ಬ್ರೇಕಿಂಗ್ ನ್ಯೂಸ್
07-07-25 07:13 pm Mangalore Correspondent ಕ್ರೈಂ
ಉಳ್ಳಾಲ, ಜು.7 : ಹದಿನಾರರ ವಯಸ್ಸಿನ ಅಪ್ರಾಪ್ತ ಮಗಳು ಮನೆಯಿಂದ ಹೊರ ಹೋದವಳು ಹಿಂತಿರುಗದೇ ಇದ್ದು, ಆಕೆಯನ್ನ ಆಮಿಷ ತೋರಿಸಿ ಯಾರೋ ಅಪಹರಿಸಿ ಹೋಗಿರುವ ಬಗ್ಗೆ ಬಾಲಕಿಯ ತಂದೆ ಉಳ್ಳಾಲ ಠಾಣೆಗೆ ದೂರು ನೀಡಿದ್ದಾರೆ. ತನಿಖೆ ನಡೆಸಿದ ಉಳ್ಳಾಲ ಪೊಲೀಸರು ಬಾಲಕಿಯನ್ನ ಅಪಹರಿಸಿದ ಆರೋಪಿ ಯುವಕ ಮತ್ತು ಆತನಿಗೆ ಸಹಕರಿಸಿದ ದಂಪತಿಯನ್ನ ಬಂಧಿಸಿ ಪೋಕ್ಸೊ ಕಾಯ್ದೆಯಡಿ ಪ್ರಕರಣ ದಾಖಲಿಸಿದ್ದಾರೆ.
ದೇರಳಕಟ್ಟೆ ಸಮೀಪದ ರೆಂಜಾಡಿ ನಿವಾಸಿ ಮಹಮ್ಮದ್ ಶಹಬಾಝ್ (27) ಬಾಲಕಿಯನ್ನ ಅಪಹರಿಸಿದ ಆರೋಪಿಯಾಗಿದ್ದು, ಅಪ್ರಾಪ್ತೆಯನ್ನ ಆಕೆಯ ಮನೆಯಿಂದ ಅಪಹರಿಸಲು ಶಹಬಾಝ್ ಗೆ ಸಹಕರಿಸಿದ ಕೊಣಾಜೆ ನಿವಾಸಿಗಳಾದ ಅಮೀರ್ ಸೊಹೈಲ್, ನಿಶಾ ಎಂಬ ದಂಪತಿಯನ್ನ ಪೊಲೀಸರು ಬಂಧಿಸಿದ್ದಾರೆ.
ಜುಲೈ 5 ರಂದು ಸಂಜೆ 4 ಗಂಟೆಗೆ ಉಳ್ಳಾಲ ಠಾಣೆ ವ್ಯಾಪ್ತಿಯ ಬಾಡಿಗೆ ಮನೆಯಲ್ಲಿ ನೆಲೆಸಿದ್ದ ಮುಸ್ಲಿಂ ವ್ಯಕ್ತಿಯೋರ್ವರ ಅಪ್ರಾಪ್ತ ಮಗಳು ಮನೆಯಿಂದ ಹೊರ ಹೋದವಳು ಹಿಂತಿರುಗಿರಲಿಲ್ಲ. ಈ ಬಗ್ಗೆ ವ್ಯಕ್ತಿಯು ಉಳ್ಳಾಲ ಠಾಣೆಯಲ್ಲಿ ತನ್ನ ಮಗಳನ್ನ ಯಾರೋ ಅಪಹರಿಸಿರೋದಾಗಿ ದೂರು ನೀಡಿದ್ದರು. ಶಹಭಾಝ್ ಈ ಮೊದಲೂ ಬಾಲಕಿಯನ್ನ ಪುಸಲಾಯಿಸಿ ಆಕೆಯ ಮನೆಯಿಂದ ಕರಕೊಂಡು ಹೋಗಿದ್ದನಂತೆ. ಮತ್ತೆ ಮನೆಗೆ ಹಿಂತಿರುಗಿದ್ದ ಬಾಲಕಿಗೆ ಪೋಷಕರು ಗದರಿದ್ದರು. ಪೋಷಕರು ತನಗೆ ಗದರಿದ್ದ ವಿಚಾರವನ್ನ ಬಾಲಕಿ ಶಹಬಾಝ್ ಗೆ ತಿಳಿಸಿದ್ದಳಂತೆ.
ಇದೀಗ ಶಹಭಾಝ್ ತನ್ನ ಪರಿಚಯಸ್ಥರಾದ ಅಮೀರ್ ಸೊಹೈಲ್ ಮತ್ತು ನಿಶಾ ದಂಪತಿ ಮೂಲಕ ಬಾಲಕಿಯನ್ನ ಮತ್ತೆ ಅಪಹರಿಸಿದ್ದನೆನ್ನಲಾಗಿದೆ. ತನಿಖೆ ನಡೆಸಿದ ಉಳ್ಳಾಲ ಪೊಲೀಸರು ಬಾಲಕಿ ಮತ್ತು ಆಕೆಯನ್ನ ಅಪಹರಿಸಿದ್ದ ಆರೋಪಿಗಳನ್ನ ಪತ್ತೆಹಚ್ಚಿದ್ದಾರೆ.
