ಬ್ರೇಕಿಂಗ್ ನ್ಯೂಸ್
06-07-25 01:23 pm HK News Desk ಕ್ರೈಂ
ಚಾಮರಾಜನಗರ, ಜು 05: ಗರ್ಭಿಣಿ ಹೆಂಡತಿಯನ್ನ ತಾಳಿ ಕಟ್ಟಿದ ಪತಿಯೇ ಕೊಲೆ ಮಾಡಿರುವ ಘಟನೆ ತಾಲೂಕಿನ ಡೊಳ್ಳಿಪುರದ ತೋಟದ ಮನೆಯಲ್ಲಿ ನಡೆದಿದೆ.
ಶುಭಾ ಎರಡೂವರೆ ತಿಂಗಳ ಗರ್ಭಿಣಿ, ಸಂತೋಷದಲ್ಲಿ ತೇಲಾಡುತ್ತಿದ್ದ ಹೆಂಡತಿಗೆ ಮನೆಯಲ್ಲೇ ಕೊಲೆಗಡುಕ ಅಡ್ಡಾಡಿಕೊಂಡಿರುವ ವಿಷಯ ಗೊತ್ತಿರಲಿಲ್ಲ. ಇತ್ತ ಗಂಡನಿಗೆ ಹಣಕಾಸಿನ ತೊಂದರೆ, ಹೀಗಾಗಿ ಪತ್ನಿ ಶುಭಾಳಿಗೆ ತವರು ಮನೆಯಿಂದ ಹಣ ತರುವಂತೆ ಪದೇ ಪದೇ ಪೀಡಿಸುತ್ತಿದ್ದ. ಶುಭಾ ಮಗು ಬೇಕು ಅಂತ ಹಠ ಮಾಡುತ್ತಿದ್ದಳು, ಗಂಡ ಮಹೇಶ್ ಮಾತ್ರ ಈಗ ಮಗು ಬೇಡ ಎಂದು ಗಲಾಟೆ ಮಾಡ್ತಿದ್ದ. ಕೊನೆಗೂ ಗರ್ಭಿಣಿಯಾದ ಶುಭ ಗಂಡನಿಗೆ ವಿಷಯ ತಿಳಿಸಿರಲಿಲ್ಲ, ಕುಟುಂಬಸ್ಥರಲ್ಲಿ ಸಂತೋಷವೇ ಸಂತೋಷ, ಇನ್ನೊಂದೆಡೆ ಗರ್ಭಿಣಿಯಾಗಿರುವುದನ್ನ ಇಷ್ಟು ತಡವಾಗಿ ಯಾಕೆ ಹೇಳುತ್ತಿದ್ದಿಯ ಎಂದು ಜಗಳ ಮಾಡುತ್ತಿದ್ದ ಗಂಡ, ಪತ್ನಿ ಗರ್ಭಿಣಿಯಾಗಿರುವ ಬಗ್ಗೆ ಅನುಮಾನ. ಇದನ್ನೇ ನೆಪವಾಗಿಟ್ಟುಕೊಂಡು ಹೆಂಡತಿಯನ್ನ ಫಿನಿಷ್ ಮಾಡಿಯೇಬಿಟ್ಟ.
ಈ ಕುರಿತು ಎಸ್ಪಿ ಕವಿತಾ ಮಾತನಾಡಿದ್ದು, ಮಹಿಳೆಯ ಕೊಲೆ ಕುರಿತು ಕಂಟ್ರೋಲ್ ರೂಮ್ಗೆ ಕರೆ ಬಂದಿತ್ತು. ನಂತರ ನಮ್ಮ ಸಿಬ್ಬಂದಿಗಳು ಸ್ಥಳಕ್ಕೆ ಹೋಗಿ ಪರಿಶೀಲನೆ ನಡೆಸಿದ್ದಾರೆ. ಅಲ್ಲಿ ಶುಭಾ ಮನೆ ಮುಂದೆ ರಕ್ತದ ಮಡುವಿನಲ್ಲಿ ಬಿದ್ದಿದ್ದು ಎಂದು ಮಾಹಿತಿ ನೀಡಿದ್ದಾರೆ.
ಮೃತ ಮಹಿಳೆ ತನ್ನ ಗಂಡ ಮಹೇಶ್ ಹಾಗೂ ಅತ್ತೆ ಭಾರತಿ ಜೊತೆ ತೋಟದ ಮನೆಯಲ್ಲಿ ವಾಸ ಮಾಡುತ್ತಿದ್ದರು. ಮಧ್ಯಾಹ್ನದ ನಂತರ ಬೆಂಗಳೂರಿನಿಂದ ಬಂದ ಶುಭಾ ಅವರ ಸಹೋದರಿ ಠಾಣೆಗೆ ಒಂದು ದೂರು ಕೊಟ್ಟಿದ್ದರು. ಅದರಲ್ಲಿ ನಮ್ಮ ಅಕ್ಕನ ಗಂಡನೇ ಕೊಲೆ ಮಾಡಿರಬಹುದು, ಅದಕ್ಕೆ ಅವರ ಅತ್ತೆಯೇ ಕುಮ್ಮಕ್ಕು ಕೊಟ್ಟಿರಬಹುದು ಎಂದು ಸಂಶಯ ವ್ಯಕ್ತಪಡಿಸಿ ದೂರನ್ನು ದಾಖಲಿಸಿದ್ದರು.
