ಬ್ರೇಕಿಂಗ್ ನ್ಯೂಸ್
07-07-25 12:20 pm Mangalore Correspondent ಕ್ರೈಂ
ಪುತ್ತೂರು, ಜು.7 : ಪುತ್ತೂರ ತಾಲೂಕಿನ ಬಿರುಮಲೆಬೆಟ್ಟ ಎಂಬಲ್ಲಿ ಅಪ್ರಾಪ್ತ ಯುವಕ- ಯುವತಿ ಜೊತೆಗಿರುವುದನ್ನು ಕಂಡು ಅನ್ಯಧರ್ಮದ ಯುವಕನೆಂದು ಭ್ರಮಿಸಿ ಕಿಡಿಗೇಡಿಗಳು ಹಲ್ಲೆಗೆ ಯತ್ನಿಸಿದ ಘಟನೆ ನಡೆದಿದ್ದು ಅವರ ಫೋಟೋ ಹಾಗೂ ವಿಡಿಯೋ ತೆಗೆದು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಮಾಡಿದ್ದಾರೆ. ನೀನು ಬ್ಯಾರಿಯಲ್ವಾ ಎಂದು ಹೇಳಿ ನಿಂದಿಸಿದ್ದು ಘಟನೆ ಬಗ್ಗೆ ದೂರು ದಾಖಲಾಗುತ್ತಿದ್ದಂತೆ ಪೊಲೀಸರು ಇಬ್ಬರು ಆರೋಪಿಗಳನ್ನು ಬಂಧಿಸಿದ್ದಾರೆ.
ಈ ಕುರಿತು ದಕ್ಷಿಣ ಕನ್ನಡ ಜಿಲ್ಲಾ ಎಸ್ಪಿ ಅರುಣ್ ಮಾಹಿತಿ ನೀಡಿದ್ದು, ಜುಲೈ 5ರಂದು ಮಧ್ಯಾಹ್ನ ಬಿರುಮಲೆಗುಡ್ಡದಲ್ಲಿ ಹುಡುಗ - ಹುಡುಗಿ ಬೈಕ್ ನಲ್ಲಿ ಓಡಾಡುತ್ತಿದ್ದರು. ಇದೇ ಸಂದರ್ಭ ಇಬ್ಬರು ಅಪರಿಚಿತ ವ್ಯಕ್ತಿಗಳು ಜೋಡಿಗಳನ್ನ ತಡೆದು ನಿಲ್ಲಿಸಿ, ಅವಾಚ್ಯ ಶಬ್ದಗಳಿಂದ ಬೈದು, ನಿಮ್ಮ ವಿಡಿಯೋ ಮಾಡಿ ಸೋಶಿಯಲ್ ಮೀಡಿಯಾದಲ್ಲಿ ಶೇರ್ ಮಾಡ್ತೀವಿ ಎಂದು ಬೆದರಿಕೆವೊಡ್ಡಿ ಹಲ್ಲೆಗೆ ಯತ್ನಿಸಿದ್ದಾರೆ. ಅಲ್ಲದೇ ನೀವು ಅನ್ಯಧರ್ಮದವನೆಂದು ನಿಂದಿಸಿ, ಸ್ಥಳದಲ್ಲಿದ್ದ ಇತರ ಸಾರ್ವಜನಿಕರನ್ನು ಕರೆದು ಅವಮಾನಿಸಿ ವಿಡಿಯೋ ಮಾಡಿದ್ದಾರೆ.
ವಿಡಿಯೋ ವೈರಲ್ ಆದ ಬೆನ್ನಲ್ಲೇ ಹುಡುಗನ ತಂದೆ ಪೊಲೀಸ್ ಠಾಣೆಗೆ ಬಂದು ದೂರು ನೀಡಿದ್ದಾರೆ. ಪುತ್ತೂರು ನಗರ ಠಾಣೆ ಪೊಲೀಸರು ಕಡಬ ತಾಲೂಕಿನ ಕುದ್ಮಾರು ನಿವಾಸಿ ಪುರುಷೋತ್ತಮ (43) ಹಾಗೂ ಪುತ್ತೂರಿನ ಆರ್ಯಾಪು ನಿವಾಸಿ ರಾಮಚಂದ್ರ (38) ಎಂಬವರನ್ನು ವಶಕ್ಕೆ ಪಡೆದಿದ್ದಾರೆ.