ಸಂತ್ರಸ್ತ ಅಪ್ರಾಪ್ತ ಬಾಲಕಿಯನ್ನ ಉಳ್ಳಾಲ ಪೊಲೀಸರು ವೈದ್ಯಕೀಯ ಪರೀಕ್ಷೆಗೆ ಒಳಪಡಿಸಿದ್ದಾರೆ. ಆರೋಪಿಗಳನ್ನ ಬಂಧಿಸಿ ಪೋಕ್ಸೊ ಕಾಯ್ದೆಯಡಿ ಪ್ರಕರಣ ದಾಖಲಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ.
A 16-year-old girl was allegedly kidnapped from her home in Ullal, leading to the arrest of a youth and a couple under the POCSO (Protection of Children from Sexual Offences) Act, police officials confirmed.
22-01-26 10:27 pm
Bangalore Correspondent
ಕುಕ್ಕೆ ಸುಬ್ರಹ್ಮಣ್ಯ ; 2 ತಿಂಗಳಲ್ಲಿ 14 ಕೋಟಿಗೂ ಹೆ...
22-01-26 05:20 pm
ಚಾಮರಾಜನಗರದಲ್ಲಿ ಚಿರತೆ ದಾಳಿ ; ಪಾದಯಾತ್ರೆಗೆ ಹೊರಟ್...
21-01-26 01:31 pm
ರಾಯಚೂರಿನಲ್ಲಿ ಭೀಕರ ಅಪಘಾತ ; ಬೊಲೆರೋ - ಪಿಕ್ಅ...
21-01-26 12:30 pm
ಬಾರ್ ಲೈಸನ್ಸ್ ನೀಡಲು 1.5 ಕೋಟಿ ಲಂಚ ; 25 ಲಕ್ಷ ರೂ....
20-01-26 02:15 pm
22-01-26 10:16 pm
HK News Desk
ರೈಲಿನ ಶೌಚಾಲಯದಲ್ಲಿ ಎರಡು ಗಂಟೆ ಲಾಕ್ ಮಾಡಿಕೊಂಡ ಯುವ...
22-01-26 01:52 pm
ಗ್ರೀನ್ ಲ್ಯಾಂಡ್ ; ಯುರೋಪ್ ರಾಷ್ಟ್ರಗಳ ಮೇಲೆ ಸುಂಕ ಹ...
22-01-26 01:16 pm
ಆಂಧ್ರದಲ್ಲಿ ಮತ್ತೆ ಬಸ್ ಬೆಂಕಿ ; ಟೈರ್ ಸ್ಫೋಟಗೊಂಡು...
22-01-26 11:26 am
ಶಬರಿಮಲೆ ಚಿನ್ನ ಲೂಟಿ ಪ್ರಕರಣ ; ಕೇರಳ, ಕರ್ನಾಟಕ, ತಮ...
21-01-26 11:10 am
22-01-26 02:55 pm
Mangalore Correspondent
ಆರೆಸ್ಸೆಸ್ ಮುಖಂಡ ಕಲ್ಲಡ್ಕ ಪ್ರಭಾಕರ ಭಟ್ ವಿರುದ್ಧ ಮ...
21-01-26 10:55 pm
ಸ್ವಚ್ಛತೆ, ತ್ಯಾಜ್ಯಮುಕ್ತ ಗ್ರಾಮ, ಪರಿಸರ ಸ್ನೇಹಿ ಆಡ...
21-01-26 06:18 pm
ಬಂಗ್ಲೆಗುಡ್ಡೆ ಕಾಡಿನಲ್ಲಿ ಸಿಕ್ಕಿದ ಏಳು ಅಸ್ಥಿಪಂಜರಗ...
21-01-26 11:53 am
158 ವರ್ಷಗಳ ಇತಿಹಾಸವುಳ್ಳ ದೇಶದ ಮೊದಲ ಮಂಗಳೂರು ಟೈಲ್...
20-01-26 10:59 pm
22-01-26 10:12 pm
Mangalore Correspondent
ಸ್ವಾಮೀಜಿಗೆ ಬ್ಲ್ಯಾಕ್ಮೇಲ್ ; ಒಂದು ಕೋಟಿಗೆ ಡಿಮ್ಯಾಂ...
22-01-26 02:40 pm
ಜೂಜಾಡಿ ಸಾಲ ; ಹಣದಾಸೆಗೆ ಇಂಜೆಕ್ಷನ್ ನೀಡಿ ಸ್ವಂತ...
21-01-26 09:35 pm
Actor Kicha Sudeep, Fraud: ನಟ ಕಿಚ್ಚ ಸುದೀಪ್, ಮ...
20-01-26 07:51 pm
ಸಿಎಂ ಕ್ಲಾಸ್ ಬೆನ್ನಲ್ಲೇ ಅಲರ್ಟ್ ಆದ ಬೆಂಗಳೂರು ಖಾಕಿ...
20-01-26 05:01 pm