಾ ಮಗು ಬೇಕು ಅಂತ ಹಠ ಮಾಡುತ್ತಿದ್ದಳು, ಗಂಡ ಮಹೇಶ್ ಮಾತ್ರ ಈಗ ಮಗು ಬೇಡ ಎಂದು ಗಲಾಟೆ ಮಾಡ್ತಿದ್ದ. ಕೊನೆಗೂ ಗರ್ಭಿಣಿಯಾದ ಶುಭ ಗಂಡನಿಗೆ ವಿಷಯ ತಿಳಿಸಿರಲಿಲ್ಲ, ಕುಟುಂಬಸ್ಥರಲ್ಲಿ ಸಂತೋಷವೇ ಸಂತೋಷ, ಇನ್ನೊಂದೆಡೆ ಗರ್ಭಿಣಿಯಾಗಿರುವುದನ್ನ ಇಷ್ಟು ತಡವಾಗಿ ಯಾಕೆ ಹೇಳುತ್ತಿದ್ದಿಯ ಎಂದು ಜಗಳ ಮಾಡುತ್ತಿದ್ದ ಗಂಡ, ಪತ್ನಿ ಗರ್ಭಿಣಿಯಾಗಿರುವ ಬಗ್ಗೆ ಅನುಮಾನ. ಇದನ್ನೇ ನೆಪವಾಗಿಟ್ಟುಕೊಂಡು ಹೆಂಡತಿಯನ್ನ ಫಿನಿಷ್ ಮಾಡಿಯೇಬಿಟ್ಟ.
ಈ ಕುರಿತು ಎಸ್ಪಿ ಕವಿತಾ ಮಾತನಾಡಿದ್ದು, ಮಹಿಳೆಯ ಕೊಲೆ ಕುರಿತು ಕಂಟ್ರೋಲ್ ರೂಮ್ಗೆ ಕರೆ ಬಂದಿತ್ತು. ನಂತರ ನಮ್ಮ ಸಿಬ್ಬಂದಿಗಳು ಸ್ಥಳಕ್ಕೆ ಹೋಗಿ ಪರಿಶೀಲನೆ ನಡೆಸಿದ್ದಾರೆ. ಅಲ್ಲಿ ಶುಭಾ ಮನೆ ಮುಂದೆ ರಕ್ತದ ಮಡುವಿನಲ್ಲಿ ಬಿದ್ದಿದ್ದು ಎಂದು ಮಾಹಿತಿ ನೀಡಿದ್ದಾರೆ.
ಮೃತ ಮಹಿಳೆ ತನ್ನ ಗಂಡ ಮಹೇಶ್ ಹಾಗೂ ಅತ್ತೆ ಭಾರತಿ ಜೊತೆ ತೋಟದ ಮನೆಯಲ್ಲಿ ವಾಸ ಮಾಡುತ್ತಿದ್ದರು. ಮಧ್ಯಾಹ್ನದ ನಂತರ ಬೆಂಗಳೂರಿನಿಂದ ಬಂದ ಶುಭಾ ಅವರ ಸಹೋದರಿ ಠಾಣೆಗೆ ಒಂದು ದೂರು ಕೊಟ್ಟಿದ್ದರು. ಅದರಲ್ಲಿ ನಮ್ಮ ಅಕ್ಕನ ಗಂಡನೇ ಕೊಲೆ ಮಾಡಿರಬಹುದು, ಅದಕ್ಕೆ ಅವರ ಅತ್ತೆಯೇ ಕುಮ್ಮಕ್ಕು ಕೊಟ್ಟಿರಬಹುದು ಎಂದು ಸಂಶಯ ವ್ಯಕ್ತಪಡಿಸಿ ದೂರನ್ನು ದಾಖಲಿಸಿದ್ದರು.
ಕೊಲೆಗೆ ಬಳಸಿದ ಆಯುಧವನ್ನು ಮನೆಯಿಂದ ಸ್ವಲ್ಪ ದೂರದಲ್ಲಿ ಹೋಗಿ ಬಚ್ಚಿಟ್ಟಿದ್ದ. ಅದನ್ನು ವಶಕ್ಕೆ ಪಡೆದು ನಂತರ ನ್ಯಾಯಾಂಗ ಬಂಧನಕ್ಕೆ ಕಳುಹಿಸಿದ್ದೇವೆ ಎಂದು ತಿಳಿಸಿದ್ದಾರೆ.