ಕೊಲೆಗೆ ಬಳಸಿದ ಆಯುಧವನ್ನು ಮನೆಯಿಂದ ಸ್ವಲ್ಪ ದೂರದಲ್ಲಿ ಹೋಗಿ ಬಚ್ಚಿಟ್ಟಿದ್ದ. ಅದನ್ನು ವಶಕ್ಕೆ ಪಡೆದು ನಂತರ ನ್ಯಾಯಾಂಗ ಬಂಧನಕ್ಕೆ ಕಳುಹಿಸಿದ್ದೇವೆ ಎಂದು ತಿಳಿಸಿದ್ದಾರೆ.
"ಗರ್ಭಿಣಿಯಾದ ಮಗಳ ಶವ ರಕ್ತದ ಮಡುವಿನಲ್ಲಿ ರಸ್ತೆ ಬದಿಯಲ್ಲಿ ಬಿದ್ದಿರುವುದನ್ನು ಕಂಡ ಕ್ಷಣ… ಆ ಮನೆಯವರ ಹೃದಯವೇ ತುಂಡಾಗಿ ಬಿದ್ದಿತು! ಇಡೀ ಜೀವನದ ಕನಸು, ಆಸೆ, ಭವಿಷ್ಯದ ಕನಸುಗಳೆಲ್ಲಾ ಒಂದೇ ಕ್ಷಣದಲ್ಲಿ ಕೆಡವಾಯಿತು. ಮಗಳ ಕರುವಿನ ಮೊರೆ ಕೇಳಲು ಕಾದು ಕುಳಿತಿದ್ದ ಮನೆಯವರು, ಈಗ ಆ ಮಗು ಕೂಡಾ ಬೆಳಗದೇ ಹೋಗಿರುವ ಆಘಾತಕ್ಕೆ ಶಬ್ದವೇ ಇಲ್ಲ…!
In a shocking incident, a man has allegedly murdered his pregnant wife at a farmhouse in Dollepur village of the taluk. The accused, identified as Mahesh, is said to have killed his wife Shubha, who was over two and a half months pregnant.
09-11-25 06:53 pm
Bangalore Correspondent
ಇಪಿಎಫ್ ಸೊಸೈಟಿಯಲ್ಲಿ 70 ಕೋಟಿ ದುರ್ಬಳಕೆ ; ಅಕೌಂಟೆಂ...
09-11-25 03:47 pm
ISIS Terrorists, Umesh Reddy, Parappana Agrah...
08-11-25 10:29 pm
High Court Directs Kalaburagi: ಚಿತ್ತಾಪುರ ಆರೆಸ...
08-11-25 12:38 pm
ಯಾವ ಕ್ರಾಂತಿಯೂ ಆಗಲ್ಲ, ವಾಂತಿಯೂ ಆಗಲ್ಲ.. ನನಗೆ ಸಿದ...
07-11-25 09:59 pm
09-11-25 07:49 pm
HK News Desk
ಮುಸ್ಲಿಂ ವ್ಯಕ್ತಿಯ ಎರಡನೇ ಮದುವೆ ನೋಂದಣಿಗೆ ನಿರಾಕರಣ...
07-11-25 05:21 pm
ಮತಗಳವು ಆರೋಪ ; ರಾಹುಲ್ ವಿರುದ್ಧ ತಿರುಗಿಬಿದ್ದ ಮತದಾ...
07-11-25 11:33 am
'ನವೆಂಬರ್ ಕ್ರಾಂತಿ' ವದಂತಿ ತಳ್ಳಿಹಾಕಿದ ಡಿಸಿಎಂ ; ನ...
06-11-25 10:22 pm
ಐಸಿಸಿ ಮಹಿಳಾ ವಿಶ್ವಕಪ್ ಎತ್ತಿಹಿಡಿದ ಭಾರತದ ವನಿತೆಯರ...
03-11-25 01:13 pm
08-11-25 08:31 pm
Mangalore Correspondent
ಬೆಂಗಳೂರು- ಮಂಗಳೂರು ಹೈಸ್ಪೀಡ್ ಕಾರಿಡಾರ್ ; ಶಿರಾಡ...
07-11-25 10:58 pm
ಕುದ್ರೋಳಿ ಕ್ಷೇತ್ರ ಸ್ಥಾಪಿಸಿದ ಫೆ.21ರಂದು ನಾರಾಯಣ ಗ...
07-11-25 07:23 pm
ಗೋಡಂಬಿ ಉದ್ಯಮಕ್ಕೆ ನೂರು ವರ್ಷ ; ನ.14-16ರಂದು ದೇಶದ...
07-11-25 05:25 pm
ನೆಲ್ಯಾಡಿಯಲ್ಲಿ ಹೊಟೇಲ್ ಉದ್ಯಮ ನಡೆಸುತ್ತಿದ್ದ ಅಭಿಷೇ...
07-11-25 02:18 pm
09-11-25 10:27 pm
Mangalore Correspondent
ಬಹುಕೋಟಿ ವಂಚಕ ರೋಷನ್ ಸಲ್ದಾನಗೆ ಸೇರಿದ 2.85 ಕೋಟಿ ಮ...
09-11-25 03:50 pm
ಕೋಮುದ್ವೇಷದ ಕೊಲೆ ; ಪ್ರತೀಕಾರಕ್ಕೆ ಪ್ರಚೋದಿಸಿ ಇನ್...
08-11-25 11:15 pm
Digital Arrest Scam, Mangalore Online Fraud:...
08-11-25 04:08 pm
ಆರೋಪಿಗೆ ಜಾಮೀನು ನೀಡಲು ಹೋಗಿ ತಾನೇ ತಗ್ಲಾಕ್ಕೊಂಡ !...
07-11-25 11:20 pm