ಬಿರುಮಲೆಗುಡ್ಡೆ ಪ್ರದೇಶಕ್ಕೆ ಕಾಲೇಜು ವಿದ್ಯಾರ್ಥಿಗಳು ಬರುವುದು, ಸುತ್ತಾಡುವುದು ಸಾಮಾನ್ಯ. ಅನ್ಯಧರ್ಮದ ಯುವಕರು ಹಿಂದು ಹುಡುಗಿಯರ ಜೊತೆಗೆ ಬರುತ್ತಾರೆಂಬ ಗುಮಾನಿಯಲ್ಲಿ ಈ ಹಿಂದೆಯೂ ನೈತಿಕ ಪೊಲೀಸರಾಗಿ ಹಲ್ಲೆ ನಡೆಸಿದ ಘಟನೆ ನಡೆದಿದೆ. ಸದ್ರಿ ಘಟನೆಯಲ್ಲಿ ಯುವಕ- ಯುವತಿ ಅಪ್ರಾಪ್ತರಾಗಿರುವುದರಿಂದ ಇವರ ವಿಡಿಯೋ ಜಾಲತಾಣದಲ್ಲಿ ಪ್ರಸಾರ ಮಾಡುವುದು ಕಾನೂನು ಬಾಹಿರ. ಹಾಗಾಗಿ, ನೈತಿಕ ಪೊಲೀಸ್ ಕೃತ್ಯದ ಜೊತೆಗೆ ವಿಡಿಯೋ ತೆಗೆದು ವೈರಲ್ ಮಾಡಿದ ಬಗ್ಗೆಯೂ ಆರೋಪಿಗಳ ವಿರುದ್ಧ ಪ್ರಕರಣ ದಾಖಲಾಗಿದೆ.
‘Moral policing’ resurfaced in Dakshina Kannada with the incident of two persons allegedly waylaying two minors, a boy and a girl, insulting them in public and posting the video of the insult on social media in Puttur on Saturday.
17-12-25 10:30 pm
HK News Desk
ಯಶವಂತಪುರ - ಕಾರವಾರ ಗೋಮಟೇಶ್ವರ ಎಕ್ಸ್ ಪ್ರೆಸ್ ರೈಲು...
17-12-25 12:45 pm
ಶೃಂಗೇರಿ ; ಬಿಕಾಂ ಓದುತ್ತಿದ್ದ ವಿದ್ಯಾರ್ಥಿನಿ ಹಠಾತ್...
17-12-25 12:42 pm
ಶಿವಮೊಗ್ಗ, ಧಾರವಾಡ ಸೇರಿ ಹಲವೆಡೆ ಲೋಕಾಯುಕ್ತ ದಾಳಿ ;...
16-12-25 03:08 pm
ಮಂಗಳೂರು ಬೆನ್ನಲ್ಲೇ ತುಮಕೂರು ಜಿಲ್ಲಾಧಿಕಾರಿ ಕಚೇರಿಗ...
16-12-25 12:57 pm
17-12-25 10:27 pm
HK News Desk
ಆಸ್ಟ್ರೇಲಿಯಾ ಬೋಂಡಿ ಬೀಚ್ ದಾಳಿ ; ಹೈದ್ರಾಬಾದ್ ಮೂಲದ...
17-12-25 01:38 pm
ಯುಕೆಯ ಮಿಡ್ಲಾಂಡ್ಸ್ ನಲ್ಲಿ ಕನ್ನಡ ರಾಜ್ಯೋತ್ಸವ ; ಬರ...
16-12-25 06:33 pm
ಭಟ್ಕಳ ತಹಸೀಲ್ದಾರ್ ಕಚೇರಿಗೂ ಸ್ಫೋಟದ ಬೆದರಿಕೆ ; ತಮಿ...
16-12-25 01:56 pm
ಪಾಕಿಸ್ತಾನದ ಎರಡು ವಿವಿಗಳಲ್ಲಿ ಸಂಸ್ಕೃತ ಕಲಿಯಲು ಕೋರ...
15-12-25 08:12 pm
17-12-25 08:54 pm
Mangalore Correspondent
New year 2026, Mangalore Rules: ಹೊಸ ವರ್ಷಾಚರಣೆ...
17-12-25 08:19 pm
Udupi, Baby death: ಉಡುಪಿ ; ತಾಯಿ ಕೈಯಿಂದ ಜಾರಿ ಬ...
17-12-25 05:23 pm
Mangalore Jail, Fight, Ccb Police: ಮಂಗಳೂರು ಜೈ...
17-12-25 05:05 pm
Mangalore Landslide, Death: ಗುಡ್ಡ ಕುಸಿದು ಕಾರ್...
16-12-25 10:25 pm
17-12-25 11:14 am
Bangalore Correspondent
ಕದ್ರಿಯಲ್ಲಿ ಬೈಕ್ ಕದ್ದು ಭಟ್ಕಳದಲ್ಲಿ ಮಹಿಳೆಯ ಸರ ಕಸ...
16-12-25 10:35 pm
Mangalore Crime, Robbery, Mukka: 'ಬಂಗಾರ್ ಒಲ್ಪ...
15-12-25 10:26 pm
Udupi Murder, Brahmavar, Update: ಕುಡಿದ ಮತ್ತಿನ...
15-12-25 05:37 pm
Brahmavar Murder, Udupi Crime: ಎಣ್ಣೆ ಪಾರ್ಟಿಯಲ...
15-12-25 12:19 pm