ಬ್ರೇಕಿಂಗ್ ನ್ಯೂಸ್
07-07-25 07:13 pm Mangalore Correspondent ಕ್ರೈಂ
ಉಳ್ಳಾಲ, ಜು.7 : ಹದಿನಾರರ ವಯಸ್ಸಿನ ಅಪ್ರಾಪ್ತ ಮಗಳು ಮನೆಯಿಂದ ಹೊರ ಹೋದವಳು ಹಿಂತಿರುಗದೇ ಇದ್ದು, ಆಕೆಯನ್ನ ಆಮಿಷ ತೋರಿಸಿ ಯಾರೋ ಅಪಹರಿಸಿ ಹೋಗಿರುವ ಬಗ್ಗೆ ಬಾಲಕಿಯ ತಂದೆ ಉಳ್ಳಾಲ ಠಾಣೆಗೆ ದೂರು ನೀಡಿದ್ದಾರೆ. ತನಿಖೆ ನಡೆಸಿದ ಉಳ್ಳಾಲ ಪೊಲೀಸರು ಬಾಲಕಿಯನ್ನ ಅಪಹರಿಸಿದ ಆರೋಪಿ ಯುವಕ ಮತ್ತು ಆತನಿಗೆ ಸಹಕರಿಸಿದ ದಂಪತಿಯನ್ನ ಬಂಧಿಸಿ ಪೋಕ್ಸೊ ಕಾಯ್ದೆಯಡಿ ಪ್ರಕರಣ ದಾಖಲಿಸಿದ್ದಾರೆ.
ದೇರಳಕಟ್ಟೆ ಸಮೀಪದ ರೆಂಜಾಡಿ ನಿವಾಸಿ ಮಹಮ್ಮದ್ ಶಹಬಾಝ್ (27) ಬಾಲಕಿಯನ್ನ ಅಪಹರಿಸಿದ ಆರೋಪಿಯಾಗಿದ್ದು, ಅಪ್ರಾಪ್ತೆಯನ್ನ ಆಕೆಯ ಮನೆಯಿಂದ ಅಪಹರಿಸಲು ಶಹಬಾಝ್ ಗೆ ಸಹಕರಿಸಿದ ಕೊಣಾಜೆ ನಿವಾಸಿಗಳಾದ ಅಮೀರ್ ಸೊಹೈಲ್, ನಿಶಾ ಎಂಬ ದಂಪತಿಯನ್ನ ಪೊಲೀಸರು ಬಂಧಿಸಿದ್ದಾರೆ.
ಜುಲೈ 5 ರಂದು ಸಂಜೆ 4 ಗಂಟೆಗೆ ಉಳ್ಳಾಲ ಠಾಣೆ ವ್ಯಾಪ್ತಿಯ ಬಾಡಿಗೆ ಮನೆಯಲ್ಲಿ ನೆಲೆಸಿದ್ದ ಮುಸ್ಲಿಂ ವ್ಯಕ್ತಿಯೋರ್ವರ ಅಪ್ರಾಪ್ತ ಮಗಳು ಮನೆಯಿಂದ ಹೊರ ಹೋದವಳು ಹಿಂತಿರುಗಿರಲಿಲ್ಲ. ಈ ಬಗ್ಗೆ ವ್ಯಕ್ತಿಯು ಉಳ್ಳಾಲ ಠಾಣೆಯಲ್ಲಿ ತನ್ನ ಮಗಳನ್ನ ಯಾರೋ ಅಪಹರಿಸಿರೋದಾಗಿ ದೂರು ನೀಡಿದ್ದರು. ಶಹಭಾಝ್ ಈ ಮೊದಲೂ ಬಾಲಕಿಯನ್ನ ಪುಸಲಾಯಿಸಿ ಆಕೆಯ ಮನೆಯಿಂದ ಕರಕೊಂಡು ಹೋಗಿದ್ದನಂತೆ. ಮತ್ತೆ ಮನೆಗೆ ಹಿಂತಿರುಗಿದ್ದ ಬಾಲಕಿಗೆ ಪೋಷಕರು ಗದರಿದ್ದರು. ಪೋಷಕರು ತನಗೆ ಗದರಿದ್ದ ವಿಚಾರವನ್ನ ಬಾಲಕಿ ಶಹಬಾಝ್ ಗೆ ತಿಳಿಸಿದ್ದಳಂತೆ.
ಇದೀಗ ಶಹಭಾಝ್ ತನ್ನ ಪರಿಚಯಸ್ಥರಾದ ಅಮೀರ್ ಸೊಹೈಲ್ ಮತ್ತು ನಿಶಾ ದಂಪತಿ ಮೂಲಕ ಬಾಲಕಿಯನ್ನ ಮತ್ತೆ ಅಪಹರಿಸಿದ್ದನೆನ್ನಲಾಗಿದೆ. ತನಿಖೆ ನಡೆಸಿದ ಉಳ್ಳಾಲ ಪೊಲೀಸರು ಬಾಲಕಿ ಮತ್ತು ಆಕೆಯನ್ನ ಅಪಹರಿಸಿದ್ದ ಆರೋಪಿಗಳನ್ನ ಪತ್ತೆಹಚ್ಚಿದ್ದಾರೆ.