"ಗರ್ಭಿಣಿಯಾದ ಮಗಳ ಶವ ರಕ್ತದ ಮಡುವಿನಲ್ಲಿ ರಸ್ತೆ ಬದಿಯಲ್ಲಿ ಬಿದ್ದಿರುವುದನ್ನು ಕಂಡ ಕ್ಷಣ… ಆ ಮನೆಯವರ ಹೃದಯವೇ ತುಂಡಾಗಿ ಬಿದ್ದಿತು! ಇಡೀ ಜೀವನದ ಕನಸು, ಆಸೆ, ಭವಿಷ್ಯದ ಕನಸುಗಳೆಲ್ಲಾ ಒಂದೇ ಕ್ಷಣದಲ್ಲಿ ಕೆಡವಾಯಿತು. ಮಗಳ ಕರುವಿನ ಮೊರೆ ಕೇಳಲು ಕಾದು ಕುಳಿತಿದ್ದ ಮನೆಯವರು, ಈಗ ಆ ಮಗು ಕೂಡಾ ಬೆಳಗದೇ ಹೋಗಿರುವ ಆಘಾತಕ್ಕೆ ಶಬ್ದವೇ ಇಲ್ಲ…!
In a shocking incident, a man has allegedly murdered his pregnant wife at a farmhouse in Dollepur village of the taluk. The accused, identified as Mahesh, is said to have killed his wife Shubha, who was over two and a half months pregnant.
03-05-26 01:30 pm
HK News Staffer
ಶೃಂಗೇರಿ ಕ್ಷೇತ್ರದ ಅಂಚೆ ಮತಗಳ ಮರು ಎಣಿಕೆ; ರಾತ್ರಿಯ...
03-05-26 12:34 pm
2028ರ ಅಸೆಂಬ್ಲಿಯತ್ತ ಕಾಂಗ್ರೆಸ್ ಹೈಕಮಾಂಡ್ ದೃಷ್ಟಿ...
02-05-26 06:35 pm
ತುಮಕೂರಿನಲ್ಲಿ ವಾರದ ಅಂತರದಲ್ಲಿ 44 ನವಿಲು ಸಾವು ; ಬ...
02-05-26 04:48 pm
ಮಲ್ಲಿಕಾnರ್ಜುನ ಖರ್ಗೆ ಸಿಎಂ ಬದಲಾವಣೆ ಇಲ್ಲ ಎಂದಿರುವ...
01-05-26 08:33 pm
02-05-26 08:26 pm
HK News Staffer
ಆನ್ಲೈನ್ ಗೇಮ್ ವಿರುದ್ಧ ಕೇಂದ್ರ ಗದಾಪ್ರಹಾರ ; ಮಕ್ಕಳ...
02-05-26 11:18 am
Actor Vijay, Election, Poll: ಚುನಾವಣೋತ್ತರ ಸಮೀಕ...
29-04-26 11:18 pm
ಇದು ಫ್ರೆಂಡ್ಲಿ ಫೆಡರಲ್ ಅಸ್ಸಾಸಿನ್, ಟ್ರಂಪ್ ಅತ್ಯಾಚ...
27-04-26 02:48 pm
ಶ್ವೇತಭವನದ ಡಿನ್ನರ್ ಪಾರ್ಟಿಯಲ್ಲಿ ಗುಂಡಿನ ದಾಳಿ ; ಭ...
26-04-26 12:49 pm
02-05-26 11:05 pm
Mangalore Correspondent
ತುಂಬೆ ಅಣೆಕಟ್ಟಿನಲ್ಲಿ ಕೃತಕ ಅಭಾವ ಸೃಷ್ಟಿ ; ಸ್ಥಳಕ್...
02-05-26 08:58 pm
Mangalore Accident: ಬಜತ್ತೂರಿನಲ್ಲಿ ಬೈಕ್ - ಲಾರಿ...
29-04-26 11:05 pm
ತಾಲೂಕು ಆಸ್ಪತ್ರೆ ಖಾಸಗಿ ವಶಕ್ಕೆ ; ಆರೋಗ್ಯ ಸಚಿವರ ಉ...
28-04-26 09:18 pm
ASI Assault Case, Mangalore: ಎಎಸ್ಐ ಮೇಲೆ ಹಲ್ಲೆ...
28-04-26 01:35 pm
02-05-26 08:35 pm
HK News Staffer
ಕುಕ್ಕರ್ ಬಾಂಬರ್ ಗೆ 10 ವರ್ಷ ಶಿಕ್ಷೆ ; ಎನ್ಐಎ ಅಧಿಕ...
02-05-26 12:19 pm
ಕೋರ್ಟ್ ಜಟಾಪಟಿ ಬಳಿಕ ಕುದ್ರೋಳಿ ಕ್ಷೇತ್ರಕ್ಕೆ ಹೊಸ ಕ...
01-05-26 09:24 pm
ಸಹೋದ್ಯೋಗಿ ಮೇಲೆ ಆಸಿಡ್ ದಾಳಿ ; ಕೇರಳ ಮೂಲದ ವ್ಯಕ್...
01-05-26 07:18 pm
Rakesh Gladson Dsouza: ಮಂಗಳೂರಿನ ಯುವ ಉದ್ಯಮಿ ರಾ...
01-05-26 06:36 pm