ಸಂತ್ರಸ್ತ ಅಪ್ರಾಪ್ತ ಬಾಲಕಿಯನ್ನ ಉಳ್ಳಾಲ ಪೊಲೀಸರು ವೈದ್ಯಕೀಯ ಪರೀಕ್ಷೆಗೆ ಒಳಪಡಿಸಿದ್ದಾರೆ. ಆರೋಪಿಗಳನ್ನ ಬಂಧಿಸಿ ಪೋಕ್ಸೊ ಕಾಯ್ದೆಯಡಿ ಪ್ರಕರಣ ದಾಖಲಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ.
A 16-year-old girl was allegedly kidnapped from her home in Ullal, leading to the arrest of a youth and a couple under the POCSO (Protection of Children from Sexual Offences) Act, police officials confirmed.
09-11-25 06:53 pm
Bangalore Correspondent
ಇಪಿಎಫ್ ಸೊಸೈಟಿಯಲ್ಲಿ 70 ಕೋಟಿ ದುರ್ಬಳಕೆ ; ಅಕೌಂಟೆಂ...
09-11-25 03:47 pm
ISIS Terrorists, Umesh Reddy, Parappana Agrah...
08-11-25 10:29 pm
High Court Directs Kalaburagi: ಚಿತ್ತಾಪುರ ಆರೆಸ...
08-11-25 12:38 pm
ಯಾವ ಕ್ರಾಂತಿಯೂ ಆಗಲ್ಲ, ವಾಂತಿಯೂ ಆಗಲ್ಲ.. ನನಗೆ ಸಿದ...
07-11-25 09:59 pm
09-11-25 07:49 pm
HK News Desk
ಮುಸ್ಲಿಂ ವ್ಯಕ್ತಿಯ ಎರಡನೇ ಮದುವೆ ನೋಂದಣಿಗೆ ನಿರಾಕರಣ...
07-11-25 05:21 pm
ಮತಗಳವು ಆರೋಪ ; ರಾಹುಲ್ ವಿರುದ್ಧ ತಿರುಗಿಬಿದ್ದ ಮತದಾ...
07-11-25 11:33 am
'ನವೆಂಬರ್ ಕ್ರಾಂತಿ' ವದಂತಿ ತಳ್ಳಿಹಾಕಿದ ಡಿಸಿಎಂ ; ನ...
06-11-25 10:22 pm
ಐಸಿಸಿ ಮಹಿಳಾ ವಿಶ್ವಕಪ್ ಎತ್ತಿಹಿಡಿದ ಭಾರತದ ವನಿತೆಯರ...
03-11-25 01:13 pm
08-11-25 08:31 pm
Mangalore Correspondent
ಬೆಂಗಳೂರು- ಮಂಗಳೂರು ಹೈಸ್ಪೀಡ್ ಕಾರಿಡಾರ್ ; ಶಿರಾಡ...
07-11-25 10:58 pm
ಕುದ್ರೋಳಿ ಕ್ಷೇತ್ರ ಸ್ಥಾಪಿಸಿದ ಫೆ.21ರಂದು ನಾರಾಯಣ ಗ...
07-11-25 07:23 pm
ಗೋಡಂಬಿ ಉದ್ಯಮಕ್ಕೆ ನೂರು ವರ್ಷ ; ನ.14-16ರಂದು ದೇಶದ...
07-11-25 05:25 pm
ನೆಲ್ಯಾಡಿಯಲ್ಲಿ ಹೊಟೇಲ್ ಉದ್ಯಮ ನಡೆಸುತ್ತಿದ್ದ ಅಭಿಷೇ...
07-11-25 02:18 pm
09-11-25 10:27 pm
Mangalore Correspondent
ಬಹುಕೋಟಿ ವಂಚಕ ರೋಷನ್ ಸಲ್ದಾನಗೆ ಸೇರಿದ 2.85 ಕೋಟಿ ಮ...
09-11-25 03:50 pm
ಕೋಮುದ್ವೇಷದ ಕೊಲೆ ; ಪ್ರತೀಕಾರಕ್ಕೆ ಪ್ರಚೋದಿಸಿ ಇನ್...
08-11-25 11:15 pm
Digital Arrest Scam, Mangalore Online Fraud:...
08-11-25 04:08 pm
ಆರೋಪಿಗೆ ಜಾಮೀನು ನೀಡಲು ಹೋಗಿ ತಾನೇ ತಗ್ಲಾಕ್ಕೊಂಡ !...
07-11-25 11:20 pm